• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಹೇಳಿದ್ದೇ ಅಂತಿಮ, ಅದರ ಬಗ್ಗೆ ಮರುಪ್ರಶ್ನೆ ಇಲ್ಲ:ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ನಾನು ಸಿಎಂ ಕುರ್ಚಿ ಹಾಗೂ ಪಕ್ಷಕ್ಕೆ ಸದಾ ನಿಷ್ಠನಾಗಿರುತ್ತೇನೆ. ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಅಂತಿಮ. ಅದರ ಬಗ್ಗೆ ಮರುಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಹೇಳಿದ ಮೇಲೆ ಯಾವುದೇ ತಕರಾರು ಇಲ್ಲ. ಅವರು ಹೇಳಿದ್ದೇ ಅಂತಿಮ. ಅವರ ಹೇಳಿಕೆ ನಂತರ ಈ ವಿಚಾರವಾಗಿ ಯಾವುದೇ ವಾದ, ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಪ್ರಕರಣದಲ್ಲಿ ಹುರುಳಿಲ್ಲ ಎಂದು ಸಾಬೀತು:

ಮೂಡಾ ಪ್ರಕರಣ ವಿಚಾರವಾಗಿ ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಯಾವುದೇ ತನಿಖೆ ನಡೆದರೂ ಅದು ಗೌಪ್ಯವಾಗಿರಬೇಕು. ಏನಾದರೂ ಸತ್ಯಾಂಶವಿದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು.ನ್ಯಾಯಾಲಯಕ್ಕೆ ಸಲ್ಲಿಸುವ ಬದಲು ಮಾಧ್ಯಮಗಳಿಗೆ ನೀಡುತ್ತಾರೆ ಎಂದರೆ, ಅವರು ಈ ವಿಚಾರದಲ್ಲಿ ಎಷ್ಟು ಹತಾಶರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸಾಬೀತಾಗುತ್ತಿದೆ. ಆದರೂ ಚಿಂತೆ ಇಲ್ಲ.ನಮ್ಮ ಕರ್ತವ್ಯ, ನಮ್ಮ ಸರ್ಕಾರ ಹಾಗೂ ಪಕ್ಷ ಹೋರಾಟ ಮಾಡುತ್ತದೆ. ನಮಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಒಂದು ತನಿಖಾ ಸಂಸ್ಥೆ ಮತ್ತೊಂದು ತನಿಖಾ ಸಂಸ್ಥೆ ಮೇಲೆ ಪ್ರಭಾವ ಬೀರುತ್ತಿಲ್ಲವೇ ಎಂದು ಕೇಳಿದಾಗ, “ನನ್ನ ಮೇಲೂ ಇಡಿಯವರು ವಿಚಾರಣೆ ಮಾಡಿ, ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಚಾರ್ಜ್ ಶೀಟ್ ಆದರಿಸಿ ಕೋರ್ಟ್ ಏನೋ ಒಂದು ತೀರ್ಪನ್ನ ಕೊಟ್ಟಿದೆ.ಈ ಪ್ರಕರಣದಲ್ಲಿ ದುಡ್ಡು ತೆಗೆದುಕೊಳ್ಳೋದು, ಕೊಡೋದು ನಡೆದಿಲ್ಲ. ರೇಡ್ ಮಾಡಿದಾಗ ಹಣ ಸಿಕ್ಕಿಲ್ಲ.ಹೀಗಾಗಿ ಈ ಪ್ರಕರಣದಲ್ಲಿ ಮನಿ ಎಲ್ಲಿ ಲಾಂಡರಿಂಗ್ ಆಯ್ತು? ಈ ಪ್ರಕರಣ ಆಡಳಿತ ವಿಚಾರವಾಗಿದೆ.ಆಡಳಿತ ವಿಭಾಗವನ್ನ ಅವರು ವಿಚಾರಣೆ ಮಾಡಬೇಕು.

B.S.Yadiyurappa on Yatnal: ಏನೇ ಇದ್ರು ಎದುರು ಕೂತು ಮಾತಾಡೋಣ- BSY ಶಾಕಿಂಗ್ ರಿಯಾಕ್ಷನ್ #pratidhvani

ಅದನ್ನು ಬಿಟ್ಟು ತನಿಖಾ ಸಂಸ್ಥೆ ಮಾಧ್ಯಮಗಳಿಗೆ ಈ ವಿಚಾರ ಸೋರಿಕೆ ಮಾಡಿದರೆ ಹೇಗೆ? ಒಂದು ತನಿಖಾ ಸಂಸ್ಥೆ, ಮತ್ತೊಂಜದು ತನಿಖಾ ಸಂಸ್ಥೆಗೆ ನೀವು ಹೀಗೆ ಮಾಡಿ ಅಂತ ಹೇಳೋದನ್ನ ಹೊಸದಾಗಿ ನೋಡುತ್ತಿದ್ದೇನೆ.ನನ್ನ ಅನುಭವದಲ್ಲಿ ಇದೆನ್ನೆಲ್ಲ ಹೊಸದಾಗಿ ನೋಡುತ್ತಿದ್ದೇ.ಇದಕ್ಕೆ ಜನ ಉತ್ತರ ಕೊಡ್ತಾರೆ, ನಾವೂ ಉತ್ತರ ಕೊಡ್ತೀವಿ” ಎಂದು ತಿಳಿಸಿದರು.

ಸಮಾವೇಶಕ್ಕೆ ಯಾರೇ ಬಂದರೂ ಸಂತೋಷ:

ಹಾಸನದ ಸಮಾವೇಶಕ್ಕೆ ಸ್ವಾಭಿಮಾನಿ ಒಕ್ಕೂಟದಿಂದ ಹೆಚ್ಚಿನ ಜನ ಬರುತ್ತಾರೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಬರಲಿ. ಎಲ್ಲಾ ವರ್ಗದ ಜನ ಬೆಂಬಲದಿಂದಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಈ ಕಾರ್ಯಕ್ರಮಕ್ಕಾಗಿ ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಈ ಸಮಾವೇಶವನ್ನು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

HD Kumaraswamy: ಸಚಿವ ಕೃಷ್ಣಭೈರೇಗೌಡ ವಿರುದ್ಧ ರೊಚ್ಚಿಗೆದ್ದ ಕುಮಾರಸ್ವಾಮಿ..! #krishnabyregowda #pratidhvani

ಸಮಾವೇಶದ ಸಿದ್ಧತೆ ಬಗ್ಗೆ ಕೇಳಿದಾಗ, “ಮಳೆ ಬರೋದು ಬೇಡ ಎಂದು ನಾನು ಹೇಳುವುದಿಲ್ಲ. ಮಳೆ ಬಂದರೆ ಏನೂ ಮಾಡಲು ಸಾಧ್ಯವಿಲ್ಲ. ಅದು ಪ್ರಕೃತಿ. ನಮ್ಮವರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ನಮ್ಮ ಸಮಾವೇಶ ಯಶಸ್ವಿಯಾಗುತ್ತದೆ ಎಂದು ಬಿಜೆಪಿಯವರು ಇಲ್ಲಸಲ್ಲದ ವಿಚಾರವನ್ನು ಮಾಧ್ಯಮಗಳ ಮೂಲಕ ಹರಿಬಿಡುತ್ತಿದ್ದಾರೆ” ಎಂದು ತಿಳಿಸಿದರು.

Tags: CM SiddaramaiahCM's statementCongress PartyDCM DK ShivakumarEDthere is no question about it:What the CM says is final
Previous Post

ಸಮಯ ಪಾಲನೇ ಮಾಡದೇ ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳ ವಿರುದ್ಧ ಕ್ರಮ..

Next Post

ಆರೋಗ್ಯ ಸೇವೆ ರೋಗಿ ಕೇಂದ್ರಿತವಾಗಿರಲಿ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
Next Post

ಆರೋಗ್ಯ ಸೇವೆ ರೋಗಿ ಕೇಂದ್ರಿತವಾಗಿರಲಿ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada