• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

ಪ್ರತಿಧ್ವನಿ by ಪ್ರತಿಧ್ವನಿ
March 17, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?
Share on WhatsAppShare on FacebookShare on Telegram

ADVERTISEMENT

ಬೆಂಗಳೂರು:ಮಾ.17: ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪ ಅವರನ್ನು ತೆರೆಮರೆಗೆ ಸರಿಸಲಾಗ್ತಿದೆ ಅನ್ನೋ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅದಾದ ಬಳಿಕ ಯಡಿಯೂರಪ್ಪ ಹಾಗು ಬಿ.ವೈ ವಿಜಯೇಂದ್ರಗೆ ಪಕ್ಷದಲ್ಲಿ ಅವಕಾಶ ಕೊಡಲಾಗಿತ್ತು. ಅದಾದ ಬಳಿಕ ಯಡಿಯೂರಪ್ಪ ವರ್ಸಸ್​ ವಿ ಸೊಮಣ್ಣ ಕುಟುಂಬದ ನಡುವೆ ಜಟಾಪಟಿ ಶುರುವಾಗಿದೆ. ಯಡಿಯೂರಪ್ಪ ಹಾಗು ವಿಜಯೇಂದ್ರ ಎಲ್ಲದಕ್ಕೂ ಮೂಗು ತೂರಿಸ್ತಾರೆ ಅನ್ನೋ ವಿಚಾರವಾಗಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿ ಚಾಮರಾಜನ ನಗರದಲ್ಲಿ ಶುರುವಾದ ವಿಜಯ ಸಂಕಲ್ಪ ಯಾತ್ರೆ ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗಿದ್ದರು. ರಾಷ್ಟ್ರೀಯ ಅಧ್ಯಕ್ಷರು ಭಾಗಿಯಾಗಿದ್ದ ಕಾರ್ಯಕ್ರಮದಿಂದ ಉಸ್ತುವಾರಿ ಸಚಿವರೇ ಗೈರಾಗಿದ್ದರು ಅಸಮಾಧಾನದ ಹೊಗೆಗೆ ತುಪ್ಪ ಸುರಿದಂತೆ ಆಗಿತ್ತು. ಆ ಬಳಿಕ ಸಾಕಷ್ಟು ವಾಕ್ಸಮರಗಳು ನಡೆದು ಅಂತಿಮವಾಗಿ ದೆಹಲಿ ಅಂಗಳಕ್ಕೆ ತೆರಳಿದ್ದರು ಸೋಮಣ್ಣ.

ಇಲಾಖೆ ಕೆಲಸದ ಮೇಲೆ ದೆಹಲಿಗೆ ಅಂದಿದ್ದ ಸೋಮಣ್ಣ..

ಸಚಿವ ವಿ.ಸೋಮಣ್ಣ ದೆಹಲಿಗೆ ತೆರಳುವ ವೇಳೆ ನಾನು ಇಲಾಖೆಗೆ ಸಂಬಂಧಿಸಿದ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ ಎಂದಿದ್ದರು. ಇತ್ತ ಕರ್ನಾಟಕದಲ್ಲಿ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಚಿವ ಸೋಮಣ್ಣಗೆ ಯಾವುದೇ ಅಸಮಾಧಾನ ಇಲ್ಲ. ಅವರು ಇಲಾಖೆ ಕೆಲಸದ ಮೇಲೆ ದೆಹಲಿಗೆ ಹೋಗಿದ್ದಾರೆ ಎಂದಿದ್ದರು. ಆದರೆ ಸೋಮಣ್ಣ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿ ಯಡಿಯೂರಪ್ಪ ಹಾಗು ಬಿ.ವೈ ವಿಜಯೇಂದ್ರರಿಂದ ನನಗೆ ಸಮಸ್ಯೆ ಆಗುತ್ತಿದೆ. ಎಲ್ಲಾ ವಿಚಾರದಲ್ಲೂ ಮೂಗು ತೂರಿಸುವ ಕೆಲಸ ಮಾಡ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಹಾವೇರಿಯಲ್ಲಿ ಮಾತನಾಡಿದ್ದ ಬಿ.ವೈ ವಿಜಯೇಂದ್ರ ಯಡಿಯೂರಪ್ಪ ಬಗ್ಗೆ ಮಾತನಾಡುವಾಗ ಹುಷಾರ್..! ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ಬೆಳವಣಿಗೆಗೆ ಏನು ಮಾಡ್ಬೇಕೋ ಅದ್ರು ಕಡೆಗೆ ಗಮನ ಕೊಡಲಿ ಎಂದು ಸೋಮಣ್ಣ ಟಾಂಟ್ ಕೊಟ್ಟಿದ್ದರು.

‘ದೆಹಲಿ ವರಿಷ್ಠರು ಸೋಮಣ್ಣ ಜೊತೆಗೆ ಚರ್ಚಿಸಿದ್ದಾರೆ’

ನಾನು ಇಲಾಖೆ ಕೆಲಸದ ಮೇಲೆ ಹೋಗ್ತಿದ್ದೀನಿ ಎಂದಿದ್ದ ಸೋಮಣ್ಣ, ನಮಗೆ ಯಡಿಯೂರಪ್ಪ ಅವರೇ ನಾಯಕರು ಎಂದು ತೇಪೆ ಸಾರಿಸುವ ಕೆಲಸ ಮಾಡಿದ್ದರು. ಆದರೆ ಸೋಮಣ್ಣ ಅಸಮಾಧಾನದ ಬಗ್ಗೆ ಯಡಿಯೂರಪ್ಪ ಅವರನ್ನು ಪತ್ರಕರ್ತರು ಪ್ರಶ್ನೆ ಮಾಡ್ತಿದ್ದ ಹಾಗೆ ದೆಹಲಿಯಲ್ಲಿ ಹೈಕಮಾಂಡ್​ ನಾಯಕರು ಕರೆದು ಮಾತನಾಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎನ್ನುವ ಮೂಲಕ ಹೈಕಮಾಂಡ್​ ನಾಯಕರ ಬಳಿಗೆ ಹೋಗಿದ್ದು ದೂರು ದುಮ್ಮಾನ ಹೇಳಿಕೊಳ್ಳಲು ಎನ್ನುವುದನ್ನು ಬಹಿರಂಗ ಮಾಡಿದ್ದರು. ಇದರ ನಡುವೆ ಚಿಕ್ಕಮಗಳೂರು ಪ್ರವಾಸ ಮಾಡುತ್ತಿದ್ದ ಬಿ.ಎಸ್​ ಯಡಿಯೂರಪ್ಪಗೆ ಮೂಡಿಗೆರೆಯಲ್ಲಿ ಬಿಜೆಪಿ ನಾಯಕರೇ ಧಿಕ್ಕಾರದ ಸುರಿಮಳೆ ಸುರಿಸಿದ್ದಾರೆ. ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್​ ನೀಡಬಾರದು ಅಂತಾ ಕಾರು ತಡೆದು ಪ್ರತಿಭಟಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಎದುರಲ್ಲೇ ಘಟನೆ ನಡೆದಿದೆ ಎನ್ನುವುದು ವಿಶೇಷ.

ಬಿಜೆಪಿ ವರ್ಸಸ್​ ಬಿಎಸ್​ವೈ ಅಂಡ್​ ಸಿಎಂ

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು ಹೋದರೆ ಗೆಲ್ಲುವ ಸಾಮರ್ಥ್ಯ ಯಾರಿಗೆ ಇದೆ ಎನ್ನುವ ಮೂಲಕ ವಿಜಯೇಂದ್ರ ಸ್ವತಃ ಬಿಜೆಪಿ ಪಕ್ಷಕ್ಕೇ ಚಾಲೆಂಜ್​ ಹಾಕುತ್ತಾರೆ. ಮತ್ತೊಂದು ಕಡೆ B.S ಯಡಿಯೂರಪ್ಪ ಟೀಕಿಸುವ ಉದ್ದೇಶಕ್ಕೆ ಒಂದು ತಂಡವನ್ನೇ ‘ಸಂತೋಷ ಕೂಟ’ ತಯಾರು ಮಾಡಿದೆ. ಆ ತಂಡದ ಪ್ರಮುಖ ವಕ್ತಾರರು ಬಸನಗೌಡ ಪಾಟೀಲ್​ ಯತ್ನಾಳ್ ಹಾಗು ಸಿಟಿ ರವಿ ಎಂದು ಟೀಕಿಸಿದೆ. ಬಿಜೆಪಿಯಲ್ಲಿ B.S ಯಡಿಯೂರಪ್ಪ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು ಯಾರು..? ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ..? ಜೊತೆಗೆ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಶತಪ್ರಯತ್ನ ನಡೆಸುತ್ತಿರುವವರು ಯಾರು..? ಎಂದು ಟ್ವಿಟ್ಟರ್​ನಲ್ಲಿ ಕುಟುಕಿದೆ. ಇನ್ನು ಬಸವರಾಜ ಬೊಮ್ಮಾಯಿ ಅವರಿಗೆ ಶಿಗ್ಗಾಂವಿ ಟಿಕೆಟ್​ ಸಿಗುತ್ತೋ ಇಲ್ವೋ ಅನ್ನೋ ಬಗ್ಗೆ ಬಿಜೆಪಿ ಸಂಸದ ಸಿದ್ದೇಶ್ವರ್​ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಪ್ರಮುಖ ನಾಲ್ಕೈದು ಶಾಸಕರಿಗೆ ಟಿಕೆಟ್​ ಸಿಗಲ್ಲ ಎನ್ನುವ ಮಾತನ್ನು ಯಡಿಯೂರಪ್ಪ ಹೇಳಿದ್ದರು. ಆ ನಾಲ್ವರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸೇರಿದ್ದಾರಾ..? ಎನ್ನುವ ಅನುಮಾನ ಮೂಡುವಂತೆ ಮಾಡಿದೆ. ಇದೆಲ್ಲವನ್ನೂ ನೋಡಿದಾಗ ಬಿಜೆಪಿಯಲ್ಲಿ ಏನಾಗ್ತಿದೆ ಎಂದು ಕಾರ್ಯಕರ್ತರು ಪ್ರಶ್ನಿಸುವಂತಾಗಿದೆ.

—-ಕೃಷ್ಣಮಣಿ——

Tags: amithshaBJPBJP GovernmentbsbommaiBSYbsyediyurappbyvijayendracmbommaiCongress PartyModiPMModiSomannavsomannaಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

Next Post

PRIYANKA UPENDRA | ಫಸ್ಟ್ ಟೈಂ ರೆಟ್ರೂ ಲುಕ್ ನಲ್ಲಿ ಉಪೇಂದ್ರ ಆಕ್ಟಿಂಗ್ #PRATIDHVANI

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

PRIYANKA UPENDRA | ಫಸ್ಟ್ ಟೈಂ ರೆಟ್ರೂ ಲುಕ್ ನಲ್ಲಿ ಉಪೇಂದ್ರ ಆಕ್ಟಿಂಗ್ #PRATIDHVANI

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada