• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

‘ಪ್ರಧಾನಿ ಹೆಸರಲ್ಲಿ ಪ್ರಚಾರ ಮಾಡುತ್ತೇವೆ’ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದೇಕೆ?

ಪ್ರತಿಧ್ವನಿ by ಪ್ರತಿಧ್ವನಿ
September 6, 2021
in ದೇಶ
0
‘ಪ್ರಧಾನಿ ಹೆಸರಲ್ಲಿ ಪ್ರಚಾರ ಮಾಡುತ್ತೇವೆ’ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದೇಕೆ?
Share on WhatsAppShare on FacebookShare on Telegram

”ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ದ ನಡೆಸಲಾಗುತ್ತಿರುವ ಪ್ರತಿಭಟನೆಯನ್ನು ಪ್ರಧಾನ ಮಂತ್ರಿಯ ಹೆಸರಿನಲ್ಲಿ ನಡೆಸಲಾಗುವುದು,” ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ, ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ಧಾರೆ.

ADVERTISEMENT

“ನಾವು ರೈತರ ಪ್ರತಿಭಟನೆಯನ್ನು ಪ್ರಧಾನ ಮಂತ್ರಿಯ ಹೆಸರಿನಲ್ಲಿ ನಡೆಸುತ್ತೇವೆ. ಏಕೆಂದರೆ ಬಿಜೆಪಿಯು ಇದನ್ನೇ ಮಾಡುತ್ತಿದೆ,” ಎಂದು ವ್ಯಂಗ್ಯವಾಡಿದ ರಾಕೇಶ್ ಟಿಕಾಯತ್ ಇದೇ ಸಂದರ್ಭದಲ್ಲಿ ನಮ್ಮ ರೈತ ಹೋರಾಟದ ಹಾದಿ ವಿಭಿನ್ನವಾಗಿರುತ್ತದೆ,” ಎಂದು ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

“ನಾವು ಪ್ರಧಾನ ಮಂತ್ರಿಗೆ ಪ್ರಚಾರ ನೀಡುತ್ತಿದ್ದೇವೆ,” ಎಂದು ಹೇಳಿದ ಟಿಕಾಯತ್,“ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಮಾರಾಟ ಮಾಡುಲು ಹೊರಟಿದ್ದಾರೆ “ವಿದ್ಯುತ್, ನೀರು ಇತ್ಯಾದಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ವಿಷವನ್ನು ನಾವು ಜನರಿಗೆ ತಲುಪಿಸಿಸುವ ಮೂಲಕ ಪ್ರಧಾನಿ ಮೋದಿಗೆ ಪ್ರಚಾರ ನೀಡಲಾಗುವುದು ಎಂದು ಮಾದ್ಯಮಕ್ಕೆ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯನ್ನು ಸೋಲಿಸಲು ಬಿಜೆಪಿಯ ವಿರುದ್ದವಾಗಿ ರೈತರು ಪ್ರಚಾರ ಮಾಡುವುದಾಗಿ ಈ ಹಿಂದೆಯೇ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಈ ಹಿಂದೆ “2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ” ಅನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದರು.

ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಟಿಕಾಯತ್, “ಮೂರು ಕೃಷಿ ಕಾನೂನುಗಳಲ್ಲಿ ರೈತ ವಿರೋಧಿ ಏನೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ಪ್ರಧಾನ ಮಂತ್ರಿಯ ದೊಡ್ಡ ಸುಳ್ಳು,” ಎಂದು ನರೇಂದ್ರ ಮೋದಿಯ ವಿರುದ್ದ ವಾಗ್ದಾಳಿ ನಡೆಸಿದರು.

ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡುವುದಾಗಿ ರೈತರು ಘೋಷಿಸಿದ್ದಾರೆ. ಮುಜಾಫರ್ನಗರಲ್ಲಿ ಇಂದು ನಡೆಯಬೇಕಾದ ಮೀಟಿಂಗ್ ಅನ್ನು ಸಹ ರದ್ದು ಪಡಿಸಲಾಗಿದೆ. ರೈತರ ಪ್ರತಿಭಟನಾ ಸಭೆಯ ನಂತರ, ಇಂತಹ ರೈತರ ಸಭೆ ಮತ್ತು ಹೊರಟಗಳನ್ನು ಉತ್ತರ ಪ್ರದೇಶದ ಇತರ ಜಿಲ್ಲೆಗಳಲ್ಲೂ ನಡೆಸಲಾಗುವುದು ಎಂದು ಟಿಕಾಯತ್ ಹೇಳಿದ್ದಾರೆ.

ಮೋದಿಯವರ ಮಂತ್ರಿ ಕಾರ್ಯಲಯ ವಾರಣಾಸಿಯಲ್ಲಿದೆ. ವಾರಣಾಸಿಯ ಪ್ರತಿ ಪಂಚಾಯತ್ಗಳಲ್ಲಿ ಹಾಗು ಲಕ್ನೋದಲ್ಲಿ ಸಭೆ ನಡೆಸಲಾಗುವುದು” ಎಂದು ಟಿಕಾಯತ್ ಅವರು ಮದ್ಯಮದವರಿಗೆ ತೀಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸ್ವಗ್ರಾಮ ಗೋರಖಪುರದಲ್ಲಿ ಮಹಾ ಪಂಚಾಯತ್ ನಡೆಯುಲಿದೆ ಎಂದು ಹೇಳಿದರು ವಾಹ್ ಕಿಸಾನ್ ಕಾ ಶೆಹೆರ್, ಯೋಗಿ ಜಿ ಕಾ ತೋರ್ ಮಂದಿರ್ ಹೈ (ಆ ನಗರವು ರೈತರಿಗೆ ಸೇರಿದ್ದು. ಆದರೆ ಯೋಗಿಜಿ ಯ ದೇವಸ್ಥಾನ ಮಾತ್ರ ಇದೆ)”. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯ ಮಂತ್ರಿಯಾದ ನಂತರದಲ್ಲಿ ಶಿವನ ದೇವಾಲಯವನ್ನು ನಡೆಸುತ್ತಿದ್ದರು, ಅದ್ದರಿಂದ ಪಟ್ಟಣಕ್ಕೆ ಹೆಸರನ್ನು ಬಂದಿತು ಎಂದು ಹೇಳಲಾಗಿದೆ.

ರೈತರ ಸಭೆ ನೆಡೆಸಲು ಒಳ್ಳೆಯ ಸ್ಥಳ ಆಯ್ಕೆಯೂ ಬಹಳ ಮಖ್ಯವಾಗಿದೆ. ಎಂಟು ವರ್ಷಗಳ ಹಿಂದೆ ಮುಜಾಫರ್ ನಗರವು ಭಾರೀ ಹಿಂಸಾಚಾರಕ್ಕೆ ಒಳಗಾಗಿತ್ತು. ಇದ್ದರಿಂದ ಸುಮಾರು 60 ಮುಸಲ್ಮಾನರು ಮೃತಪಟ್ಟದ್ದರು ಎಂದು ಹೇಳಲಾಗಿದೆ.

ಮುಜಾಫರ್ ನಲ್ಲಿ, ಹಿಂದೂ – ಮುಸ್ಲಿಮರ ನಡುವೆ ಇದ್ದ ಅಂತರವು ,ಇಂದು ರೈತರ ಈ ಹೋರಾಟದಿಂದ ಅಂತರವು ಕಡಿಮೆಯಾಗಿದೆ. ಮೊಹಬ್ಬತ್ನಗರ (ಪ್ರೀತಿಯ ನಗರವಾಗಿದೆ) ಎಂದು ಕರೆಯಲಾಗಿದೆ. ಮತ್ತು ರಾಜ್ಯದ ಪ್ರತಿ ಗ್ರಾಮಕ್ಕೂ ಇಂತಹ ಪ್ರತಿಭಟನೆಗಳನ್ನು ಮುಂದುವರಿಸಲು ರೈತರು ನಿರ್ಧರಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ – ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ರೈತ ಸಂಘಗಳ ಛತ್ರಿ ಸಂಸ್ಥೆಯಾಗಿದೆ. “ಮಹಾಪಂಚಾಯತ್” ಆಂದೋಲನವು “ಎಲ್ಲಾ ಜಾತಿಗಳು, ಧರ್ಮಗಳು, ರಾಜ್ಯಗಳು, ವರ್ಗಗಳು, ಸಣ್ಣ ವ್ಯಾಪಾರಿಗಳು ಮತ್ತು ಎಲ್ಲಾ ವಿಭಾಗಗಳು ಬೆಂಬಲವನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸುವ ತನಕ ಈ ಹೋರಟವು ಹೀಗೆ ಮುಂದುವರಿಯುತ್ತದೆ” ಎಂದು ಟಿಕಾಯತ್ ಹೇಳಿದ್ದಾರೆ. ನಂತರ “ಸ್ವಾತಂತ್ರ್ಯಕ್ಕಾಗಿ ಹೋರಾಟವು 90 ವರ್ಷಗಳ ಕಾಲ ನಡೆಯಿತು, ಹಾಗಾಗಿ ನಮ್ಮ ಈ ಹೋರಟವು ಎಷ್ಟು ದಿನ ನಡೆಯುತ್ತದೆ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

“ಮೋರ್ಚಾದ ಏಕೈಕ ಉದ್ದೇಶವೆಂದರೆ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು. ಅದರಿಂದಾಗಿ ಹೊಸ ಸರ್ಕಾರವು ಮೋದಿ ಸರ್ಕಾರ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುತ್ತದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿಲ್ಲ,” ಎಂದು ಟಿಕಾಯತ್ ಸ್ಪಷ್ಟಪಡಿಸಿದ್ದರು.

“ನಾವು ಆಡಳಿತಾರೂಢ ಬಿಜೆಪಿಯೊಂದಿಗೆ ಯುದ್ಧದಲ್ಲಿದ್ದೇವೆ. ದೇಶದ ಒಬ್ಬ ರೈತ ಕೂಡ ಭವಿಷ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಸಮರ್ಥರಾದವರನ್ನು ಬೆಂಬಲಿಸುವುದು ನಮ್ಮ ಸರಳ ತಂತ್ರ. ನಾವು ಇದನ್ನು ಬಂಗಾಳದಲ್ಲಿ ಪರಿಣಾಮಕಾರಿಯಾಗಿ ಮಾಡಿದ್ದೇವೆ ಮತ್ತು ಅದನ್ನು 2022 ರಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪುನರಾವರ್ತಿಸುತ್ತೇವೆ,” ಎಂದು ರೈತ ಮುಖಂಡರು ಹೇಳಿದ್ದರು.

Tags: BJPಧರ್ಮಗಳುನರೇಂದ್ರ ಮೋದಿಪ್ರಧಾನಿಬಿಜೆಪಿಭಾರತೀಯ ಕಿಸಾನ್ ಯೂನಿಯನ್ಮಹಾಪಂಚಾಯತ್ಮುಸ್ಲಿಮಮುಸ್ಲಿಮರುಯೋಗಿ ಆದಿತ್ಯನಾಥ್ರಾಜ್ಯಗಳುರೈತ ನಾಯಕ ಟಿಕಾಯತ್ವರ್ಗಗಳುಸಂಯುಕ್ತ ಕಿಸಾನ್ ಮೋರ್ಚಾಸಂಯುಕ್ತ ಕಿಸಾನ್ ಮೋರ್ಚಾ - ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ರೈತ ಸಂಘಗಳ ಛತ್ರಿ ಸಂಸ್ಥೆಯಾಗಿದೆ. "ಮಹಾಪಂಚಾಯತ್" ಆಂದೋಲನವು "ಎಲ್ಲಾ ಜಾತಿಗಳು
Previous Post

ಬಸವರಾಜ್ ಬೊಮ್ಮಾಯಿ ಬೆನ್ನಿಗೆ ನಿಂತ ಹೈಕಮಾಂಡ್; ರಾಜ್ಯ ಬಿಜೆಪಿ ನಾಯಕರಿಗೆ ತಳಮಳ

Next Post

ಚಳವಳಿ ಮಾಡುವಷ್ಟು ಬೆಲೆಯೇರಿಕೆ ಆಗಿಲ್ಲ ಎಂದಿರುವ ಸಿ.ಟಿ.ರವಿ ರಾಜ್ಯದ ಪ್ರಥಮ ದರ್ಜೆ ಅವಿವೇಕಿ: ದಿನೇಶ್ ಗುಂಡೂರಾವ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಚಳವಳಿ ಮಾಡುವಷ್ಟು ಬೆಲೆಯೇರಿಕೆ ಆಗಿಲ್ಲ ಎಂದಿರುವ ಸಿ.ಟಿ.ರವಿ ರಾಜ್ಯದ ಪ್ರಥಮ ದರ್ಜೆ ಅವಿವೇಕಿ: ದಿನೇಶ್ ಗುಂಡೂರಾವ್

ಚಳವಳಿ ಮಾಡುವಷ್ಟು ಬೆಲೆಯೇರಿಕೆ ಆಗಿಲ್ಲ ಎಂದಿರುವ ಸಿ.ಟಿ.ರವಿ ರಾಜ್ಯದ ಪ್ರಥಮ ದರ್ಜೆ ಅವಿವೇಕಿ: ದಿನೇಶ್ ಗುಂಡೂರಾವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada