• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಅಭಿವೃದ್ಧಿ ಮೇಲೆ ರಾಜಕೀಯ ಮಾಡೋದೆ ಇಲ್ವಲ್ಲ ಯಾಕೆ..? ಏನಿದು ಸ್ಟ್ರಾಟಜಿ..?

ಕೃಷ್ಣ ಮಣಿ by ಕೃಷ್ಣ ಮಣಿ
June 28, 2023
in ಅಂಕಣ, ಅಭಿಮತ
0
ಅಭಿವೃದ್ಧಿ ಮೇಲೆ ರಾಜಕೀಯ ಮಾಡೋದೆ ಇಲ್ವಲ್ಲ ಯಾಕೆ..? ಏನಿದು ಸ್ಟ್ರಾಟಜಿ..?
Share on WhatsAppShare on FacebookShare on Telegram

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಬಿಜೆಪಿ ವಿರುದ್ಧ ಸಮರ ಸಾರಿದ್ದವು. ಅಭಿವೃದ್ಧಿ ಮೇಲೆ ಚುನಾವಣೆ ಮಾಡ್ಬೇಕು, ಅದನ್ನು ಬಿಟ್ಟು ಭಾವನಾತ್ಮಕ ವಿಚಾರಗಳ ಮೇಲೆ ಚುನಾವಣೆ ನಡೆಸುವುದು ಸರಿಯಲ್ಲ ಎನ್ನುವ ಮಾತನ್ನು ಉಚ್ಚರಿಸಿದ್ದವು. ಆದರೆ ಬಿಜೆಪಿ ನಾಯಕರು ಮಾತ್ರ ಚರಂಡಿ ಆಗಿಲ್ಲ, ರಸ್ತೆ ಆಗಿಲ್ಲ ಅಂತಾ ಮತ ಹಾಕ್ಬೇಡಿ. ಟಿಪ್ಪು ವರ್ಸಸ್‌ ಸಾವರ್ಕರ್‌. ಮತ ಹಾಕುವಾಗ ಹಿಜಾಬ್‌‌, ಲವ್‌ ಜಿಹಾದ್‌ ನಿಮ್ಮ ಮನಸ್ಸಿನಲ್ಲಿರಲಿ ಎಂದು ಬಹಿರಂಗ ಸಭೆಯಲ್ಲೇ ಹೇಳಿಕೊಂಡಿದ್ದರು. ಆದರೆ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌‌ಗೆ ಅಭೂತಪೂರ್ವ ಜಯವನ್ನು ನೀಡಿದ್ದರು. ಟಿಪ್ಪು, ಹಿಜಾಬ್, ಲವ್‌ ಜಿಹಾದ್‌, ಉರಿಗೌಡ, ನಂಜೇಗೌಡ ಕೂಡ ಬಿಜೆಪಿ ಕೈ ಹಿಡಿಯಲಿಲ್ಲ. ಆದರೆ ಇದೀಗ ಕೇಂದ್ರ ಸರ್ಕಾರ ಭಾವನಾತ್ಮಕ ವಿಚಾರಗಳ ಮೂಲಕ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಗ್ಯಾರಂಟಿ ಘೋಷಣೆಗೆ ಮೋದಿ ಗ್ಯಾರಂಟಿ ಕೌಂಟರ್‌..!

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರ ಹಿಡಿದಿರುವ ಕರ್ನಾಟಕದ ಮೇಲೆ ಮೋದಿಗೆ ಕಿಂಚಿತ್ತು ಜಾಸ್ತಿನೇ ಕೋಪ ಇದೆ ಎನ್ನುವುದು ಗೊತ್ತಿರುವ ಸಂಗತಿ. ಆದರೆ ಲೋಕಾಸಭಾ ಚುನಾವಣಾ ಸಮರಕ್ಕೆ ಸಜ್ಜಾಗುತ್ತಿರುವ ನರೇಂದ್ರ ಮೋದಿ ದೇಶದ ಜನತೆಗೆ ಗ್ಯಾರಂಟಿ ಒಂದನ್ನು ಘೋಷಿಸಿದ್ದಾರೆ. ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿರುವ ನರೇಂದ್ರ ಮೋದಿ, ವಿಪಕ್ಷಗಳು ಕೊಡುತ್ತಿರುವ ಒಂದೇ ಒಂದು ಗ್ಯಾರಂಟಿ ಅದು ಭ್ರಷ್ಟಾಚಾರದ ಗ್ಯಾರಂಟಿ. ಅವರದ್ದು ಒಂದು ಗ್ಯಾರಂಟಿ ಆದ್ರೆ, ಈ ನರೇಂದ್ರ ಮೋದಿಯದ್ದೂ ಕೂಡ ಒಂದು ಗ್ಯಾರಂಟಿ ಇದೆ. ಅದೇನಂದರೆ ಪ್ರತಿ ಹಗರಣದ ವಿರುದ್ಧ ತನಿಖೆ ನಡೆಸುವುದೇ ನನ್ನ ಗ್ಯಾರಂಟಿ ಎಂದಿದ್ದಾರೆ.

ಕುಟುಂಬ ರಾಜಕಾರಣ ಎಳೆದು ತಂದ ಮೋದಿ..!

ವಿಪಕ್ಷಗಳಿಗೆ ಮತ ಕೊಟ್ಟರೆ ಮಕ್ಕಳ ಅಭಿವೃದ್ಧಿ ಆಗುತ್ತದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಗಾಂಧಿ ಕುಟುಂಬದ ಮಗ-ಮಗಳು ಅಭಿವೃದ್ಧಿ ಆಗಬೇಕು ಎಂದರೆ ಕಾಂಗ್ರೆಸ್‌ಗೆ ಮತ ಹಾಕಿ. ಮುಲಾಯಂ ಸಿಂಗ್ ಮಗನ ಅಭಿವೃದ್ಧಿ ಆಗಬೇಕಿದ್ದರೆ ಸಮಾಜವಾದಿ ಪಕ್ಷಕ್ಕೆ ನಿಮ್ಮ ಮತ ನೀಡಿ. ಲಾಲು ಪ್ರಸಾದ್‌ ಪರಿವಾರದ ಮಕ್ಕಳ ಅಭಿವೃದ್ಧಿ ಆಗಬೇಕಿದ್ದರೆ ಆರ್‌ಜೆಡಿಗೆ ಪಕ್ಷಕ್ಕೆ ವೋಟ್ ಹಾಕಿ. ಶರದ್ ಪವಾರ್‌‌ ಮಗಳ ಅಭಿವೃದ್ಧಿ ಆಗಬೇಕಿದ್ರೆ ಎನ್‌ಸಿಪಿಗೆ ಮತ ಕೊಡಿ. ಆದರೆ ನಿಮ್ಮ ಮಕ್ಕಳ ಅಭಿವೃದ್ಧಿ ಆಗಬೇಕಿದ್ದರೆ ಬಿಜೆಪಿಗೆ ಮತ ಕೊಡಿ ಎಂದು ಮನವಿ ಮಾಡಿದ್ದಾರೆ. ಅಂದರೆ ಈ ಬಾರಿ ವಿರೋಧ ಪಕ್ಷಗಳು ಒಗ್ಗಟ್ಟಾಗುತ್ತಿರುವ ಪರಿಣಾಮ ಕುಟುಂಬ ರಾಜಕಾರಣ ಎಳೆಯುವ ಪ್ರಯತ್ನ ಮಾಡಿದ್ದಾರೆ.

ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಜಾರಿ

ಏಕರೂಪ ಕಾನೂನು ಜಾರಿ ಬಗ್ಗೆ ಅಗ್ಗಿಂದಾಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಆದರೆ ಇನ್ನೂ ಕೂಡ ಭಾರತದ ಏಕರೂಪ ಕಾನೂನು ಜಾರಿ ಆಗಿಲ್ಲ. ಆದರೆ ಇದೀಗ ಮತ್ತೆ ಲೋಕಸಭಾ ಚುನಾವಣೆಗೆ ಏಕರೂಪ ಕಾನೂನು ವಿಷಯವಾಗುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಏಕರೂಪ ಕಾನೂನು ಬಗ್ಗೆ ಸುಳಿವು ಕೊಟ್ಟಿದ್ದಾರೆ. ಪಾಕಿಸ್ತಾನಕ್ಕೆ ಬೇಡದ ತಲಾಕ್ ನಮಗ್ಯಾಕೆ ಬೇಕು..? ಎಂದಿರುವ ಪ್ರಧಾನಿ, ಈಜಿಪ್ಟ್‌‌ನಲ್ಲಿ 80 ರಿಂದ 90 ವರ್ಷದ ಹಿಂದೆಯೇ ತಲಾಕ್ ಬ್ಯಾನ್ ಮಾಡಿದ್ದರು. ತ್ರಿವಳಿ ತಲಾಕ್ ಇಸ್ಲಾಂನ ಪ್ರಮುಖ ಅಂಗವಾಗಿದ್ದರೆ ಪಾಕಿಸ್ತಾನದಲ್ಲಿ ಯಾಕೆ ಜಾರಿಯಲ್ಲಿಲ್ಲ..? ಇಂಡೋನೇಷ್ಯಾದಲ್ಲಿ ಯಾಕೆ ಇಲ್ಲ? ಮುಸ್ಲಿಂ ದೇಶಗಳಾದ ಖತಾರ್, ಜೋರ್ಡಾನ್, ಸಿರಿಯಾ, ಬಾಂಗ್ಲಾದೇಶದಲ್ಲಿ ತಲಾಕ್ ಯಾಕಿಲ್ಲ..? ಎಂದು ಪ್ರಶ್ನಿಸಿದ್ದಾರೆ. ಭಾರತದ ಸಂವಿಧಾನದಲ್ಲಿ ಸಮಾನ ನಾಗರಿಕ ಹಕ್ಕಿನ ಬಗ್ಗೆ ಉಲ್ಲೇಖಿಸಲಾಗಿದೆ. ಆದರೂ ಕೆಲವರು ನಮ್ಮ ಮೇಲೆ ಆರೋಪ ಮಾಡುತ್ತಾರೆ. ಸಮಾನ ನಾಗರಿಕ ಹಕ್ಕು ಜಾರಿ ಮಾಡಿ ಅಂತ ಸುಪ್ರೀಂ ಕೋರ್ಟ್‌ ಕೂಡಾ ಹೇಳುತ್ತಿದೆ ಎಂದಿದ್ದಾರೆ.

ಕಳೆದ 9 ವರ್ಷ ಮಾಡಲಿಲ್ಲ, ಚುನಾವಣೆ ವೇಳೆ ಯಾಕೆ..?

ಸಮಾನ ನಾಗರಿಕ ಕಾನೂನು ಜಾರಿ ಮಾಡುವುದಿದ್ದರೆ ಲೋಕಸಭೆ, ರಾಜ್ಯಸಭೆಯಲ್ಲಿ ಭಾರೀ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ಕಾನೂನು ಜಾರಿ ಮಾಡಬೇಕು. ಅದನ್ನು ಬಿಟ್ಟು ಚುನಾವಣೆ ವೇಳೆ ಪ್ರಸ್ತಾಪ ಮಾಡಿ ಲಾಭ ಪಡೆಯುವುದು ಯಾಕೆ..? ಎನ್ನುವ ಮಾತುಗಳು ಕೇಳಿ ಬಂದಿವೆ. ಇನ್ನು ಈ ಹಿಂದಿನ ಚುನಾವಣೆಯಲ್ಲಿ ಕಪ್ಪು ಹಣ ವಾಪಸ್‌ ತರುವುದು ಬೇಡ್ವಾ..? ನಿಮ್ಮ ಖಾತೆಗೆ 15 ಲಕ್ಷ ಬರೋದು ಬೇಡ್ವಾ ಎಂದು ಪ್ರಶ್ನೆ ಮಾಡಿದ್ದ ನರೇಂದ್ರ ಮೋದಿ, ನಿಮ್ಮ ಖಾತೆಗೆ 15 ಲಕ್ಷ ಬರಬೇಕು ಅಂದ್ರೆ ಬಿಜೆಪಿಗೆ ಮತ ನೀಡಿ ಎಂದಿದ್ದರು. ಆ ಬಳಿಕ ಪುಲ್ವಾಮಾ ದಾಳಿ, ಸೈನಿಕರ ಸಾವು ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದೂ ಆಯ್ತು. ಇದೀಗ ಮತ್ತೆ ಭಾವನಾತ್ಮಕ ವಿಚಾರ ಏಕರೂಪ ನಾಗರಿಕ ಕಾನೂನು ಅಸ್ತ್ರ ಸಜ್ಜಾಗಿದೆ. ಆದರೆ ಜನ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡದ ಭಾರತೀಯ ಜನತಾ ಪಾರ್ಟಿಗೆ ಗುನ್ನಾ ಕೊಡ್ತಾರಾ..? ಮತ ಕೊಡ್ತಾರಾ ಕಾದು ನೋಡ್ಬೇಕು.

Tags: BJPCongress Partyನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

B.L ಸಂತೋಷ್‌‌ ಬಿಜೆಪಿ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಿದ್ರಾ..? 10KG ಅಕ್ಕಿ ನಿಲ್ಲಿಸಿ, ಮೀಸಲಾತಿ ಜಾರಿ ಮಾಡಿದ್ಯಾರು..?

Next Post

KSRTC-BMTC ಗೆ ನಷ್ಟವಾಗುತ್ತಿಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ.!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
KSRTC-BMTC ಗೆ ನಷ್ಟವಾಗುತ್ತಿಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ.!

KSRTC-BMTC ಗೆ ನಷ್ಟವಾಗುತ್ತಿಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ.!

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada