• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ನಿಖಿಲ್‌ ಸೋಲಿಗೆ ಯಾರು ಕಾರಣ? ಮಗನ ರಾಜಕೀಯ ಭವಿಷ್ಯಕ್ಕೆ ತಾಯಿ ಕೊಳ್ಳಿ.!

ಪ್ರತಿಧ್ವನಿ by ಪ್ರತಿಧ್ವನಿ
May 14, 2023
in ಅಂಕಣ, ರಾಜಕೀಯ
0
ನಿಖಿಲ್‌ ಸೋಲಿಗೆ ಯಾರು ಕಾರಣ? ಮಗನ ರಾಜಕೀಯ ಭವಿಷ್ಯಕ್ಕೆ ತಾಯಿ ಕೊಳ್ಳಿ.!
Share on WhatsAppShare on FacebookShare on Telegram

 ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಹಲವು ಅಚ್ಚರಿ ಫಲಿತಾಂಶಗಳು ಬಂದಿವೆ. ಆ ಮೂಲಕ ಮತದಾರನ ಆಯ್ಕೆಗಳ ಬಗ್ಗೆ ಸುಲಭದ ಲೆಕ್ಕಾಚಾರ ಹಾಕುವ ಹಾಗಿಲ್ಲ ಎಂಬ ಸಂದೇಶ ಮತ್ತೆ ರವಾನೆಯಾಗಿದೆ.  ಜೆಡಿಎಸ್ ಭದ್ರಕೋಟೆಯಾದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿರುವುದು ಜೆಡಿಎಸ್‌ಗೆ ಅನಿರೀಕ್ಷಿತವಾಗಿದೆ.

ADVERTISEMENT

ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತು, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿರುವುದು ಜೆಡಿಎಸ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ. ಒಂದರ್ಥದಲ್ಲಿ ಗೆಲುವಿನ ಬಗ್ಗೆ ಪಕ್ಷಕ್ಕಿದ ಅತಿಯಾದ ಆತ್ಮವಿಶ್ವಾಸವೇ ಪಕ್ಷಕ್ಕೆ ಮುಳ್ಳಾಗಿದೆ. ಮೂಲಗಳ ಪ್ರಕಾರ ಕಾಂಗ್ರೆಸ್‌ ಅಭ್ಯರ್ಥಿ ಗೆಲುವನ್ನು ಸ್ವತಃ ಕಾಂಗ್ರೆಸಿಗರೂ ನಿರೀಕ್ಷಿಸಿರಲಿಲ್ಲ. ಹಾಗಾಗಿ, ಗೆಲುವಿನ ಕ್ಷೇತ್ರ ಎಂದು ಜೆಡಿಎಸ್‌ ರಾಮನಗರವನ್ನು ನಿರ್ಲಕ್ಷ್ಯ ಮಾಡಿತ್ತು ಎನ್ನಲಾಗಿದೆ.  

ಅದೂ ಅಲ್ಲದೆ, ಈ ಬಾರಿ ಕಾಂಗ್ರೆಸ್‌ ಗೆದ್ದರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ಒಕ್ಕಲಿಗ ಸಮುದಾಯದ ಮತದಾರರು ಕಾಂಗ್ರೆಸ್‌ ಕಡೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ, ಜೆಡಿಎಸ್‌ ನೀರಸ ಫಲಿತಾಂಶ ನೀಡಿದೆ. ಇನ್ನು, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳು ಸಹ ಪ್ರಮುಖ ಪಾತ್ರ ವಹಿಸಿವೆ. ಅದರಲ್ಲೂ ಈ ಬೆಲೆ ಏರಿಕೆಯ ಸಮಯದಲ್ಲಿ ಉಚಿತ ವಿದ್ಯುತ್‌, ಧನಸಹಾಯ ಮೊದಲಾದ ಅಂಶಗಳು ಮತದಾರರನ್ನು ಕಾಂಗ್ರೆಸ್‌ ಸೆಳೆಯಲು ಸಹಾಯ ಮಾಡಿದೆ.

ಕಾಂಗ್ರೆಸ್ ಪಾಲಾಗಿರುವ ದಲಿತ, ಕುರುಬ ಮತ್ತು ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಂಡಿರುವುದು ಮತ್ತೊಂದು ಕಾರಣ. ಸಿದ್ದರಾಮಯ್ಯ ಕಾರಣಕ್ಕೆ ಕುರುಬ, ದಲಿತ, ಮುಸ್ಲಿಂ ಮತಗಳು ಕ್ರೋಢೀಕರಣಗೊಂಡಿದೆ. ಕಾಂಗ್ರೆಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವೂ ಹೊಸ ಭರವಸೆಯನ್ನು ಮೂಡಿಸಿದೆ.

ರಾಮನಗರದ ಜೆಡಿಎಸ್‌ ಕಾರ್ಯಕರ್ತರಿಗೆ ನಿಕಟಪೂರ್ವ ಶಾಸಕಿ ಅನಿತಾ ಕುಮಾರಸ್ವಾಮಿಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊಂದಿರುವುದೂ ನಿಖಿಲ್ ಸೋಲಿಗೆ ಕಾರಣ ಎಂಬ ಮಾತುಗಳೂ ಕೇಳೀ ಬಂದಿದೆ.  ಮಗನ ರಾಜಕೀಯ ಭವಿಷ್ಯವನ್ನು ರೂಪಿಸಲು ತಮ್ಮ ಸ್ಥಾನವನ್ನು ತ್ಯಾಗ ಮಾಡಿದರಾದರೂ ಅದು ಮಗನಿಗೆ ನಷ್ಟವನ್ನೇ ತಂದೊಡ್ಡಿದೆ. ಕ್ಷೇತ್ರದಲ್ಲಿ ಅನಿತಾ ಅವರು ಏನೂ ಮಾಡಿಲ್ಲ ಮತ್ತು ಮತದಾರರಿಗೆ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ ಎಂದು ಆರೋಪವೂ ಇತ್ತು, ಹಾಗಾಗಿ, ನಿಖಿಲ್‌ ಗೆ ಮತಹಾಕದೆ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ. ಅದೇ ವೇಳೆ ಇಕ್ಬಾಲ್‌ ಹುಸೇನ್‌ ಕ್ಷೇತ್ರದಲ್ಲಿ ಹಲವು ತಿಂಗಳ ಮೊದಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿದ್ದರು, ಇದೂ ಅವರಿಗೆ ವರದಾನವಾಗಿದೆ

ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಮಾಡಿ ತಮ್ಮ ಕ್ಷೇತ್ರಗಳತ್ತ ಗಮನ ಹರಿಸುವಿಕೆ ಕಡಿಮೆ ಮಾಡಿರುವುದು ಕೂಡಾ ರಾಮನಗರದಲ್ಲಿ ಎಫೆಕ್ಟ್‌ ಬಿದ್ದಿದೆ.

Tags: anitha kumaraswamyJDSNikhil Kumaraswamyramanagara
Previous Post

ʻನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆʼ: ನಿಖಿಲ್‌ ಕುಮಾರಸ್ವಾಮಿ

Next Post

ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ
Top Story

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

by ಪ್ರತಿಧ್ವನಿ
February 15, 2026
0

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಅವರೇ ನಮ್ಮ ಹೈಕಮಾಂಡ್ ಎನ್ನುವ ಮೂಲಕ ಶಾಸಕ ಗಣಿಗ ರವಿಕುಮಾರ್(MLA Ganiga Ravi Kumar) ವ್ಯಂಗ್ಯವಾಡಿದ್ದಾರೆ....

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
Next Post
ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

ಕನ್ನಡಕ್ಕೆ ಮತ್ತೊಂದು ಕಾವ್ಯಪ್ರತಿಭೆ – ವಿಶಾಲ್​ ಮ್ಯಾಸರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada