• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಸ್ಸು, ಶಾಲೆಯಷ್ಟೇ ಅಲ್ಲ, ಕುಡಿವ ನೀರಿನ ಕೊರತೆಯೂ ಉಂಟು: ಹೈದರಾಬಾದ್ ಕರ್ನಾಟಕದ ದಯನೀಯ ಸ್ಥಿತಿಗೆ ಯಾರು ಕಾರಣ?

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
October 21, 2021
in ಕರ್ನಾಟಕ
0
ಬಸ್ಸು, ಶಾಲೆಯಷ್ಟೇ ಅಲ್ಲ, ಕುಡಿವ ನೀರಿನ ಕೊರತೆಯೂ ಉಂಟು: ಹೈದರಾಬಾದ್ ಕರ್ನಾಟಕದ ದಯನೀಯ ಸ್ಥಿತಿಗೆ ಯಾರು ಕಾರಣ?
Share on WhatsAppShare on FacebookShare on Telegram

ಬಳ್ಳಾರಿ ನಗರದಲ್ಲಿ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಿನಲ್ಲಿ ಜೋತು ಬಿದ್ದು ಪ್ರಾಣಾಪಾಯದಲ್ಲಿ ಪ್ರಯಾಣ ಮಾಡುವ ಸ್ಥಿತಿಯಿರುವ ವಿಡಿಯೋ ತಲುಪಿದರೂ ಸಾರಿಗೆ ಸಚಿವ ಮತ್ತು ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ADVERTISEMENT

ಜಿಲ್ಲೆಯ ಕೂಡ್ಲಿಗಿ ತಾಲೂಕಿನ (ಈಗ ಹೊಸಪೇಟೆ ಜಿಲ್ಲೆ) 4 ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆಯೂ ಇಲ್ಲ, ಶಾಲೆಗಳೂ ಇಲ್ಲ ಎಂಬ ಸುದ್ದಿ ಹೈದರಾಬಾದ್‍ ಕರ್ನಾಟಕದ ಹೊರಗಿನ ಜನಕ್ಕೆ ವಿಚಿತ್ರ ಅನಿಸಬಹುದು. ಆದರೆ ಇಲ್ಲಿನ ಜನ ಇದಕ್ಕೆ ಒಗ್ಗಿ ಹೋಗಿದ್ದಾರೆ. ಹೈದರಾಬಾದ್‍ ಕರ್ನಾಟಕದ 20ಕ್ಕೂ ಹೆಚ್ಚು ಗ್ರಾಮಗಳಿಗೆ ಬಸ್‍ ಸೌಲಭ್ಯವಿಲ್ಲ!

ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಡೆಸೂರಿನಲ್ಲಿ ಇಬ್ಬರು ಮಹಿಳೆಯರು ಅಸು ನೀಗಿದ್ದನ್ನು ಈಚೆಗೆ ನೋಡಿದ್ದೇವೆ. 2016ರಲ್ಲಿ ಕಲುಷಿತ ನೀರು ಸೇವಿಸಿ ಇದೇ ಗ್ರಾಮದ ನಾಲ್ವರು ಸಾವನ್ನಪ್ಪಿದ್ದರು. 2010ರಲ್ಲಿ ಇದೇ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ ಹತ್ತಾರು ಜನ ತೀವ್ರ ಅಸ್ವಸ್ಥರಾಗಿದ್ದರು.

ಈ ಮೇಲಿನ ಘಟನೆ ಒಂದು ಸಾಂಕೇತಿಕ. ಹೈದರಾಬಾದ್‍ ಕರ್ನಾಟಕದ ಒಟ್ಟೂ ದಯನೀಯಸ್ಥಿತಿಗೆ ಇದು ಕನ್ನಡಿ.

ಹೈದರಾಬಾದ್‍ ಕರ್ನಾಟಕದ  ಏಳು ಜಿಲ್ಲೆಗಳಲ್ಲಿ 50 ತಾಲೂಕಳಿದ್ದು 41 ವಿಧಾನಸಭಾ ಕ್ಷೇತ್ರಗಳಿವೆ. ಅಂದರೆ ಈ ಭಾಗದಿಂದ 41 ಎಂಎಲ್ಎಗಳು ಆಯ್ಕೆ ಆಗುತ್ತಾರೆ. ಐವರು ಸಂಸತ್ತು ಪ್ರವೇಶಿಸುತ್ತಾರೆ. ವಿಧಾನ ಪರಿಷತ್‍ ಸದಸ್ಯರು, ರಾಜ್ಯಸಭಾ ಸದಸ್ಯರ ಸಂಖ್ಯೆ 10 ದಾಟುತ್ತದೆ. ಇವರೆಂದೂ ಈ ಭಾಗದ ಬಗ್ಗೆ ಸದಸದಲ್ಲಿ ಗಂಭೀರ ಚರ್ಚೆ ನಡೆಸಿದ್ದೇ ಅಪರೂಪ.

ಇವರೆಂದೂ ಶಾಲೆ, ಆಸ್ಪತ್ರೆ, ಕುಡಿಯುವ ನೀರು ಮತ್ತು ಸಾರಿಗೆ ವ್ಯವಸ್ಥೆಯ ಬಗ್ಗೆ ಎಂದೂ ಗಂಭಿರವಾಗಿ ಗಮನಹರಿಸಿಲ್ಲ.

ಲಿಂಗಸೂರು ತಾಲೂಕಿನಲ್ಲಿ  ಹಲವು ಗ್ರಾಮಗಳು ಗುಡ್ಡಗಾಡು ಪ್ರದೇಶದಲ್ಲಿ ಇಲ್ಲಿ  ಹತ್ತು ಕಿಮೀ ಅಂತರದಲ್ಲಿ ಯಾವುದೇ ಹೈಸ್ಕೂಲ್‍ ಇಲ್ಲ.  ಇಲ್ಲಿ ಸಾರಿಗೆ ವ್ಯವಸ್ಥೆಯೂ ಇಲ್ಲ.

  ಹೈ–ಕ ಮಂಡಳಿ  ಏನು ಮಾಡುತ್ತಿದೆ?

ಈ ಪ್ರದೇಶದ ವಿಶೇಷ ಅಭಿವೃದ್ಧಿಗಾಗಿ ಹೈದರಾಬಾದ್‍ ಕರ್ನಾಟಕ ಮಂಡಳಿ ( ಈಗ ಕಲ್ಯಾಣ ಕರ್ನಾಟಕ ಮಂಡಳಿ) ಸ್ಥಾಪಿಸಲಾಗಿದ್ದು ಪ್ರತಿ ವರ್ಷ 1500-2000 ಕೋಟಿ ಅನುದಾನವನ್ನು ಬಜೆಟ್‍ನಲ್ಲಿ ಘೋಷಿಸಲಾಗುತ್ತದೆ. ಇದನ್ನು ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆಗಳಿಗೆ ಬಳಸಬೇಕಾದ ಜನಪ್ರತಿನಿಧಿಗಳು, ಅದರ ಬದಲು ಕಮೀಷನ್‍ ಜಾಸ್ತಿ ಸಿಗುವ ಕಾಮಗಾರಿಗಳಿಗೆ ವಿನಿಯೋಗಿಸುತ್ತಾರೆ. ಅದಕ್ಕೂ ಮುಖ್ಯವಾದ ಸಂಗತಿ ಎಂದರೆ ಪೂರ್ಣ ಅನುದಾನವೂ ಖರ್ಚಾಗುವುದಿಲ್ಲ. ಉಳಿದ ಹಣ ಸರ್ಕಾರಕ್ಕೆ ವಾಪಸ್‍ ಹೋಗುತ್ತದೆ.

ಇದು ಏಕೆ ಸಂಭವಿಸುತ್ತಿದೆ ಎಂದರೆ, ಕಾರ್ಯ ಯೋಜನೆ (ಪ್ಲಾನ್‍) ರೂಪಿಸುವಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಆಸಕ್ತಿ ವಹಿಸುತ್ತಿಲ್ಲ!

ಸುಪ್ರೀಂಕೋರ್ಟ್‍ ಆದೇಶದಂತೆ ಗಣಿ ಪ್ರದೇಶಗಳ ಸುತ್ತಲಿನ ಗ್ರಾಮಗಳ ಪುನರ್‍ ನಿರ್ಮಾಣ ಮತ್ತು ಪುನಶ್ಚೇತನಕ್ಕಾಗಿ ಹತ್ತಾರು ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಆದರೆ ಜನಪ್ರತಿನಿ‍ಧಿಗಳು ಇದನ್ನೂ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಬೇರೆ ಉದ್ದೇಶಕ್ಕೆ ಇದನ್ನು ಬಳಸುತ್ತಿದ್ದಾರೆ. ಈ ಮೀಸಲು ನಿಧಿಯನ್ನು ಗಣಿ ಧೂಳಿನ ಅಬ್ಬರಕ್ಕೆ ನಜ್ಜುಗುಜ್ಜಾದ ಗ್ರಾಮಗಳ ಶಾಲೆ, ರಸ್ತೆ, ಆಸ್ಪತ್ರೆ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಬಳಸಬಹುದಿತ್ತು.

ಗಣಿ ದಂಧೆ ಉತ್ತುಂಗದಲ್ಲಿದ್ದಾಗ ಅದಿರು ಹೊತ್ತ ಟಿಪ್ಪರ್‍ಗಳ ಚಲನೆಯಿಂದ ನೂರಾರು ಗ್ರಾಮಗಳ ರಸ್ತೆಗಳು ಹಾಳಾಗಿವೆ. ಆ  ಬಗ್ಗೆ ರಾಮುಲು-ರೆಡ್ಡಿಗಳು ಮತ್ತು ಇತರ ಪ್ರತಿನಿಧಿಗಳಿಗೆ ಯಾವುದೇ ಚಿಂತೆಯಿಲ್ಲ.

ಸರ್ಕಾರಿ ಬಸ್‍ ಇಲ್ಲದ ಕಾರಣಕ್ಕೆ ಜನರು ಕುರಿಗಳನ್ನು ಸಾಗಿಸುವ ವಾಹನಗಳಲ್ಲೂ ಪ್ರಯಾಣಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

‘ ಪ್ರತಿಧ್ವನಿ’ ಜೊತೆ ಮಾತನಾಡಿದ  ಹೈದರಾಬಾದ್‍-ಕರ್ನಾಟಕ ಹೋರಾಟ ಸಮಿತಿಯ ಉಪಾಧ್ಯಕ್ಷ ಡಾ. ರಜಾಕ್‍ ಉಸ್ತಾದ್‍, ‘ ಒಂದು ರೀತಿಯಲ್ಲಿ ಜನರನ್ನು ಕುರಿಗಳಂತೆ ಪರಿಗಣಿಸುತ್ತಿರುವ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಈ ಎಲ್ಲ ಅವ್ಯವಸ್ಥೆಗೆ ಕಾರಣ. ಅನುದಾನ ಸಿಕ್ಕರೂ ಅದನ್ನು ಸಮರ್ಪಕವಾಗಿ ಬಳಸುತ್ತಿಲ್ಲ. ಕಲೆಕ್ಷನ್‍ ಕಡಿಮೆ ಎಂಬ ಕಾರಣಕ್ಕೆ ಕೆಲವು ರೂಟ್‍ಗಳಿಗೆ ಬಸ್‍ಗಳನ್ನೇ ಬಿಡುವುದಿಲ್ಲ. ಸೇವಾ ವಲಯದಲ್ಲಿ ಸರ್ಕಾರ ಲಾಭ-ನಷ್ಟ ನೋಡಬಾರದು. ಇಲ್ಲಿನ ಜನಪ್ರತಿನಿಧಿಗಳಿಗೆ ರಾಜಕೀಯ ಇಚ್ಛಾಶಕ್ತಿಯೇ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೈ-ಕದ ಏಳು ಜಿಲ್ಲೆಗಳ ಹಿಂದುಳಿದಿರುವಿಕೆಗೆ ಕಾರಣ ಏನು ಎಂಬುದಕ್ಕೆ ಸಂಕ್ಷಿಪ್ತ ಚಿತ್ರಣವಿದು.

Tags: B SriramuluBasavaraj BommaiBJPCongress PartyCovid 19transportTransport Ministerಎಚ್ ಡಿ ಕುಮಾರಸ್ವಾಮಿಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಿಯಾಂಕ ಗಾಂಧಿಯೊಂದಿಗೆ ಸೆಲ್ಫಿ – ಮಹಿಳಾ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಯೋಗಿ ಸರ್ಕಾರ

Next Post

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೇಲಿನ ಕೋಕಾ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೇಲಿನ ಕೋಕಾ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೇಲಿನ ಕೋಕಾ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada