• Home
  • About Us
  • ಕರ್ನಾಟಕ
Friday, October 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಈ ಭಾರತ ದೇಶದಲ್ಲಿ ಮಾಧ್ಯಮಗಳಿಗೆ ಏನಾಗಿದೆ..? ಪ್ರಜಾಪ್ರಭುತ್ವಕ್ಕೆ ಮಾರಕವೇ..?

ಕೃಷ್ಣ ಮಣಿ by ಕೃಷ್ಣ ಮಣಿ
August 15, 2023
in ಅಂಕಣ, ದೇಶ
0
ಮಾಧ್ಯಮ
Share on WhatsAppShare on FacebookShare on Telegram

ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ದೇಶದ ಜನರು ಭಾವಿಸಿದ್ದಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗದ ಜೊತೆಗೆ ಸಂವಿಧಾನದ ರಕ್ಷಣೆಗೆ ಮಾಧ್ಯಮ ಕೂಡ ಕೆಲಸ ಮಾಡುತ್ತದೆ.

ADVERTISEMENT

ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬಂದಾಗ ಜನರ ಅಭಿಪ್ರಾಯ ರೂಪಿಸಲು ಮಾಧ್ಯಮದ ಬಹುದೊಡ್ಡ ಕೆಲಸ ಮಾಡುತ್ತದೆ. ಜನಾಭಿಪ್ರಾಯ ಸಂಗ್ರಹ ಮಾಡಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕಣ್ತೆರೆಸುವ ಕೆಲಸ ಮಾಡುತ್ತದೆ ಎನ್ನುವುದು ಮಾಧ್ಯಮಗಳ ಮೇಲಿದ್ದ ನಂಬಿಕೆ.

ಆದರೆ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ರಂಗ ಪ್ರಜಾಪ್ರಭುತ್ವದ ಕಾವಲು ನಾಯಿ ರೀತಿಯಲ್ಲಿ ಕೆಲಸ ಮಾಡ್ತಿದ್ಯಾ..? ಅಥವಾ ಯಾರೋ ಒಬ್ಬರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡ್ತಿದ್ಯಾ..? ಅನ್ನೋ ಅನುಮಾನ ಸಾರ್ವಜನಿಕರನ್ನೇ ಕಾಡುವುದಕ್ಕೆ ಶುರು ಮಾಡಿದೆ.

ಕಾಂಗ್ರೆಸ್ ನಾಯಕ ರಣದೀಪ್‌ ಸುರ್ಜೇವಾಲ ವಿವಾದಾತ್ಮಕ ಹೇಳಿಕೆ..!

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಭಾಷಣ ಮಾಡುತ್ತ ಬಿಜೆಪಿಯವರು ರಕ್ಕಸರು ಎಂದು ಉಲ್ಲೇಖ ಮಾಡಿದ್ದಾರೆ. ಈ ಮಾತನ್ನು ಎಲ್ಲಾ ಮಾಧ್ಯಮಗಳು ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ವರದಿ ಮಾಡಿವೆ.

ಹೌದು ಒಂದು ರಾಜಕೀಯ ಪಕ್ಷ ಹಾಗು ರಾಜಕೀಯ ಪಕ್ಷಗಳ ಕಾರ್ಯಕರ್ತರ ಬಗ್ಗೆ ಸುರ್ಜೇವಾಲ ನೀಡಿರುವ ಹೇಳಿಕೆ ವಿವಾದಿತವೇ ಸರಿ. ಮಾಧ್ಯಮಗಳು ವರದಿ ಮಾಡಿರುವುದೂ ಕೂಡ ಸರಿಯಾಗಿದೆ. ಆದರೆ ಇದೇ ರೀತಿ ಬಿಜೆಪಿ ನಾಯಕರು ಕಾಂಗ್ರೆಸ್ ಬಗ್ಗೆ ಟೀಕೆ ಮಾಡಿದಾಗ ಮಾಧ್ಯಮಗಳು ಮೌನಕ್ಕೆ ಶರಣಾಗುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಜನರನ್ನು ಕಾಡುವುದಕ್ಕೆ ಶುರು ಮಾಡಿದೆ. ಕಾಂಗ್ರೆಸ್ ನಾಯಕರ ಹೇಳಿಕೆಗಳು ಮಾತ್ರ ವಿವಾದಿತ ಆಗುವುದು ಹೇಗೆ..? ಎನ್ನುವ ಪ್ರಶ್ನೆಗೆ ಮಾಧ್ಯಮಗಳ ಮೌನವೇ ಉತ್ತರ ಸರಿನಾ..? ಗೊತ್ತಿಲ್ಲ.

ಸಂಸತ್‌ನಲ್ಲಿ ವಿಪಕ್ಷಗಳ ಬಗ್ಗೆ ಹೇಳಿದ ಮಾತು ವಿವಾದಿತ ಅಲ್ಲವೇ..?

ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದರು. ವಿರೋಧ ಪಕ್ಷಗಳ ಆರೋಪದ ಬಳಿಕ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಒಕ್ಕೂಟವನ್ನು ಘಮಾಂಡಿ ಎಂದು ಸಂಬೋಧಿಸಿದ್ದರು. ಘಮಾಂಡಿ ಒಕ್ಕೂಟ ಎಂದರೆ ದುರಹಂಕಾರಿಗಳ ಒಕ್ಕೂಟ ಎಂದು ಹಿಯಾಳಿಸಿದ್ದರು.

ರಾಜಕೀಯ ಪಕ್ಷಗಳ ಒಕ್ಕೂಟವನ್ನು ಓರ್ವ ಪ್ರಧಾನಿ ಅವರು ಸಂಸತ್ನಲ್ಲಿ ಟೀಕಿಸಿದ್ದು ವಿವಾದಿತ ಯಾಕೆ ಆಗುವುದಿಲ್ಲ..? ಬಿಜೆಪಿಗೆ ಎದುರಾಳಿಗಳಾಗಿ ಒಕ್ಕೂಟ ರಚನೆ ಆಗಿರಬಹುದು. ಮುಂದಿನ ಲೋಕಸಭಾ ಚುನಾವಣೆ ಬಿಜೆಪಿಗೆ ಅಂದುಕೊಂಡಷ್ಟು ಸುಲಭ ಆಗಿಲ್ಲದೆ ಇರಬಹುದು. ಆದರೆ ಇಂಡಿಯಾ ದುರಹಂಕಾರಿಗಳ ಕೂಟ ಎಂದು ಹೇಳುವುದನ್ನು ಮಾಧ್ಯಮಗಳು ಸಾಮಾನ್ಯ ಸುದ್ದಿ ಎಂಬಂತೆ ವರದಿ ಮಾಡುತ್ತವೆ. ಇದು ಸರೀನಾ..? ಮಾಧ್ಯಮಗಳೇ ಉತ್ತರಿಸಬೇಕಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಆಗುತ್ತಿದೆ ಮಾಧ್ಯಮ ರಂಗ..!

ಪ್ರಜಾಪ್ರಭುತ್ವದಲ್ಲಿ ಮೂರು ಅಂಗಗಳಾದ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಯಾವುದೇ ಒಂದು ಅಂಗ ಮತ್ತೊಂದು ಅಂಗದ ಕೆಲಸ ಕಾರ್ಯಗಳಲ್ಲಿ ಮೂಗು ತೂರಿಸುವಂತಿಲ್ಲ. ಪರಸ್ಪರ ಸಹಕಾರದಿಂದ ಕೆಲಸ ಮಾಡಿಕೊಂಡು ಕಾನೂನು ಪಾಲಿಸಬೇಕಿದೆ.

ಮಾಧ್ಯಮ

ಈ ಸುದ್ದಿ ಓದಿದ್ದೀರಾ? ಹಿಮಾಚಲ ಪ್ರದೇಶ | ಮೇಘಸ್ಫೋಟದಿಂದ ಮನೆಗಳ ಕುಸಿತ ; 7 ಮಂದಿ ಸಾವು

ಯಾವುದೇ ಒಂದು ಅಂಗ ಮತ್ತೊಂದು ಅಂಗದ ಮೇಲೆ ದಬ್ಬಾಳಿಕೆ ಮಾಡುವಂತಿಲ್ಲ. ಒಂದು ವೇಳೆ ಈ ಮೂರು ಅಂಗಗಳ ನಡುವೆ ಏರುಪೇರು ಕಂಡಾಗ ಮಾಧ್ಯಮ ತಿದ್ದುವ ಕೆಲಸ ಮಾಡಬೇಕಿದೆ. ಶಾಸಕಾಂಗ ಕಾರ್ಯಾಂಗದ ಮೇಲೆ ದಬ್ಬಾಳಿಕೆ ಮಾಡಿದಾಗ, ಶಾಸಕಾಂಗದಲ್ಲಿ ಆಡಳಿತಕ್ಕಾಗಿ ಪರಸ್ಪರ ಬಿರುಕು ಕಾಣಿಸಿದಾಗ ಮಾಧ್ಯಮಗಳು ಎಚ್ಚರಿಸುವ ಕೆಲಸ ಮಾಡಬೇಕು. ಯಾವುದೇ ಒಂದು ಅಂಗದ ಪರವಾಗಿ ಕೆಲಸ ಮಾಡಿದರೆ ಜನಾಭಿಪ್ರಾಯ ವಿರುದ್ಧ ದಿಕ್ಕಿನ ಆಕರ್ಷಣೆ ಪಡೆಯುವ ಸಾಧ್ಯತೆ ಇರುತ್ತದೆ.

ಅದೇ ರೀತಿ ಒಂದು ಪಕ್ಷದ ಅಡಿಯಾಳಿನ ರೀತಿಯಲ್ಲಿ ಮಾಧ್ಯಮಗಳು ಕೆಲಸ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ ಅನ್ನೋ ಮಾತುಗಳು ಕೇಲಿ ಬರುತ್ತಿದೆ. ಕಾಲ ಉರುಳಿದಂತೆ ಮಧ್ಯಮಗಳು ತಮ್ಮ ಜವಾಬ್ದಾರಿ ಅರಿತು ದೇಶ ಕಟ್ಟುವ ಕಾರ್ಯಕ್ಕೆ ಕೈ ಜೋಡಿಸಬೇಕಿದೆ. ಇಲ್ಲದಿದ್ರೆ ಪ್ರಜಾಪ್ರಭುತ್ವದ ಕಾವಲು ನಾಯಿ ಬದುಕಿದ್ದೂ ಸತ್ತಂತೆ ಎನ್ನುವಂತಾಗುತ್ತದೆ.

Tags: BJPMediaPM Narendra ModiRanadeep Singh Surjewalaಕಾಂಗ್ರೆಸ್‌ಪ್ರಧಾನಿ ನರೇಂದ್ರ ಮೋದಿಬಿಜೆಪಿಮಾಧ್ಯಮರಣದೀಪ್‌ ಸಿಂಗ್‌ ಸುರ್ಜೆವಾಲ
Previous Post

ನೀಟ್‌ ಪರೀಕ್ಷೆ ಖಂಡಿತ ತೆಗೆದುಹಾಕುತ್ತೇವೆ: ಎಂ.ಕೆ.ಸ್ಟಾಲಿನ್

Next Post

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ: ಎಚ್.ಡಿ.ಕುಮಾರಸ್ವಾಮಿ

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಎಚ್‌.ಡಿ.ಕುಮಾರಸ್ವಾಮಿ

ನಾನು ಆರೂವರೆ ಕೋಟಿ ಕನ್ನಡಿಗರ ವಕ್ತಾರ: ಎಚ್.ಡಿ.ಕುಮಾರಸ್ವಾಮಿ

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada