• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉ.ಪ್ರ ವಿಧಾನಸಭಾ ಚುನಾವಣೆ 2022 : ಜಾತಿಗಣತಿಗೆ ಪ್ರತಿಪಕ್ಷಗಳ ಒತ್ತಾಯ ಏಕೆ?

ಇಮ್ರಾನ್‌ ಝೈಫ್ by ಇಮ್ರಾನ್‌ ಝೈಫ್
August 13, 2021
in ದೇಶ
0
ಉ.ಪ್ರ ವಿಧಾನಸಭಾ ಚುನಾವಣೆ 2022 : ಜಾತಿಗಣತಿಗೆ ಪ್ರತಿಪಕ್ಷಗಳ ಒತ್ತಾಯ ಏಕೆ?
Share on WhatsAppShare on FacebookShare on Telegram

ಮುಂಬರುವ ಉತ್ತರ ಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯು ರಾಷ್ಟ್ರ ರಾಜಕೀಯದಲ್ಲಿ  ಅತೀ ಹೆಚ್ಚು ಸದ್ದು ಮಾಡುತ್ತಿದೆ. ಉತ್ತರ ಪ್ರದೇಶದ ಯೋಗಿ ನೇತೃತ್ವದ ಬಿಜೆಪಿ  ಸರ್ಕಾರವನ್ನು ಸೋಲಿಸುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಸರಕಾರವನ್ನು ನಿರ್ಣಾಮ ಮಾಡುವ ಚಿಂತನೆಯಿಂದ  ಪ್ರತಿಪಕ್ಷಗಳು ಬಿಡುವಿಲ್ಲದೆ ಕೆಲಸ ಮಾಡುತ್ತಿವೆ.  ಒಬಿಸಿ ರಾಜಕೀಯವು ಮತ್ತೆ ಮುಂಚೂಣಿಗೆ ಬಂದು ರಾಷ್ಟ್ರ ರಾಜಕಾರಣದಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂದು ಒಬಿಸಿ ಒಲವುಳ್ಳ ಪ್ರತಿಪಕ್ಷಗಳು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ.

ADVERTISEMENT

ದೇಶದಲ್ಲಿ ಸದ್ದು ಮಾಡುತ್ತಿರುವ ಜಾತಿ ಆಧಾರಿತ ಜನಗಣತಿಯ ಬೇಡಿಕೆಗೆ ಬಿಜೆಪಿಯ ಕಟ್ಟಾ ವಿರೋಧಿ ಪ್ರತಿಪಕ್ಷಗಳು ಬಹಿರಂಗವಾಗಿ ಬೆಂಬಲಿಸುತ್ತೇವೆ ಎಂದಿದೆ. ಬಿಹಾರದಲ್ಲಿ ಜೆಡಿಯು ಮತ್ತು ಆರ್‌ಜೆಡಿ, ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ತೃಣಮೂಲ ಪಕ್ಷಗಳು ಜಾತಿ ಆಧಾರಿತ ಜನಗಣತಿಯ ಬೇಡಿಕೆಯನ್ನು ಬೆಂಬಲಿಸುತ್ತೇವೆ ಎಂದಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಕೆಳಗಿಳಿಸುವುದೇ ಇದರ ಹಿಂದಿರುವ ಮೂಲ ಉದ್ದೇಶ ಎಂದು ದೇಶವ್ಯಾಪ್ತಿ ಚರ್ಚೆಯಾಗುತ್ತಿದೆ.

ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಜಾತಿ ಗಣತಿಯ ಪರವಾಗಿ ಬೇಡಿಕೆ ಮಂಡಿಸಿದ್ದಾರೆ. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮಾಯಾವತಿ ಮತ್ತು ಬಿಜೆಪಿಯ ಮಿತ್ರ ಪಕ್ಷಗಳಾದ ಅಪ್ನಾ ದಳ ಮತ್ತು ನಿಷಾದ್ ಪಕ್ಷಗಳೂ ಬೆಂಬಲ ಸೂಚಿಸಿವೆ. ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಮತ್ತು ಸಮುದಾಯದ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸಬೇಕೆಂದೂ ಅಪ್ನಾ ದಳ ಒತ್ತಾಯಿಸಿದೆ.  ರಾಜ್ಯ ಸಭೆಯಲ್ಲಿ ನಿರ್ಣಾಯಕ ಸಂದರ್ಭದಲ್ಲಿ ಬಿಜೆಪಿ ಪರವಾಗಿ ನಿಲ್ಲುತ್ತಿದ್ದ ಬಿಜು ಜನತಾದಳ (ಬಿಜೆಡಿ) ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ನಂತಹ ಪಕ್ಷಗಳೂ ಕೂಡ ಜಾತಿ ಆಧಾರಿತ ಜನಗಣತಿಗೆ ಬೆಂಬಲ ಸೂಚಿಸಿದೆ.

ಇತ್ತೀಚೆಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗವು ಮೋದಿ ಸರಕಾರಕ್ಕೆ ಮನವಿ ಮಾಡಿ 2021ರ ಜನಗಣತಿಯಲ್ಲಿ ಒಬಿಸಿಗಳ ಎಣಿಕೆ ಮಾಡುವಂತೆ ಮನವಿ ಸಲ್ಲಿಸಿತ್ತು. ಒಂದು ಸಾಮಾನ್ಯ ಜನಗಣತಿಯಲ್ಲಿ ಒಬಿಸಿಗಳ ಎಣಿಕೆಯ ವಿರುದ್ಧ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಕೆಯಾದಲ್ಲಿ ಅದರ ವಿರುದ್ಧ ಅಫಿಡವಿಟ್ ಸಲ್ಲಿಸುವಂತೆಯೂ ಸರಕಾರಕ್ಕೆ ಸಲಹೆ ನೀಡಿತ್ತು. ಆದರೆ ಆಯೋಗದ ಈ ಮಧ್ಯಪ್ರವೇಶವು ತುಂಬಾ ತಡವಾಗಿತ್ತು. ಒಬಿಸಿಗಳ ಎಣಿಕೆಯ ತನ್ನ ನಿರ್ಧಾರದಿಂದ ಸರಕಾರವು ಈಗಾಗಲೇ ಹಿಂದೆ ಸರಿದಿದೆ ಮತ್ತು ಆ ವಿಷಯವನ್ನು ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದು ಭಾಸವಾಗುತ್ತಿದೆ.

ಒಂದು ವೇಳೆ ಉತ್ತರ ಪ್ರದೇಶದಲ್ಲಿ ಜಾತಿ ಆಧಾರಿತ ಜನಗಣತಿ ಜಾರಿಯಾದರೆ ಸೋಲನ್ನನುಭವಿಸಬಹುದು ಎಂಬ ಆತಂಕ ಬಿಜೆಪಿಯಲ್ಲಿ ಕಾಡಿದೆ. ಯಾಕೆಂದರೆ ಉತ್ತರ ಪ್ರದೇಶ ರಾಜ್ಯದಲ್ಲಿ ಒಂದೊಂದು ಪ್ರತಿಷ್ಠಿತ ಜಾತಿಗಳಿಗೆ ಪ್ರಭಾವಿ ಪಕ್ಷಗಳು ಅಸ್ತಿತ್ವದಲ್ಲಿದೆ. ಜಾತಿ ಲೆಕ್ಕಾಚಾರಕ್ಕನುಸಾರವಾಗಿ ರಾಜ್ಯದ ಜನತೆ ಜಾತಿ ಓಲೈಕೆಯ ಪಕ್ಷಗಳಿಗೆ ಒಲವು ನೀಡಿದರೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿಯಾಗಬಹುದು.

ಒಂದು ವೇಳೆ ಜಾತಿ ಜನಗಣತಿ ಜಾರಿಯಾದರೆ ಬಿಜೆಪಿಯ ಹಿಂದುತ್ವದ ಕಲ್ಪನೆ ಮತ್ತು ಸಿದ್ಧಾಂತ ವಿಶೇಷವಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ಅನುಗುಣವಾಗುವುದು ಕಷ್ಟ. ಯಾಕೆಂದರೆ ಅಲ್ಲಿನ ಬಹುತೇಕ ಜನತೆ ಜಾತಿ ಪದ್ಧತಿಗೆ ತಲ್ಲೀನರಾದ್ದರಿಂದ ಅವರ ಜಾತಿಯನ್ನೇ ಪ್ರತಿನಿಧಿಸುವ ಪಕ್ಷಗಳಿಗೆ , ನಾಯಕರಿಗೆ ಮತ ಹಾಕುವ ಮೂಲಕ ಜಾತಿ ರಾಜಕೀಯಕ್ಕೆ ಓಲೈಕೆಯಾಗುವ ಸಾಧ್ಯತೆಗಳಿವೆ. ಬ್ರಾಹ್ಮಣ ಸಮುದಾಯವನ್ನು ಸೆಳೆಯಲು ಎಸ್ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ತಂತ್ರ ಹೆಣೆದರೆ ಇತರ ನಾಯಕರು ತಮ್ಮದೇ ಆದ ಜಾತಿಯ ಸಮುದಾಯವನ್ನು ಸೆಳೆಯಲು ಪ್ರಯತ್ನಿಸುತ್ತಾರೆ.

ಮುಂದಿನ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲನ್ನು ಕಂಡರೆ ಬಿಜೆಪಿಯ ರಾಜಕಾರಣ ರಾಷ್ಟ್ರ ಮಟ್ಟದಲ್ಲಿ ಕುಗ್ಗುತ್ತವೆ. ಇದು ಮುಂದೆ ನಡೆಯುವ ಇತರ  ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ನಾಂದಿ ಹಾಡಬಹುದು. ಆದ್ದರಿಂದಲೇ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಜಾತಿ ಆಧಾರಿತ ಜನಗಣತಿಯಲ್ಲಿ ನಿರುತ್ಸಾಹ ತೋರಿದೆ.

Tags: akhilesh yadavMayavatiYogi Adityanath
Previous Post

ನಷ್ಟವನ್ನು ನಾವೇ ಭರಿಸುತ್ತೇವೆಂದು ಪೆಟ್ರೋಲ್ ಬೆಲೆಯಲ್ಲಿ 3ರೂಪಾಯಿ ಕಡಿತಗೊಳಿಸಿದ ತಮಿಳುನಾಡು ಸರ್ಕಾರ

Next Post

ಲೋಕಸಭೆ ಅಧಿವೇಶನ ಗದ್ದಲ; 19 ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ: ಮಾಜಿ ಪ್ರಧಾನಿ ದೇವೇಗೌಡ ಬೇಸರ

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಲೋಕಸಭೆ ಅಧಿವೇಶನ ಗದ್ದಲ; 19 ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ: ಮಾಜಿ ಪ್ರಧಾನಿ ದೇವೇಗೌಡ ಬೇಸರ

ಲೋಕಸಭೆ ಅಧಿವೇಶನ ಗದ್ದಲ; 19 ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ: ಮಾಜಿ ಪ್ರಧಾನಿ ದೇವೇಗೌಡ ಬೇಸರ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada