• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಲೋಕಾಯುಕ್ತ ದಾಳಿ ಎಲ್ಲೆಲ್ಲಿ ನಡೀತು.. ಸಿಕ್ಕಿಬಿದ್ದವರು ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
November 12, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ರಾಜ್ಯದಲ್ಲಿ ಲೋಕಾಯುಕ್ತ ದಾಳಿ ಎಲ್ಲೆಲ್ಲಿ ನಡೀತು.. ಸಿಕ್ಕಿಬಿದ್ದವರು ಯಾರು..?
Share on WhatsAppShare on FacebookShare on Telegram

ರಾಜ್ಯಾದ್ಯಂತ ಭ್ರಷ್ಟರಿಗೆ ಲೋಕಾಯುಕ್ತರು ಬಿಗ್ ಶಾಕ್​ ನೀಡಿದ್ದಾರೆ. ಹಾವೇರಿಯಲ್ಲಿ ಲೋಕಾಯುಕ್ತ ಟೀಂ ಇಬ್ಬರು ಭ್ರಷ್ಟ ಅಧಿಕಾರಿಗಳನ್ನು ಬೇಟೆಯಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್​​ ನಿವಾಸ ಹಾಗೂ ರಾಜ್ಯ ಪಂಚಾಯತ್ ಸಹಾಯಕ ಇಂಜಿನಿಯರಿಂಗ್ ಕಾಶಿನಾಥ್ ಭಜಂತ್ರಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಕಾಶಿನಾಥ್​​ ತಮ್ಮ ನಿವಾಸದಿಂದ ಬರೊಬ್ಬರಿ 11 ಲಕ್ಷ ರೂಪಾಯಿ ಹಣವನ್ನು ಕಿಟಕಿಯಿಂದ ಹೊರಕ್ಕೆ ಎಸೆದಿದ್ದಾರೆ. ಇದನ್ನು ನೊಡಿದ ಲೋಕಾಯುಕ್ತ ಅಧಿಕಾರಿಗಳು ಕಂತೆ ಕಂತೆ ಹಣವನ್ನು ಸೀಜ್ ಮಾಡಿದ್ದಾರೆ. ಹಣ, ಬಂಗಾರ, ಆಸ್ತಿ ಪತ್ರಗಳು ಪತ್ತೆಗಾಗಿ ಶೋಧ ಮುಂದುವರಿದಿದೆ.

ADVERTISEMENT

ಧಾರವಾಡದಲ್ಲೂ ಬೆಳ್ಳಂಬೆಳಗ್ಗೆಯೇ KIADB ಎಇಇ ಅಧಿಕಾರಿ ಮನೆ ಮೇಲೆ ರೇಡ್​​ ನಡೆಸಿದ್ದಾರೆ ಲೋಕಾಯುಕ್ತ ಟೀಂ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಎಇಇ ಗೋವಿದಂಪ್ಪ ಭಜಂತ್ರಿಯ ಫಾರ್ಮ್‌ ಹೌಸ್‌, ಧಾರವಾಡದ ತೇಜಸ್ವಿ ನಗರದಲ್ಲಿರೋ ಅಳಿಯನ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ತಲಾಶ್‌ ಮಾಡ್ತಿದ್ದಾರೆ.

ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಿವಾಸದಲ್ಲಿ ಬೆಳಗ್ಗೆಯೇ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯ ಅಪಾರ್ಟ್​ಮೆಂಟ್ ಹಾಗೂ ಪಕ್ಕದ ಮನೆ ಮೇಲೂ ಮೈಸೂರು ಲೋಕಾಯುಕ್ತ ಪೊಲೀಸರ ತಂಡ ದಾಖಲೆ ಪರಿಶೀಲನೆ ಮಾಡಿದ್ದಾರೆ.

ಬೀದರ್​​ನಲ್ಲೂ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಬೆಳ್ಳಂ ಬೆಳಗ್ಗೆಯೇ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿಗೆ ಸೇರಿದ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೀದರ್ ಹಾಗು ಬೆಂಗಳೂರಿನ ನಿವಾಸ ಮತ್ತು ಬೀದರ್‌ನ ನೌಬಾದ್‌ನಲ್ಲಿರುವ ಕಚೇರಿಯಲ್ಲಿ ಪರಿಶೀಲನೆ ಮಾಡಿದ್ದಾರೆ.

ಬೆಳಗಾವಿಯಲ್ಲಿಯೂ ಭ್ರಷ್ಟ ಗ್ರಾಮ ಲೆಕ್ಕಾಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಿದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿಠ್ಠಲ ಡವಳೇಶ್ವರ ನಿವಾಸದಲ್ಲಿ ಒಂದು ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ದಾವಣಗೆರೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ರೇಡ್‌ ಆಗಿದೆ. ಶಕ್ತಿನಗರದ ಮೂರನೇ ಕ್ರಾಸ್​​ನಲ್ಲಿರುವ ಕಮಲ್ ರಾಜ್ ಮನೆ ಹಾಗೂ ಕೈಗಾರಿಕಾ ಪ್ರದೇಶದಲ್ಲಿರುವ ಕಚೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಇನ್ಸ್​​ಪೆಕ್ಟರ್‌ಗಳಾದ ಮಧು ಸೂದನ್ ಹಾಗೂ ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ ಟೀಂ ದಾಳಿ ಮಾಡಿದೆ.

Tags: acb raids in karnataka todayED raided raid todaykarnataka latest newskarnataka newskarnataka news todaykarnataka political developmentskarnataka political newsKarnataka Politicslive karnataka newslokayukta raid in karnatakalokayukta raid today in karnatakalokayukta raids in karnatakalokayukta raids over karnatakaraids in karnatakatoday newsusha raman ed raid today bengaluru
Previous Post

ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ

Next Post

ಡಿಜಿಟಲ್‌ ಪ್ಲಾಟ್‌ಫಾರಂಗಳಲ್ಲಿ ಮಹಿಳಾ ಕಾರ್ಮಿಕರ ಮೊಟ್ಟಮೊದಲ ಮುಷ್ಕರ ಗಮನಾರ್ಹವಾದುದು

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಡಿಜಿಟಲ್‌ ಪ್ಲಾಟ್‌ಫಾರಂಗಳಲ್ಲಿ ಮಹಿಳಾ ಕಾರ್ಮಿಕರ ಮೊಟ್ಟಮೊದಲ ಮುಷ್ಕರ ಗಮನಾರ್ಹವಾದುದು

ಡಿಜಿಟಲ್‌ ಪ್ಲಾಟ್‌ಫಾರಂಗಳಲ್ಲಿ ಮಹಿಳಾ ಕಾರ್ಮಿಕರ ಮೊಟ್ಟಮೊದಲ ಮುಷ್ಕರ ಗಮನಾರ್ಹವಾದುದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada