• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಮಾಜಿ ಸಿಎಂ ಕುಮಾರಸ್ವಾಮಿ ಕಂಡ ಕಂಡವರ ಮೇಲೆ ಗುಮ್ಮ ತೋರುತ್ತಿರೋದ್ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
July 6, 2023
in ಅಂಕಣ, ಅಭಿಮತ
0
ಮಾಜಿ ಸಿಎಂ ಕುಮಾರಸ್ವಾಮಿ ಕಂಡ ಕಂಡವರ ಮೇಲೆ ಗುಮ್ಮ ತೋರುತ್ತಿರೋದ್ಯಾಕೆ..?
Share on WhatsAppShare on FacebookShare on Telegram

ಸಿಎಂ ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ನೇರವಾಗಿಯೇ ಆರೋಪ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ ನನ್ನ ಬಳಿಕ ಪೆನ್‌ ಡ್ರೈವ್‌ ಇದೆ. ಅದರಲ್ಲಿ ಸಾಕ್ಷಿ ಇದೆ ಎಂದು ಅಬ್ಬರಿಸುತ್ತಿದೆ. ಸರ್ಕಾರ ತಪ್ಪು ದಾರಿಯಲ್ಲಿ ನಡೆದಾಗ ವಿರೋಧ ಪಕ್ಷವಾಗಿ ಸರ್ಕಾರವನ್ನು ಕಿವಿ ಹಿಂಡಿ ಸರಿದಾರಿಗೆ ತರಬೇಕಿರುವುದು ವಿರೋಧ ಪಕ್ಷದ ನಾಯಕನಾಗಿ ಕುಮಾರಸ್ವಾಮಿ ಅವರ ಕರ್ತವ್ಯ ಆಗಿದೆ. ಆದರೆ ಕುಮಾರಸ್ವಾಮಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಅಬ್ಬರಿಸುತ್ತಿದ್ದಾರೆ. ಆದರೆ ಬುಟ್ಟಿಯಲ್ಲಿರುವ ಹಾವನ್ನು ಹೊರಕ್ಕೆ ಬಿಡದೆ ಬುಟ್ಟಿಯಲ್ಲಿ ಹಾವಿದೆ ಹಾವಿದೆ ಎಂದರೆ ಅರ್ಥವೇನಿದೆ..? ಎನ್ನುವುದು ವಿರೋಧ ಪಕ್ಷಗಳ ಪ್ರಶ್ನೆಯಾಗಿದೆ.

ADVERTISEMENT

ಗಾಳಿಯಲ್ಲಿ ಗುಂಡು ಹಾರಿಸ್ತಾರೆ ಅನ್ನೋ ಪ್ರತೀತಿ..

ಕುಮಾರಸ್ವಾಮಿ ಸಾಕಷ್ಟು ನಾಯಕರ ವಿರುದ್ಧ ಆರೋಪ ಮಾಡುತ್ತಾರೆ. ಆ ಆರೋಪಗಳನ್ನು ತಾತ್ವಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಮಾಡುವುದಿಲ್ಲ. ಕೇವಲ ಕೇಳಿದ್ದು, ಕಂಡಿದ್ದನ್ನು ಮಾಧ್ಯಮಗಳ ಎದುರು ಹೇಳಿಕೊಂಡು ಬಾಯಿ ಚಪಲ ತೀರಿಸಿಕೊಳ್ತಾರೆ ಎಂದು ಕಾಂಗ್ರೆಸ್‌ ನಾಯಕರು ಕಿಚಾಯಿಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಮಾತ್ರ ಜೇಬಿನಲ್ಲಿ ಪೆನ್‌ ಡ್ರೈವ್‌‌ ತೋರಿಸಿ ಇದರಲ್ಲಿ ಇದೆ ಇದೆ ಎನ್ನುತ್ತಿದ್ದಾರೆ. ಇಂದಿನ ದಿನಮಾನಗಳಲ್ಲಿ ಮಾಧ್ಯಮ ಅತ್ಯಂತ ಗಟ್ಟಧ್ವನಿಯಾಗಿದ್ದು, ಮಾಧ್ಯಮಗಳ ಎದುರು ಪೆನ್‌‌ಡ್ರೈವ್‌ ಪ್ಲೇ ಮಾಡಿ, ಇಡೀ ರಾಜ್ಯದ ಜನರ ಎದುರು ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ಬಹಿರಂಗ ಮಾಡಲು ಅವಕಾಶವಿದೆ. ಆದರೆ ಕುಮಾರಸ್ವಾಮಿಗೆ ಆಡಿಯೋ ಬಹಿರಂಗ ಆಗೋದು ಬೇಕಿಲ್ಲ ಎನ್ನುವುದು ಹಲವಾರು ಜನರ ಅಭಿಪ್ರಾಯ.

ಸಿಎಂ ಕಚೇರಿಯಲ್ಲಿ ವರ್ಗಾವಣೆ ದಂಧೆ – HDK

CMO ಅಂದರೆ ಚೀಫ್‌ ಮಿನಿಸ್ಟರ್‌ ಆಫೀಸ್‌ ಎಂದರ್ಥ. ಆದರೆ ಕುಮಾರಸ್ವಾಮಿ CMO ಅಂದರೆ Corruption Management Office ಎಂದು ತಮ್ಮದೇ ಆದ ಅರ್ಥ ಕೊಟ್ಟಿದ್ದಾರೆ. ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ. ಸಿಎಂ ಕಚೇರಿಯಲ್ಲಿ ಅಧಿಕೃತವಾಗಿ ದಂಧೆ ನಡೆಯುತ್ತಿದೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಕೊಡಿ ಎಂದಿದ್ದರೆ ತನಿಖೆ ನಡೆಸುವ ದಮ್ಮು, ತಾಕತ್ತು ಇದ್ದರೆ ದಾಖಲೆ ಕೊಡುತ್ತೇನೆ ಎಂದಿದ್ದರು. ದಾಖಲೆ ಕೊಟ್ಟರೆ ಆರೋಪಿತ ಸಚಿವರನ್ನು ವಜಾ ಮಾಡುತ್ತೀರಾ..? ಎಂದು ಸವಾಲು ಹಾಕಿದ್ದರು. ಆದರೆ ಕೇವಲ ಒಂದು ಪೆನ್‌ ಡ್ರೈವ್‌ ತೋರಿಸಿ ಬಿಲ್ಡಪ್‌ಗೆ ಮಾತ್ರ ಸೀಮಿತ ಆಯ್ತು. ಒಂದು ವೇಳೆ ಸೂಕ್ತ ದಾಖಲಾತಿಗಳು ಇದ್ದಿದ್ದರೆ ಲೋಕಾಯುಕ್ತ ಅಥವಾ ಕರ್ನಾಟಕ ಹೈಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲೂ ಅವಕಾಶ ಇದೆ ಅಲ್ಲವೇ..?

ಸರ್ಕಾರಕ್ಕೆ ಕೆಟ್ಟ ಹೆಸರು ತರವುದೇ HDK ಸಂಕಲ್ಪ..!

ರಾಜ್ಯ ಸರ್ಕಾರದ ಬಗ್ಗೆ ಜನರು ಒಳ್ಳೇ ಮಾತನಾಡ್ತಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸುವತ್ತ ಸಿದ್ದರಾಮಯ್ಯ ಸರ್ಕಾರ ದಾಪುಗಾಲು ಇಟ್ಟಿದೆ. ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದಕ್ಕೆ ಇಂಧನ ಇಲಾಖೆ ಕೂಡ ಒಂದು ಕಾರಣ. ಸರ್ಕಾರ ಘೋಷಣೆ ಮಾಡಿದ 200 ಯೂನಿಟ್‌ ಫ್ರೀ ಕರೆಂಟ್‌ ಯೋಜನೆ ಜಾರಿಯಲ್ಲಿ ಸಚಿವ ಕೆ.ಜೆ ಜಾರ್ಜ್‌ ಶ್ರಮವನ್ನು ಕಡೆಗಣಿಸುವಂತಿಲ್ಲ. ಇದೀಗ ಕೆ.ಜೆ ಜಾರ್ಜ್‌ ವಿರುದ್ಧವೇ ಆರೋಪ ಮಾಡಿದರೆ ಅದರಿಂದ ಮಾನಸಿಕವಾಗಿ ಕುಕ್ಕುತ್ತಾರೆ ಎನ್ನುವ ಕಾರಣಕ್ಕೆ ಕೆ.ಜೆ ಜಾರ್ಜ್‌ ವಿರುದ್ಧವೇ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ. ಸುಮಾರು 10 ಕೋಟಿಗೆ ಹುದ್ದೆ ಬಿಕರಿ ಆಗಿದೆ. ಆ ಅಧಿಕಾರಿ ದಿನನಿತ್ಯ 50 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಾನೆ ಎಂದಿದ್ದಾರೆ. ಆದರೆ ತಿರುಗೇಟು ನೀಡಿರುವ ಇಂಧನ ಸಚಿವ ಕೆ.ಜೆ ಜಾರ್ಜ್‌, ದಾಖಲೆ ಇದ್ದರೆ ಜನತೆಯ ಮುಂದಿಟ್ಟು ಆರೋಪ ಮಾಡಲಿ ಎಂದು ಪ್ರತಿ ಸವಾಲು ಎಸೆದಿದ್ದಾರೆ.

ಮಾಜಿ ಸಿಎಂ ಆದವರಿಗೆ ಮುಖಭಂಗ ಸಹ್ಯವಲ್ಲ..!

ಮಾಜಿ ಮುಖ್ಯಮಂತ್ರಿ, ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ನಾಯಕರಲ್ಲಿ ಕುಮಾರಸ್ವಾಮಿ ಕೂಡ ಒಬ್ಬರು. ಸರ್ಕಾರವನ್ನು ತಪ್ಪು ದಾರಿಯಿಂದ ಸರಿದಾರಿಗೆ ತರುವ ಕೆಲಸ ಮಾಡಲಿ. ಆದರೆ ಉತ್ತಮ ಕೆಲಸ ಮಾಡುತ್ತಿರುವ ನಾಯಕರನ್ನು ಪದೇ ಪದೇ ಪೇಚಿಗೆ ಸಿಲುಕಿಸುವ ಯತ್ನ ಮಾಡುವುದು ಒಳಿತಲ್ಲ. ಸರ್ಕಾರಕ್ಕೆ ಕೆಲಸ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಹಗರಣ, ಭ್ರಷ್ಟಾಚಾರ ನಡೆದಿದ್ದರೆ ಬಹಿರಂಗ ಮಾಡುವ ಮೂಲಕ ತಾನೂ ಜನಪರ ನಾಯಕ ಎನ್ನುವುದನ್ನು ಸಾಧಿಸಲಿ. ಅದನ್ನು ಬಿಟ್ಟು ಜೇಬಿನಲ್ಲಿದೆ.. ಬುಟ್ಟಿಯಲ್ಲಿದೆ ಎನ್ನುತ್ತ ಕಾಲಹರಣ ಮಾಡುವುದು ಸರ್ಕಾರದ ನಾಗಾಲೋಟಕ್ಕೆ ತಡೆ ಹಾಕುವ ಉದ್ದೇಶ ಎನ್ನುವುದು ಖಚಿತ ಆಗುತ್ತದೆ. ಪೆನ್‌ ಡ್ರೈವ್‌ನಲ್ಲಿ ಏನೂ ಇರಲಿಲ್ಲ ಎನ್ನುವ ಮಾತೂ ಇದೆ. ಇದಕ್ಕೆ ಕುಮಾರಸ್ವಾಮಿ ಅವರೇ ಉತ್ತರ ಕೊಡಬೇಕಿದೆ.

ಕೃಷ್ಣಮಣಿ

Tags: BJPcmsiddaramiahDKShivakumarHDKHdKumaraswamyJanata Dal SecularJDS
Previous Post

ಏಕರೂಪ ನಾಗರಿಕ ಸಂಹಿತೆ- ದ್ವಿಪತ್ನಿತ್ವದ ಸವಾಲುಗಳು

Next Post

ಬಾಯಲ್ಲಿ ಬೆಣ್ಣೆ.. ಬಗಲಲ್ಲಿ ದೊಣ್ಣೆ.. ಬಿಜೆಪಿಗೆ ಈ ಮಾತು ಅನ್ವರ್ಥ..

Related Posts

Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
0

ವಿಶೇಷ ಆಂಬ್ಯುಲೆನ್ಸ್'ಗಳು ರಸ್ತೆ ಅಪಘಾತದ ಸ್ಥಳಗಳನ್ನು ನಿಮಿಷಗಳಲ್ಲಿ ತಲುಪುವಂತೆ ನೋಡಿಕೊಳ್ಳುವ ಮಹತ್ವಾಕಾಂಕ್ಷೆಯ ಯೋಜನೆಯನ್ನ ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...

Read moreDetails

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ಹೊರಟವರೂ ನೀವೇ.. ಕಾಡುವವರೂ ನೀವೇ..!

ಹೊರಟವರೂ ನೀವೇ.. ಕಾಡುವವರೂ ನೀವೇ..!

December 17, 2025

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025
Next Post
ಬಿಜೆಪಿ ಸೋಲಿಸಲು ವಿಪಕ್ಷಗಳ ಒಗ್ಗಟ್ಟು; ಕೇಸರಿಪಡೆ ವಿರುದ್ಧ ಸಮರಕ್ಕೆ ಸನ್ನದ್ಧವಾದ 16 ಪಕ್ಷಗಳು

ಬಾಯಲ್ಲಿ ಬೆಣ್ಣೆ.. ಬಗಲಲ್ಲಿ ದೊಣ್ಣೆ.. ಬಿಜೆಪಿಗೆ ಈ ಮಾತು ಅನ್ವರ್ಥ..

Please login to join discussion

Recent News

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada