• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?

ಪ್ರತಿಧ್ವನಿ by ಪ್ರತಿಧ್ವನಿ
January 27, 2023
in ರಾಜಕೀಯ
0
ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?
Share on WhatsAppShare on FacebookShare on Telegram

ಹಾಸನ ಜಿಲ್ಲೆ ಅಂದ್ರೆ ಜೆಡಿಎಸ್​ ಪಕ್ಷದ ಭದ್ರಕೋಟೆ ಅನ್ನೋದನ್ನು ಸುಳ್ಳು ಅನ್ನೋದಕ್ಕೆ ಸಾಧ್ಯವೇ ಇಲ್ಲ. ಕಾಂಗ್ರೆಸ್ ರಾಜ್ಯಾದ್ಯಂತ ಗೆದ್ದರೂ ಹಾಸನದಲ್ಲಿ ಎರಡನೇ ಸ್ಥಾನಕ್ಕೆ‌ ತೃಪ್ತಿಪಡಬೇಕಾದ ಅನಿವಾರ್ಯತೆ ಇದೆ. ಹಾಸನದಲ್ಲಿ ದೇವೇಗೌಡರ ಕುಟುಂಬಕ್ಕೆ ನಿಷ್ಠರಾಗಿ ಇದ್ದವರು ಶಾಸಕರಾಗಿ ಆಯ್ಕೆಯಾಗುವುದು ಶತಸಿದ್ಧ. ಇನ್ನು ಹಾಸನದ ಉಸ್ತುವಾರಿ ಹೆಚ್.ಡಿ ರೇವಣ್ಣ ಅಧಿಕಾರದಲ್ಲಿ ಇರಲಿ, ವಿರೋಧ ಪಕ್ಷದಲ್ಲಿ ಇರಲಿ ಅಭಿವೃದ್ಧಿ ಕೆಲಸ ಮಾಡಿಸುವ ಚಾಕಚಕ್ಯತೆ ಇರುವ ನಾಯಕ ಎನ್ನಬಹುದು. ಕಾಂಗ್ರೆಸ್, ಬಿಜೆಪಿ ಯಾವುದೇ ಸರ್ಕಾರ ಇದ್ದರೂ ತನಗೆ ಬೇಕಾದ ಇಲಾಖೆಯ ಫೈಲ್ ಹಿಡಿದು ರೇವಣ್ಣ ಹೊರಟರೆ ಒಪ್ಪಿಗೆ ಪಡೆದುಕೊಂಡೆ ವಾಪಸ್ ಬರುತ್ತಾರೆ. ಅಧಿವೇಶನದ ಸಮಯದಲ್ಲೂ ಆಡಳಿತ ಪಕ್ಷದ ಕಡೆಗೆ ಬಂದು ಕುಳಿತು ಸಹಿ ಹಾಕಿಸಿಕೊಳ್ಳುವ ಅದೆಷ್ಟೋ ನಿದರ್ಶನಗಳಿವೆ. ಹೀಗಾಗಿ ಜನರೂ ಜೆಡಿಎಸ್‌ಗೆ ಜೈ ಅಂತಾರೆ. ಆದರೆ ಇದೀಗ ಹಾಸನ‌ ಟಿಕೆಟ್ ವಿಚಾರವಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ.

ADVERTISEMENT

ಹಾಸನದಲ್ಲಿ‌ ನನ್ನನ್ನು ಅಭ್ಯರ್ಥಿ ಮಾಡುವ ತೀರ್ಮಾನ ಆಗಿದೆ..!

ಹಾಸನದ ಸಭೆಯೊಂದಲ್ಲಿ ಭವಾನಿ ರೇವಣ್ಣ ಈ ಮಾತನ್ನು ಹೇಳಿದ ಕೂಡಲೇ ವಿವಾದದ ಕಿಡಿ ಹೊತ್ತಿಕೊಂಡಿದೆ. ಭವಾನಿ ಹೇಳಿಕೆ ಬೆನ್ನಲ್ಲೇ ಹೆಚ್. ಪಿ ಸ್ವರೂಪ್ ನಾನು ಟಿಕೆಟ್ ಆಕಾಂಕ್ಷಿ ಇದ್ದೇನೆ, ನನ್ನ ತಂದೆ ಹೆಚ್.ಎಸ್ ಪ್ರಕಾಶ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಜನ ನನ್ನ ಆಯ್ಕೆ ಮಾಡುವ ವಿಶ್ವಾಸವಿದೆ. ಭವಾನಿ ರೇವಣ್ಣ ಅವರ ಹೇಳಿಕೆಯಿಂದ ಕಾರ್ಯಕರ್ತರಿಗೆ ಬೇಸರ ಆಗಿದೆ ಎಂದಿದ್ದರು. ಈ ಮಾತು ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ಹಾಸನದಲ್ಲಿ‌ ಭವಾನಿ ರೇವಣ್ಣ ಅವರು ಸ್ಪರ್ಧೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿಲ್ಲ. ಆ ರೀತಿಯ ಅನಿವಾರ್ಯತೆ ಸೃಷ್ಟಿ ಆಗಿದ್ದರೆ ನಾನೇ ಸ್ಪರ್ಧೆಗೆ ಹೇಳುತ್ತಿದ್ದೆ. ಈಗ ಹಾಲಿ ಅಭ್ಯರ್ಥಿ ಹೆಚ್.ಪಿ ಸ್ವರೂಪ್ ಗೆಲ್ಲುವ ವಿಶ್ವಾಸವಿದೆ ಎಂದಿದ್ದರು. ಈ ಮಾತಿಗೆ ಕೌಂಟರ್ ಕೊಟ್ಟಿರುವ ಸಂಸದ ಪ್ರಜ್ವಲ್ ರೇವಣ್ಣ, ಬಿ ಫಾರ್ಮ್ ಕೊಡುವುದು ಮಾಜಿ ಪ್ರಧಾನಿ ದೇವೇಗೌಡರು ಎನ್ನುವ ಮೂಲಕ ಭವಾನಿ ರೇವಣ್ಣ ಸ್ಪರ್ಧೆ ಮಾಡಿಯೇ ಮಾಡ್ತಾರೆ ಎನ್ನುವುದನ್ನು ತಿಳಿಸಿದ್ದಾರೆ.

ಕುಮಾರಸ್ವಾಮಿ ವಿರೋಧ ಮಾಡ್ತಿರೋ ಉದ್ದೇಶ ಆದ್ರು ಏನು..?

ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಹಾಲಿ ಶಾಸಕರಾಗಿದ್ದಾರೆ. ಪ್ರೀತಂಗೌಡ ಜೆಡಿಎಸ್ ಕೋಟೆಯಲ್ಲಿ ಅರಳಿದ ಗಟ್ಟಿ ಕಮಲ ಎಂದೇ ವ್ಯಾಖ್ಯಾನ ಮಾಡಬಹುದು. ಈ ನಡುವೆ ಪ್ರೀತಂಗೌಡ ಸೋಲಿಸಲು ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಅನಿವಾರ್ಯತೆ ಇದೆ. ಭವಾನಿ ರೇವಣ್ಣ ಸ್ಪರ್ಧೆ ಮಾಡಿದ್ರೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆಯಿದೆ. ಆದರೂ ಕುಮಾರಸ್ವಾಮಿ ಮಾತ್ರ ಹಾಸನದಲ್ಲಿ ಭವಾನಿ ಅವರನ್ನು ನಿಲ್ಲಿಸುವ ಅನಿವಾರ್ಯತೆ ಬಂದಿಲ್ಲ ಎಂದಿದ್ದಾರೆ. ಕುಮಾರಸ್ವಾಮಿ ಅವರ ಮಾತಿನ ಉದ್ದೇಶ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ತಡೆಯುವುದು ಆಗಿದೆ. ಈಗಾಗಲೇ ಹೆಚ್.ಡಿ ರೇವಣ್ಣ ಮನೆಯಲ್ಲಿ ರೇವಣ್ಣ ಶಾಸಕರಾಗಿದ್ದಾರೆ, ಪುತ್ರ ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಾರೆ. ಮತ್ತೋರ್ವ ಪುತ್ರ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿದ್ದಾರೆ. ಇನ್ನು ಉಳಿದಿರುವ ಭವಾನಿ ರೇವಣ್ಣ ಮತ್ತೊಂದು ಕ್ಷೇತ್ತದಿಂದ ಶಾಸಕರಾಗಿ ಆಯ್ಕೆ ಆದರೆ ಇಡೀ ಕುಟುಂಬವೇ ರಾಜಕೀಯ ಶಕ್ತಿಯನ್ನು ಪಡೆದಂತಾಗುತ್ತದೆ. ಭವಾನಿ ರೇವಣ್ಣ ಗೆಲ್ಲಲೂ ಬಹುದು, ಆದರೆ ಭವಾನಿ ರೇವಣ್ಣ ಸ್ಪರ್ಧೆ ಬೇರೆ ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು. 123 ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ರಾಜ್ಯ ಸುತ್ತುತ್ತಿರುವ ಕುಮಾರಸ್ವಾಮಿ ಉದ್ದೇಶ ನೀರಲ್ಲಿ ಹೋಮ ಮಾಡಿದಂತಾಗುತ್ತದೆ ಎನ್ನುವ ಭಯ ಕಾಡುತ್ತಿದೆ.

ಹಾಸನ ವಿಚಾರದಲ್ಲಿ ಹೆಚ್.ಡಿ ರೇವಣ್ಣ ನಿರ್ಧಾರವೇ ಅಂತಿಮ..!?

ಹಾಸನದಲ್ಲಿ ಘಾಟಾನುಘಟಿ ಅಭ್ಯರ್ಥಿ ಅತ್ಯವಶ್ಯಕ ಅನ್ನೋ ಕಾರಣಕ್ಕೆ ಕಳೆದ ಒಂದು ವರ್ಷದಿಂದಲೂ ರಣತಂತ್ರ ರೂಪಿಸಲಾಗ್ತಿದೆ. ಬಿಜೆಪಿಯಿಂದ ಶಾಸಕ ಆಗಿರುವ ಪ್ರೀತಂಗೌಡ ದೇವೇಗೌಡರ ಕುಟುಂಬದ ಬಗ್ಗೆ ಟೀಕಾಸ್ತ್ರ ಪ್ರದರ್ಶನ ಮಾಡುವ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಸೋಲುಣಿಸಲು ರೇವಣ್ಣ ಕುಟುಂಬ ನಿರ್ಧಾರ ಮಾಡಿತ್ತು. ಅದಕ್ಕೂ ಮೊದಲು ಪ್ರೀತಂಗೌಡ ನೀಡಿದ್ದ ಸವಾಲನ್ನೇ ಸ್ವೀಕಾರ ಮಾಡಿ ಹಾಸನದಲ್ಲಿ ಭವಾನಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅಷ್ಟು ಮಾತ್ರವಲ್ಲದೆ ಹಾಸನ ವಿಚಾರದಲ್ಲಿ ಜೆಡಿಎಸ್ ಪಕ್ಷ ಯಾವುದೇ ನಿರ್ಧಾರ ಮಾಡುವಂತಿಲ್ಲ ಎನ್ನುವ ಒಪ್ಪಂದ ಹೆಚ್.ಡಿ ಕುಮಾರಸ್ವಾಮಿ ಹಾಗೂ ರೇವಣ್ಣ ನಡುವೆ ನಡೆದುಕೊಂಡು ಬಂದಿದೆ. ಇದೇ ಕಾರಣಕ್ಕೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ ಹಾಸನದ ಒಂದೇ ಒಂದು ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ.

ಹಾಸನ ಅಖಾಡಕ್ಕೆ ಮಾಜಿ ಪ್ರಧಾನಿ ಎಂಟ್ರಿ, ಬಿಕ್ಕಟ್ಟು ಶಮನ..

ಹಾಸನ ಬಿಕ್ಕಟ್ಟಿನ ಬಗ್ಗೆ ಇದೀಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಎಂಟ್ರಿ ಕೊಡುತ್ತಿದ್ದು, ಸೋಮವಾರದ ಒಳಗೆ ಸಮಸ್ಯೆ ಬಗೆಹರಿಯುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ. ಹಾಸನದಿಂದ ಸ್ಪರ್ಧೆ ಬೇಡ ಎನ್ನಲು ಕಾರಣ ಏನು ಎಂದು ಕುಮಾರಸ್ವಾಮಿಯಿಂದ ಸ್ಪಷ್ಟನೆ ಪಡೆದು ಆ ಬಳಿಕ ಹಾಸನದಲ್ಲಿ ಭವಾನಿ ಸ್ಪರ್ಧೆ ಯಾಕೆ ಅನ್ನೋದನ್ನು ರೇವಣ್ಣ ಅವರಿಂದ ಮಾಹಿತಿ ಪಡೆದು ಗೌಡರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಭವಾನಿ ರೇವಣ್ಣ ದೇವೇಗೌರ ಮೆಚ್ಚಿನ ಸೊಸೆಯಾಗಿದ್ದು ಗೌಡರು ಹೇಳಿದ ಮಾತಿಗೆ ಭವಾನಿ ರೇವಣ್ಣ ಪ್ರತಿ ಮಾತು ಹೇಳುವುದಿಲ್ಲ ಎನ್ನಲಾಗುತ್ತದೆ. ಈ ಬಾರಿ ಕೂಡ ಶಾಸಕಿ ಆಗುವ ಅವಕಾಶ ಮಿಸ್ ಆಗುವ ಸಾಧ್ಯತೆ ಇದೆ.

Previous Post

Dhananjaya|ಡಾಲಿ ಜೊತೆ ಸುದೀಪ್, ಶಿವಣ್ಣನ ಭಾಂಧವ್ಯ ಹೇಗಿದೆ ಗೊತ್ತಾ?

Next Post

ಎಸ್.ಎಂ.ಕೃಷ್ಣಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ ಬೊಮ್ಮಾಯಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಎಸ್.ಎಂ.ಕೃಷ್ಣಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ ಬೊಮ್ಮಾಯಿ

ಎಸ್.ಎಂ.ಕೃಷ್ಣಅವರ ಸಾರ್ವಜನಿಕ ಬದುಕು ನಮಗೆಲ್ಲಾ ಮಾದರಿ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada