• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಲ್ಲ: ಚರ್ಚೆ ಏಕೆ?

Any Mind by Any Mind
March 10, 2024
in ರಾಜಕೀಯ, ವಿಶೇಷ
0
ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೀತಿದೆ ಎಂಬುದಕ್ಕೆ ಬಹಳಷ್ಟು ಘಟನೆ ಸಾಕ್ಷಿಯಾಗಿದೆ: ಪ್ರತಾಪ್‌ ಸಿಂಹ ವಾಗ್ದಾಳಿ
Share on WhatsAppShare on FacebookShare on Telegram

ಮೈಸೂರು-ಕೊಡಗು (Musuru-Kodagu) ಹಾಲಿ ಸಂಸದ ಪ್ರತಾಪ್ ಸಿಂಹ(Prathap Simha) ರಿಗೆ ಟಿಕೆಟ್(Ticket) ಸಿಗಲ್ಲ ಎಂಬ ಚರ್ಚೆ ವ್ಯಾಪಕವಾಗಿ ಹಬ್ಬಿದ್ದು, ಅಷ್ಟಕ್ಕೂ ಅವರಿಗೆ ಟಿಕೆಟ್ ನಿರಾಕರಣೆ ಮಾಡುತ್ತಾರಾ? ಅವರಿಗೆ ಟಿಕೆಟ್ ನಿರಾಕರಣೆಗೆ ಕಾರಣಗಳಾದ್ರೂ ಏನು? ಎರಡು ಅವಧಿಯಲ್ಲೂ ಆ್ಯಕ್ಟೀವ್ (Active) ಸಂಸದರಾಗಿ ಕಾರ್ಯನಿರ್ವಹಣೆ ಮಾಡಿರುವ ಪ್ರತಾಪ್ ಸಿಂಹರಿಗೆ ಈಗ ಈ ಪರಿ ವಿರೋಧವೇಕೆ? ಇದೇನು ಆಡ್ಜಟ್‌ಮೆಂಟ್ (Adjustment) ರಾಜಕಾರಣವೇ? ಅಥವಾ ತಾವೇ ಮಾಡಿಕೊಂಡಿರುವ ಎಡವಟ್ಟೇ? ಇಂದು ಸಂಜೆ ಈ ಬಗ್ಗೆ ವಿಸ್ತೃತವಾದ ವಿಚಾರ ಪ್ರತಿಧ್ವನಿ ಹೇಳಲು ಮುಂದಾಗಿದೆ‌.

ADVERTISEMENT

*ಪ್ರತಾಪ್ ಸಿಂಹ‌ಗೆ ಟಿಕೆಟ್ ನೀಡಲು ಹೈಕಮಾಂಡ್ (High Command) ನಾಯಕರಲ್ಲಿ ಇಲ್ಲ ಸಮ್ಮತಿ!*

ಇತ್ತೀಚೆಗೆ ದೆಹಲಿ (Delhi) ಯಲ್ಲಿ ನೂತನ ಸಂಸತ್ ಭವನ ಲೋಕಾರ್ಪಣೆ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಸಂಸತ್ ಭವನ ಲೋಕಾರ್ಪಣೆ ಆದ ಬಳಿಕ ನಡೆದ ಸಂಸತ್ ಅಧಿವೇಶನದಲ್ಲಿ, ಸದನ ನೋಡಲು ಬರುವವರಿಗೆ ಪಾಸು (Passes) ಗಳನ್ನು ಸಂಸದರು ನೀಡುತ್ತಾರೆ. ಅಂತಹುದ್ದೇ ವ್ಯವಸ್ಥೆಯನ್ನು ಹಾಲಿ ಮೈಸೂರು- ಕೊಡಗು (Mysuru- Kodagu) ಸಂಸದ ಪ್ರತಾಪ್ ಸಿಂಹ (Prathap Simha) ಮಾಡಿದ್ರು. ಅವರ ಕ್ಷೇತ್ರದ ಮತದಾರರಿಗೆ ಸದನ ನೋಡಲು ಪಾಸುಗಳನ್ನು ಕೊಟ್ಟಿದ್ರು. ಅದೇ ಪಾಸುಗಳನ್ನು ಪಡೆದಿದ್ದವರಲ್ಲಿ ಒಬ್ಬ ಸಂಸತ್ ಒಳಗೆ ಸದನ ನಡೆಯುತ್ತಿರುವಾಗಲೇ ಸ್ಮೋಕ್ ಬಾಂಬ್ (Smoke Bomb) ಸ್ಫೋಟಿಸಿದ್ದ‌. ಈ ವಿಚಾರ ರಾಷ್ಟ್ರೀಯ (National)  ಹಾಗೂ ಅಂತರಾಷ್ಟ್ರೀಯ (International) ಮಟ್ಟದಲ್ಲಿ ಚರ್ಚೆಯಾಗಿದ್ದು, ಪಕ್ಷಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ಮುಜುಗರ ತಂದಿತ್ತು. ಇನ್ನು ಈ ವಿಚಾರ ಎಷ್ಟರಮಟ್ಟಿಗೆ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡಿತ್ತು‌ ಅಂದರೆ, ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha) ಅವರೇ ರಾಜೀನಾಮೆ ನೀಡಬೇಕೆಂಬ ಮಟ್ಟದವರೆಗೂ ಹೋಗಿತ್ತು. 

ಇದೊಂದು ವಿಚಾರ ಆಗಿದ್ರೆ ಪರವಾಗಿಲ್ಲ. ಇತ್ತ ಪ್ರತಾಪ್ ಸಿಂಹ ತಾವೇ ಪ್ರತಿನಿಧಿಸುವ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ ಹಳೆಯ ಮೈಸೂರು ಭಾಗದಲ್ಲಿ ಕಳೆದ ರಾಜ್ಯವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸೀಟುಗಳನ್ನು ಪಕ್ಷಕ್ಕೆ ತಂದುಕೊಟ್ಟಿಲ್ಲ ಎಂಬ ಚರ್ಚೆಗಳು ಆಗುತ್ತಿದ್ದು,  ಸಂಸದರ ಕಾರ್ಯವೈಖರಿ ಮೇಲೆ ಪರಿಣಾಮ ಬೀರಿದೆ. 

ಹೀಗೆ ಎರಡು ವಿಚಾರಗಳಲ್ಲಿ ಸಂಸದ ಪ್ರತಾಪ್ ಸಿಂಹ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಸದ್ಯ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ 195 ಮಂದಿಗೆ ಟಿಕೆಟ್ ಘೋಷಿಸಿದೆ. ಇದರಲ್ಲಿ ಹಾಲಿ 34 ಸಂಸದರಿಗೆ ಟಿಕೆಟ್ ನಿರಾಕರಿಸಿದ್ದು, ಪ್ರತಾಪ್ ಸಿಂಹರಿಗೂ ಇದೇ ಮಾನದಂಡಗಳ ಆಧಾರದಡಿಯಲ್ಲಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಎನ್ನಲಾಗಿದೆ.

#PrathapSimha #mpMysore #bjpkarnataka #MysoreKodagu #Mpelection

Previous Post

ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

Next Post

ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

Related Posts

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಇತ್ತೀಚೆಗೆ ಶಿಡ್ಲಘಟ್ಟದ(Sidlaghatta) ನೆಹರೂ ಮೈದಾನದಲ್ಲಿ ನಡೆದ ‘ಕಲ್ಟ್’(Cult )ಸಿನಿಮಾದ ಈವೆಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ಪ್ರಚಾರಕ್ಕಾಗಿ ಕೋಟೆ ವೃತ್ತದ ಸಮೀಪ ದಾರಿಗೆ ಅಡ್ಡಲಾಗಿ...

Read moreDetails
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
Next Post
ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

ಅಡಕತ್ತರಿಯಲ್ಲಿ ಸಿಲುಕಿದ್ರಾ ಬಸವರಾಜ ಬೊಮ್ಮಾಯಿ?

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada