• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮುಂದುವರೆದ ಮೋದಿ-ಅಖಿಲೇಶ್ ಟೀಕಾ ಪ್ರಹಾರ ; ಯುಪಿ ಚುನಾವಣೆ ಮೇಲೆ ದೇಶದ ಕಣ್ಣು

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
December 12, 2021
in ದೇಶ, ರಾಜಕೀಯ
0
ಮುಂದುವರೆದ ಮೋದಿ-ಅಖಿಲೇಶ್ ಟೀಕಾ ಪ್ರಹಾರ ; ಯುಪಿ ಚುನಾವಣೆ ಮೇಲೆ ದೇಶದ ಕಣ್ಣು
Share on WhatsAppShare on FacebookShare on Telegram

ಕಳೆದ ವಾರದಿಂದ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದಲ್ಲಿ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ.ಇಲ್ಲಿ ಕುತೂಹಲದ ಅಂಶವೆಂದರೆ ಮೋದಿ ಟಾರ್ಗೆಟ್ ಮಾಡುತ್ತಿರುವುದು ಬಿಎಸ್ಪಿಯ ಮಾಯಾವತಿಯವರನ್ನೂ ಅಲ್ಲ, ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿಯವರನ್ನೂ ಅಲ್ಲ, ಅವರ ಟಾರ್ಗೆಟ್ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಆಗಿದ್ದಾರೆ.

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಸ್ಪರ್ಧೆ ನೀಡಿದ್ದ ಸಮಾಜವಾದಿ ಪಕ್ಷ ಈ ಸಲವೂ ತೀವ್ರ ಸ್ಪರ್ಧೆ ಒಡ್ಡಲು ಹಲವಾರು ತಂತ್ರಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಾರಿಗೆ ತಂದ ಹಲವು ವಿವಾದಾತ್ಮಕ ಕಾನೂನುಗಳು ದಲಿತರಲ್ಲಿ, ಶೂಧ್ರರಿಗೆ ಹಾಗೂ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿವೆ. ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಮತಾಂತರ ನಿಷೇಧ ಕಾನೂನು ಬಳಸಿಕೊಂಡು ಅಲ್ಲಿನ ಹಿಂದೂತ್ವಾದಿ ಪುಂಡರು ಅಂತರ್ ಧರ್ಮೀಯ ವಿವಾಹವಾದವರಿಗೆ ಮತ್ತು ಅಂತರ್ ಧರ್ಮೀಯ ಪ್ರೇಮಿಗಳಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ.

ಹಾಗೆ ನೋಡಿದರೆ ಮತಾಂತರ ನಿಷೇಧಕ್ಕೆ ಸಾಂವಿಧಾನಿಕ ಮಾನ್ಯತೆಯಿಲ್ಲ. ಆದರೆ ಬಲಾತ್ಕಾರದ ಮತಾಂತರ, ಆಮಿಷದ ಮತಾಂತರ ಎಂಬ ಪದಪುಚ್ಛಗಳನ್ನು ಸೇರಿಸಿ ಈ ಕಾನೂನು ರೂಪಿಸಲಾಗಿದೆ.

ಕೋವಿಡ್ ನಿರ್ವಹಣೆಯಲ್ಲೂ ಯೋಗಿ ಆದಿತ್ಯನಾಥ್ ಸರ್ಕಾರ ಎಡವಿದೆ. ಗಂಗಾನದಿಯಲ್ಲಿ ಮೃತ ಕೋವಿಡ್ ರೋಗಿಗಳ ಹೆಣಗಳು ತೇಲಿದ ವಿಡಿಯೋ ಜಾಗತಿಕವಾಗಿ ಟೀಕೆ ಒಳಗಾಗಿತ್ತು.

ಈ ಎಲ್ಲದರ ನಡುವೆಯೂ ಬಿಜೆಪಿ ಮತ್ತೆ ಹಿಂದೂತ್ವದ ಅಜೆಂಡಾ ಮುನ್ನೆಲೆಗೆ ತಂದು ಗೆಲ್ಲುವ ಕಸರತ್ತು ಮಾಡುತ್ತಿದೆ.ಸಾಲುಸಾಲಾಗಿ ಪ್ರಮುಖ ಯೋಜನೆಗಳನ್ನು ಘೋಷಿಸುತ್ತಿದೆ. ಹಿಂದೂತ್ವ ಮಾತ್ತು ಅಭಿವೃದ್ಧಿ ಎಂಬ ಭ್ರಮೆಗಳೇ ಅದಕ್ಕೆ ಆಧಾರ.

ಮುಂದಿನ ಸಾರ್ವತ್ರಿಕ ಚುನಾವಣೆಯ ಮೇಲೆ ಬಹುದೊಡ್ಡ ರಾಜ್ಯ ಉತ್ತರಪ್ರದೇಶದ ಅಸೆಂಬ್ಲಿ ಚುನಾವಣೆ ಫಲಿತಾಂಸ ಪರಿಣಾಮ ಬೀರಲಿದೆ. ಈ ಕಾರಣಕ್ಕೆ ಮೋದಿ ಮತ್ತು ಬಿಜೆಪಿಗೆ ಈ ಚುನಾವಣೆ ಮಹತ್ವದ್ದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡೇ ಮೋದಿ ಉತ್ತರಪ್ರದೇಶದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡುತ್ತ, ಸಮಾಜವಾದಿ ಪಕ್ಷದ ಅಖಿಲೇಶ್ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಅಖಿಲೇಶ್ ಕೂಡ ಪ್ರತ್ಯುತ್ತರ ನೀಡುತ್ತಿದ್ದಾರೆ.

ಸರಯೂ ಕಾಲುವೆ ರಾಷ್ಟ್ರೀಯ ಯೋಜನೆಯನ್ನು ಪ್ರಧಾನಿ ಮೋದಿ ಅವರು ಶನಿವಾರ ಉದ್ಘಾಟಿದ್ದರು. ಈ ವಿಚಾರವಾಗಿ ರಿಬ್ಬನ್‌ಗಳನ್ನು ಕತ್ತರಿಸುವುದು ಕೆಲವರಿಗೆ ಆದ್ಯತೆಯಾಗಿದೆ ಎಂದು ಅಖಿಲೇಶ್ ಯಾದವ್‌ ಮೋದಿ ಅವರನ್ನು ಟೀಕಿಸಿದ್ದರು. ತಮ್ಮ ಆಡಳಿತದಲ್ಲಿ ಸರಯು ಕಾಲುವೆ ನೀರಾವರಿ ಯೋಜನೆಯ ಪ್ರಮುಖ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಅಖಿಲೇಶ್ ಹೇಳಿದ್ದಕ್ಕೆ ಪ್ರತಿಯಾಗಿ ಮೋದಿ ʼರಿಬ್ಬನ್ʼ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶನಿವಾರ ಅಭಿವೃದ್ಧಿ ಯೋಜನೆಗಳ ಕ್ರೆಡಿಟ್ ಅನ್ನು ತೆಗೆದುಕೊಳ್ಳಲು ಪರಸ್ಪರ ಟೀಕೆಗಳನ್ನು ಮಾಡಿಕೊಂಡಿದ್ದಾರೆ.

ನಾಲ್ಕು ದಿನಗಳ ಹಿಂದಷ್ಟೇ ಉತ್ತರಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನರೇಂದ್ರ ಮೋದಿ, ʼಲಾಲ್ ಟೋಪಿವಾಲೆ ಬಹುತ್ ಡೇಂಜರ್ʼ ( ಕೆಂಪು ಟೊಪ್ಪಿವಾಲಾಗಳು ಅಪಾಯಕಾರಿ) ಎಂದು ಸಮಾಜವಾದಿ ಪಕ್ಷವನ್ನು ಟೀಕಿಸಿದ್ದರು. ಸಮಾಜವಾದಿ ಪಕ್ಷದ ಸದಸ್ಯರು ಕೆಂಪು ಟೊಪ್ಪಿಗೆ ಧರಿಸುತ್ತಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಅಕಿಲೇಶ್ ಯಾದವ್, ಕೆಂಪು ಬಣ್ಣದ ಮಹತ್ವ ವಿವರಿಸಿ, ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದರು. ಮೋದಿಯವರು ಮಾಡಿದ ಆ ರಾಜಕೀಯ ಭಾಷಣವನ್ನು ಪ್ರಧಾನಿ ಕಚೇರಿ ಪ್ರಕಟಿಸುವ ಮೂಲಕ ಶಿಷ್ಟಾಚಾರದ ಉಲ್ಲಂಘನೆ ಮಾಡಿತ್ತು. ಇದು ತೀವ್ರ ಟೀಕೆಗೂ ಗುರಿಯಾಗಿತ್ತು.ಈಗ ಸರಯು ಯೋಜನೆಯ ವಿಷಯದಲ್ಲಿ ಮತ್ತೆ ರಾಜಕೀಯ ಕಿತ್ತಾಟ ಮುಂದುವರೆದಿದೆ.

ಇನ್ನೊಂದು ಕಡೆ ಪ್ರಿಯಾಂಕಾ ಗಾಂಧಿ ಮತ್ತು ಮಾಯಾವತಿ ತಮ್ಮದೇ ತಂತ್ರಗಳನ್ನು ರೂಪಿಸುತ್ತಿದ್ದಾರೆ.ಚುನಾವಣೆಗೂ ಮುನ್ನ ಗಂಗೆಯಲ್ಲಿ ಸಾಕಷ್ಟು ನೀರು ಹರಿಯಲಿದೆ. ಅಷ್ಟೇ ರಭಸವಾಗಿ ಟೀಕೆ-ಪ್ರತಿಟೀಕೆಗಳು ಗಾಳಿಯಲ್ಲಿ ತೇಲಾಡಲಿವೆ.

Tags: BJPCongress PartyCovid 19ಅಖಿಲೇಶ್ ಯಾದವ್ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಯುಪಿ ಚುನಾವಣೆ
Previous Post

ಜಾಲಿ : ಹಳ್ಳಿಯ ಜನರಿಗೆ ಜಾಲಿ ಜಾಲಿ! ಈ ಮುಳ್ಳುಕಂಟಿ ಗಿಡದ ಬಗ್ಗೆ ಲಂಕೇಶ್ ಗೂ ಮೂಡಿತ್ತು ಸೋಜಿಗ

Next Post

ಭಾರತ ನಕಲಿ ಹಿಂದೂತ್ವವಾದಿ ಆಡಳಿತದಿಂದ ನಲುಗುತ್ತಿದೆ : ರಾಹುಲ್‌ ಗಾಂಧಿ ಕಿಡಿ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಭಾರತ ನಕಲಿ ಹಿಂದೂತ್ವವಾದಿ ಆಡಳಿತದಿಂದ ನಲುಗುತ್ತಿದೆ : ರಾಹುಲ್‌ ಗಾಂಧಿ ಕಿಡಿ

ಭಾರತ ನಕಲಿ ಹಿಂದೂತ್ವವಾದಿ ಆಡಳಿತದಿಂದ ನಲುಗುತ್ತಿದೆ : ರಾಹುಲ್‌ ಗಾಂಧಿ ಕಿಡಿ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada