• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ ಏಕೆ ಕೈಕೊಟ್ಟಿದೆ?ಹವಾಮಾನ ತಜ್ಞರ ವಿವರಣೆ ಇಲ್ಲಿದೆ

ಪ್ರತಿಧ್ವನಿ by ಪ್ರತಿಧ್ವನಿ
July 16, 2026
in ಕರ್ನಾಟಕ
0
ಬೆಂಗಳೂರು ಸೇರಿ ರಾಜ್ಯದಲ್ಲಿ ಮಳೆ ಏಕೆ ಕೈಕೊಟ್ಟಿದೆ?ಹವಾಮಾನ ತಜ್ಞರ ವಿವರಣೆ ಇಲ್ಲಿದೆ
Share on WhatsAppShare on FacebookShare on Telegram

ಬೆಂಗಳೂರು: ಮುಂಗಾರು ಆರಂಭವಾಗಿ ಹಲವು ವಾರಗಳು ಕಳೆದರೂ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ನಿರೀಕ್ಷಿತ ಮಳೆಯಾಗುತ್ತಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲೇ ಬೇಸಿಗೆಯನ್ನು ನೆನಪಿಸುವಂತ ಬಿಸಿಲು ದಾಖಲಾಗಿದ್ದು, ಕಳೆದ ಹತ್ತು ವರ್ಷಗಳಲ್ಲೇ ಅಪರೂಪದ ಉಷ್ಣಾಂಶ ಕಂಡುಬರುತ್ತಿದೆ. ಈ ಅಸಾಮಾನ್ಯ ಹವಾಮಾನಕ್ಕೆ ಎಲ್ ನಿನೊ (El Niño) ಮತ್ತು ಇಂಡಿಯನ್ ಓಷಿಯನ್ ಡೈಪೋಲ್ (IOD) ಪ್ರಮುಖ ಕಾರಣಗಳಾಗಿವೆ ಎಂದು ಹವಾಮಾನ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ADVERTISEMENT
Farmers Protest : ಹಿಟ್ಲರ್ ಆಡಳಿತ ತೋರಿಸುತ್ತಾ ಇದೆ ಈ ಸರ್ಕಾರ #pratidhvani

2026ರ ಮುಂಗಾರು ವಾಡಿಕೆಯಂತೆ ಆರಂಭವಾದರೂ ಜೂನ್ ತಿಂಗಳ ಬಹುತೇಕ ದಿನಗಳು ಒಣಹವೆಯಲ್ಲೇ ಕಳೆಯಿತು. ಜುಲೈ ಮೊದಲಾರ್ಧದಲ್ಲಿ ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಾತ್ರ ಅಲ್ಲಲ್ಲಿ ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಷ್ಟೇ ಆಗಿದ್ದು, ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಪೂರ್ವ ಫೆಸಿಫಿಕ್ ಸಾಗರದ ಮೇಲ್ಮೈ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುವುದನ್ನು ಎಲ್ ನಿನೊ ಎಂದು ಕರೆಯಲಾಗುತ್ತದೆ. ಈ ಸ್ಥಿತಿಯಿಂದ ಭಾರತದ ಮುಂಗಾರು ಮಾರುತಗಳ ಬಲ ಕುಗ್ಗಿ, ಮಳೆಯ ಪ್ರಮಾಣ ಕಡಿಮೆಯಾಗುತ್ತದೆ. ಇದೇ ಕಾರಣದಿಂದ ಈ ಬಾರಿ ಮಳೆ ಕೊರತೆ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ.

Farmers Protest : ಪೊರಕೆ ಸೇವೆ ಆಗಿದೆ ಇನ್ಮೇಲೆ ಒನಕೆ ಏಟು ಬೀಳುತ್ತೆ.! #pratidhvani

ಸಾಮಾನ್ಯವಾಗಿ ಸಕಾರಾತ್ಮಕ ಇಂಡಿಯನ್ ಓಷಿಯನ್ ಡೈಪೋಲ್ (Positive IOD) ಎಲ್ ನಿನೊ ಪರಿಣಾಮವನ್ನು ಕೆಲವು ಮಟ್ಟಿಗೆ ತಗ್ಗಿಸಿ ಭಾರತಕ್ಕೆ ಮಳೆ ತರುತ್ತದೆ. ಆದರೆ ಈ ಬಾರಿ IOD ತಟಸ್ಥ (Neutral) ಸ್ಥಿತಿಯಲ್ಲಿರುವುದರಿಂದ ಎಲ್ ನಿನೊದ ಪರಿಣಾಮವನ್ನು ತಡೆಯಲು ಸಾಧ್ಯವಾಗಿಲ್ಲ.ಹವಾಮಾನ ವಿಜ್ಞಾನಿಗಳ ಪ್ರಕಾರ, ಆಫ್ರಿಕಾ ಮತ್ತು ಇಂಡೋನೇಷ್ಯಾ ಕರಾವಳಿಗಳ ಸಮುದ್ರ ತಾಪಮಾನದಲ್ಲಿ ಗಮನಾರ್ಹ ವ್ಯತ್ಯಾಸ ಇಲ್ಲದಿರುವುದರಿಂದ ಹಿಂದೂ ಮಹಾಸಾಗರವು ಮುಂಗಾರು ಮಾರುತಗಳಿಗೆ ಹೆಚ್ಚುವರಿ ಬಲ ನೀಡುತ್ತಿಲ್ಲ. ಪರಿಣಾಮವಾಗಿ ಮಳೆಯ ಪ್ರಮಾಣ ಕುಂಠಿತವಾಗಿದೆ.

ಜುಲೈ ಕೊನೆಯ ವಾರದಲ್ಲಿ ಮ್ಯಾಡನ್–ಜೂಲಿಯನ್ ಆಸಿಲೇಷನ್ (MJO) ಪ್ರಭಾವದಿಂದ ಹವಾಮಾನದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಈ ಮಳೆಯಿಂದ ಕೆರೆಗಳು ತುಂಬಿ, ಅಂತರ್ಜಲ ಮಟ್ಟ ಏರಿಕೆಯಾಗುವ ಜೊತೆಗೆ ಸಾವಿರಾರು ಬೋರ್‌ವೆಲ್‌ಗಳ ಮರುಪೂರಣಕ್ಕೂ ನೆರವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಅಕ್ಟೋಬರ್–ನವೆಂಬರ್ ತಿಂಗಳಲ್ಲಿ ಸುರಿಯುವ ಹಿಂಗಾರು ಮಳೆ ಸಹ ಈ ಬಾರಿ ಉತ್ತಮವಾಗುವ ನಿರೀಕ್ಷೆಯಿದೆ. ಇದರಿಂದ ತಾಪಮಾನ ಇಳಿಕೆಯಾಗುವ ಜೊತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಪರಿಹಾರವಾಗುವ ಸಾಧ್ಯತೆ ಇದೆ.

Tags: bengaluru weatherclimate changeEl NinoIMDIndian Ocean DipoleIODkannada newskarnataka newskarnataka rainMonsoon 2026Rain ForecastWeather Update
Previous Post

ಅಪ್ಪು ಕನಸಿಗೆ ಮಗಳ ಸ್ಪರ್ಶ!  ಹೊಸ ಉದ್ಯಮಕ್ಕೆ ಕಾಲಿಟ್ಟ ವಂದಿತಾ ರಾಜ್‌ಕುಮಾರ್

Next Post

ಅಮೀರ್ ಖಾನ್ ಕೊ* ಮಾಡಿದವರಿಗೆ ₹5 ಕೋಟಿ ಬಹುಮಾನ? ಸ್ವಾಮೀಜಿಯ ಹೇಳಿಕೆ ಭಾರೀ ವಿವಾದ

Related Posts

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!
Top Story

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

by ಪ್ರತಿಧ್ವನಿ
July 25, 2026
0

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ...

Read moreDetails
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಪಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

July 25, 2026
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

July 25, 2026
ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

July 25, 2026
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

July 25, 2026
Next Post
ಅಮೀರ್ ಖಾನ್ ಕೊ* ಮಾಡಿದವರಿಗೆ ₹5 ಕೋಟಿ ಬಹುಮಾನ? ಸ್ವಾಮೀಜಿಯ ಹೇಳಿಕೆ ಭಾರೀ ವಿವಾದ

ಅಮೀರ್ ಖಾನ್ ಕೊ* ಮಾಡಿದವರಿಗೆ ₹5 ಕೋಟಿ ಬಹುಮಾನ? ಸ್ವಾಮೀಜಿಯ ಹೇಳಿಕೆ ಭಾರೀ ವಿವಾದ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada