ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ನವದೆಹಲಿಯ ಇಂದಿರಾಭವನದಲ್ಲಿ ನಡೆದ ಮ್ಯಾರಥಾನ್ ಸಭೆಗಳ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನಿರ್ಧರಿಸಿದ್ದಾರೆ.

ಹೀಗಾಗಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಿದ್ದು, ಅದರಲ್ಲಿ ಪ್ರಮುಖವಾಗಿ ನಾಯಕತ್ವ ಬದಲಾವಣೆಯು ಸಾಕಷ್ಟು ಮುನ್ನೆಲೆಗೆ ಬಂದಿದ್ದ ವಿಷಯವಾಗಿತ್ತು. ಹೀಗಾಗಿ ರಾಜ್ಯದ ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೆ ಈ ವಾರದಲ್ಲಿಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : BREAKING NEWS : ಗುಜರಾತ್ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್ ಪ್ರವೇಶ..
ಈ ಹಿನ್ನೆಲೆಯಲ್ಲಿ ಗುರುವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇದಾದ ಬಳಿಕ ಶೀಘ್ರದಲ್ಲಿಯೇ ಕರ್ನಾಟಕಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆಯಾಗಲಿದ್ದುಆದರೆ ಆ ಸ್ಥಾನ ಯಾರ ಪಾಲಾಗಲಿದೆ ಎನ್ನುವುದುನ್ನು ಹೈಕಮಾಂಡ್ ರಿವೀಲ್ ಮಾಡಿಲ್ಲ.
ಸದ್ಯದ ಪ್ರಾಥಮಿಕ ಮಾಹಿತಿ ಪ್ರಕಾರ 4 ಜನರು ಉಪಮುಖ್ಯಮಂತ್ರಿಗಳಾಗಿ ಆಗಿ ಅಧಿಕಾರ ಸ್ವೀಕರಿಸಲಿದ್ದು, ಅವುಗಳಲ್ಲಿ ಸಿದ್ದರಾಮಯ್ಯ ಸೂಚಿಸಿದವರಿಗೆ ಅವಕಾಶ ಸಿಗಲಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಬೆಳವಣಿಗೆಗಳು ಮುಂದುವರೆದಿದ್ದು, ಸಿದ್ದರಾಮಯ್ಯ ಅವರು ಒಲ್ಲದ ಮನಸ್ಸಿನಿಂದ ಕುರ್ಚಿ ಬಿಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.





