• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ‌ ಕಲಹಕ್ಕೆ ಜನರ ಬಲಿ ಏಕೆ?

ಯದುನಂದನ by ಯದುನಂದನ
April 29, 2021
in ದೇಶ
0
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ‌ ಕಲಹಕ್ಕೆ ಜನರ ಬಲಿ ಏಕೆ?
Share on WhatsAppShare on FacebookShare on Telegram

ಕರೋನಾ ಲಸಿಕೆಗಳು ಹಾಗೂ ಆಮ್ಲಜನಕ ವಿಷಯದಲ್ಲಿ ನಿರಂತರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಜಗಳ ನಡೆಯುತ್ತಿದೆ‌. ಪರಸ್ಪರ ಇನ್ನೊಬ್ಬರ ಮೇಲೆ ಆರೋಪ ಹೊರಿಸಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸವನ್ನು ಎರಡೂ ಸರ್ಕಾರಗಳು ನಾಜೂಕಾಗಿ ಮಾಡುತ್ತಿವೆ. ಪರಿಣಾಮವಾಗಿ ಅಮಾಯಕ ಜನರು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಣ ಕಳೆದುಕೊಂಡವರ ಸಂಖ್ಯೆ ಎರಡು ಲಕ್ಷ ದಾಟಿದೆ. ಆದರೆ ಇನ್ನೂ ಆಳುವವರ ಮನ ಕರಗಿಲ್ಲ. ಕಾದಾಟ ಮುಂದುವರೆದಿದೆ.

ADVERTISEMENT


ಸರಿಯಾಗಿ ಇನ್ನೆರಡು ದಿನಕ್ಕೆ (ಮೇ 1ರಿಂದ) 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರಿಗೂ ಕರೋನಾ ಲಸಿಕೆ ಹಾಕುವ ಮೂರನೇ ಹಂತ ಶುರುವಾಗುತ್ತದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾಳಗ ಮಾತ್ರ ನಿಂತಿಲ್ಲ. ರಾಜಸ್ಥಾನ, ಛತ್ತೀಸ್ಗಢ, ಪಂಜಾಬ್ ಮತ್ತು ಜಾರ್ಖಂಡ್ ಸರ್ಕಾರಗಳು ತಮ್ಮ ಬಳಿ ಅಗತ್ಯಕ್ಕೆ ತಕ್ಕಷ್ಟು ಲಸಿಕೆಗಳಿಲ್ಲ. 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ಕೊಡಲು ಸಾಧ್ಯವಿಲ್ಲ ಎಂದಿವೆ. ಮಹಾರಾಷ್ಟ್ರ ಸರ್ಕಾರ ಈಗ ತಮಗೆ 12 ಕೋಟಿ ಕರೋನಾ ಲಸಿಕೆ ಕೊಡಿ ಎಂದು ಕೋವಿಶೀಲ್ಡ್ ಉತ್ಪಾದನಾ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪತ್ರ ಬರೆದಿದೆ. 


ಇದೆಲ್ಲದರ ನಡುವೆ ರಾಜ್ಯ ಸರ್ಕಾರಗಳ ಆರೋಪಗಳನ್ನು ತಳ್ಳಿಹಾಕಲು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಬುಧವಾರ ಸುದ್ದಿಗೋಷ್ಠಿ ನಡೆಸಿದೆ. ಆ ಸುದ್ದಿಗೋಷ್ಠಿಯಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು ಕರೋನಾ ಲಸಿಕೆ ಇವೆ ಎಂಬ ಮಾಹಿತಿ ಬಿಚ್ಚಿಟ್ಟಿದೆ. ಕೇಂದ್ರ ಆರೋಗ್ಯ ಇಲಾಖೆ ಪ್ರಕಾರ ಉತ್ತರ ಪ್ರದೇಶದಲ್ಲಿ 10.10 ಲಕ್ಷ ಲಸಿಕೆಗಳು, ಮಹಾರಾಷ್ಟ್ರದಲ್ಲಿ 9.23 ಲಕ್ಷ ಲಸಿಕೆಗಳು, ಬಿಹಾರದಲ್ಲಿ  7.50 ಲಕ್ಷ ಲಸಿಕೆಗಳು, ಗುಜರಾತ್‌ನಲ್ಲಿ 6.09 ಲಕ್ಷ ಲಸಿಕೆಗಳು ಮತ್ತು ಜಾರ್ಖಂಡ್‌ನಲ್ಲಿ 5.95 ಲಕ್ಷ ಲಸಿಕೆಗಳು ಒಟ್ಟು 1,00,47,157 ಡೋಸ್‌ಗಳು  ಲಭ್ಯವಿವೆ ಎಂದು ತಿಳಿಸಿದೆ. ಜೊತೆಗೆ ಮುಂದಿನ ಮೂರು ದಿನಗಳಲ್ಲಿ 86 ಲಕ್ಷ ಲಸಿಕೆಗಳನ್ನು ನೀಡಲಾಗುವುದು ಎಂದಿದೆ.


ಅಂದರೆ 136 ಕೋಟಿ ಜನಸಂಖ್ಯೆಯುಳ್ಳ ದೇಶದಲ್ಲಿ 2 ಕೋಟಿ ಲಸಿಕೆಗಳನ್ನು ಸ್ಟಾಕ್ ಇಟ್ಟುಕೊಂಡು ‘ದೊಡ್ಡ ಅಭಿಯಾನ‌’ ಕೈಗೊಳ್ಳಲಾಗಿದೆ. ಅದಕ್ಕೆ ದೊಡ್ಡದಾದ ಸಮರ್ಥನೆ ಬೇರೆ. ಕರೋನಾ ಲಸಿಕೆಗಳನ್ನು ಉಚಿತವಾಗಿ ಕೊಡುವ ವಿಷಯದಲ್ಲಿ, ಸಮಾನ ದರ ನಿಗದಿ ಮಾಡುವುದರಲ್ಲಿ, ಸೂಕ್ತ ರೀತಿಯಲ್ಲಿ ಹಂಚಿಕೆ ಮಾಡುವುದರಲ್ಲಿ, ಅಗತ್ಯ ಇರುವಷ್ಟು ಲಸಿಕೆ ಉತ್ಪಾದನೆ ಮಾಡಿಸುವುದರಲ್ಲಿ ಕೇಂದ್ರ ಸರ್ಕಾರ ಸೋತಿದೆ. ಇಷ್ಟು ದೊಡ್ಡ ದೇಶಕ್ಕೆ ಕೇವಲ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಸಾಲಲ್ಲ ಎಂಬ ಕಾರಣಕ್ಕೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗೆ ಅನುಮತಿ ನೀಡಿದೆ. ಆದರೆ ಸ್ಪುಟ್ನಿಕ್ ಇನ್ನೂ ದೇಶದೊಳಗೆ ಬಂದಿಲ್ಲ. ಮೇ 1ಕ್ಕೆ ಸ್ಪುಟ್ನಿಕ್ ಲಸಿಕೆಗಳ ಮೊದಲ ಬ್ಯಾಚ್ ಹೊತ್ತ ಹಡಗು ದೇಶದ ಕಡಲ ತೀರ ತಲುಪುವ ಸಾಧ್ಯತೆ ಇದೆ.
ಸ್ಪುಟ್ನಿಕ್ ವಿ ಲಸಿಕೆಗಳಲ್ಲದೆ ಬೇರೆ ಲಸಿಕೆಗಳಿಗೂ ಅವಕಾಶ ನೀಡಬೇಕೆಂಬ ಮುನ್ನೆಚ್ಚರಿಕೆ ವಹಿಸಬೇಕಿತ್ತು.

ಆದರೆ ಇಡೀ ಪ್ರಪಂಚದಲ್ಲೇ ಅತ್ಯಂತ ಬೇಡಿಕೆ ಇರುವ, ಎಲ್ಲಾ ಲಸಿಕೆಗಳಿಗಿಂತಲೂ ಹೆಚ್ಚು ದಕ್ಷತೆಯ ಪ್ರಮಾಣ (96%) ಹೊಂದಿರುವ ಫೀಜರ್, ನಂತರದ ಸ್ಥಾನದಲ್ಲಿರುವ ಮಾಡರ್ನಾ (94%) ಲಸಿಕೆಗಳನ್ನು ಭಾರತಕ್ಕೆ ಬರಮಾಡಿಕೊಳ್ಳಲು ಕೇಂದ್ರ ಸರ್ಕಾರ ವಿಫಲವಾಯಿತು. ಹೋಗಲಿ, ಕೇವಲ ಶೇಕಡಾ 66ರಷ್ಟು ದಕ್ಷತೆ ಪ್ರಮಾಣ ಹೊಂದಿರುವ, ಅಮೇರಿಕಾ ಮತ್ತಿತರ ದೇಶಗಳಲ್ಲಿ ತಿರಸ್ಕೃತಗೊಂಡಿರುವ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆಗಳಿಗೆ ಈಗ ಅನುಮತಿ ನೀಡಲು ಮುಂದಾಗಿದೆ. ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಈಗಾಗಲೇ ದಿ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCA) ಮುಂದೆ ಪ್ರಸ್ತಾಪ ಇಟ್ಟಿದೆ. ಆದರೆ ಈ ಕಂಪನಿ ಲಸಿಕೆಗಳಿಗೆ ಅನುಮತಿ ಕೊಡುವ ಪ್ರಕ್ರಿಯೆಯೂ ತಡವಾಗುತ್ತಿದೆ.


ಹೀಗೆ ಕರೋನಾ ಕಷ್ಟ ಕಾಲದಲ್ಲೂ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ರೆ ಮಾಡುತ್ತಿದ್ದರೆ ರಾಜ್ಯ ಸರ್ಕಾರಗಳದ್ದೂ ಅದೇ ಕತೆ. ಈಗ ಲಸಿಕೆ ಇಲ್ಲ ಎಂದು ದನಿ ಎತ್ತಿರುವ ರಾಜ್ಯ ಸರ್ಕಾರಗಳು ತಮಗೆ ಖರೀದಿ ಮಾಡಲು ಅವಕಾಶ ಸಿಕ್ಕ ಕೂಡಲೇ ಖರೀದಿಗೆ ಮುಂದಾಗಬೇಕಿತ್ತು. ಕೇಂದ್ರ ಸರ್ಕಾರದ ಕಡೆಯಿಂದ ಸಹಕಾರ ಸಿಗುವುದಿಲ್ಲ ಎಂಬುದು ಗೊತ್ತಿರುವ ವಿಷಯವೇ ಆಗಿದ್ದುದರಿಂದ, ಲಸಿಕೆ ಮಾತ್ರವಲ್ಲದೆ ಬೇರೆ ವಿಷಯಗಳಲ್ಲೂ ಇದು ಸಾಬೀತಾಗಿರುವುದರಿಂದ ತಮ್ಮ ತಮ್ಮ ಮಿತಿಯಲ್ಲಿ ಏನನ್ನು ಮಾಡಬೇಕಿತ್ತೋ ಅವುಗಳನ್ನಾದರೂ ಮಾಡಬೇಕಿತ್ತು. ಇದೇ ರೀತಿ ಆಕ್ಸಿಜನ್ ಫ್ಲಾಂಟ್ ಹಾಕುವುದರಿಂದ ಹಿಡಿದು ಔಷಧೀಯ ಉತ್ಪನ್ನಗಳ ಸಂಗ್ರಹದವರೆಗೆ ತನ್ನ ಪಾತ್ರವನ್ನಾದರೂ ಯಶಸ್ವಿಯಾಗಿ ನಿರ್ವಹಿಸಬೇಕಾಗಿತ್ತು. ಹಾಗೆ ನಿರ್ವಹಿಸಿದ ಉದಾಹರಣೆ ಕಣ್ಣ ಮುಂದೆಯೇ ಇದೆ. ಕೇಂದ್ರ ಸರ್ಕಾರ ಎಡ ಪಕ್ಷದ ಆಳ್ವಿಕೆ ಇರುವ ಕೇರಳದ ಬಗ್ಗೆ ಪ್ರೀತಿ ಇಟ್ಟುಕೊಂಡಿಲ್ಲ. ಆದರೂ ಅಲ್ಲಿನ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಮಾಡಿ ತೋರಿಸಿದ್ದಾರೆ. ಇಚ್ಛಾಶಕ್ತಿ ಇರಬೇಕು ಅಷ್ಟೇ; ಕೇಂದ್ರ ಸರ್ಕಾರಕ್ಕೂ. ಇಲ್ಲದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ‌ ಕಲಹಕ್ಕೆ ಜನರ ಬಲಿಯಾಗುತ್ತಾರೆ. ಅಧಿಕಾರದಲ್ಲಿರುವವರ ಕಾದಾಟಕ್ಕೆ ಅಮಾಯಕರ ಬಲಿ ಏಕಾಗಬೇಕು?

Previous Post

ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಪಕ್ಷ ನಾಯಕರಿಂದ ಆಕ್ರೋಶ– ಸಚಿವಗಿರಿಯಿಂದ ವಜಾ ಮಾಡುವಂತೆ ಆಗ್ರಹ

Next Post

ಭಾರತದ ಸಂಕಷ್ಟದ ಸಮಯದಲ್ಲಿ ದೇಶ ಬಿಟ್ಟು ಪಲಾಯನ ಮಾಡುತ್ತಿರುವ ಅತಿ ಶ್ರೀಮಂತರು..!

Related Posts

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
0

ಬೆಂಗಳೂರು : 2025ರ ವರ್ಷವೂ ರಾಜಕೀಯ, ಸಿನಿಮಾ, ಔದ್ಯೋಗಿಕ ಕ್ಷೇತ್ರದಲ್ಲಿ ಸಾಕಷ್ಟು ಗಮನ ಸೆಳೆದಂತೆ ಕ್ರೀಡಾಲೋಕದಲ್ಲೂ ಹೆಚ್ಚಿನ ಸದ್ದು ಮಾಡಿರುವ ವರ್ಷವಾಗಿದೆ. ಅದರಲ್ಲೂ ಕ್ರಿಕೆಟ್ ಪಂದ್ಯದಲ್ಲಿ ಶಕ್ತಿ...

Read moreDetails

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

December 29, 2025

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ ಸಿಎಂ ಸಿದ್ದರಾಮಯ್ಯ..

December 29, 2025

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ‌.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

December 29, 2025

ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ

December 29, 2025
Next Post
ಭಾರತದ ಸಂಕಷ್ಟದ ಸಮಯದಲ್ಲಿ ದೇಶ ಬಿಟ್ಟು ಪಲಾಯನ ಮಾಡುತ್ತಿರುವ ಅತಿ ಶ್ರೀಮಂತರು..!

ಭಾರತದ ಸಂಕಷ್ಟದ ಸಮಯದಲ್ಲಿ ದೇಶ ಬಿಟ್ಟು ಪಲಾಯನ ಮಾಡುತ್ತಿರುವ ಅತಿ ಶ್ರೀಮಂತರು..!

Please login to join discussion

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada