• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರಿ ನೌಕರರ 17 ಪ್ರತಿಶತ ವೇತನ ಏರಿಕೆ ಎಂದಿನಿಂದ ಜಾರಿಯಾಗಲಿದೆ..? ಮಾಹಿತಿ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಕರ್ನಾಟಕ
0
ರಾಜ್ಯ ಸರ್ಕಾರಿ ನೌಕರರ 17 ಪ್ರತಿಶತ ವೇತನ ಏರಿಕೆ ಎಂದಿನಿಂದ ಜಾರಿಯಾಗಲಿದೆ..? ಮಾಹಿತಿ ಇಲ್ಲಿದೆ
Share on WhatsAppShare on FacebookShare on Telegram

ಬೆಂಗಳೂರು : ಏಳನೇ ವೇತನ ವರದಿ ಜಾರಿಗೆ ಆಗ್ರಹಿಸಿದ ಇಂದಿನಿಂದ ಮುಷ್ಕರಕ್ಕೆ ಕರೆ ನೀಡಿದ್ದ ಸರ್ಕಾರಿ ನೌಕರರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಮಣಿದಿದೆ. ರಾತ್ರಿ ನಡೆದ ಸಂಧಾನ ಸಭೆಯಲ್ಲಿ 8 ಪ್ರತಿಶತ ವೇತನ ಏರಿಕೆ ಮಾತ್ರ ಸಾಧ್ಯ ಎಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸರ್ಕಾರಿ ನೌಕರರ ಕೋಪ ತಣ್ಣಗಾಗಿಸಲು 17 ಪ್ರತಿಶತ ವೇತನ ಏರಿಕೆ ಮಾಡಿ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ADVERTISEMENT


ಸರ್ಕಾರಿ ನೌಕರರು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ತಡರಾತ್ರಿ ಖಡಕ್​ ಆದೇಶವನ್ನು ಹೊರಡಿಸಿತ್ತು. ನಾಳೆ ಅನವಶ್ಯಕ ಕಾರಣದಿಂದ ಕಚೇರಿಗೆ ಹಾಜರಾಗದೇ ಇದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿತ್ತು . ಆದರೆ ಯಾವುದೇ ಬೆದರಿಕೆಗಳಿಗೆ ಮಣಿಯದ ರಾಜ್ಯ ಸರ್ಕಾರಿ ನೌಕರರು ಇಂದು ಮುಷ್ಕರ ನಡೆಸಿದ್ದಾರೆ. ಕೊನೆಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸಿಎಂ ಬಸವರಾಜ ಬೊಮ್ಮಾಯಿ ಏಪ್ರಿಲ್​ 1ನೇ ತಾರೀಖಿನಿಂದ ಅನ್ವಯವಾಗುವಂತೆ 17 ಪ್ರತಿಶತ ವೇತನ ಏರಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.


ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳ ಪರಿಶೀಲನೆ ಮಾಡಲು 7ನೇ ವೇತನ ಆಯೋಗವನ್ನು ರಚನೆ ಮಾಡಲಾಗುತ್ತದೆ. 7ನೇ ವೇತನ ಆಯೋಗದ ಅಂತಿಮ ವರದಿ ಸರ್ಕಾರದ ಕೈ ಸಿಗುವವರೆಗೆ ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸುತ್ತದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.


ರಾಜ್ಯ ಸರ್ಕಾರಿ ನೌಕರರು ಮೂಲ ವೇತನದ ಶೇಕಡಾ 40ರಷ್ಟು ಏರಿಕೆ , ಮೂಲ ವೇತನದೊಂದಿಗೆ ತುಟ್ಟಿ ಭತ್ಯೆ ಸೌಕರ್ಯ, ಹಳೆ ಪಿಂಚಣಿ ಜಾರಿ ವ್ಯವಸ್ಥೆ, ಎನ್​ಪಿಎಸ್​ ರದ್ದು ಮಾಡಿ ಒಪಿಎಸ್​ ವ್ಯಾಪ್ತಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದರು.

Tags: 17 Percent Pay Hike7th Pay Commission ImplementationCM Basavaraja BommaiState Govt Employees Strike
Previous Post

ಬೀದರ್‌: ಸಚಿವರ ಮನೆಗೆ ಮುತ್ತಿಗೆ ಹಾಕಿದ ಕಾರಂಜಾ  ಸಂತ್ರಸ್ತರು

Next Post

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada