• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಬ್ರಿ ಮಸೀದಿ ವಿವಾದ : ಪ್ರಚಾರಕ್ಕಾಗಿ ಬಿಜೆಪಿ – ಶಿವಸೇನೆ – MNS ಪೈಪೋಟಿ

Shivakumar A by Shivakumar A
May 3, 2022
in ದೇಶ
0
ಬಾಬ್ರಿ ಮಸೀದಿ ವಿವಾದ : ಪ್ರಚಾರಕ್ಕಾಗಿ ಬಿಜೆಪಿ – ಶಿವಸೇನೆ – MNS ಪೈಪೋಟಿ
Share on WhatsAppShare on FacebookShare on Telegram

ಸಂಪೂರ್ಣ ಭಾರತ ಮುಸ್ಲೀಮರ ಪವಿತ್ರ ಹಬ್ಬ ರಂಜಾನ್ ಆಚರಣೆಯ ಖುಷಿಯಲ್ಲಿ ಇರುವಾಗ, ಮಹಾರಾಷ್ಟ್ರದಲ್ಲಿ ಮತ್ತೆ ಬಾಬ್ರಿ ಮಸೀದಿ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮತ್ತು ಬಿಜೆಪಿ ಜತೆಯಾಗಿ, ಬಾಬ್ರಿ ವಿವಾದದಲ್ಲಿ ಶಿವಸೇನೆಯನ್ನು ಗುರಿಯಾಗಿಸಿ ಟೀಕಾಪ್ರಹಾರ ನಡೆಸಿವೆ. ಬಾಬ್ರಿ ಮಸೀದಿ ಧ್ವಂಸದ ಕೀರ್ತಿಯನ್ನು (?) ಶಿವಸೇನೆ ಕಸಿಯಲು ಯತ್ನಿಸುತ್ತಿದೆ ಎಂದು ಮಹಾರಾಷ್ಟ್ರದ ವಿಪಕ್ಷಗಳು ಆರೋಪಿಸಿವೆ.

ADVERTISEMENT

ಮುಂಬೈನಲ್ಲಿ ನಡೆದ ಸಮಾವೇಶದಲ್ಲಿ ಈ ಕುರಿತಾಗಿ ಬಹಿರಂಗ ಹೇಳಿಕೆ ನೀಡಿರುವ ದೇವೇಂದ್ರ ಫಡ್ನವಿಸ್, ಮಸೀದಿ ಕೆಡವುವ ವೇಳೆ ನಾನೂ ಅಲ್ಲೇ ಹಾಜರಿದ್ದೆ. ಒಬ್ಬನೇ ಒಬ್ಬ ಶಿವಸೇನೆಯ ನಾಯಕ ಅಲ್ಲಿ ಕಾಣಿಸಿಲ್ಲ, ಎಂದು ಹೇಳಿದ್ದಾರೆ.

ಇದೇ ರೀತಿ ಎಂಎನ್ಎಸ್ ನಾಯಕ ರಾಜು ಪಾಟಿಲ್ ಕೂಡಾ ವಾಗ್ದಾಳಿ ನಡೆಸಿ, ಬಜರಂಗದಳದ ಕಾರ್ಯಕರ್ತರು ಹೇಳುವ ಪ್ರಕಾರ ಶಿವಸೇನೆ ನಾಯಕರು ಘಟನಾಸ್ಥಳದಲ್ಲಿ ಹಾಜರಿರಲೇ ಇಲ್ಲ ಎಂದು ಹೇಳಿದ್ದಾರೆ.

ಆದರೆ, 1992ರಿಂದಲೂ ಬಾಬ್ರಿ ಮಸೀದಿ ಕೆಡವುವಲ್ಲಿ ನಮ್ಮ ಪಾತ್ರ ಮಹತ್ವದ್ದು ಎಂದು ಶಿವಸೇನೆಯ ನಾಯಕರು ಹೇಳುತ್ತಲೇ ಬಂದಿದ್ದಾರೆ. 2020ರ ಆಗಸ್ಟ್ ತಿಂಗಳಲ್ಲಿ, ಅಯೋಧ್ಯೆ ರಾಮಮಂದಿರದ ಭೂಮಿಪೂಜೆಗೆ ಶಿವಸೇನಾ ನಾಯಕರಿಗೆ ಆಹ್ವಾನ ನೀಡದ ಕಾರಣ, “ಧನ್ಯವಾದ್ ಬಾಳಾಸಾಹೇಬ್” ಎಂಬ ಅಭಿಯಾನವನ್ನು ನಡೆಸಲಾಗಿತ್ತು.

ಶಿವಸೇನೆಯ ಮುಖಪತ್ರಿಕೆ ‘ಸಾಮ್ನಾ’ದ ಸಂಪಾದಕೀಯದಲ್ಲಿಯೂ ಬಾಳಾ ಸಾಹೇಬರ ಕುರಿತು ಬರೆಯಲಾಗಿತ್ತು. “ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಶಿವಸೈನಿಕರ ಕುರಿತು ನನಗೆ ಹೆಮ್ಮೆಯಿದೆ” ಎಂದು ಬಾಳ್ ಠಾಕ್ರೆ ಹೇಳಿದ್ದನ್ನು ಉಲ್ಲೇಖಿಸಲಾಗಿತ್ತು.

ಮಹಾರಾಷ್ಟ್ರದಲ್ಲಿ ಈ ವಿವಾದವನ್ನು ಮತ್ತೆ ಜೀವಂತಗೊಳಿಸಿದವರು ಸಿಎಂ ಉದ್ಧವ್ ಠಾಕ್ರೆ. ಇತ್ತೀಚಿಗೆ ಮುಂಬೈನಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಬಾಬ್ರಿ ಮಸೀದಿಯನ್ನು ಶಿವಸೈನಿಕರು ಒಡೆದು ಹಾಕಿದ್ದರು. ಆದರೆ, ಆ ತೂತಿನಲ್ಲಿ ಬಿಜೆಪಿ ಮೆಲ್ಲನೆ ತೂರಿ ಬಂದಿದೆ ಎಂದು ಲೇವಡಿ ಮಾಡಿದ್ದರು. ಪ್ರಸ್ತುತ ಹಿಂದುತ್ವ ರಾಜಕಾರಣ ಉಚ್ಚ್ರಾಯ ಸ್ಥಿತಿಯಲ್ಲಿರುವಾಗ ಇಂತಹ ಒಂದು ಲೇವಡಿಯನ್ನು ಸಾಮಾನ್ಯವಾಗಿ ಸ್ವೀಕರಿಸಲು ಬಿಜೆಪಿಯಿಂದ ಸಾಧ್ಯವಾಗಲಿಲ್ಲ..

ಹಿಂದುತ್ವದ ಪ್ರತಿಪಾದಕರಂತೆ ಪೋಸು ಕೊಡುತ್ತಿರುವ ಬಿಜೆಪಿಗೆ ಉದ್ಧವ್ ಠಾಕ್ರೆ ಹೇಳಿಕೆಯನ್ನು ಸಹಿಸಲು ಅಸಾಧ್ಯವಾಯಿತು. ಈ ಕಾರಣಕ್ಕಾಗಿ ಮತ್ತೆ ಬಾಬ್ರಿ ವಿವಾದವನ್ನು ಮುನ್ನೆಲೆಗೆ ತಂದು ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂಪೂರ್ಣ (ಅಪ)ಕೀರ್ತಿಯನ್ನು ತನ್ನದೆಂದು ಬಿಂಬಿಸಿಕೊಳ್ಳುವ ಪ್ರಯತ್ನವನ್ನು ಮಹಾರಾಷ್ಟ್ರದಲ್ಲಿ ನಡೆಸಲಾಗುತ್ತಿದೆ.

ಶಿವಸೇನೆಯ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಮಸೀದಿಯಲ್ಲಿ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಬಯಪಡುವ ಶಿವಸೇನೆ ಬಾಬ್ರಿ ಮಸೀದಿಯನ್ನು ಕೆಡವಿದ್ದಕ್ಕೆ ಬೆನ್ನು ತಟ್ಟಿಕೊಳ್ಳುತ್ತಿದೆ.

“ಬಾಬ್ರಿ ಒಡೆಯುವಾಗ ನಾನು ಅಲ್ಲಿಯೇ ಇದ್ದೆ. ಅದಕ್ಕೂ ಮುಂಚೆ ರಾಮಮಂದಿರಕ್ಕಾಗಿ ಕರಸೇವೆ ಮಾಡುವ ವೇಳೆ 18 ದಿನ ಜೈಲುವಾಸ ಕೂಡಾ ಅನುಭವಿಸಿದ್ದೆ. ಬೇರೆ ಯಾವ ಮಹಾರಾಷ್ಟ್ರ ಮೂಲದ ನಾಯಕರು ಅಲ್ಲಿದ್ದರು? ಶಿವಸೇನೆಯ ಎಬ್ಬನೇ ಒಬ್ಬ ಮುಖಂಡ ಅಲ್ಲಿ ಇರಲಿಲ್ಲ. ಬಾಬ್ರಿ ಮಸೀದಿ ಪ್ರಕರಣದಲ್ಲಿ 32 ಜನ ಆರೋಪಿಗಳಿದ್ದರು. ಅವರಲ್ಲಿ ಒಬ್ಬನೇ ಒಬ್ಬ ನಾಯಕ ಶಿವಸೇನೆಯವನಾಗಿರಲಿಲ್ಲ,” ಎಂದು ಹೇಳಿದ್ದಾರೆ.

ಬಿಜೆಪಿಯ ಒಂದೇ ಒಂದು ತಪ್ಪು ಏನೆಂದರೆ, ಮಸೀದಿ ಕೆಡವಿದ್ದನ್ನು ಬಿಜೆಪಿ ತನ್ನ ಪ್ರಚಾರಕ್ಕಾಗಿ ಬಳಸಿಕೊಂಡಿಲ್ಲ. ಮಸೀದಿ ಕೆಡವಿದ ಬಳಿಕ, ಬಿಜೆಪಿ ಮತ್ತು ಇತರ ಹಿಂದೂಪರ ಸಂಘಟನೆಗಳು ಈ ಘಟನೆಯನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಬಾರದು ಎಂದು ನಿರ್ಧಾರಕ್ಕೆ ಬಂದಿದ್ದವು, ಎಂದಿದ್ದಾರೆ.

“ಮಸೀದಿಯನ್ನು ಕೆಡವಿದ ಎಲ್ಲರೂ ರಾಮ ಸೇವಕರು ಮತ್ತು ಕರ ಸೇವಕರಾಗಿದ್ದರು. ಈಗ ನೀವು ರಾಮ ಮಂದಿರವನ್ನು ವಿರೋಧಿಸಿದವರ ಮತ್ತು ರಾಮನ ಅಸ್ಥಿತ್ವವನ್ನೇ ಅಲ್ಲಗೆಳೆದವರ ಪಕ್ಕದಲ್ಲಿ ಕುಳಿತು ಅಧಿಕಾರ ನಡೆಸುತ್ತಿದ್ದೀರಾ,” ಎಂದು ಶಿವಸೇನೆಗೆ ಮಾತಿನ ಬಾಣಗಳಿಂದ ತಿವಿದಿದ್ದಾರೆ.

ಬಾಬ್ರಿ ಮಸೀದಿ ಕೆಡವುವಲ್ಲಿ ಶಿವಸೇನೆಯ ಪಾತ್ರವೂ ಇದೆ ಎಂಬುದನ್ನು ಸ್ಪಷ್ಟೀಕರಿಸಲು ಹಲವು ದಾಖಲೆಗಳಿವೆ, ಎಂದು ಶಿವಸೇನೆ ಶಾಸಕ ಮನಿಷಾ ಕಾಯಂದೆ ಹೇಳಿದ್ದಾರೆ. ಹಲವರನ್ನು ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು. ಬಾಬ್ರಿ ಮಸೀದಿ ಒಡೆಯುವ ಚಿತ್ರಗಳು ಪತ್ರಿಕೆಗಳಲ್ಲಿ ಮುದ್ರಣಗೊಂಡಾಗ ಅದರಲ್ಲಿ ಶಿವಸೈನಿಕರಿದ್ದರು, ಎಂದು ಹೇಳಿದ್ದಾರೆ.

“ಈ ಹಿಂದೆ ಬಾಬ್ರಿ ಘಟನೆಯ ತನಿಖೆ ನಡೆಸಲು ಆಯೋಗ ರಚಿಸಿದಾಗ ಇದೇ ಬಿಜೆಪಿ ನಾಯಕರು, ಆ ಘಟನೆಗೂ ತಮಗೂ ಸಂಬಂಧವಿಲ್ಲ ಎಂದು ಕೈತೊಳೆದುಕೊಂಡಿದ್ದರು. ಈಗ ಏಕೆ ಬಾಬ್ರಿ ಹೆಸರಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ಇನ್ನು, ಎಂಎನ್ಎಸ್ ನಾಯಕರಿಗೆ ತಿರುಗೇಟು ನೀಡಿರುವ ಮನಿಷಾ, ಎಂಎನ್ಎಸ್ ಪಕ್ಷ ಅಸ್ಥಿತ್ವಕ್ಕೆ ಬಂದಿದ್ದೇ 2006ರಲ್ಲಿ. ಇದರ ಹಿಂದೆ ಬಹುತೇಕ ಎಂಎನ್ಎಸ್ ಕಾರ್ಯಕರ್ತರು ಶಿವಸೇನೆಯ ಕಾರ್ಯಕರ್ತರಾಗಿದ್ದರು, ಎಂದಿದ್ದಾರೆ.

ಒಟ್ಟಿನಲ್ಲಿ, ಸುಪ್ರೀಂ ಕೊರ್ಟ್ ತೀರ್ಪಿನ ಬಳಿಕ ಬಾಬ್ರಿ ವಿವಾದ ತಣ್ಣಗಾಯಿತು ಎನ್ನುವಷ್ಟರಲ್ಲಿ, ಈಗ ಮಹಾರಾಷ್ಟ್ರದಲ್ಲಿ ಎದ್ದಿರುವ ವಿವಾದ ಮತ್ತೆ ಬಾಬ್ರಿ ನೋವನ್ನು ಮುನ್ನೆಲೆಗೆ ತಂದು ನಿಲ್ಲಿಸಿದೆ.

Tags: BJPCongress PartyCovid 19MNSನರೇಂದ್ರ ಮೋದಿಬಾಬ್ರಿ ಮಸೀದಿಬಿಜೆಪಿಶಿವಸೇನೆ
Previous Post

ನೈಟ್‌ ಕ್ಲಬ್‌ ನಲ್ಲಿ ರಾಹುಲ್‌ ಗಾಂಧಿ: ಪಾರ್ಟಿ ಮುಗೀತಾ ಅಂತ ಬಿಜೆಪಿ ಟಾಂಗ್!‌

Next Post

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ಖಚಿತ: ಬಿಎಸ್‌ ಯಡಿಯೂರಪ್ಪ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್ ಯಡಿಯೂರಪ್ಪ ಪತ್ರ

ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ಖಚಿತ: ಬಿಎಸ್‌ ಯಡಿಯೂರಪ್ಪ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada