• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2026
in ಕರ್ನಾಟಕ
0
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಪ್ರಕರಣದ ಎ-14 ಆರೋಪಿ ಪ್ರದೋಷ್ ಅವರು ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿದೆ.

ADVERTISEMENT

ವಿಚಾರಣೆ ವೇಳೆ ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಪ್ರದೋಷ್ ಅವರನ್ನು ನೇರವಾಗಿ ಪ್ರಶ್ನಿಸಿದರು. ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯನ್ನು ಸ್ವಯಂಪ್ರೇರಿತವಾಗಿ ಸಲ್ಲಿಸಿದ್ದೀರಾ ಮತ್ತು ಅರ್ಜಿಯನ್ನು ಓದಿಯೇ ಸಹಿ ಮಾಡಿದ್ದೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರದೋಷ್, ತಾವು ಸ್ವಯಂಪ್ರೇರಿತವಾಗಿಯೇ ಅರ್ಜಿ ಸಲ್ಲಿಸಿದ್ದು, ಓದಿದ ಬಳಿಕ ಸಹಿ ಮಾಡಿರುವುದಾಗಿ ಉತ್ತರಿಸಿದರು.

JDS : ರೈತರ ಜಮೀನು ಕೊಡ್ತೀವಂತ ಕಮಿಟ್‌ಮೆಂಟ್‌ ಯಾಗಾದ್ರು ಆಗಿದ್ದಾರಾ...

ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದರೆ ಜೈಲಿನಲ್ಲೇ ಮುಂದುವರಿಯಬೇಕಾಗಬಹುದು. ಅಲ್ಲದೆ, ವಿಚಾರಣೆ ವೇಳೆ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸದಿದ್ದರೆ ಮತ್ತೆ ಆರೋಪಿಯಾಗಿ ಪರಿಗಣಿಸುವ ಸಾಧ್ಯತೆ ಇದೆ ಎಂದು ನ್ಯಾಯಾಧೀಶರು ಎಚ್ಚರಿಸಿದರು. ಇದಕ್ಕೆ ಪ್ರದೋಷ್, ಈ ಎಲ್ಲ ಕಾನೂನು ಪರಿಣಾಮಗಳ ಬಗ್ಗೆ ತಮ್ಮ ವಕೀಲರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.ಪ್ರದೋಷ್ ಅವರ ಮಾಫಿ ಸಾಕ್ಷಿ ಅರ್ಜಿಗೆ ನಟ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಜೈಲಿನಿಂದ ಬಿಡುಗಡೆಯಾಗುವ ಉದ್ದೇಶದಿಂದಲೇ ಅರ್ಜಿ ಸಲ್ಲಿಸಿರುವ ಸಾಧ್ಯತೆ ಇದೆ ಎಂದು ವಾದಿಸಿದ ಅವರು, ಪ್ರದೋಷ್ ಮೇಲೆ ಯಾರಾದರೂ ಒತ್ತಡ ಹೇರಿದ್ದಾರೆಯೇ ಅಥವಾ ಯಾವುದೇ ಆಮಿಷ, ಭರವಸೆ ನೀಡಲಾಗಿದೆಯೇ ಎಂಬುದನ್ನು ನ್ಯಾಯಾಲಯ ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

Tejashwi Yadav : ಲೀಕ್ ಸರ್ಕಾರದ ವಿರುದ್ಧ ನಾಳೆ ರಾಜಭವನ ಮುತ್ತಿಗಿಗೆ ಎಲ್ಲರೂ ಸಿದ್ಧರಾಗಿ..! #bjp

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯವು ಮಾಫಿ ಸಾಕ್ಷಿ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದೆ.ಇದರ ನಡುವೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮಿ, ತಾಯಿ ಮೀನಾ ಹಾಗೂ ನಟ ಧನ್ವೀರ್ ಭೇಟಿಯಾಗಿದ್ದಾರೆ.ಇತ್ತೀಚೆಗೆ ವಿಜಯಲಕ್ಷ್ಮಿ ಹಾಗೂ ಧನ್ವೀರ್ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಬೆಳವಣಿಗೆಯ ನಡುವೆಯೇ ಇಬ್ಬರೂ ಒಟ್ಟಿಗೆ ದರ್ಶನ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ದರ್ಶನ್ ಅವರ ತಾಯಿ ಮೀನಾ ಅವರ ಸಮ್ಮುಖದಲ್ಲಿ ಜೈಲಿನಲ್ಲಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಭೇಟಿಯ ಬಳಿಕ ಮಾತನಾಡಿದ ಧನ್ವೀರ್, ದರ್ಶನ್ ಆರೋಗ್ಯವಾಗಿದ್ದಾರೆ ಮತ್ತು ತಮ್ಮ ನಡುವೆ ಯಾವುದೇ ಮನಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.

Advocate Dilip Kumar I S  on actor Darshan   ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ

“ನಮ್ಮ ನಡುವೆ ಮನಸ್ತಾಪ ಇದ್ದಿದ್ದರೆ ನಾನು ಅವರನ್ನು ಭೇಟಿಯಾಗಲು ಬರುತ್ತಿರಲಿಲ್ಲ. ವದಂತಿಗಳಿಗೆ ಕಿವಿಗೊಡಬೇಡಿ” ಎಂದು ಧನ್ವೀರ್ ಹೇಳಿದ್ದಾರೆ.ದರ್ಶನ್ ಭೇಟಿಯ ಬಳಿಕ ಧನ್ವೀರ್ ಜೈಲಿನಿಂದ ಮೊದಲು ಹೊರಬಂದರೆ, ವಿಜಯಲಕ್ಷ್ಮಿ ಮತ್ತು ಮೀನಾ ಪ್ರತ್ಯೇಕ ವಾಹನಗಳಲ್ಲಿ ವಾಪಸಾದರು.

Tags: @RenukaswamyMurderCase#darshan#KannadaNews#ParappanaAgrahara#Pradosh#RenukaswamyCaseBengaluruNewsbreakingnewsCourtNewscrimenewsDarshancaseDHANVEERkannadacinemakarnatakanewsvijayalakshmi
Previous Post

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

Next Post

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
Next Post
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada