• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

Any Mind by Any Mind
August 25, 2021
in ದೇಶ
0
70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್
Share on WhatsAppShare on FacebookShare on Telegram

ADVERTISEMENT

ನವದೆಹಲಿ: ಬಿಜೆಪಿ ನಾಯಕರಾದ ಸಿ.ಟಿ. ರವಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಆಗಬೇಕೆಂದು ಬಟ್ಟೆ‌ ಹೊಲೆಸಿಕೊಂಡಿದ್ದರು. ಆದರೀಗ ಮುಖ್ಯಮಂತ್ರಿ ಸ್ಥಾನ ಸಿಗದೆ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಹಾಗಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರನ್ನು ಮೆಚ್ಚಿಸಲು ಆ ಮೂಲಕ ಪದವಿ ಗಳಿಸಲು ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ಬಿ.ವಿ. ಅವರು ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎನ್ನುವ ಬಗ್ಗೆ ನಾವು ಸರ್ಟಿಫಿಕೇಟ್ ಕೊಡಬೇಕಾದ ಅಗತ್ಯ ಇಲ್ಲ. ಬಿಜೆಪಿ ನಾಯಕರೇ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬ ಹುಚ್ಚ ಎಂದು ಹೇಳುತ್ತಾರೆ. ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬುದ್ಧಿ ಭ್ರಮಣೆ ಆಗಿರುವ ಬಿಜೆಪಿ ನಾಯಕರಿಗೆ ಕೌನ್ಸಿಲಿಂಗ್ ಮಾಡಿಸಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಇನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಚಿಕ್ಕಮಗಳೂರು ಮಹಿಳಾ ಮೋರ್ಚಾ ಉಪಾಧ್ಯಕ್ಷರನ್ನಾಗಿ ಸಿ.ಟಿ. ರವಿ ಅವರ ಮಡದಿ ಪಲ್ಲವಿ ಸಿ.ಟಿ. ರವಿ ಅವರನ್ನು ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿಯಲ್ಲಿ ಸಮರ್ಥ ಮಹಿಳಾ ಕಾರ್ಯಕರ್ತರು ಇರಲಿಲ್ಲವೇ? ಸಿ.ಟಿ. ರವಿ ಪತ್ನಿ ನೇಮಕ ಕುಟುಂಬ ರಾಜಕಾರಣ ಅಲ್ಲವೇ? ಎಂದು ಪ್ರಶ್ನಿಸಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ ??

ಸಿ.ಟಿ. ರವಿ ಕಾಂಗ್ರೆಸ್ ಪಕ್ಷ ದೇಶದಲ್ಲಿ 70 ವರ್ಷದಿಂದ ಏನೂ ಮಾಡಿಲ್ಲ ಎಂದು ಹೇಳುತ್ತಾರೆ. ಇದೇ ವೇಳೆ 217 ಯೋಜನೆಗಳಿಗೆ ಕಾಂಗ್ರೆಸ್ ನಾಯಕರ ಹೆಸರನ್ನು ಇಡಲಾಗಿದೆ ಎಂದು ಕೂಡ ಹೇಳುತ್ತಾರೆ. ಕಾಂಗ್ರೆಸ್ ಯೋಜನೆಗಳನ್ನು ನೆನಪಿಸಿಕೊಂಡ ಸಿಟಿ ರವಿ ಅವರಿಗೆ ಧನ್ಯವಾದಗಳು.‌ ಆದರೆ ಸಿ.ಟಿ. ರವಿ ಅವರು ಸೇರಿದಂತೆ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಂದಿರಾ ಗಾಂಧಿ ಅವರು ‘ಉಳುವವನೇ ಒಡೆಯ’ ಎಂಬ ಯೋಜನೆ ತಂದರು. ಉಳುವವನೇ ಒಡೆಯ ಯೋಜನೆಯ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಇದು ಇಂದಿರಾ ಗಾಂಧಿ ಅವರು ನೀಡಿದ ಕೊಡುಗೆ ಎಂದು ಹೇಳಿದರು.

ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆ ಆಗಿದ್ದಾರೆ. ಆದರೆ ಅವರು ಎಂದಾದರೂ ಬೆಲೆ ಏರಿಕೆ ಬಗ್ಗೆ ಮಾತನಾಡಿದ್ದಾರಾ? ಅಥವಾ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಜಿಎಸ್ ಟಿ ದುಡ್ಡು ಬಂದಿಲ್ಲದಿರುವ ಬಗ್ಗೆ ಧ್ವನಿ ಎತ್ತಿದ್ದಾರಾ? ಕೇಂದ್ರ ಸರ್ಕಾರದ ಕಳಪೆ ನಿರ್ವಹಣೆಯಿಂದ ಕೊರೋನಾ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಿದ್ದಾರಾ? ಅಲ್ಲದೆ ದೇಶಾದ್ಯಂತ ಈಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿದೆ. ಅಡುಗೆ ಅನಿಲದ ಬೆಲೆ ಏರಿಕೆ ಆಗಿದೆ. ಬಿಜೆಪಿ ಎಂದರೆ ಬೆಲೆ ಏರಿಕೆ ಎನ್ನುವಂತಾಗಿದೆ. ಬಿಜೆಪಿ ನಾಯಕರು ಈ ವಿಷಯಗಳ ಬಗ್ಗೆ‌ಚರ್ಚೆ ಮಾಡಲಿ ಎಂದು ಶ್ರೀನಿವಾಸ್ ಬಿ.ವಿ ತಾಖೀತು ಮಾಡಿದರು.

Tags: BJPCongress Partyಕರೋನಾನರೇಂದ್ರ ಮೋದಿಬಸವನಗೌಡ ಪಾಟೀಲ್ ಯತ್ನಾಳ್ಬಿಜೆಪಿಬಿವಿ ಶ್ರೀನಿವಾಸ್ಸಿ.ಟಿ. ರವಿಸಿದ್ದರಾಮಯ್ಯ
Previous Post

ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

Next Post

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada