ಬೆಂಗಳೂರಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಹಿನ್ನಲೆ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಆಗಿದೆ ಎಂದು ದೆಹಲಿಯಲ್ಲಿದ್ದಾಗ ಕೇಳಿ ನೋವಾಯ್ತು. ಸಮಾಜದಲ್ಲಿ ಇಂಥ ಅಹಿತಕರ ಘಟನೆ ನಡೆಯಬಾರದು, ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.
![](https://pratidhvani.com/wp-content/uploads/2024/06/IMG_8188-1024x569.jpeg)
ಸರ್ಕಾರದ ಇಂಥ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು.ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು ಮನಸ್ಸಿಗೆ ಅಘಾತ ಆಯ್ತು. ಇಂಥ ಘಟನೆ ಪದೇ ಪದೇ ನಡೆಯುತ್ತಿದೆ.ಸರ್ಕಾರ & ಕಾನೂನಿನ ಭಯ ಇಲ್ಲವಾಗಿದೆ. ಸರ್ಕಾರ ಇಂಥ ಕೇಸ್ ವಿಶೇಷವಾಗಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.
ಯಾರೇ ಎಷ್ಠು ದೊಡ್ಡವರಿದ್ದರು ಶಿಕ್ಷೆಯಾಗಬೇಕು. ತನಿಖೆಯಿಂದ ಸತ್ಯ ಹೊರಗೆ ಬರ್ಬೇಕಿದೆ. ರೇಣುಕಾಸ್ವಾಮಿ ನೋವು ಮಾಡಿದ್ರೆ ಕಂಪ್ಲೈಂಟ್ ಕೊಡಬಹುದಿತ್ತು. ಈ ಕೊಲೆ ಯಾರು ಕೂಡಾ ಸಹಿಸುವುದಿಲ್ಲ. ಮೃತರ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಬೇಕಿದೆ ಎಂದು ಹೇಳಿದ್ದಾರೆ.