ಮುಂದಿನ 30 ರಿಂದ 40 ವರ್ಷಗಳು ಬಿಜೆಪಿ ಯುಗ ಮತ್ತು ಭಾರತವು “ವಿಶ್ವ ಗುರು” ಆಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪ್ರತಿಪಾದಿಸಿದ್ದಾರೆ.
ತೆಲಂಗಾಣದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಜಕೀಯ ನಿರ್ಣಯವನ್ನು ಪ್ರಸ್ತಾಪಿಸಿದ ಶಾ, ” ಕುಟುಂಬ ರಾಜಕಾರಣ, ಜಾತೀಯತೆ ಮತ್ತು ತುಷ್ಟೀಕರಣದ ರಾಜಕೀಯ” “ಮಹಾನ್ ಪಾಪಗಳಿಂದ” ದೇಶವು ಅನೇಕ ವರ್ಷಗಳಿಂದ ನೋವನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ
ತಮ್ಮ ಭಾಷಣದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಿಜೆಪಿಯ “ಅಭಿವೃದ್ಧಿ ಮತ್ತು ಕಾರ್ಯನಿರ್ವಹಣೆಯ ರಾಜಕೀಯ” ಒತ್ತಿ ನೀಡಿ ಕುಟುಂಬ ರಾಜಕೀಯವನ್ನು ಕೊನೆಗೊಳಿಸಬೇಕೆಂದು ಷಾ ಅವರು ಹೇಳಿದ್ದಾರೆ. ಈ ಅಜೆಂಡಾದಿಂದಲೇ ಬಿಜೆಪಿ ಸರಣಿ ಗೆಲುವನ್ನು ಸಾಧಿಸಿದೆ ಎಂದು ಹೇಳಿದರು.
ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಬಿಜೆಪಿ ಕುಟುಂಬ ಆಡಳಿತವನ್ನು ಕೊನೆಗೊಳಿಸಲಿದೆ ಮತ್ತು ಆಂಧ್ರಪ್ರದೇಶ, ತಮಿಳುನಾಡು ಮತ್ತು ಒಡಿಶಾದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಬಿಜೆಪಿಯ ಮುಂದಿನ ಸುತ್ತಿನ ಬೆಳವಣಿಗೆಯು ದಕ್ಷಿಣ ಭಾರತದಿಂದ ಬರಲಿದೆ ಎಂದು ಸಭೆಯಲ್ಲಿ “ಸಾಮೂಹಿಕ ಭರವಸೆ ” ಇತ್ತು ಎಂದು ಶರ್ಮಾ ಹೇಳಿದರು.