ಬೆಂಗಳೂರು (Bengaluru) : ಜಾತಿ ಗಣತಿ ವರದಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಜಾತಿ ಗಣತಿ ವರದಿಯಲ್ಲಿ ಏನಿದೆ? ವರದಿಯಲ್ಲಿರುವ ಅಂಶಗಳೇನು? ಎಂಬುದರ ಮಾಹಿತಿ ಇಲ್ಲಿದೆ.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ.
ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.
ಜಾತಿಗಣ ವರದಿಯಲ್ಲಿರುವ ಅಂಶಗಳು:
- ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ
- ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
- ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)
- ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)
- ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)
- ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)
ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024
2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಸುಮಾರು 154 ಕೋಟಿ ರೂ. ವೆಚ್ಚದಲ್ಲಿ ಮಾಡಿಸಲಾಗಿತ್ತು. ಆದರೆ ಅವರ ಅಧಿಕಾರ ಮುಗಿದ ನಂತರ ಆಳ್ವಿಕೆ ನಡೆಸಿದ ಮುಖ್ಯಮಂತ್ರಿಗಳು ಕಾರಣಾಂತರಗಳಿಂದ ವರದಿ ಸ್ವೀಕರಿಸಿರಲಿಲ್ಲ.
ಈ ಮಧ್ಯೆ ವರದಿ ಸೋರಿಕೆಯಾಗಿ, ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
#karnataka #bengaluru #castecensusreport #siddaramaiah #jayaprakashhegde