• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

ಕೃಷ್ಣ ಮಣಿ by ಕೃಷ್ಣ ಮಣಿ
May 26, 2023
in ಅಂಕಣ
0
ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?
Share on WhatsAppShare on FacebookShare on Telegram

ದೆಹಲಿಯಲ್ಲಿ ನಡೆದ ಹಗ್ಗಾಜಗ್ಗಾಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮೇಲುಗೈ ಸಾಧಿಸಿದ್ದಾರೆ. ಸಿದ್ದರಾಮಯ್ಯ ಯಾರಿಗೆಲ್ಲಾ ಮಂತ್ರಿಸ್ಥಾನ ಕೊಡಬೇಕು ಎಂದು ಪಟ್ಟು ಹಿಡಿದಿದ್ದರೋ ಅವರಿಗೆ ಸಚಿವ ಸ್ಥಾನ ಸಿಗದಂತೆ ಮಾಡುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಆದರೂ ಬಹುತೇಕ ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈಗಾಗಲೇ ಸಿಎಂ, ಡಿಸಿಎಂ ಸೇರಿ 10 ಜನರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇನ್ನು ಶನಿವಾರ 24 ಜನ ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ಪ್ರತಿಧ್ವನಿಗೆ ತಿಳಿಸಿವೆ.

ADVERTISEMENT

ಯಾರೆಲ್ಲಾ ಮಂತ್ರಿಗಳಾಗಿ ಅಧಿಕಾರ ಹಿಡಿಯುತ್ತಾರೆ..?

ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಆಗಿದ್ದ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಲಿಂಗಾಯತ ಕೋಟಾದಲ್ಲಿ ಈಶ್ವರ್‌ ಖಂಡ್ರೆ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಇನ್ನು ಪಂಚಮಸಾಲಿ ಸಮುದಾಯಕ್ಕೆ ಸೇರಿದ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್‌, ಮಹಿಳಾ ಕೋಟಾದಲ್ಲಿ ಸಚಿವೆ ಆಗಲಿದ್ದಾರೆ. ಲಿಂಗಾಯತ ಸಮುದಾಯದ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್, ರೆಡ್ಡಿ ಲಿಂಗಾಯತ ಸಮುದಾಯದ ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ, ಲಿಂಗಾಯತ ಸಮುದಾಯದ ಮತ್ತೋರ್ವ ನಾಯಕ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ S.S.ಮಲ್ಲಿಕಾರ್ಜುನ ಸಚಿವರಾಗಿ ಪ್ರದಗ್ರಹಣ ಸ್ವೀಕಾರ ಮಾಡಲಿದ್ದಾರೆ.

ಹಿಂದುಳಿದ ವರ್ಗಕ್ಕೂ ಮಣೆ ಹಾಕಿದ ಹೈಕಮಾಂಡ್‌..

ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಗಮಂಗಲ ಕ್ಷೇತ್ರದ ಶಾಸಕ ಎನ್‌. ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್‌, ಚಿಂತಾಮಣಿ ಶಾಸಕ ಡಾ.ಎಂ.ಸಿ ಸುಧಾಕರ್‌ಗೂ ಸಚಿವ ಸ್ಥಾನ ಫಿಕ್ಸ್‌ ಆಗಿದೆ. ಇನ್ನು ಕುರುಬ ಸಮುದಾಯದ ಹೆಬ್ಬಾಳ ಶಾಸಕ ಬೈರತಿ ಸುರೇಶ್, ಮುಸ್ಲಿಂ ಧರ್ಮದ ರಹೀಂ ಖಾನ್, ರಜಪೂತ ಸಮುದಾಯಕ್ಕೆ ಸೇರಿದ ಜೇವರ್ಗಿ ಶಾಸಕ ಅಜಯ್ ಸಿಂಗ್, ಉಪ್ಪಾರ ಸಮುದಾಯದ ಚಾಮರಾಜನಗರ ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಎಸ್​ಸಿ ಸಮುದಾಯದ ಮಳವಳ್ಳಿ ಶಾಸಕ ಪಿ. ನರೇಂದ್ರ ಸ್ವಾಮಿ, ಎಸ್​ಟಿ ಸಮುದಾಯದ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ , ಜೈನ ಧರ್ಮದ ಹಿರಿಯೂರು ಶಾಸಕ ಡಿ.ಸುಧಾಕರ್, ಮೊಗವೀರ ಸಮುದಾಯದ ಭಟ್ಕಳ ಶಾಸಕ ಮಂಕಾಳ್‌ ವೈದ್ಯ, ಬೋವಿ ಸಮುದಾಯದ ಕನಕಗಿರಿ ಶಿವರಾಜ್ ತಂಗಡಗಿ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಬರುವಂತೆ ಕರೆ ಬಂದಿದೆ ಎನ್ನಲಾಗಿದೆ.

ಸಚಿವಗಿರಿ ತಪ್ಪಿದ್ದು ಯಾರಿಗೆ ಮತ್ತು ಯಾಕೆ..?

ಪ್ರಮುಖ ಸಚಿವಾಕಾಂಕ್ಷಿಗಳಾಗಿದ್ದ ದಿನೇಶ್‌ ಗುಂಡೂರಾವ್‌, ಕೃಷ್ಣಭೈರೇಗೌಡ, ಹೆಚ್‌.ಸಿ ಬಾಲಕೃಷ್ಣ, ಹೆಚ್‌.ಸಿ ಮಹದೇವಪ್ಪ, ಕೆ.ಎನ್‌ ರಾಜಣ್ಣ ಸೇರಿದಂತೆ ಪ್ರಮುಖ ನಾಯಕರಿಗೆ ಸಚಿವ ಸ್ಥಾನ ತಪ್ಪಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ. ನಾಳೆ ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಇನ್ನು ಕೂಡ ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ನಡೆಯುತ್ತಲೇ ಇದೆ. ದೆಹಲಿಯಿಂದ ವಾಪಸ್‌ ಬೆಂಗಳೂರಿಗೆ ಬಂದಿದ್ದ ಡಿ.ಕೆ ಶಿವಕುಮಾರ್‌ ಮತ್ತೆ ಇಂದು ದೆಹಲಿಗೆ ತೆರಳಲಿದ್ದು, ಕೊನೇ ಕ್ಷಣದಲ್ಲಿ ಕೆಲವೊಂದು ಹೆಸರಲು ಅದಲು ಬದಲಾದರೂ ಅಚ್ಚರಿಯೇನಿಲ್ಲ ಎಂದು ಕಾಂಗ್ರೆಸ್‌ ನಾಯಕರೇ ಮಾತನಾಡಿದ್ದಾರೆ.

ಕೃಷ್ಣಮಣಿ

Tags: BangaloreCabinet FormationDelhiDK ShivakumarIswara KhandreLakshmi hebbalkarsiddaramaiahಈಶ್ವರ ಖಂಡ್ರೆಕಾಂಗ್ರೆಸ್​ಡಿಕೆ ಶಿವಕುಮಾರ್​ದೆಹಲಿಬೆಂಗಳೂರುಲಕ್ಷ್ಮೀ ಹೆಬ್ಬಾಳ್ಕರ್​ಸಂಪುಟ ರಚನೆಸಿದ್ದರಾಮಯ್ಯ
Previous Post

‘ಟಿಪ್ಪು ಸುಲ್ತಾನ್ ವೀರನಲ್ಲ’ ನಿಮ್ಮ ವಾದ ಎಷ್ಟು ಸರಿ..? ಇಲ್ಲಿದೆ ನೋಡಿ..

Next Post

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

Related Posts

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌
ಅಂಕಣ

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

by ಪ್ರತಿಧ್ವನಿ
May 26, 2026
0

ನಾ ದಿವಾಕರ ಭಾರತದ ಪ್ರಜಾತಂತ್ರ ವ್ಯವಸ್ಥೆ ಹಲವು ಮಗ್ಗುಲುಗಳಿಂದ ಹಲ್ಲೆಗೊಳಗಾಗುತ್ತಿದೆ. ಮೂಲತಃ ತಳಪಾಯದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳೇ ಇಲ್ಲದ ಒಂದು ದೇಶದಲ್ಲಿ ಪ್ರಜಾಪ್ರಭುತ್ವದ ಉನ್ನತ ಮೌಲ್ಯಗಳನ್ನು ಬಿತ್ತುವ ಕಠಿಣ...

Read moreDetails
ಸಾಧನೆ-ಸಮಾವೇಶ ಮತ್ತು ವಾಸ್ತವದ ವಿಡಂಬನೆ

ಸಾಧನೆ-ಸಮಾವೇಶ ಮತ್ತು ವಾಸ್ತವದ ವಿಡಂಬನೆ

May 23, 2026
ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

May 22, 2026
ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

May 21, 2026
ಸಂತೆಮಾಳದಲ್ಲಿ ಯುವಜನರ ಭವಿಷ್ಯದ ಕನಸುಗಳು

ಸಂತೆಮಾಳದಲ್ಲಿ ಯುವಜನರ ಭವಿಷ್ಯದ ಕನಸುಗಳು

May 18, 2026
Next Post
ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

ನೀರಿನ ದಾಹ ನೀಗಿಸಲು ಸ್ವಂತ ಹಣದಲ್ಲಿ ಬೋರವೆಲ್ ಕೊರಿಸಿದ ಆಂಧ್ರ ರೈತ- ಸ್ಥಳೀಯರ ಮೆಚ್ಚುಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada