Lokasabha ಚುನಾವಣೆಯಲ್ಲಿ ಬಿಜೆಪಿ ಹಾಗು ಜೆಡಿಎಸ್ ಹೊಂದಾಣಿಕೆ ರಾಜಕೀಯ ಮಾಡುವ ನಿರ್ಧಾರ ಕೈಗೊಂಡಿವೆ. ಇದೀಗ ಲೋಕಸಭಾ ಸ್ಥಾನಗಳನ್ನು ಹಂಚಿಕೊಳ್ಳುವ ಸಲುವಾಗಿ ಚರ್ಚೆಗಳು ಶುರುವಾಗಿವೆ. ಮುಂದಿನ ವಾರ ದೆಹಲಿಗೆ ಭೇಟಿ ನೀಡಲಿರುವ ಕುಮಾರಸ್ವಾಮಿ (Kumaraswamy) ಬಿಜೆಪಿ ನಾಯಕರ ಜೊತೆಗೆ ಚರ್ಚೆ ಮಾಡಿ ಸೀಟು ಹಂಚಿಕೆ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು (Devegowda) ತಿಳಿಸಿದ್ರು. ಈ ನಡುವೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರನ್ನು ಬಿಟ್ಟು ಜೆಡಿಎಸ್ಗೆ ಬಿಟ್ಟು ಕೊಡ್ತಾರಾ..? ಅನ್ನೋ ಚರ್ಚೆಗಳು ಶುರುವಾಗಿವೆ. ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ಸಿಗಲ್ಲ ಅನ್ನೋ ಚರ್ಚೆಗಳ ನಡುವೆ ಕುಮಾರಸ್ವಾಮಿ ಮಹತ್ವದ ಸಭೆ ಮಾಡಿದ್ದಾರೆ.
![](https://pratidhvani.com/wp-content/uploads/2024/02/hdk-1205734-1680358851-1024x576.webp)
ಕೋಲಾರ (Kolar) ಲೋಕಸಭಾ ಕ್ಷೇತ್ರದ ಪರಿಸ್ಥಿತಿ ಬಗ್ಗೆ ಹೆಚ್ಡಿಕೆ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳೀಯ ನಾಯಕರಿಂದ ಮಾಹಿತಿ ಪಡೆದಿದ್ದಾರೆ ಮಾಜಿ ಸಿಎಂ ಹೆಚ್ಡಿಕೆ. ಬಿಡದಿಯ ತೋಟದ ಮನೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕ್ಷೇತ್ರದ ಪರಿಸ್ಥಿತಿ, ಪಕ್ಷ ಸಂಘಟನೆ, ಸಿದ್ದತೆ, ಆಕಾಂಕ್ಷಿಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮೂವರು ಶಾಸಕರು ಇರುವ ಕಾರಣ ಜೆಡಿಎಸ್ನಿಂದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಸಲಹೆ ನೀಡಿದ್ದಾರೆ ಮುಖಂಡರು. ದಲಿತ ನಾಯಕರೊಬ್ಬರನ್ನು ಗೆಲ್ಲಿಸುವ ಬಗ್ಗೆ ಹೆಚ್ಡಿಕೆಗೆ ಸಲಹೆ ನೀಡಿದ್ದಾರೆ. ನಾಯಕರ ಸಲಹೆ ಪರಿಗಣಿಸಿದ ಹೆಚ್ಡಿಕೆಯಿಂದ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ತೇವೆ ಎಂದಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ.
![](https://pratidhvani.com/wp-content/uploads/2024/02/HDKumaraswamy_PTI_20122020_1200-2-1-1024x683.webp)
ಕೋಲಾರದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ. ಈಗ ಎನ್ಡಿಎ ಮೈತ್ರಿಕೂಟಕ್ಕೆ JDS ಸೇರ್ಪಡೆ ಆಗಿರುವ ಕಾರಣದಿಂದ ಮತ್ತಷ್ಟು ಅನುಕೂಲವಾಗಿದೆ. ಕೋಲಾರ ಕ್ಷೇತ್ರದ ಎಲ್ಲಾ ಸ್ಥಿತಿಗತಿಗಳ ಬಗ್ಗೆ ನಾನು ಕ್ಷೇತ್ರ ಹಂಚಿಕೆ ವೇಳೆ ಚರ್ಚೆ ಮಾಡ್ತೇನೆ ಎಂದು ಭರವಸೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ನಾಯಕರಿಗೆ ಮೈತ್ರಿ ಧರ್ಮ ಪಾಲಿಸುವಂತೆ ಸೂಚಿಸಿದ್ದಾರೆ ಕುಮಾರಸ್ವಾಮಿ.
ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಪ್ರತಿಯೊಬ್ಬರು ಬದ್ಧತೆ, ನಿಷ್ಠೆಯಿಂದ ಕೆಲಸ ಮಾಡಬೇಕು. ಜೊತೆಗೆ ಕ್ಷೇತ್ರದಲ್ಲಿ ಆಗಬೇಕಿರುವ ಪಕ್ಷ ಸಂಘಟನೆಗೆ ಕೆಲಸ ಮಾಡಬೇಕು ಎಂದು ಸಲಹೆ ಸೂಚನೆ ನೀಡಿ ನಿರ್ದೇಶನ ಮಾಡಿದ್ದಾರೆ. ಒಟ್ಟಾರೆ ಹಾಲಿ ಸಂಸದ ಮುನಿಸ್ವಾಮಿ, ಮೈತ್ರಿಯನ್ನು ಸ್ವಾಗತ ಮಾಡಿದ್ದರು. ಒಂದು ವೇಳೆ ಕೋಲಾರವನ್ನು ಜೆಡಿಎಸ್ಗೆ ಬಿಟ್ಟು ಕೊಡುವುದಾದರೆ ನನ್ನದೇನು ಅಭ್ಯಂತರ ಇಲ್ಲ ಎಂದು ನೇರವಾಗಿಯೇ ಬಹಿರಂಗ ಹೇಳಿಕೆ ನೀಡಿದ್ದರು. ಹೀಗಾಗಿ ಕೋಲಾರವನ್ನು ಜೆಡಿಎಸ್ ಪಡೆದುಕೊಂಡು ಅಭ್ಯರ್ಥಿ ಗೆಲ್ಲಿಸುವ ಕಸರತ್ತು ಮಾಡುತ್ತಿದೆ ಎನ್ನಬಹುದು.
#Hdkumaraswamy #Bjp #jds #Lokasabha #kolar #Hddevegowda