• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಖಾದರನ್ನು ಸೋಲಿಸಲು SDPI ಮಾಸ್ಟರ್‌ ಪ್ಲ್ಯಾನ್: ರೈ ವಿರುದ್ಧ ಬಳಸಿದ ಅಸ್ತ್ರ ಮತ್ತೆ ಬಳಸುತ್ತಾ ಬಿಜೆಪಿ?

Shivakumar A by Shivakumar A
April 19, 2023
in ಅಂಕಣ, ರಾಜಕೀಯ
0
ಖಾದರನ್ನು ಸೋಲಿಸಲು SDPI ಮಾಸ್ಟರ್‌ ಪ್ಲ್ಯಾನ್: ರೈ ವಿರುದ್ಧ ಬಳಸಿದ ಅಸ್ತ್ರ ಮತ್ತೆ ಬಳಸುತ್ತಾ ಬಿಜೆಪಿ?
Share on WhatsAppShare on FacebookShare on Telegram

ADVERTISEMENT

ಬಿಜೆಪಿ ತನ್ನ ಮೊದಲ ಶತ್ರು ಎಂದು ಹೇಳುವ ಎಸ್‌ಡಿಪಿಐ ಕಾಂಗ್ರೆಸ್‌ ಗೆಲ್ಲುವ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಅದರಲ್ಲಿ ತೀವ್ರ ಕುತೂಹಲ ಹುಟ್ಟಿಸಿರುವುದು ದಕ್ಷಿಣ ಕನ್ನಡದ ಉಳ್ಳಾಲದಲ್ಲಿ ಯುಟಿ ಖಾದರ್‌ ವಿರುದ್ಧ ಎಸ್‌ಡಿಪಿಐ ರಿಯಾಝ್‌ ಫರಂಗಿಪೇಟೆ ಕಣಕ್ಕಿಳಿದಿರುವುದು. ಇದೇ ರಿಯಾಝ್‌ ಫರಂಗಿಪೇಟೆ 2018ರ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ರಮಾನಾಥ ರೈ ವಿರುದ್ಧ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಸಿ, ಕೊನೆ ಕ್ಷಣದಲ್ಲಿ ಹಿಂಪಡೆದಿದ್ದರು.

ಸ್ಥಳೀಯ ರಾಜಕೀಯ ಲೆಕ್ಕಾಚಾರದ ಪ್ರಕಾರ, ಯುಟಿ ಖಾದರ್‌ ವಿರುದ್ಧ ಸರಣಿ ಆರೋಪಗಳನ್ನು ಮಾಡುತ್ತಿರುವ ರಿಯಾಝ್‌ ಫರಂಗಿಪೇಟೆಗೆ ಕ್ಷೇತ್ರದ ಮುಸ್ಲಿಮರ ನಿರ್ಣಾಯಕ ಮತಗಳೇನು ಬೀಳುವುದಿಲ್ಲ. ಹಾಗಾಗಿ, ರಿಯಾಝ್‌ ಫರಂಗಿಪೇಟೆ ಸ್ಪರ್ಧೆಯಿಂದ ಯುಟಿ ಖಾದರ್‌ ಕಳೆದುಕೊಳ್ಳುವುದು ಏನಿಲ್ಲ. ಹಾಗಾಗಿ ಎಸ್‌ಡಿಪಿಐ ಸ್ಪರ್ಧೆಯನ್ನು ಯುಟಿಕೆ ಗಂಭೀರವಾಗಿ ಪರಿಗಣಿಸಿಲ್ಲ, ಬದಲಾಗಿ ಎಸ್‌ಡಿಪಿಐ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಳ್ಳುವ ಭಯ ಕಾಡುತ್ತಿದೆ ಎನ್ನಲಾಗಿದೆ.

ರಮಾನಾಥ ರೈ

2018 ರ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ರಮಾನಾಥ ರೈ ವಿರುದ್ಧ ಎಸ್‌ಡಿಪಿಐ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ರಿಯಾಝ್‌ ಫರಂಗಿಪೇಟೆ, ಕೊನೆ ಕ್ಷಣದಲ್ಲಿ ತನ್ನ ನಾಮಪತ್ರವನ್ನು ಹಿಂಪಡೆದಿದ್ದರು. ಇದನ್ನು ಬಿಜೆಪಿ ಸರಿಯಾಗಿ ಬಳಸಿಕೊಂಡಿತ್ತು. ರಮಾನಾಥ್‌ ರೈ ಅವರು ಎಸ್‌ಡಿಪಿಐಗೆ ಕೋಟಿ ವರದಕ್ಷಿಣೆ ನೀಡಿ ಎಸ್‌ಡಿಪಿಐಯನ್ನು ನಿಖಾ ಮಾಡಿಕೊಂಡಿದೆ ಎಂದು ಆಗಿನ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಆರೋಪಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲೂ ಕಾಂಗ್ರೆಸ್ ಎಸ್‌ಡಿಪಿಐ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಹುಯಿಲೆಬ್ಬಿಸಲಾಗಿತ್ತು. ಪರಿಣಾಮ ರಮನಾಥ್‌ ರೈ ಸೋಲು ಅನುಭವಿಸಬೇಕಾಯಿತು.

ಇದೇ ಯೋಜನೆಯನ್ನು ಉಳ್ಳಾಲ ಮತಕ್ಷೇತ್ರದಲ್ಲೂ ಪ್ರಯೋಗಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಕಾಂಗ್ರೆಸಿಗರಿಗೆ ಪ್ರಕಾರ ಎಸ್‌ಡಿಪಿಐ ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿಗೆ ಅನುಕೂಲ ಮಾಡಲಿದ್ದಾರೆ ಎನ್ನುವ ಆತಂಕವಿದೆ.   ಒಂದು ವೇಳೆ ಎಸ್‌ಡಿಪಿಐ ಅಭ್ಯರ್ಥಿ ನಾಮಪತ್ರ ಹಿಂಪಡೆದರೆ, ಅದನ್ನು ಕಾಂಗ್ರೆಸ್-ಎಸ್‌ಡಿಪಿಐ ಮೈತ್ರಿ ಎಂದೇ ಪ್ರಚಾರ ಮಾಡುತ್ತದೆ ಎನ್ನುವುದು ಕಾಂಗ್ರೆಸ್‌ ಕಾರ್ಯಕರ್ತರ ವಾದ.

ಯುಟಿ ಖಾದರ್

ಈಗಾಗಲೇ, ಪಿಎಫ್‌ಐಗೆ ಕಾಂಗ್ರೆಸ್‌ ಸಹಾಯ ಮಾಡಿತ್ತು ಎಂದು ಪ್ರಚಾರ ಮಾಡುವ ಬಿಜೆಪಿಗೆ ಎಸ್‌ಡಿಪಿಐ ಯ ಈ ನಡೆಯು ವರದಾನವಾಗಲಿದೆ. ಒಂದು ನಿಷೇಧಿತ ಸಂಘಟನೆಯ ಬೆಂಬಲವನ್ನು ಕಾಂಗ್ರೆಸ್ ಪಡೆದುಕೊಂಡಿದೆ ಎಂದು ಬಿಜೆಪಿ ಕೊನೆ ಕ್ಷಣದಲ್ಲಿ ಪ್ರಚಾರ ಮಾಡಿದರೆ, ಅದಕ್ಕೆ ಉತ್ತರ ಕೊಡುವ ಮುನ್ನವೇ ಮತದಾನದ ದಿನಾಂಕ ಬಂದಿರುತ್ತದೆ. ಯುಟಿ ಖಾದರ್‌ ಆಗಲಿ ಯಾರೇ ಕಾಂಗ್ರೆಸ್‌ ಅಭ್ಯರ್ಥಿಗಳಾಗಲಿ ನ್ಯೂಟ್ರಲ್‌ ಆಗಿರುವ ಬಹುಸಂಖ್ಯಾತ ಹಿಂದೂಗಳ ಮತವನ್ನು ಸುಲಭದಲ್ಲಿ ಕಳೆದುಕೊಳ್ಳುತ್ತಾರೆ ಎನ್ನುವುದು ಬಿಜೆಪಿ ಲೆಕ್ಕಾಚಾರ. ಅಲ್ಲದೆ, “ತಾಂಟ್‌ ರೇ ಬಾ ತಾಂಟ್‌” ಎಂದು ಬಹಿರಂಗ ಸಭೆಯಲ್ಲಿ ಸವಾಲು ಹಾಕಿ ಆತಂಕದ ವಾತಾವರಣ ಸೃಷ್ಟಿಸಿದಂತಹ ರಿಯಾಝ್‌ ಫರಂಗಿಪೇಟೆ ಅಂತಹ ವ್ಯಕ್ತಿ ಜೊತೆ ಕಾಂಗ್ರೆಸ್‌ ಹೊಂದಾಣಿಕೆ ಮಾಡಿದೆ ಎಂದರೆ ಸಹಜವಾಗಿ ಬಹುಸಂಖ್ಯಾತರ ಕೆಂಗಣ್ಣಿಗೆ ಗುರಿಯಾಗಬಹುದು ಎಂಬ ಆತಂವೂ ಯುಟಿಕೆ ಬೆಂಬಲಿಗರಿಗೆ ಕಾಡುತ್ತಿದೆ. ಪ್ರವೀಣ್‌ ನೆಟ್ಟಾರು ಪ್ರಕರಣದಲ್ಲೂ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರ ಹೆಸರು ಕೇಳಿಬಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆ ಇದೆ.

 ಹಾಗಾಗಿ, ಎಸ್‌ಡಿಪಿಐ ಸ್ಪರ್ಧಿಸುವುದಕ್ಕಿಂತ ಸ್ಪರ್ಧೆಯಿಂದ ಹಿಂದೆ ಜಾರುವುದೇ ಬಿಜೆಪಿಗೆ ಬೇಕಿದೆ ಎನ್ನಲಾಗಿದೆ. ಎಸ್‌ಡಿಪಿಐ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಜಾರಿದ ತಕ್ಷಣ ಒಳ ಒಪ್ಪಂದದ ಬಗ್ಗೆ ಪ್ರಚಾರ ಮಾಡುತ್ತದೆ, ಆ ಮೂಲಕ 2018 ರಲ್ಲಿ ರಮಾನಾಥ ರೈ ವಿರುದ್ಧ ಪ್ರಯೋಗಿಸಿದ ಅದೇ ಪ್ಲ್ಯಾನ್‌ ಅನ್ನು ಈ ಬಾರಿ ಉಲ್ಲಾಳ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಾಡಿಕೊಳ್ಳಲು ಬಿಜೆಪಿ ಚಿಂತಿಸುತ್ತಿದೆ ಎನ್ನಲಾಗಿದೆ.

 ಆದರೆ, ಯಾವುದೇ ಕಾರಣದಿಂದಲೂ ಎಸ್‌ಡಿಪಿಐ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳುತ್ತಿದೆ. ಕೊನೆ ಕ್ಷಣದಲ್ಲಿ ಬಿಜೆಪಿಗೆ ಸಹಾಯವಾಗುವಂತೆ ಎಸ್‌ಡಿಪಿಐ ಹಿಂದೆ ಸರಿಯಲಿದೆಯೇ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.

ರಿಯಾಝ್‌ ಫರಂಗಿಪೇಟೆ
Tags: BJJPBJPCongress PartyKarnataka Election 2023Praveen NettarRamanath Rairiyaz farangipeteRSSSDPIUT khader
Previous Post

ಚೇತನ್‌ ಅಹಿಂಸಾ ವೀಸಾ ರದ್ದು: ನಟ ಕಿಶೋರ್‌ ಆಕ್ರೋಶ

Next Post

ಪೇಶ್ವೆಗಳ ಅವಸಾನ ನೆನಪಿಸುತ್ತಿರುವ ಬಿಜೆಪಿಯೊಳಗಿನ ಬೆಳವಣಿಗೆಗಳು

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

October 23, 2025
Next Post
ಪೇಶ್ವೆಗಳ ಅವಸಾನ ನೆನಪಿಸುತ್ತಿರುವ ಬಿಜೆಪಿಯೊಳಗಿನ ಬೆಳವಣಿಗೆಗಳು

ಪೇಶ್ವೆಗಳ ಅವಸಾನ ನೆನಪಿಸುತ್ತಿರುವ ಬಿಜೆಪಿಯೊಳಗಿನ ಬೆಳವಣಿಗೆಗಳು

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada