• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾವೇರಿ ನದಿ ನೀರಿಗೆ ತಮಿಳುನಾಡು ಕ್ಯಾತೆ.. ಮತ್ತೆ ಸುಪ್ರೀಂನಲ್ಲಿ ಫೈಟ್

ಕೃಷ್ಣ ಮಣಿ by ಕೃಷ್ಣ ಮಣಿ
August 23, 2023
in ಅಂಕಣ, ಅಭಿಮತ
0
ಸುಪ್ರೀಂ ಕೋರ್ಟ್‌
Share on WhatsAppShare on FacebookShare on Telegram

ಕಾವೇರಿ ನದಿ ನೀರು ಹಂಚಿಕೆ ವಿವಾದ ಮುಗಿದ ಅಧ್ಯಾಯ ಎನ್ನಲಾಗಿತ್ತು. ಅದೇ ಕಾರಣಕ್ಕೆ ಕಾವೇರಿ CAUVERY WATER MANAGEMENT AUTHORITY ನಿಗದಿಯಂತೆ ನೀರನ್ನು ಬಿಡುಗಡೆ ಮಾಡಿಕೊಂಡೇ ಹೋಗುತ್ತಿತ್ತು. ಇದಕ್ಕೂ ಮೊದಲೇ ಕರ್ನಾಟಕ ಕೂಡ ನೀರಿನ ಸಮಸ್ಯೆ ಬಗ್ಗೆ ಸುಪ್ರೀಂಕೋರ್ಟ್​ ಮೆಟ್ಟಿಲು ಏರುವುದಕ್ಕೆ ಅವಕಾಶ ಇದ್ದರೂ ಅವಕಾಶ ಬಳಸಿಕೊಳ್ಳದೆ ಕೆಆರ್​ಎಸ್​ ಡ್ಯಾಂನಲ್ಲಿ ಸಂಗ್ರಹ ಆಗಿದ್ದ ನೀರನ್ನೇ ಬಿಡುಗಡೆ ಮಾಡಿಕೊಂಡು ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ವಿರೋಧ ಪಕ್ಷಗಳೂ ಕೂಡ ಸರ್ಕಾರದ ನಿಲುವನ್ನು ವಿರೋಧಿಸಿದ್ದವು. ಜೊತೆಗೆ ತಮಿಳುನಾಡಿನಲ್ಲಿ ಡಿಎಂಕೆ ಹಾಗು ಕಾಂಗ್ರೆಸ್​ ಮೈತ್ರಿ ಪಕ್ಷಗಳು ಆಗಿರುವ ಕಾರಣಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗ್ತಿದೆ ಎಂದು ಆರೋಪ ಮಾಡಿದ್ದರು.

ADVERTISEMENT

ತಮಿಳುನಾಡು ಅರ್ಜಿ ಮಾನ್ಯ ಮಾಡಿದ ಸುಪ್ರೀಂಕೋರ್ಟ್​..!

ಈಗಾಗಲೇ ಒಮ್ಮೆ ಸುಪ್ರೀಂಕೋರ್ಟ್​ ಅಂಗಳದಿಂದ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದ್ದ ಕಾವೇರಿ ವಿವಾದದ ಚೆಂಡು, ಮತ್ತೆ ಸುಪ್ರೀಂಕೋರ್ಟ್​ ಅಂಗಳ ತಲುಪಿದೆ. ಕೇಂದ್ರ ಜಲಶಕ್ತಿ ಇಲಾಖೆ ನೇತೃತ್ವದಲ್ಲಿ ಕಾವೇರಿ ವಾಟರ್​ ಮ್ಯಾನೇಜ್​ಮೆಂಟ್​ ಅಥಾರಿಟಿ ಸ್ಥಾಪನೆ ಮಾಡಲಾಗಿತ್ತು. ಆದರೆ ಇದೀಗ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಕೆ ಮಾಡಿ. ನ್ಯಾಯಾಧಿಕಾರಣದ ಐ ತೀರ್ಪಿನಂತೆ ಕರ್ನಾಟಕ ನೀರು ಹರಿಸುತ್ತಿಲ್ಲ. ನೀರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದೆ. ಸಾಮಾನ್ಯ ವರ್ಷಗಳಂತೆಯೇ ಕರ್ನಾಟಕ ನೀರು ಹರಿಸಬೇಕು ಅನ್ನೋದು ತಮಿಳುನಾಡಿನ ಮನವಿ. ಇದೀಗ ಅರ್ಜಿಯನ್ನು ವಿಚಾರಣೆಗೆ ಮಾನ್ಯ ಮಾಡಿರುವ ಸುಪ್ರೀಂಕೋರ್ಟ್​, ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ಅರ್ಜಿ ವರ್ಗಾವಣೆ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌

ಕಾವೇರಿ ಕ್ಯಾತೆ ಜೊತೆಗೆ ಮೇಕೆದಾಟುಗೆ ಅಡ್ಡಗಾಲು..!

ಕಾವೇರಿ ನೀರನ್ನು ಕೇಳುತ್ತಿರುವ ತಮಿಳುನಾಡು, ಮೇಕೆದಾಟು ಅಣೆಕಟ್ಟೆಯನ್ನೂ ಕಟ್ಟಬಾರದು ಎಂದು ತಮಿಳುನಾಡು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ. ಕರ್ನಾಟಕದ ಮೇಕೆದಾಟು ವಾರವನ್ನೂ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳು ಪರಿಗಣನೆಗೆ ತೆಗೆದುಕೊಂಡಿದ್ದು, ಎರಡೂ ಅರ್ಜಿಗಳನ್ನು ಶುಕ್ರವಾರ ಅಥವಾ ಸೋಮವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಕರ್ನಾಟಕ ಎಷ್ಟು ನೀರು ಬಿಡುಗಡೆ ಮಾಡಿದೆ. ಇನ್ನೂ ಎಷ್ಟು ಬಾಕಿ ಉಳಿಸಿಕೊಂಡಿದೆ ಅನ್ನೋದ್ರ ಮೇಲೆ ವಿಚಾರಣೆ ನಡೆಯಲಿದೆ. ಇದರ ನಡುವೆ 2018ರ ನ್ಯಾಯಾಧಿಕರಣದ ಆದೇಶದ ಪ್ರಕಾರ ನೀರು ಬಿಡುವುದು ಅಸಾಧ್ಯ ಎಂದು ಕರ್ನಾಟಕ ಸುಪ್ರೀಂಕೋರ್ಟ್​ ಮುಂದೆ ಹೋಗಿದೆ. ಇದಕ್ಕೂ ಮೊದಲು ಬುಧವಾರ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕಡೆದಿದ್ದು, ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿಕೊಂಡೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ.

ಸುಪ್ರೀಂನಲ್ಲಿ ಹಿನ್ನಡೆ ಅನುಭವಿಸುತ್ತಾ, ಕರ್ನಾಟಕ..?

ಪ್ರತಿದಿನ ಕರ್ನಾಟಕ 24 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಅನ್ನೋದು ತಮಿಳುನಾಡಿನ ಬೇಡಿಕೆ. ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಅಷ್ಟು ಪ್ರಮಾಣದ ನೀರು ಇಲ್ಲ. KRS ಡ್ಯಾಂನಲ್ಲಿ ಕೇವರ 69 TMC ಇದೆ, ನಮಗೇ 132 TMC ಬೇಕು, ಹೀಗಿರುವಾಗ ತಮಿಳುನಾಡಿಗೆ ನೀರು ಬಿಡೋಕೆ ಹೇಗೆ ಸಾಧ್ಯ ಅನ್ನೋದು ಕರ್ನಾಟಕದ ವಾದ. ಕಾವೇರಿ ನಿಯಂತ್ರಣಾ ಪ್ರಾಧಿಕಾರದ ಪ್ರಕಾರ ಈ ವರ್ಷ ಶೇಕಡ 42ರಷ್ಟು ಮಳೆ ಕೊರತೆ ಉಂಟಾಗಿದೆ. ಇನ್ನು ಮೇಕೆದಾಟು ಅಣೆಗಟ್ಟೆಗೆ ಅನುಮತಿ ಕೊಟ್ಟರೆ ಹೆಚ್ಚುವರಿ ನೀರು ಹಿಡಿದಿಟ್ಟುಕೊಳ್ಳಬಹುದು. ಈ ರೀತಿಯ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಬಹುದು ಎನ್ನುವುದು ಕರ್ನಾಟಕದ ವಾದ ಆಗಿದೆ. ಸುಪ್ರೀಂಕೋರ್ಟ್​ನಲ್ಲಿ ಮೋಹನ್​ ಕಾತರಕಿ ವಾದ ಮಂಡಿಸಲಿದ್ದು, ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕಕ್ಕೆ ಹಿನ್ನಡೆಯೋ ಮುನ್ನಡೆಯೋ ಕಾದು ನೋಡಬೇಕಿದೆ.

ಕೃಷ್ಣಮಣಿ

Tags: Kaveri RiverKRSmkstalinsiddaramaiahsupreme courtTamilnadu
Previous Post

ಭಾರತದ ನಾಗರಿಕತೆಯ ಪ್ರಾಚೀನತೆ: ವಿದೇಶಿ ತಜ್ಞರ ದೃಷ್ಟಿಕೋನ

Next Post

ಭಾರತದ ಚಂದ್ರಯಾನ 3 ಮತ್ತು ಕಡೆಯ 5 ನಿಮಿಷಗಳ ಕಠಿಣ ಪರಿಶ್ರಮ.. !

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
Next Post
ಭಾರತದ ಚಂದ್ರಯಾನ 3 ಮತ್ತು ಕಡೆಯ 5 ನಿಮಿಷಗಳ ಕಠಿಣ ಪರಿಶ್ರಮ.. !

ಭಾರತದ ಚಂದ್ರಯಾನ 3 ಮತ್ತು ಕಡೆಯ 5 ನಿಮಿಷಗಳ ಕಠಿಣ ಪರಿಶ್ರಮ.. !

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada