• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?

Shivakumar by Shivakumar
June 7, 2021
in ಕರ್ನಾಟಕ
0
ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?
Share on WhatsAppShare on FacebookShare on Telegram

ಪಕ್ಷದ ವರಿಷ್ಠರು ಹೇಳಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಯ ಮೂಲಕ ಬಿಜೆಪಿಯ ನಾಯಕತ್ವ ಬದಲಾವಣೆಯ ಹಾವು ಏಣಿ ಆಟ ಇದೀಗ ಮತ್ತೊಂದು ಮಜಲಿಗೆ ಹೊರಳಿದೆ.

ADVERTISEMENT

ತಮ್ಮ ಪುತ್ರ ದೆಹಲಿಗೆ ಹೋಗಿ, ಮೂರು ದಿನಗಳ ಕಾಲ ಅಲ್ಲಿಯೇ ತಂಗಿದ್ದು, ವರಿಷ್ಠರೊಂದಿಗೆ ಮಾತುಕತೆ ನಡೆಸಿ ವಾಪಸ್ಸಾದ ಬಳಿಕ ಸಿಎಂ ಇದೇ ಮೊದಲ ಬಾರಿಗೆ ನಾಯಕತ್ವ ಬದಲಾವಣೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ವರಿಷ್ಠರು ವಿಶ್ವಾಸವಿಡುವವರೆಗೆ ಮುಂದುವರಿಯುತ್ತೇನೆ. ರಾಜೀನಾಮೆ ಕೊಡಿ ಎಂದರೆ, ಕೊಡುವೆ. ಪಕ್ಷದಲ್ಲಿ ಪರ್ಯಾಯ ನಾಯಕರಿಗೆ ಬರವಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ನೀಡಲು ಸಿದ್ಧ ಸಿಎಂ ಯಡಿಯೂರಪ್ಪ ಸ್ಫೋಟಕ ಹೇಳಿಕೆ

ಸಹಜವಾಗೇ ಈ ಹೇಳಿಕೆ ದೊಡ್ಡ ಮಟ್ಟದ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ಮತ್ತು ಪ್ರತಿಪಕ್ಷಗಳಲ್ಲಿ ದಿಢೀರ್ ಪ್ರತಿಕ್ರಿಯೆ, ವಿಶ್ಲೇಷಣೆಗಳ ಅಲೆಯೆಬ್ಬಿಸಿದೆ. ಅದರಲ್ಲೂ ಮುಖ್ಯವಾಗಿ ಪ್ರತಿಪಕ್ಷಗಳಿಗಿಂತ ಸಿಎಂ ಸ್ವಪಕ್ಷೀಯರ ಪ್ರತಿಕ್ರಿಯೆಗಳು ಕುತೂಹಲಕಾರಿಯಾಗಿದ್ದು, ದೊಡ್ಡ ಸಂಖ್ಯೆಯ ಸಚಿವರು, ಶಾಸಕರು ಯಡಿಯೂರಪ್ಪ ಪರ ಪ್ರಬಲ ಬ್ಯಾಟಿಂಗ್ ಆರಂಭಿಸಿದ್ದಾರೆ. ಅದೇ ಹೊತ್ತಿಗೆ ನಾಯಕತ್ವ ಬದಲಾವಣೆಯ ಮಾತುಗಳನ್ನಾಡಿದ್ದ, ನೇರವಾಗಿ ಯಡಿಯೂರಪ್ಪ ವಿರುದ್ಧ ದನಿ ಎತ್ತಿದ್ದ ನಾಯಕರು ತಣ್ಣಗೆ ರಾಗಬದಲಿಸಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ತಮಗೆ ವಿಶ್ವಾಸವಿದೆ. ಅವರು ಪಕ್ಷ ಕಟ್ಟಿ ಬೆಳಸಿದ ಹಿರಿಯರು ಎಂದು ವರಸೆ ಬದಲಾಯಿಸಿದ್ದಾರೆ.

ಭಾನುವಾರ ಬೆಳಗ್ಗೆ ಯಡಿಯೂರಪ್ಪ ಹೇಳಿಕೆ ಹೊರಬೀಳುತ್ತಲೇ, ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕರೋನಾ ಸಂಕಷ್ಟದ ನಡುವೆಯೂ ಯಡಿಯೂರಪ್ಪ, ಇಳಿ ವಯಸ್ಸಿನಲ್ಲೂ ರಾಜ್ಯದ ಜನತೆಗಾಗಿ ಬಿಡುವಿಲ್ಲದೆ ದುಡಿಯುತ್ತಿದ್ದಾರೆ. ರಾಜ್ಯದ ಜನತೆ ಪಕ್ಷಕ್ಕೆ ಅತಿ ಹೆಚ್ಚು ಸ್ಥಾನ ನೀಡಿದ್ದು ಮತ್ತು ಇತರೆ ಪಕ್ಷಗಳ ಶಾಸಕರು ಆ ಪಕ್ಷಗಳಿಗೆ ರಾಜೀನಾಮೆ ನೀಡಿ ಹೊರಬಂದು ಸರ್ಕಾರ ರಚನೆಗೆ ಬೆಂಬಲ ನೀಡಿದ್ದು ಯಡಿಯೂರಪ್ಪ ಅವರ ಮುಖ ನೋಡಿ. ಹಾಗಾಗಿ, ಅವರ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿರುವ ಸರ್ಕಾರದಲ್ಲಿ ಅವರಲ್ಲದೆ ಬೇರಾರು ನಾಯಕರಾಗಲು ಸಾಧ್ಯ ಎಂದಿದ್ದಾರೆ.

ಬಿಜೆಪಿಯಲ್ಲಿ ಪರ್ಯಾಯ ನಾಯಕರಿದ್ದಾರೆ, ಹೈಕಮಾಂಡ್ ಅಧಿಕಾರ ಬಿಡಲು ಹೇಳಿದಂದು ರಾಜಿನಾಮೆ ನೀಡುತ್ತೇನೆ - BS Yediyurappa

ಅಷ್ಟೇ ಅಲ್ಲ; ಯಡಿಯೂರಪ್ಪ ನಿಷ್ಠ ಬಣದ ಈ ಪ್ರಮುಖರು, ನಾಯಕತ್ವ ಬದಲಾವಣೆಯ ವಿಷಯಕ್ಕೆ ಪಕ್ಷದ ವರಿಷ್ಠರು ಇಲ್ಲಿಗೇ ಮುಕ್ತಾಯ ಹಾಡಬೇಕು. ಕರೋನಾದಂತಹ ಸಂಕಷ್ಟದ ಹೊತ್ತಲ್ಲಿ ಪದೇ ಪದೆ ನಾಯಕತ್ವ ಬದಲಾವಣೆಯ ಮಾತುಗಳನ್ನಾಡುವ ಮೂಲಕ ಸರ್ಕಾರದ ಕೆಲಸ ಕಾರ್ಯಗಳಿಗೆ ಧಕ್ಕೆ ತರಲಾಗುತ್ತಿದೆ. ಇಂತಹ ಹೊತ್ತಲ್ಲಿ ಇದು ನಿರೀಕ್ಷಿತವಲ್ಲ. ಮೇಲಾಗಿ ಇದೀಗ ಮುಖ್ಯಮಂತ್ರಿಗಳೇ ಪಕ್ಷದ ವರಿಷ್ಠರು ಬಯಸಿದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳಿಗೆ ಕೂಡಲೇ ಪೂರ್ಣ ವಿರಾಮ ಹಾಕಬೇಕು. ಪೂರ್ಣ ಅವಧಿಗೆ ಅವರ ನಾಯಕತ್ವವೇ ಮುಂದುವರಿಯಲಿದೆ ಮತ್ತು ಯಾವುದೇ ಕಾರಣಕ್ಕೂ ಪಕ್ಷದ ಯಾವುದೇ ನಾಯಕರು ನಾಯಕತ್ವ ಬದಲಾವಣೆಯ ಮಾತನ್ನು ಎತ್ತಬಾರದು ಎಂಬುದನ್ನು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಬೇಕು ಎಂದು ಈ ನಾಯಕರು ದೆಹಲಿ ನಾಯಕರನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಅಗತ್ಯಬಿದ್ದರೆ ಯಡಿಯೂರಪ್ಪ ಪರ ಇರುವ ಶಾಸಕರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಪರಿಸ್ಥಿತಿ ಮನವರಿಕೆ ಮಾಡಲು ಸಿದ್ಧ ಎನ್ನುವ ಮೂಲಕ ಸಿಎಂ ಪರ ಪ್ರಬಲ ಬ್ಯಾಟಿಂಗ್ ಮಾಡಿದ್ದಾರೆ.

ಮತ್ತೊಂದು ಕಡೆ, ಸಿಎಂ ಹೇಳಿಕೆ ಹೊರಬೀಳುತ್ತಲೇ ಭಿನ್ನಮತೀಯ ಗುಂಪಿನ ದನಿಗಳಾಗಿ ಗುರುತಿಸಿಕೊಂಡಿದ್ದ ಸಚಿವ ಸಿ ಪಿ ಯೋಗೀಶ್ವರ್, ಎಚ್ ವಿಶ್ವನಾಥ್ ಅವರುಗಳೂ ಪ್ರತಿಕ್ರಿಯಿಸಿದ್ದು, ಯಡಿಯೂರಪ್ಪ ಅವರು ಪಕ್ಷ ಕಟ್ಟಿ ಬೆಳೆಸಿದ ಹಿರಿಯರು. ಅವರ ಬಗ್ಗೆ ಎಂದೂ ಮಾತನಾಡಿಲ್ಲ. ಮುಂದೆಯೂ ಮಾತನಾಡುವುದಿಲ್ಲ. ಆದರೆ, ಪ್ರತಿಪಕ್ಷಗಳು ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ನಾವೇ ಪ್ರತಿಪಕ್ಷಗಳ ಪಾತ್ರ ವಹಿಸಬೇಕಾಯಿತು ಎಂದು ಹೇಳುವ ಮೂಲಕ ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ. ಇನ್ನು ವಿಶ್ವನಾಥ್ ಕೂಡ, ಯಡಿಯೂರಪ್ಪ ಅವರು ವರಿಷ್ಠರು ಹೇಳಿದರೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದಾರೆ ಮತ್ತು ಪಕ್ಷದಲ್ಲಿ ನಾಯಕತ್ವ ವಹಿಸಲು ಪರ್ಯಾಯ ನಾಯಕರಿದ್ದಾರೆ ಎಂದಿದ್ದಾರೆ. ನಿಜ ರಾಜ್ಯದಲ್ಲಿ ಸಾಕಷ್ಟು ಮಂದಿ ಪರ್ಯಾಯ ನಾಯಕರಿದ್ದಾರೆ. ಅದರಲ್ಲೂ ವೀರಶೈವ ಪಂಚಮಸಾಲಿ ಸಮುದಾಯದ ಹಲವು ನಾಯಕರಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ‌ ಹೇಳಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ -D K Shivakumar  ಪ್ರತಿಕ್ರಿಯೆ...

ಮತ್ತೊಂದು ಅಚ್ಚರಿಯ ಬೆಳವಣಿಗೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೂಡ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕರೋನಾ ಸಂಕಷ್ಟದ ಹೊತ್ತಲ್ಲಿ ಯಡಿಯೂರಪ್ಪ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಇಂತಹ ಹೊತ್ತಲ್ಲಿ ನಾಯಕತ್ವ ಬದಲಾವಣೆಯ ಯಾವ ಪ್ರಸ್ತಾಪವೂ ಪಕ್ಷದ ಮುಂದಿಲ್ಲ. ಕೇಂದ್ರದ ನಾಯಕರು ಕೂಡ ಯಾರೂ ಅಂತಹ ಸೂಚನೆಯನ್ನೂ ನೀಡಿಲ್ಲ ಎಂದು ಹೇಳುವ ಮೂಲಕ ಇಷ್ಟು ದಿನಗಳ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ತಮ್ಮ ಹೆಸರು ಪದೇ ಪದೇ ಕೇಳಿಬಂದಿದ್ದು ಕೇವಲ ಅಶರೀರವಾಣಿ ಎಂಬಂತೆ ಪ್ರತಿಕ್ರಿಯಿಸಿದ್ದಾರೆ!

ಒಟ್ಟಾರೆ, ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡ ಸಂದರ್ಭದಲ್ಲಿ, ಅದರಲ್ಲೂ ಸಿ ಪಿ ಯೋಗೀಶ್ವರ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಪಕ್ಷದ ಪ್ರಮುಖರು ಮಾಧ್ಯಮಗಳ ಮುಂದೆ ನಾಯಕತ್ವ ಬದಲಾವಣೆಯ ಬಗ್ಗೆ ಪ್ರಸ್ತಾಪಿಸಿ ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರುತ್ತಿರುವ ಹೊತ್ತಲ್ಲಿ, ವಿರೋಧಿ ಬಣದ ಕೆಲವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿ ಬಂದ ಹಿನ್ನೆಲೆಯಲ್ಲಿ, ಸ್ವತಃ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನೇ ದೆಹಲಿಗೆ ಕಳಿಸಿ ಪ್ರತಿತಂತ್ರ ಹೂಡಿದ್ದ ಸಿಎಂ ಯಡಿಯೂರಪ್ಪ ಇದೀಗ ಸಿಡಿಸಿರುವ ಹೇಳಿಕೆ ಸಾಕಷ್ಟು ಕೆಲಸ ಮಾಡಿದೆ. ಪಕ್ಷದ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕುವ ಜೊತೆಗೆ, ತಮ್ಮ ವಿರೋಧಿ ಬಣವನ್ನು ಮೂಲೆಗುಂಪು ಮಾಡಿ, ಬಹುತೇಕ ಶಾಸಕರು, ಸಚಿವರು, ನಾಯಕರು ಸಿಎಂ ಪರ ಮೊದಲ ಬಾರಿಗೆ ಬಹಿರಂಗ ಬ್ಯಾಟಿಂಗ್ ಮಾಡುವಂತೆ ಆ ಹೇಳಿಕೆ ಪ್ರೇರೇಪಿಸಿದೆ. ಆ ಮೂಲಕ ದೆಹಲಿಯ ಪಕ್ಷದ ವರಿಷ್ಠರಿಗೂ ಒಂದು ಸ್ಪಷ್ಟ ಸಂದೇಶ ರವಾನಿಸುವಲ್ಲಿ ಕೂಡ ಆ ಹೇಳಿಕೆ ಯಶಸ್ವಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ‌ ಹೇಳಿಕೆ ಕುರಿತು   |Home Minister  Basavaraja Bommaih ,ಪ್ರತಿಕ್ರಿಯೆ

ಆದರೆ, ನಿಜವಾಗಿಯೂ ಕುತೂಹಲ ಇರುವುದು ಸಿಎಂ ಯಡಿಯೂರಪ್ಪ ಅವರ ಇಂದಿನ ಹೇಳಿಕೆ ನಿಜಕ್ಕೂ ದಿಢೀರ್ ಪ್ರತಿಕ್ರಿಯೆಯೇ? ಅಥವಾ ಅದೊಂದು ಯೋಜಿತ ತಂತ್ರಗಾರಿಕೆಯ ಭಾಗವೇ ಎಂಬುದರ ಬಗ್ಗೆ. ಯಾಕೆಂದರೆ, ಕಳೆದ ವಾರ ದೆಹಲಿಗೆ ಹೋಗಿದ್ದ ಸಿಎಂ ಪುತ್ರ ವಿಜಯೇಂದ್ರ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ವರಿಷ್ಠರನ್ನು ಭೇಟಿ ಮಾಡಿ, ನಾಯಕತ್ವ ಬದಲಾವಣೆಯ ಪ್ರಸ್ತಾಪದ ಬಗ್ಗೆ ಮಾತನಾಡಿದ್ದರು. ಒಂದು ವೇಳೆ ನಾಯಕತ್ವ ಬದಲಾವಣೆಯ ಹೇಳಿಕೆಗಳಿಗೆ ಕಡಿವಾಣ ಬೀಳದೆ ಹೋದರೆ, ಸರ್ಕಾರ ಮತ್ತು ಪಕ್ಷಕ್ಕೆ ದೊಡ್ಡ ಹಾನಿಯಾಗಲಿದೆ. ಸಂಕಷ್ಟದ ಹೊತ್ತಲ್ಲಿ ಇಂತಹ ಹೇಳಿಕೆಗಳು ಜನರ ವಿಶ್ವಾಸ ಕಳೆಯುತ್ತಿವೆ. ಅಧಿಕಾರಶಾಹಿ ಕೂಡ ಸರ್ಕಾರದ ಮಾತು ಕೇಳದ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ಕೂಡಲೇ ಅಂತಹ ಹೇಳಿಕೆ ನೀಡುವವರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದರೆ, ತಮ್ಮ ದಾರಿ ತಾವು ನೋಡಿಕೊಳ್ಳುವುದು ಅನಿವಾರ್ಯವಾಗಲಿದೆ ಎಂಬ ಖಡಕ್ ಸಂದೇಶ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ‌ ಹೇಳಿಕೆ ಕುರಿತು  Revenue Minister  R . Ashok. ಪ್ರತಿಕ್ರಿಯೆ.

ಆ ಭೇಟಿಯ ಹಿನ್ನೆಲೆಯಲ್ಲಿ ಇದೀಗ ಯಡಿಯೂರಪ್ಪ ವರಿಷ್ಠರು ಕೇಳಿದರೆ ರಾಜೀನಾಮೆಗೆ ಸಿದ್ಧ ಎಂಬ ಮಾತನ್ನಾಡಿರುವುದು, ವರಿಷ್ಠರಿಂದ ಬಲವಾದ ಸಂದೇಶ ಸಿಕ್ಕಿರುವುದ ಸೂಚಕವೇ ಎನ್ನಲಾಗುತ್ತಿದೆ. ವರಿಷ್ಠರ ಅಂತಹ ಸೂಚನೆಯ ಪರಿಣಾಮವಾಗಿಯೇ ಈವರೆಗೆ ಬಹುತೇಕ ಜಾಣ ಮೌನ ವಹಿಸಿದ್ದ ಬಿಜೆಪಿಯ ಹಲವರು ಇದೀಗ ದಿಢೀರನೇ ಯಡಿಯೂರಪ್ಪ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಜೊತೆಗೆ ಭಿನ್ನರು ಕೂಡ ನಾಜೂಕಾಗಿ ವರಸೆ ಬದಲಿಸಿದ್ದಾರೆ. ಹಾಗಾಗಿ ವಿಜಯೇಂದ್ರ ದೆಹಲಿ ಭೇಟಿ ಮತ್ತು ಸಿಎಂ ಅವರ ಭಾನುವಾರದ ಹೇಳಿಕೆಗಳು ನಾಯಕತ್ವ ಬದಲಾವಣೆಯ ಬಿಜೆಪಿ ಭಿನ್ನರ ದನಿಗೆ ಸದ್ಯಕ್ಕಂತೂ ವಿರಾಮ ಹಾಕುವುದರಲ್ಲಿ ಯಶಸ್ವಿಯಾಗಿವೆ. ಆದರೆ, ದೆಹಲಿಯ ವರಿಷ್ಠರ ಕಡೆಯಿಂದ ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ. ಅಂತಹ ಹೇಳಿಕೆಯೊಂದು ಯಾವುದೇ ಕ್ಷಣದಲ್ಲಿ ಹೊರಬೀಳಬಹುದು ಮತ್ತು ಅದು ನಾಯಕತ್ವ ಬದಲಾವಣೆಯ ಮಾತುಗಳಿಗೆ ಶಾಶ್ವತವಾಗಿ ಪೂರ್ಣ ವಿರಾಮ ಹಾಕಬಹುದು ಎನ್ನಲಾಗುತ್ತಿದೆ.

Tags: Yediyurappa
Previous Post

ರಾಜ್ಯದಲ್ಲಿ ಬಿಜೆಪಿಗೆ ಅಂತಿಮ ದಿನಗಳು ಹತ್ತಿರವಾಗುತ್ತಿವೆ; ಡಿಕೆಶಿ

Next Post

ಜೂನ್ 14ರ ನಂತರ ಲಾಕ್ ಡೌನ್ ತೆರವುಗೊಳಿಸಲು ಇವತ್ತೇ ಮುಹೂರ್ತ ಫಿಕ್ಸ್?: ತಜ್ಞರ ಸಮಿತಿ ಜೊತೆ ಅಶ್ವಥ್ ನಾರಾಯಣ ನೇತೃತ್ವದ ಸಭೆ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಜೂನ್ 14ರ ನಂತರ ಲಾಕ್ ಡೌನ್ ತೆರವುಗೊಳಿಸಲು ಇವತ್ತೇ ಮುಹೂರ್ತ ಫಿಕ್ಸ್?: ತಜ್ಞರ ಸಮಿತಿ ಜೊತೆ ಅಶ್ವಥ್ ನಾರಾಯಣ ನೇತೃತ್ವದ ಸಭೆ

ಜೂನ್ 14ರ ನಂತರ ಲಾಕ್ ಡೌನ್ ತೆರವುಗೊಳಿಸಲು ಇವತ್ತೇ ಮುಹೂರ್ತ ಫಿಕ್ಸ್?: ತಜ್ಞರ ಸಮಿತಿ ಜೊತೆ ಅಶ್ವಥ್ ನಾರಾಯಣ ನೇತೃತ್ವದ ಸಭೆ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada