• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎರಡು ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶ ಏನಾಗುತ್ತೆ..?

ಪ್ರತಿಧ್ವನಿ by ಪ್ರತಿಧ್ವನಿ
October 8, 2024
in Top Story, ಇತರೆ / Others
0
Share on WhatsAppShare on FacebookShare on Telegram

ಉತ್ತರ ಭಾರತದಲ್ಲಿ ಬಿಜೆಪಿ ಹಾಗು ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಠೆ ಕಣ ಆಗಿರುವ ಹರಿಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಹೊರ ಬೀಳಲಿದ್ದು, ಗೆಲ್ಲೋದ್ಯಾರು ಅನ್ನೋ ಕುತೂಹಲ ಮೂಡಿಸಿದೆ.

ADVERTISEMENT

ಎರಡೂ ರಾಜ್ಯಗಳಗಳಲ್ಲೂ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಕಣಿವೆನಾಡು ಜಮ್ಮುಕಾಶ್ಮಿರದಲ್ಲಿ 10 ವರ್ಷಗಳ ಬಳಿಕ ಅದರಲ್ಲು ಆರ್ಟಿಕಲ್ 370 ರದ್ದಾದ ನಂತರ ಎದುರಾಗಿರುವ ಮೊದಲ ಚುನಾವಣೆ ಎನ್ನುವುದು ಗಮನಾರ್ಹ. ಬಿಜೆಪಿ ಗೆಲ್ಲುತ್ತಾ..? ಅಥವಾ ಇಂಡಿಯಾ ಮೈತ್ರಿಕೂಟ ಗೆದ್ದು ಬೀಗುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.

ಜಮ್ಮುಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು.. ಶೇಕಡಾ 62.52ರಷ್ಟು ಮತದಾನ ಆಗಿದೆ. ಚುನಾವಣಾ ಅಖಾಡದಲ್ಲಿ 873 ಅಭ್ಯರ್ಥಿಗಳಿದ್ದು, ಅಭ್ಯರ್ಥಿಗಳ ಭವಿಷ್ಯ ಕೆಲಹೊತ್ತಲ್ಲೇ ನಿರ್ಧಾರವಾಗಲಿದೆ.. ಕಣಿವೆ ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿದ್ರೂ, ಇಂಡಿಯಾ ಮೈತ್ರಿ ಕೂಟ ಮತ್ತು ಬಿಜೆಪಿ ಮಾತ್ರ ತಮ್ಮದೇ ಅಧಿಕಾರ ಎಂಬ ವಿಶ್ವಾಸದಲ್ಲಿವೆ.

ರಿಸಲ್ಟ್‌ಗೂ ಮೊದಲೇ ಐವರು ಶಾಸಕರ ಆಯ್ಕೆ ಮಾಡಲಾಗಿದೆ. ಲೆಫ್ಟಿನೆಂಟ್ ಗವರ್ನರ್‌ ಐವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಐವರು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗ್ತಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದು, ಅಶೋಕ್ ಕೌಲ್, ರಜನಿ ಸೇಥಿ, ಸುನಿಲ್ ಸೇಥಿ, ಡಾ.ಫರೀದಾ ಖಾನ್ ಹಾಗೂ ಸಂಜಿತಾ ಡೋಗ್ರಾ ನಾಮನಿರ್ದೇಶನ ಆಗಿದ್ದಾರೆ..

ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆ 2019ಗೆ ತಿದ್ದುಪಡಿಗಳ ಭಾಗವಾಗಿ ಇಬ್ಬರು ಮಹಿಳೆಯರು, ಇಬ್ಬರು ಕಾಶ್ಮೀರಿ ಪಂಡಿತರು ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಆಗಮಿಸಿದ ನಿರಾಶ್ರಿತ ವ್ಯಕ್ತಿಯೊಬ್ಬರನ್ನು ನಾಮನಿರ್ದೇಶನ ಮಾಡಲಾಗಿದೆ.. ಇದು ಬಿಜೆಪಿ ರಾಜಕೀಯ ತಂತ್ರಗಾರಿಕೆ ಎನ್ನಲಾಗಿದೆ.. ಈ ಐವರು ನಾಮ ನಿರ್ದೇಶಿತ ಶಾಸಕರಿಗೂ ಸಿಎಂ ಆಯ್ಕೆಯಲ್ಲಿ ಮತದಾನದ ಹಕ್ಕು ಇರೋದ್ರಿಂದ ಜಮ್ಮು ಕಾಶ್ಮೀರದ ಅಖಾಡ ಮತ್ತಷ್ಟು ರಂಗೇರಿದೆ.

ಇನ್ನೂ ಹರಿಯಾಣ ಚುನಾವಣಾ ಫಲಿತಾಂಶವೂ ಇಂದು ಹೊರ ಬೀಳಲಿದ್ದು, ಕುತೂಹಲ ಕೆರಳಿಸಿದೆ. 10 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳುವ ಉತ್ಸಾಹದಲ್ಲಿದ್ರೆ ಕಾಂಗ್ರೆಸ್ ಗೆದ್ದು ಆಡಳಿತ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದೆ. ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿರುವುದು ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿದೆ. ಹರಿಯಾಣದ 90 ಕ್ಷೇತ್ರಗಳ ಪೈಕಿ ಮ್ಯಾಜಿಕ್‌ ನಂಬರ್‌ 46 ಬೇಕಿದೆ. ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್‌‌ಗೆ ಜೈ ಎಂದಿವೆ

ಹರಿಯಾಣದಲ್ಲಿ ಬಿಜೆಪಿ ನಾಯಕ ಹಾಗು ಸಿಎಂ ನಯಾಬ್ ಸಿಂಗ್‌ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ, ವಿನೇಶ್ ಫೋಗಟ್ ಮತ್ತು ಜೆಜೆಪಿಯ ದುಶ್ಯಂತ್ ಚೌಟಾಲ ಸೇರಿದಂತೆ 1,027 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಸಮೀಕ್ಷೆಗಳ ಪ್ರಕಾರ ಇಂಡಿಯಾ ಕೂಟ ಅಧಿಕಾರಕ್ಕೆ ಬಂದಿದ್ದೇ ಆದರೆ ಎನ್‌‌ಡಿಎಗೆ ಬಹುದೊಡ್ಡ ನಷ್ಟ ಎನ್ನಬಹುದು.

Tags: AAPCongress PartyJammu-Kashmir assembly electionsresults of Haryanaಬಿಜೆಪಿ
Previous Post

ದಲಿತ ಸಿಎಂ ಕಸರತ್ತು.. ದಿಲ್ಲಿಯಲ್ಲಿ ಎಡಗೈ ಮಸಲತ್ತು

Next Post

ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು – ಕುಣಿದು ಕುಪ್ಪಳಿಸಿದ ಜನಸಮೂಹ !

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು – ಕುಣಿದು ಕುಪ್ಪಳಿಸಿದ ಜನಸಮೂಹ !

ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು - ಕುಣಿದು ಕುಪ್ಪಳಿಸಿದ ಜನಸಮೂಹ !

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada