• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಸಂಪುಟ ವಿಸ್ತರಣೆ ಯಾವಾಗ..? : ಬಿಜೆಪಿಗೆ ಕೌಂಟರ್‌ ಕೊಡಲು ಕೈ ಕಮಾಂಡ್‌ ಪ್ಲ್ಯಾನ್‌ ಏನು..?

ಒಂದು ತಿಂಗಳು ಕಳೆದರೂ ವಿಸ್ತರಣೆಯಾಗದ ಸಂಪುಟ : ರಾಜ್ಯದ ಜನರಿಗೆ ತಪ್ಪದ ಸಂಕಟ..!

ಪ್ರತಿಧ್ವನಿ by ಪ್ರತಿಧ್ವನಿ
July 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
CM DKS Vs BJP

CM DKS Vs BJP

Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಈಗಾಗಲೇ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಕೇವಲ 13 ಜನರ ಸಂಪುಟವನ್ನು ಕಳೆದ ಒಂದು ತಿಂಗಳಿನಿಂದ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಇದುವರೆಗೂ ಕೂಡ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳುತ್ತಿಲ್ಲ. ಇದು ಸಚಿವಾಕಾಂಕ್ಷಿ ಶಾಸಕರಿಗೆ ಬೇಸರ ಮೂಡಿಸುತ್ತಿದೆ.

ADVERTISEMENT
DkShivakumar  :ಇನ್ಮುಂದೆ ಹಣ ಎಣಿಕೆ ಕಾರ್ಯವನ್ನು ಪೊಲೀಸರು ಲೈವ್ ನೋಡ್ತಾರೆ.. #pratidhvani

ಬಹುತೇಕ ಸದ್ಯ ಡಿಕೆ ಶಿವಕುಮಾರ್‌ ಸಂಪುಟದಲ್ಲಿರುವ ಸಚಿವರು ಈ ಹಿಂದಿನ ಸಿದ್ದರಾಮಯ್ಯ ಸಂಪುಟದವರೇ ಆಗಿದ್ದಾರೆ. ಆದರೆ ನೂತನವಾಗಿ ಮಂತ್ರಿಗಳಾಗುವ ಕನಸು ಕಂಡಿರುವ ಹಲವಾರು ಕಾಂಗ್ರೆಸ್‌ ಶಾಸಕರು ತೆರೆಮರೆಯಲ್ಲಿ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.

ಈ ನಡುವೆಯೇ ಜಾತಿವಾರು, ಸಮುದಾಯವಾರು ಹಾಗೂ ಪ್ರಾಂತ್ಯವಾರು ಲೆಕ್ಕಾಚಾರದಿಂದ ಅಳೆದು ತೂಗಿ ಸಂಪುಟ ವಿಸ್ತರಣೆಯಾಗಲಿದೆ ಎಂಬ ಚರ್ಚೆಗಳು ಮುಂದುವರೆದಿವೆ. ಮಂತ್ರಿಗಿರಿಗಾಗಿ ಶಾಸಕರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸುತ್ತ ಗಿರಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಹಿರಿಯರು ಹಾಗೂ ಕಿರಿಯ ಶಾಸಕರು ಸಚಿವ ಸ್ಥಾನದ ಆಸೆಯಿಂದ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲು ಮುಂದಾಗುತ್ತಿದ್ದಾರೆ. ಆದರೆ ಇದಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ ಹಾಕುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ : ಕರಾವಳಿ ಕಿರಿಕ್‌: ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR

ಕಳೆದ ವಾರವಷ್ಟೇ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌, ಗದಗ ಜಿಲ್ಲೆಯ ರೋಣ ಕ್ಷೇತ್ರದ ಜಿ.ಎಸ್.‌ ಪಾಟೀಲ್‌ ಅವರಿಗೆ ಮಂತ್ರಿಗಿರಿಗಾಗಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಖುದ್ದು ಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಆಗ್ರಹಿಸಿದ್ದರು. ಅಲ್ಲದೆ ಜಿಎ.ಎಸ್.‌ ಪಾಟೀಲ್‌ ಅಭಿಮಾನಿಗಳ ಬಳಗದಿಂದ ತುಮಕೂರಿನಿಂದ ಬೆಂಗಳೂರಿನ ಪ್ರೀಡಂಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಕಾಂಗ್ರೆಸ್‌ ಹೈಕಮಾಂಡ್‌ ಗಮನ ಸೆಳೆಯುವ ಕೆಲಸ ಮಾಡಿದ್ದರು.

ಇದಷ್ಟೇ ಅಲ್ಲದೆ ಯುವ ಶಾಸಕರೂ ತಮಗೂ ಮಂತ್ರಿಗಿರಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದಾರೆ. ಶಾಸಕರಾದ ಶರತ್‌ ಬಚ್ಚೇಗೌಡ, ಶ್ರೀನಿವಾಸ ಮಾನೆ, ರಿಜ್ವಾನ್‌ ಅರ್ಷದ್‌, ಪ್ರದೀಪ್‌ ಈಶ್ವರ್ ಸೇರಿದಂತೆ ಹಲವರು ಬೇಡಿಕೆ ಇಡುತ್ತಿದ್ದಾರೆ.‌ ಆದರೆ ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ಹೀಗಿರುವಾಗ ಖುದ್ದು ಡಿಕೆ ಶಿವಕುಮಾರ್‌ ಈ ವಿಚಾರದಲ್ಲಿ ಆಸಕ್ತಿ ತೋರಿಸಿ, ಎಲ್ಲ ಶಾಸಕರ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ.

ಸಚಿವ ಸ್ಥಾನ ನೀಡಬೇಕೆಂಬ ಪ್ರತಿಭಟನೆಗಳನ್ನು ನಾವು ಒಪ್ಪಲ್ಲ, ಕಾಂಗ್ರೆಸ್‌ ಪಕ್ಷ ಶಿಸ್ತನ್ನು ಹೊಂದಿದೆ. ಇಲ್ಲಿ ಗೊಂದಲಗಳಿಗೆ ನಾವು ಅವಕಾಶ ನೀಡುವುದಿಲ್ಲ. ಸದ್ಯ ರಾಜ್ಯದಲ್ಲಿ ಈಗ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿದೆ. ಯಾವೊಬ್ಬ ಅರ್ಹ ಮತದಾರರು ಮತಪಟ್ಟಿಯಿಂದ ಹೊರಗೆ ಉಳಿಯಬಾರದು. ಇದನ್ನು ಎಲ್ಲರೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಇನ್ನುಳಿದಂತೆ ಸಚಿವ ಸ್ಥಾನದ ಬಗ್ಗೆ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅಭಯ ನೀಡಿದ್ದಾರೆ.

YouTube player

ಇನ್ನೂ ಮುಖ್ಯವಾಗಿ ಆರಂಭದಲ್ಲಿ ಜುಲೈ ತಿಂಗಳ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗುತ್ತಿತ್ತು. ಆದರೆ ಕಳೆದ 5ರಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿದೇಶ ಪ್ರವಾಸದಿಂದ ವಾಪಸ್‌ ಆದ ಬಳಿಕ ಈ ಬಗೆಯ ಪ್ರಕ್ರಿಯೆಗಳು ವೇಗ ಪಡೆದುಕೊಳ್ಳಲಿವೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ವ್ಯಕ್ತವಾಗುತ್ತಿದ್ದವು.

ಆದರೆ ಸಂಪುಟ ವಿಸ್ತರಣೆಯ ಸುಳಿವು ಇದುವರೆಗೂ ಕಾಂಗ್ರೆಸ್‌ ಬಿಟ್ಟುಕೊಟ್ಟಿಲ್ಲ. ಬಹುತೇಕ ಮುಂದಿನ ವಾರದಲ್ಲಿ ಡಿಕೆ ಶಿವಕುಮಾರ್‌ ನೇತೃತ್ವದ ಫ್ಲೈಟು ಫುಲ್‌ ಆಗಲಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ಜುಲೈ 13ರ ವೇಳೆಗೆ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಇನ್ನೂ ಇದಕ್ಕೆ ಕಾರಣವನ್ನು ನೋಡುವುದಾದರೆ ಸದ್ಯ ಡಿಕೆ ಶಿವಕುಮಾರ್‌ ಸಚಿವ ಸಂಪುಟ ಅಪೂರ್ಣವಾಗಿದೆ. ಆದರೆ ರಾಜ್ಯದಲ್ಲಿ ಬರ, ನೆರೆಯ ಜೊತೆಗೆ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ನಿರ್ವಹಣೆ ಮಾಡಲು ಸಚಿವರೇ ಇಲ್ಲ. ಇನ್ನೂ ಪ್ರಮುಖವಾಗಿ ಆಗಸ್ಟ್‌ನಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಕೆಲವೇ ಕೆಲವು ಜನರನ್ನು ಹೊಂದಿರುವ ಸಂಪುಟದಿಂದ ನಿರೀಕ್ಷಿತ ಮಟ್ಟದಲ್ಲಿ ಚರ್ಚೆಗಳು ನಡೆಯಲು ಸಾಧ್ಯವಾಗುವುದಿಲ್ಲ. ಅಲ್ಲದೆ ರಾಜ್ಯದಲ್ಲಿ ತಲೆದೂರಿರುವ ಸಮಸ್ಯೆಗಳಿಗೂ ಯಾವುದೇ ರೀತಿಯ ಪರಿಹಾರ ಕಂಡುಕೊಳ್ಳಲು ಆಗುವುದಿಲ್ಲ. ಹೀಗಾಗಿ ಈ ಎಲ್ಲ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಶಿವಕುಮಾರ್‌ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿಪಕ್ಷಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಇದನ್ನು ಅರಿತಿರುವ ಕಾಂಗ್ರೆಸ್‌ ಹೈಕಮಾಂಡ್‌ ಶೀಘ್ರದಲ್ಲೇ ಯುವಕರು ಹಾಗೂ ಹಿರಿಯ ಅನುಭವಿ ಶಾಸಕರ ತಂಡವನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ.

Tags: Assembly SessionB Y Vijayendrabjp karnatakacabinet expansionCM DK ShivakumarCongress High Commandcongress karnatakaDroughtPratidhvaniR AshokRahul GandhiRain
Previous Post

ಕರಾವಳಿ ಕಿರಿಕ್‌: ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR

Next Post

ರಾಮ ಮಂದಿರ ಹುಂಡಿ ಹಣ ಲೂಟಿ : SITಯ ಗಂಭೀರ ಪ್ರಶ್ನೆಗಳಿಗೆ ಉತ್ತರಿಸೋದ್ಯಾರು..?

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
Ram Mandir Theft SIT

ರಾಮ ಮಂದಿರ ಹುಂಡಿ ಹಣ ಲೂಟಿ : SITಯ ಗಂಭೀರ ಪ್ರಶ್ನೆಗಳಿಗೆ ಉತ್ತರಿಸೋದ್ಯಾರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada