ರಾಜ್ಯದಲ್ಲಿ ನಿನ್ನೆ ಒಂದೇ ದಿನ 2057 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣ 34 ರಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 35 ಜನ ಸೋಂಕಿಗೆ ಬಲಿಯಾಗಿದ್ದಾರೆ .
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,01,247 ಏರಿಕೆಯಾದರೆ 23,253 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ನಿನ್ನೆ ಬೆಂಗಳೂರು ನಗರದಲ್ಲಿ 505 ಹೊಸ ಪ್ರಕರಣಗಳು ಪತ್ತೆಯಾಗಿದ್ದು 257 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಚಾರ್ಜ ಆಗಿದ್ದಾರೆ . ಇದರೊಂದಿಗೆ ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣ 34 ರಷ್ಟು ಏರಿಕೆಯಾಗಿದೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 396 ಹೊಸ ಪ್ರಕರಣಗಳು ಪತ್ತೆಯಾದರೆ ಉಡುಪಿಯಲ್ಲಿ 174 , ಮೈಸೂರು ಜಿಲ್ಲೆಯಲ್ಲಿ 157, ಹಾಸನ ಜಿಲ್ಲೆಯಲ್ಲಿ 136 ಹೊಸ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಜಿಲ್ಲೆಗಳಲ್ಲಿ ಸೋಂಕಿನ ಅಬ್ಬರ ತಗ್ಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಹಿತಿ ಬಿಡುಗಡೆ ಮಾಡಿದ್ದಾರೆ.