• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜನಪ್ರತಿನಿಧಿಗಳಿಲ್ಲದೇ ಕಾಟಾಚಾರಕ್ಕೆ ಬಸವ ಜಯಂತಿ ಆಚರಿಸಿದ ಸರ್ಕಾರ : ಬಸವ ಭಕ್ತರ ಆಕ್ರೋಶ!

ಪ್ರತಿಧ್ವನಿ by ಪ್ರತಿಧ್ವನಿ
May 3, 2022
in ಕರ್ನಾಟಕ
0
ಜನಪ್ರತಿನಿಧಿಗಳಿಲ್ಲದೇ ಕಾಟಾಚಾರಕ್ಕೆ ಬಸವ ಜಯಂತಿ ಆಚರಿಸಿದ ಸರ್ಕಾರ : ಬಸವ ಭಕ್ತರ ಆಕ್ರೋಶ!
Share on WhatsAppShare on FacebookShare on Telegram

ADVERTISEMENT

ರಾಜ್ಯ ಬಿಜೆಪಿ ಸರ್ಕಾರ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಿಂಗಾಯತರ ಓಲೈಕೆಗೆ ಮುಂದಾಗಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಬಸವ ಜಯಂತಿ ಆಚರಣೆ ಮಾಡುವಂತೆ ದಶಕಗಳ ಹೋರಾಟ ಮಾಡಿದ್ದರು ಸಹ ಸುಮ್ಮನಾಗಿತ್ತು. ಆದರೆ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಣೆ ಮಾಡಲು ತರಾತುರಿಯಲ್ಲಿ ಕಳೆದ ಏಪ್ರಿಲ್ 27 ಕ್ಕೆ ಆದೇಶ ಮಾಡಿತ್ತು. ಸರ್ಕಾರದ ಆದೇಶದಿಂದ ಬಸವ ಅಭಿಮಾನಿಗಳಲ್ಲಿ ಇನ್ನಿಲ್ಲದ ಸಂತೋಷವಾಗಿತ್ತು. ಆದ್ರೆ ಈಗ ಸರ್ಕಾರ ಕಾಟಾಚಾರಕ್ಕೆ ಜಯಂತಿ ಆಚರಣೆ ಮಾಡಿದೆ ಎನ್ನುವ ಮಾತುಗಳು ಕೇಳಿ ಬರ್ತಿವೆ. ಬಸವ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯವಹಿಸಿದ ಸರ್ಕಾರದ ವಿರುದ್ಧ ಬಸವ ಪ್ರೇಮಿಗಳು ಆಕ್ರೋಶ ಹೊರ ಹಾಕ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಬಸವ ಜಯಂತಿ ಆಚರಣೆ ಎಂದಾಗ ಬಸವಾಭಿಮಾನಿಗಳಲ್ಲಿ ಸಂತಸ ಮನೆ ಮಾಡಿತ್ತು. ಬಸವೇಶ್ವರರ ಹುಟ್ಟೂರಲ್ಲೆ ಜಯಂತಿ ಎಂದಾಗ ಬಸವ ತತ್ವಗಳ ಪ್ರಚಾರಕ್ಕೆ ಅನುಕೂಲವಾಗುತ್ತೆ. ಬಸವಣ್ಣನವರ ವಚನ ಸಾಹಿತ್ಯವನ್ನ ಅವರ ಹುಟ್ಟೂರಲ್ಲೆ ಆನಂದಿಸಬಹುದು ಎಂದುಕೊಂಡಿದ್ದರು. ಆದ್ರೆ ಜಯಂತಿಯ ದಿನ ಆಗಿದ್ದೇ ಬೇರೆ. ಕಾಟಾಚಾರಕ್ಕಾಗಿ ಸರ್ಕಾರ ಬಸವ ಜಯಂತಿಯನ್ನ ಹುಟ್ಟೂರಲ್ಲಿ ಆಚರಣೆಗೆ ಆದೇಶ ಮಾಡಿದೆ ಹೊರತಾಗಿ ಸರ್ಕಾರದ ಇಚ್ಛಾಶಕ್ತಿ ಇದರಲ್ಲಿ ಕಾಣಿಸುತ್ತಿಲ್ಲ ಎಂದು ಬಸವಾಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದೆ ಮೊದಲ ಬಾರಿಗೆ ಬಸವೇಶ್ವರರ ಹುಟ್ಟೂರಲ್ಲಿ ಬಸವ ಜಯಂತಿಯನ್ನ ಸರ್ಕಾರವೇ ಆಚರಣೆ ಮಾಡ್ತಿದೆ. ಆದ್ರೆ ಇಂದು ನಡೆದ ಬಸವ ಜಯಂತಿಯಲ್ಲಿ ಸರ್ಕಾರದ ಜನಪ್ರತಿಧಿಗಳೇ ಕಾಣಲಿಲ್ಲ. ಮುಖ್ಯವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಬಸವ ಜಯಂತಿ ಆಚರಣೆಗೆ ಗೈರಾಗಿದ್ದಾರೆ. ಹೀಗಾಗಿ ಸರ್ಕಾರ ಕಾಟಾಚಾರಕ್ಕೆ ಬಸವ ಜಯಂತಿಯನ್ನ ಸರ್ಕಾರದಿಂದ ಬಸವನ ಬಾಗೇವಾಡಿಯಲ್ಲಿ ಹಮ್ಮಿಕೊಳ್ತಾ ಅಂತಾ ಜನರು ಪ್ರಶ್ನೆ ಮಾಡ್ತಿದ್ದಾರೆ.

ಕೇವಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಉಸ್ತುವಾರಿ ಸಚಿವ ಉಮೇಶ ಕತ್ತಿ ಅಷ್ಟೇ ಅಲ್ಲ.. ಬಹುತೇಕ ಶಾಸಕರು, ಸಂಸದರು ಸೇರಿ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ರು. ಆದ್ರೆ ಕಾರ್ಯಕ್ರಮದ ತಯಾರಿಗಾಗಿ ಶ್ರಮಿಸುತ್ತಿದ್ದ ಕಾರ್ಯಕ್ಮದ ಅಧ್ಯಕ್ಷತೆ ವಹಿಸಿದ್ದ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್‌ ಕಾರ್ಯಕ್ರಮದಲ್ಲಿದ್ದರು. ಇನ್ನು ಬಸವನ ಬಾಗೇವಾಡಿಯಲ್ಲೆ ಸರ್ಕಾರದಿಂದ ಬಸವ ಜಯಂತಿ ನಡೆಯಬೇಕು ಅಂತಾ ವಿಧಾನ ಸೌಧದಲ್ಲಿ ಧ್ವನಿ ಎತ್ತಿದ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ರಾಠೋಡ ಇದ್ದರು. ಇವ್ರನ್ನ ಹೊರತು ಪಡೆಸಿ ವಿಜಯಪುರ ಜಿಲ್ಲೆಯ ಬಹುತೇಕ ಶಾಸಕರು ಸಂಸದರು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದು ಕಂಡು ಬಂತು.

ಸರ್ಕಾರವೇ ಬಸವ ಜಯಂತಿಗೆ ಆದೇಶಿಸಿ ಸರ್ಕಾರದ ಜನಪ್ರತಿನಿಧಿಗಳೆ ಇಲ್ಲದಿದ್ರೆ ಹೇಗೆ? ಎನ್ನುವ ಪ್ರಶ್ನೆಯು ಕೇಳಿ ಬಂತು. ಸರ್ಕಾರ ಕಾರ್ಯಕ್ರಮ ಆಯೋಜಿಸಿ ಈ ರೀತಿ ನಿರ್ಲಕ್ಷ್ಯ ಮೆರೆಯಬಾರದಿತ್ತು. ಇದೊಂದು ನೋವಿನ ಸಂಗತಿ ಎಂದು ಜ‌ನ ಬೇಸರ ವ್ಯಕ್ತಪಡಿಸಿದರು.

ಲಿಂಗಾಯತರ ಮತಗಳನ್ನ ಸೆಳೆಯಲು ಇನ್ನಿಲ್ಲದ ಕಸರತ್ತು ಮಾಡುವ ಬಿಜೆಪಿ ನಾಯಕರು, ಬಸವ ಜಯಂತಿ ಬಗ್ಗೆ ಯಾಕಿಷ್ಟು ನಿರ್ಲಕ್ಷ್ಯ ಎಂದು ಈ ಭಾಗದ ಜನ ಪ್ರಶ್ನೆ‌ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ ಚುನಾವಣೆ ವೇಳೆ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

Tags: BJPCongress Partyನರೇಂದ್ರ ಮೋದಿಬಸವ ಜಯಂತಿಬಿಜೆಪಿ
Previous Post

ಪರೀಕ್ಷೆ ಬರೆಯುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಬಿದ್ದ ಫ್ಯಾನ್!

Next Post

ಐಪಿಎಲ್: ಅಗ್ರಸ್ಥಾನಿ ಗುಜರಾತ್ ಸೋಲುಣಿಸಿದ ಪಂಜಾಬ್

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಧವನ್ ಅಬ್ಬರ; ಚೆನ್ನೈಗೆ 188 ರನ್ ಗುರಿ ಒಡ್ಡಿದ ಪಂಜಾಬ್!

ಐಪಿಎಲ್: ಅಗ್ರಸ್ಥಾನಿ ಗುಜರಾತ್ ಸೋಲುಣಿಸಿದ ಪಂಜಾಬ್

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada