• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಉದ್ಯೋಗ ಸೃಷ್ಟಿಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ: ಬಸವರಾಜ ಬೊಮ್ಮಾಯಿ

Any Mind by Any Mind
September 17, 2021
in Uncategorized
0
ಉದ್ಯೋಗ ಸೃಷ್ಟಿಗೆ ಕಲ್ಯಾಣ ಕರ್ನಾಟಕ  ಹೂಡಿಕೆದಾರರ ಸಮಾವೇಶ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಮುಂದಿನ ಎರಡು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಅವರು (Basavaraj Bommai),   ಕಲಬುರಗಿಯಲ್ಲಿ ಉದ್ಯೋಗ ಸೃಷ್ಟಿ ಬಹಳ ಮುಖ್ಯ.  ಸಣ್ಣ, ಮದ್ಯಮ ಮತ್ತು ಭಾರಿ ಉದ್ಯಮಗಳ ಸೃಷ್ಟಿಗೆ ವಿಪುಲ ಅವಕಾಶಗಳಿವೆ ಎಂದಿದ್ದಾರೆ.

 ಮುರುಗೇಶ್ ನಿರಾಣಿಯವರ ನೇತೃತ್ವದಲ್ಲಿ ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೂಡಿಕೆದಾರರ ಸಭೆ ನಡೆಸಿ ಚರ್ಚಿಸಿ, ಅನುಮೋದನೆಗಳನ್ನು ನೀಡಿ,  ಇಲ್ಲಿ ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗುವುದು ಬಹಳ ಅಗತ್ಯವಿದೆ.  ಇದರಿಂದ ಸಣ್ಣ ಉದ್ದಿಮೆಗಳೂ ಬೆಳೆಯುತ್ತವೆ. ಹಾಗೂ ಉದ್ಯೋಗ ಸೃಷ್ಟಿಯಾಗುತ್ತದೆ .

ಸಿಮೆಂಟ್ ಉದ್ಯಮ ಇಲ್ಲಿ ಬಹಳ ಇದೆ. ಆದರೆ ಇದರ ಲಾಭ ಸ್ಥಳೀಯರಿಗೆ ಆಗುತ್ತಾ ಇಲ್ಲ. ಆದ್ದರಿಂದ ಸಿಮೆಂಟ್ ತಯಾರಕರನ್ನು ಕರೆಸಿ, ಎಷ್ಟು ಜನ ಸ್ಥಳೀಯರಿಗೆ ಉದ್ಯೋಗ ನೀಡಿದ್ದೀರಿ ಎಂದು ಮಾಹಿತಿ ಪಡೆದುಕೊಳ್ಳಲಾಗುವುದು. ಕಾನೂನಾತ್ಮಕವಾಗಿ ಬರುವ ಲಾಭದಲ್ಲಿ ಸಿ.ಎಸ್.ಆರ್. ಅನುದಾನ ಕಲ್ಯಾಣ ಕರ್ನಾಟಕಕ್ಕೆ ದೊರೆಯಬೇಕು. ಆದರೆ ಇದು ಆಗುತ್ತಾ ಇಲ್ಲ. ಕೋವಿಡ್ ಸಂದರ್ಭದಲ್ಲಿಯೂ ನಿರೀಕ್ಷೆಗೆ ತಕ್ಕಂತೆ ನೆರವು ನೀಡಿಲ್ಲ. ಆದರೆ ಮುಂದೆ ಹೀಗೆ ನಡೆಯುವುದಿಲ್ಲ. ಯಾವ ಭೂಮಿಯಿಂದ ನೀವು ಲಾಭ ಪಡೆದಿದ್ದೀರೋ, ಆ ನೆಲಕ್ಕೆ, ಅಲ್ಲಿನ ಜನರಿಗೆ ಸಹಾಯ ಮಾಡಲೇಬೇಕು ಎಂದು ಅವರು ಹೇಳಿದ್ದಾರೆ.

ನಂಜುಂಡಪ್ಪ ವರದಿಗೆ ಹೊಸ ರೂಪ

 ನಂಜುಂಡಪ್ಪ ವರದಿಯನ್ನು ಪುನರ್ ಪರಿಶೀಲಿಸಲಾಗುತ್ತಿದೆ.  ಮುಂದಿನ 5 ವರ್ಷಗಳಿಗೆ ವಿಸ್ತರಿಸಿ ಪ್ರಸ್ತುತ ಸವಾಲುಗಳನ್ನು ಎದುರಿಸಲು ಅನುಕೂಲವಾಗುವಂತೆ  ಅದಕ್ಕೆ ಹೊಸ ರೂಪ ನೀಡಲಾಗುವುದು.

ಆಶೋತ್ತರಗಳ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳ ಮನೋಭಾವ ಬದಲಾಯಿಸಿ, ಆಯವ್ಯಯದಲ್ಲಿ  ಎಲ್ಲಾ ಇಲಾಖೆಗಳ ಯೋಜನೆಗಳಿಗೂ ಸಂರ್ಪವಾದ ಅನುದಾನವನ್ನು ಒದಗಿಸಲಾಗುವುದು. ಅದಲ್ಲದೆ, ಪ್ರತಿ  3 ತಿಂಗಳಿಗೊಮ್ಮೆ ಕೆ.ಕೆ.ಡಿ.ಬಿ ಹಾಗೂ  ನಂಜುಂಡಪ್ಪ ವರದಿ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಖುದ್ದು ತಾವೇ ಮಾಡುವುದಾಗಿ ತಿಳಿಸಿದರು.

ನೈಸರ್ಗಿಕ ಸಂಪತ್ತು, ನದಿಗಳನ್ನು ಕೃಷಿಗೆ ಬಳಕೆ ಮಾಡುವ ಯೋಜನೆಗಳು, ಕೃಷ್ಣಾ ಮೇಲ್ದಂಡೆ – 3 ನೇ ಹಂತದಲ್ಲಿ ಈ ಭಾಗದ ಯೋಜನೆಗಳನ್ನು ಪೂರ್ಣಗೊಳಿಸುವುದು.ಮತ್ತು ಈ ಭಾಗದ ಕಲಬುರಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ,  ಯಾದಗಿರಿಯಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಬಳಿ ಚರ್ಚಿಸಲಾಗುವುದು ಎಂದರು.

ಹುದ್ದೆಗಳ ನೇಮಕಾತಿ:

ನೇಮಕಾತಿ ಎಂದಾಗ ಈ ಭಾಗದಲ್ಲಿ ನೇಮಕಾತಿಯನ್ನು ಮಾಡಬೇಕಾದ ಪ್ರಮಾಣದಲ್ಲಿ ಮಾಡಲಾಗಿಲ್ಲ. ಅದನ್ನು ಪೂರ್ಣಗೊಳಿಸುವ ಸಂಕಲ್ಪ ನಮ್ಮ ಸರ್ಕಾರದ್ದು. ಡಿ ವರ್ಗದಿಂದ ಹಿಡಿದು, ಸಿ. ಬಿ ಮತ್ತು ಎ ವರ್ಗದ ಹುದ್ದೆಗಳ ನೇಮಕಾತಿ ಮಾಡಲಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ಕಲ್ಯಾಣ ಕರ್ನಾಟಕ ಮಂಡಳಿಯಲ್ಲಿ ನೇಮಕಾತಿ ಆಗಬೇಕಿದೆ.  ಕಲ್ಯಾಣ ಕರ್ನಾಟಕ ಮಂಡಳಿಯನ್ನು ಬಲಪಡಿಸಿ, ಅದಕ್ಕೆ ಶಾಶ್ವತವಾಗಿ ಒಬ್ಬ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದ ಅಂಗವಾಗಿ ಸರ್ದಾರ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ, ಧ್ವಜಾರೋಹಣ ನೆರವೇರಿಸಿದ ನಂತರ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಾಯಿತು. pic.twitter.com/Tmzx5Cvj9n

— Basavaraj S Bommai (@BSBommai) September 17, 2021

372 ಜೆ ಅನುಷ್ಠಾನ ಮಾಡಲು ಇರುವ ಸೆಲ್ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡಲಾಗುವುದು. ಅದಾದರೆ 371 ಜೆ ಅನುಷ್ಠಾನದ ಸಂಪೂರ್ಣ ನಿಗಾ ವಹಿಸಬೇಕು. ಖರ್ಚಾಗಿರುವ ಹಣದ ಸಾರ್ಥಕತೆ ಎಷ್ಟು, ಎಷ್ಟು ವಿದ್ಯಾರ್ಥಿಗಳಿಗೆ ಲಾಭ ಆಗಿದೆ, ಮಾನವ ಸಂಪನ್ಮೂಲ ಅಭಿವೃದ್ಧಿ ಏನಾಗಿದೆ, ಆರೋಗ್ಯ ಕ್ಷೇತ್ರ, ಉದ್ಯೋಗ, ಕೈಗಾರಿಕೆಗಳು ಏನಾಗಿದೆ ಎಂಬ ಮೌಲ್ಯಮಾಪನ ಮಾಡಲಾಗುತ್ತಿದೆ. ಇದರ ಮೂಲಕ ಅಗತ್ಯ ಬದಲಾವಣೆಗಳನ್ನು ಮಾಡಿ ನೇರವಾಗಿ ಈ ಎಲ್ಲ ಕ್ಷೇತ್ರಗಳಲ್ಲಿ ಮೌಲ್ಯಮಾಪನ ಆಧಾರದ ಮೇಲೆ ಬದಲಾವಣೆಗಳನ್ನು ತರಲಾಗುತ್ತಿದೆ.

ನಮ್ಮ ಚಿಂತನೆ, ಕಾರ್ಯಸರಣಿ, ಗುರಿ ಹಾಗೂ ಅನುಷ್ಠಾನದಲ್ಲಿ ಆಮೂಲಾಗ್ರ ಬದಲಾವಣೆ ತರುವ ಸಂಕಲ್ಪವನ್ನು ಮಾಡಿದ್ದೇವೆ. ಈ ಸರ್ಕಾರ ನಿಮ್ಮ ಪರವಾಗಿದೆ. ಈವರೆಗೆ ನಿರೀಕ್ಷೆ ಇಟ್ಟು ನಿರಾಶರಾಗಿರಬಹುದು. ಆದರೆ ಸ್ವಲ್ಪ ಸಮಯದಲ್ಲಿ ಇಲ್ಲಿ ಆಮೂಲಾಗ್ರ ಬದಲಾವಣೆ ತರಲಾಗುವುದು ಎಂಬ ಭರವಸೆಯಿತ್ತರು. ಕಲ್ಯಾಣ ಕರ್ನಾಟಕ ಮಂಡಳಿಗೆ ಒದಗಿಸಲಾಗಿರುವ 8 ಸಾವಿರ ಕೋಟಿಗೂ ಹೆಚ್ವು  ಅನುದಾನದಲ್ಲಿ ಕೇವಲ 6 ಸಾವಿರ ಕೋಟಿ ರೂ.ಗಳು  ವೆಚ್ಚವಾಗಿದೆ.

ಇನ್ನು 2 ಸಾವಿರ ಕೋಟಿ ಈ ವರ್ಷದಲ್ಲಿ ವೆಚ್ಚವಾಗಬೇಕಿದೆ. ಸುಮಾರು 13 ಸಾವಿರ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೂರ್ಣವಾಗಬೇಕಿದೆ. ಈ ಭಾಗದ ಶಾಸಕರು ಹೆಚ್ವಿನ ಅನುದಾನ ಬೇಡಿಕೆ ಇಟ್ಟಾಗ, ಇರುವುದನ್ನು ಪೂರ್ಣವಾಗಿ ಖರ್ಚು ಮಾಡಿ, ಮುಂದಿನ ಆಯವ್ಯಯದಲ್ಲಿ 1500  ಕೋಟಿ ಖರ್ಚು ಮಾಡಿದರೆ ಹೆಚ್ಚಿನ ಅನುದಾನ ನೀಡುವ ಕರಾರು ಹಾಕಿದ್ದೇನೆ. ಅಷ್ಟು ಹಣವನ್ನು ಉಪಯೋಗಿಸಿದರೆ, 1500 ಕೋಟಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಿ, ಆಸ್ತಿ ಸೃಜನೆ, ಮಾನವ ಸಂಪನ್ಮೂಲ ಅಭಿವೃದ್ಧಿಗೆ ವ್ಯಯಿಸಿದರೆ, ಇನ್ನಷ್ಟು  ಅನುದಾನ ನೀಡಲು ಸಿದ್ಧವಿರುವುದಾಗಿ ತಿಳಿಸಿದರು. ಈ ಭಾಗದ ಸಮಗ್ರ ಅಭಿವೃದ್ಧಿಯಾಗಬೇಕು ಎಂದರು.

ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆ ಮೇಲಿರುತ್ತದೆ. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ಕಲ್ಯಾಣ ಕರ್ನಾಟಕದ ಕೆಲಸಗಳು ಮುಂದಿನ ಜನಾಂಗಕ್ಕೂ ಒಳಿತಾಗುವ ನಿಟ್ಟಿನಲ್ಲಿ ನಮ್ಮ ಯೋಜನೆ ಮತ್ತು ಯೋಚನೆಗಳಿರಬೇಕು ಎಂದು ತಿಳಿಸಿದರು.

ಸರ್ದಾರ್ ಪಟೇಲರ ಕೊಡುಗೆ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಇಚ್ಛಾಶಕ್ತಿ, ದೂರದೃಷ್ಟಿ ಮತ್ತು ಭಾರತದ ಅಖಂಡತೆ ಮತ್ತು ಏಕತೆಯ ಬಗ್ಗೆ ಅವರು  ಅಚಲ ವಿಶ್ವಾಸದಿಂದ ಹಲವಾರು ರಾಜ್ಯಗಳನ್ನು ಒಟ್ಟು  ಸೇರಿಸಿ ಭಾರತ ಒಕ್ಕೂಟ ರಾಷ್ಟ್ರವನ್ನಾಗಿ ಮಾಡಿದ್ದಾರೆ. ಭಾರತ ಸಾರ್ವಭೌಮ ದೇಶವಾಗಿದ್ದರೆ ಅದರ ಹಿಂದಿರುವ ಬಹುದೊಡ್ಡ ಶಕ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರದ್ದು.  ತಾತ್ವಿಕ ಮತ್ತು ತಾರ್ಕಿಕ ಹೋರಾಟವನ್ನು ಮಾಡಿದರು. ಲೋಕ ಮಾನ್ಯ ತಿಲಕ್ ರಿಂದ ಹಿಡಿದು ಭಗತ್ ಸಿಂಗ್ ವರೆಗೆ ಅನೇಕ ದೇಶಭಕ್ತರನ್ನು , ಒಗ್ಗೂಡಿಸಿದರು. ರೈತರು ಮತ್ತು ಕಾರ್ಮಿಕರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕುವಂತೆ ಮಾಡಿದರು. ಯಾವ ದೇಶದಲ್ಲಿ ರೈತರು ಮತ್ತು ಕಾರ್ಮಿಕರು ಒಗ್ಗೂಡಿ ನಿರ್ಣಯ ಮಾಡುತ್ತಾರೆ ಅಲ್ಲಿ ಬದಲಾವಣೆ ಸಾಧ್ಯವಾಗುತ್ತದೆ. ಐತಿಹಾಸಿಕ  ಬಾರ್ಡೋಲಿ ಮತ್ತು ಚಂಪಾರನ್ ಸತ್ಯಾಗ್ರಹ,  ಸ್ವತಂತ್ರಕ್ಕೆ  ದಾರಿಮಾಡಿಕೊಟ್ಟಿತು.

ಒಂದು ಹನಿ ರಕ್ತವನ್ನೂ ಹರಿಸದೆ ಭಾರತವನ್ನು ಒಗ್ಗೂಡಿಸಿದ ಹಿರಿಮೆ ಸರ್ದಾರ್ ವಲ್ಲಭಭಾಯಿ ಪಟೇಲರಿಗೆ ಸೇರುತ್ತದೆ. ಇಲ್ಲದಿದ್ದರೆ ಭಾರತದ ನಕ್ಷೆ ಬದಲಾಗುತ್ತಿತ್ತು. ಅದನ್ನು ನಾವೆಲ್ಲರೂ ಸದಾ ಕಾಲ ನೆನಪಿಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

371 ಜೆ

ಕರ್ನಾಟಕದ ಏಕೀಕರಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಿರಿಯರ ಪಾತ್ರ ಬಹಳ ದೊಡ್ಡದು. ಹಿರಿಯರಿಗೆ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸಬೇಕು. ಏಕೀಕರಣದ ಲಾಭ ಈ ಭಾಗದ ಜನರಿಗೆ ದೊರೆಯಲಿಲ್ಲ. ಈ ಭಾಗಕ್ಕೆ ಸಂವಿಧಾನದಲ್ಲಿ 371 ಅಳವಡಿಸಲಾಗಿತ್ತು ಜೆ ವರೆಗೂ ವಿಸ್ತರಿಸಲಾಗಿದೆ. ಈ ನಿಟ್ಟಿನಲ್ಲಿ ವೈಜನಾಥ ಪಾಟೀಲರ ಕೊಡುಗೆ  ಅಪಾರ. ನಮ್ಮ ನಾಯಕ ಬಿ.ಎಸ್ .ಯಡಿಯೂರಪ್ಪ ಅವರು 371 ಜೆ ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

 ಕೇವಲ ಸಂವಿಧಾನದ ತಿದ್ದುಪಡಿಯಾದರೆ ಸಾಲದು, 371  ಜೆ ನಂತರ ಎಲ್ಲರ ಬದುಕಿನಲ್ಲಿಯೂ ಬದಲಾವಣೆ ಆಗುತ್ತದೆ ಎಂಬ ಆಶಾಕಿರಣ ಮೂಡಿತ್ತು. ಆದರೆ, ಆಡಳಿತ ಮಾಡುವವರ ಮನಸ್ಥಿತಿ ಬದಲಾವಣೆಯಾಗದೆ ಈ ಭಾಗದ ಜನರ ಜೀವನ ಗುಣಮಟ್ಟದಲ್ಲಿ ಬದಲಾವಣೆ ಸಾಧ್ಯವಿಲ್ಲ ಎನ್ನುವ ಕಟು ಸತ್ಯವನ್ನು ನಾವು  ಅರ್ಥ ಮಾಡಿಕೊಂಡಿದ್ದೇವೆ. ಆಮೂಲಾಗ್ರ ಬದಲಾವಣೆಯಾಗಬೇಕಿದೆ. ಸಣ್ಣಪುಟ್ಟ ಕಾರ್ಯಕ್ರಮಗಳ ಮೂಲಕ ಬದಲಾವಣೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ರಾಜ್ಯದ ಪ್ರಮುಖ ಭಾಗವಾದ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದೆ , ಅಭಿವೃದ್ಧಿ ಚಿತ್ರಣ ಪೂರ್ಣವಾಗುವುದಿಲ್ಲ. ಕನ್ನಡ ಮಾತೆಯ ಮಕ್ಕಳ ಸಮಗ್ರ ಅಭಿವೃದ್ಧಿಯ ಚಿಂತನೆಯನ್ನು ನಮ್ಮ ಹಿರಿಯರು ಮಾಡಿದ್ದು, ಅದರ ಸಾಕಾರವಾಗಬೇಕು. ನಾವು ಮುಂದೆ ಸಾಗಬೇಕಾಗಿರುವ ದಾರಿ ಹಾಗೂ ಆ ಸಂಕಲ್ಪದಿಂದ ಮುಂದುವರೆಯಬೇಕಾದದ್ದು ಬಹಳ ಮುಖ್ಯ ಎಂದು ತಿಳಿಸಿದರು.

 ಆಶ್ವಾಸನೆಗಳು, ಘೋಷಣೆಗಳಿಂದ ಕಲ್ಯಾಣ ಕರ್ನಾಟಕದ  ಕಟ್ಟಕಡೆಯ ಹಳ್ಳಿಯಲ್ಲಿರುವ  ವ್ಯಕ್ತಿಯ, ರೈತ, ಮಹಿಳೆ, ಯುವಕನ  ಬದುಕಿನಲ್ಲಿ ಬದಲಾವಣೆಯಾಗಬೇಕಾದರೆ, ನಾವು ಯಾವ ಕಾರ್ಯಕ್ರಮವನ್ನು ರೂಪಿಸುತ್ತೇವೆ, ಅದು ಅವರಿಗೆ ಮುಟ್ಟುವ ಕೆಲಸವಾಗಬೇಕು. ಯಾವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕಿದೆ ಅವುಗಳನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡಲಾಗುವುದು.

ಕಲಬುರಗಿಯಲ್ಲಿ ನಾಲ್ಕು ಕ್ಲಸ್ಟರ್ ಯೋಜನೆಗಳಿವೆ ಅದು ಜನರಿಗೆ ಉಪಯುಕ್ತವಾಗಬೇಕು. ಬೀದರ್ ನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿದೆ. ಆರೋಗ್ಯ ಕ್ಷೇತ್ರದಲ್ಲಿ  ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಹೆಚ್ಚಿನ ಒತ್ತು ನೀಡಲಾಗುವುದು. ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳು ಅತ್ಯಂತ ಹಿಂದುಳಿದಿವೆ. ಶಿಕ್ಷಣಕ್ಕೆ ಬಂದರೆ, ಅತಿ ಹೆಚ್ಚು ಶಾಲೆ , ಕಾಲೇಜು ಬಿಟ್ಟ ವಿದ್ಯಾರ್ಥಿಗಳ ಸಂಖ್ಯೆ ಇಲ್ಲಿದೆ. ಅದಕ್ಕೆ ಅಗತ್ಯವಿರುವ ಸಂಸ್ಥೆ, ಶಿಕ್ಷಕರ ನೇಮಕಾತಿಯನ್ನು ಮಾಡಲಾಗುವುದು ಎಂದರು.

Tags: basavaBasavaraj BommaiBJPCongress PartyCovid 19KalyanaKalyana KarnatakaKarnatakaಎಚ್ ಡಿ ಕುಮಾರಸ್ವಾಮಿಕರೋನಾಕಲಬುರಗಿಕಲ್ಯಾಣ ಕರ್ನಾಟಕಕೋವಿಡ್-19ನಂಜುಂಡಪ್ಪ ವರದಿನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಮುರುಗೇಶ್ ನಿರಾಣಿಸಿದ್ದರಾಮಯ್ಯಹೂಡಿಕೆದಾರರ ಸಮಾವೇ
Previous Post

ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

Next Post

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ -ಸಚಿವ ಸುನಿಲ್ ಕುಮಾರ್

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ -ಸಚಿವ ಸುನಿಲ್ ಕುಮಾರ್

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಶಿಲ್ಪಕಲಾ ಕೇಂದ್ರ -ಸಚಿವ ಸುನಿಲ್ ಕುಮಾರ್

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada