• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?

ಪ್ರತಿಧ್ವನಿ by ಪ್ರತಿಧ್ವನಿ
May 18, 2022
in ಕರ್ನಾಟಕ, ರಾಜಕೀಯ
0
ದಲಿತ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಿಲ್ಲವಾ? ಬರೀ ಚರ್ಚೆಗಷ್ಟೇ ಸೀಮಿತನಾ?
Share on WhatsAppShare on FacebookShare on Telegram

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ದಲಿತ ಮುಖ್ಯಮಂತ್ರಿ ಕನಸು ಕಾಣುವವನು ಹುಚ್ಚ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದರು.

ADVERTISEMENT

ಇದೀಗ ರಾಜ್ಯ ರಾಜಕಾರಣದಲ್ಲಿ ಅವರ ಹೇಳಿಕೆ ತೀವ್ರ ಸಂಚಲನ ಸೃಷ್ಟಿಸಿದ್ದು 2023ರ ರಾಜ್ಯ ವಿಧಾನಸಭೆ ಚುನಾವಣೆಗು ಮುನ್ನ ದಲಿತ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲದೆ ಸಚಿವ ಸಂಪುಟ ವಿಸ್ತರಣೆ ಮೇಲೂ ಕೂಡ ಈ ವಿಚಾರ ಪರಿಣಾಮ ಬೀರಬಹುದು ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಬಿಜೆಪಿಯಲ್ಲಿ ಈಗಾಗಲೇ ಮುಖ್ಯಮಂತ್ರಿಯಿದ್ದು ಬೇರೆಯವರನ್ನು ಬಿಂಬಿಸಲು ಸಾಧ್ಯವಿಲ್ಲ. ಕಾಂಗ್ರೆಸ್ನಲ್ಲಿ ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಹಾಗು ಸಿದ್ದರಾಮಯ್ಯ ನಡುವೆ ಪೈಪೋಟಿ ಏರ್ಪಟ್ಟಿದ್ದು ಬೇರೆಯವರಿಗೆ ಅವಕಾಶ ಸಿಗುವುದು ಕಷ್ಟಸಾಧ್ಯ. ಜೆಡಿಎಸ್ನಲ್ಲಿ ಪಕ್ಷದ ಮೇಲೆ ಕಟುಟಂಬದ ಬಿಗಿ ಹಿಡತವಿದ್ದು ಒಂದು ವೇಳೆ ಅವಕಾಶ ನೀಡಿದರೆ ಅಲ್ಲಿ ಸಾಧ್ಯವಾಗುತ್ತದೆ.

ಒಂದು ವೇಳೆ ದಲಿತ ಸಮುದಾಯವನ್ನು ಎರಡನೇ ಸಾಲಿನ ನಾಯಕತ್ವದಲ್ಲಿ ತೋರಿಸಲು ಮೂರು ಪಕ್ಷಗಳು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳುತ್ತವೆ. ಏಕೆಂದರೆ ಸಾಂಪ್ರಾದಾಯಿಕವಾಗಿ ಬಿಜೆಪಿ ಪಕ್ಷ ಲಿಂಗಾಯತ ಸಮುದಾಯದ ಮೇಲೆ ಹೆಚ್ಚು ಅವಲಂಬಿತವಾಗಿದೆ ಎಂದು ತಿಳಿದು ಬಂದಿದೆ. ಜೆಡಿಎಸ್ ಪಕ್ಷವನ್ನ ಒಕ್ಕಲಿಗರ ಪಕ್ಷವಾಗಿ ನೋಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ವಿಚಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆ ಹಾಗು ಡಾ.ಜಿ.ಪರಮೇಶ್ವರ್ ಅವಕಾಶ ವಂಚಿತರು ಎಂದು ಹೇಳಬಹುದು.

ಈ ಕುರಿತು ಮಾತನಾಡಿರುವ ಹನ್ನೂರು ಶಾಸಕ ಮಹೇಶ್ ಬಿಜೆಪಿಯಲ್ಲಿ ಗೋವಿಂದ ಖಾರಜೋಳ ಹೊರತುಪಡಿಸಿದರೆ ಬೇರೆಲ್ಲ ಉಳಿದ ನಾಯಕರು ಇನ್ನಷ್ಟೆ ಮೊಳಕೆ ಹೊಡೆಯುತ್ತಿದ್ದಾರೆ. ಜೆಡಿಎಸ್ನಲ್ಲಿ ದಲಿತ ನಾಯಕತ್ವ ಹೊರಹೊಮ್ಮಬೇಕಾಗಿದೆ. ಕಾಂಗ್ರೆಸ್ ವಿಚಾರಕ್ಕೆ ಬಂದರೆ ದಲಿತರನ್ನು ಸೈಡ್ಲೈನ್ ಮಾಡಲಾಗಿದೆ ಎಂಬ ಆರೋಪ ಈಗಾಗಲೇ ವ್ಯಾಪಕವಾಗಿ ಕೇಳಿ ಬಂದಿದೆ ಎಂದು ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುಮ ಖರ್ಗೆರವರು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದಾರೆ. ದಲಿತ ನಾಯಕತ್ವ ವಿಚಾರಕ್ಕೆ ಬಂದರೆ ಕಾಂಗ್ರೆಸ್ ತನ್ನ ಬದ್ದತೆಯನ್ನ ತೋರಿದೆ. ಬಿಜೆಪಿಯಲ್ಲಿ ಗೋವಿಂದ ಖಾರಜೋಳ ಒಬ್ಬರನ್ನು ಬಿಟ್ಟರೆ ಬೇರೆ ಯಾವ ದಲಿತ ನಾಯಕರಿಗು ಅವಕಾಶ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ನಮ್ಮ ಮೇಲಿದೆ ಬಿಜೆಪಿ ದಲಿತ ನಾಯಕರನ್ನು ಬದಿಗೊತ್ತಿದ್ದರೆ ರಾಮನಾಥ್ ಕೋವಿಂದರನ್ನು ರಾಷ್ಟ್ರಪತಿಯನ್ನಾಗಿ ಮಾಡುತ್ತಿರಲಿಲ್ಲ ಎಂದು ಸಚಿವ ಎಸ್ ಅಂಗಾರ ಹೇಳಿದ್ದಾರೆ.

ಇತ್ತೀಚಿಗೆ ನಡೆದ ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ 2023ರಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಮುಖ್ಯಮಂತ್ರಿಯನ್ನು ಮಾಡಲಾಗುವುದು ಎಂದು ಹೇಳಿದ್ದರು.

Tags: BJPCongress PartyWhy Karnataka wont get a Dalit chief ministerಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಳೆಯೇ SSLC ಫಲಿತಾಂಶ : ಇಲ್ಲಿದೆ ವೆಬ್ಸೈಟ್ಗಳ ಮಾಹಿತಿ!

Next Post

ಪಿಯುಸಿ ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಗಸ್ಟ್ ಮೊದಲನೇ ವಾರದಿಂದ ಶಾಲೆ ಆರಂಭ: ಶಿಕ್ಷಣ ಇಲಾಖೆ

ಪಿಯುಸಿ ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada