• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ ನಿರ್ದೇಶಕಿ ಬಾಬಿ ಅವರ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ .

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, Uncategorized, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ. ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್”(“Just Married”)ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ(C.R. Bobby)ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ(Ankita)ಅಮರ್, ನಟಿಯರಾದ ಶೃತಿ ಕೃಷ್ಣ(Shruti Krishna), ಮಾಳವಿಕ ಅವಿನಾಶ್,(Malavika Avinash) ಶೃತಿ ಹರಿಹರನ್(Sruthi Hariharan), ವಾಣಿ ಹರಿಕೃಷ್ಣ(Vani Harikrishna)ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ನಟಿಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ADVERTISEMENT

ನಾನು ಬಹಳ ವರ್ಷಗಳ ನಂತರ ಮಹಿಳೆಯೊಬ್ಬರು ನಿರ್ದೇಶಿಸಿರುವ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಮಾತನಾಡಿದ ನಟಿ ಶೃತಿ ಕೃಷ್ಣ(Shruti Krishna), ಈ ಚಿತ್ರದಲ್ಲಿ ನಾನು ಮೊದಲ ದಿವಸದ ಚಿತ್ರೀಕರಣದಲ್ಲಿ ಪಾಲ್ಗೊಂಡಾಗಲೇ ಬಾಬಿ ಅವರ ಕಾರ್ಯವೈಖರಿ ಕಂಡು ಬೆರಗಾದೆ. ಕೆಲಸದಲ್ಲಿ ಅವರಿಗಿರುವ ನಿಷ್ಠೆ ನಿಜಕ್ಕೂ ಅಭಿನಂದನಾರ್ಹ. ಇನ್ನೂ ಈ‌ ತಂಡದ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ಅಜನೀಶ್ ಅವರ ನಿರ್ಮಾಣದ ಈ ಚಿತ್ರ ಯಶಸ್ಸು ಕಾಣಲಿ ಎಂದು ಹಾರೈಸಿದರು.

ಚಿತ್ರರಂಗದ ತಂತ್ರಜ್ಞಾನ ವಿಭಾಗದಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸುವುದು ತುಂಬಾ ಕಡಿಮೆ. ಆ‌ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸಂಗೀತ ವಿಭಾಗದಲ್ಲಿ ತೊಡಗಿಸಿಕೊಂಡಿರುವ ಸಿ.ಆರ್.ಬಾಬಿ(C.R. Bobby) ಇದೇ ಮೊದಲ ಬಾರಿಗೆ “ಜಸ್ಟ್ ಮ್ಯಾರೀಡ್”(“Just Married”) ಚಿತ್ರದ ಮೂಲಕ ನಿರ್ದೇಶಕಿಯಾಗಿದ್ದಾರೆ. ಆದರೆ ನಾನು ಚಿತ್ರೀಕರಣದಲ್ಲಿ ಪಾಲ್ಗೊಂಡಾಗ ಒಂದು ದಿನವೂ ಇದು ಬಾಬಿ ಅವರ ಮೊದಲ ನಿರ್ದೇಶನದ ಚಿತ್ರ ಅನಿಸಲೇ ಇಲ್ಲ. ಅಷ್ಟು ಅಚ್ಚುಕಟ್ಟಾಗಿತ್ತು ಅವರ ಕಾರ್ಯವೈಖರಿ. ನಾನು ಈ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದು ಸಿ.ಆರ್.ಬಾಬಿ (C.R. Bobby)ಅವರಿಗಾಗಿ.‌ ಅದರಲ್ಲೂ ಒಬ್ಬ ಮಹಿಳೆ ನಿರ್ದೇಶಿಸುತ್ತಿರುವ ಚಿತ್ರ ಎಂಬ ಕಾರಣಕ್ಕಾಗಿ. ಇನ್ನೂ ಈ ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಅಜನೀಶ್ ಲೋಕನಾಥ್ ನಿರ್ಮಾಣ‌ ಮಾಡಿದ್ದಾರೆ. “ಜಸ್ಟ್ ಮ್ಯಾರೀಡ್” ಚಿತ್ರ ಭರ್ಜರಿ ಹಿಟ್ ಆಗಲಿ ಎಂದು ನಟಿ ಮಾಳವಿಕ ಅವಿನಾಶ್ ಹಾರೈಸಿದರು.

ನನಗೆ ಬಾಬಿ ಅವರು ಬಹಳ ದಿನಗಳ ಪರಿಚಯ. ಅವರು “ಜಸ್ಟ್ ಮ್ಯಾರೀಡ್”(“Just Married”) ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ವಿಷಯ ತಿಳಿದು ಬಹಳ ಖುಷಿಯಾಯಿತು. ಒಂದು ದಿನ ಅವರು ಫೋನ್ ಮಾಡಿ ನೀವು ಈ ಚಿತ್ರದಲ್ಲಿ ನಟಿಸಬೇಕೆಂದರು. ನನಗೆ ಹಾಡುವುದು ಸುಲಭ. ಆದರೆ ನಟನೆ ಹೊಸತು‌. ಬಾಬಿ ಅವರು ನನಗೆ ಚಿತ್ರೀಕರಣಕ್ಕೂ ಮುನ್ನ ತರಭೇತಿ ನೀಡಿದ್ದರು. ಅದರಿಂದ ನನಗೆ ಅಭಿನಯಿಸಲು ಅನುಕೂಲವಾಯಿತು. ಈ ಚಿತ್ರದಲ್ಲಿ ಸಾಕಷ್ಟು ಜನ ಹಿರಿಯ ಹಾಗೂ ಕಿರಿಯ ಕಲಾವಿದರು ನಟಿಸಿದ್ದಾರೆ. ಅವರೆಲ್ಲರ ಜೊತೆಗೆ ನಟಿಸಿದ್ದು ಬಹಳ ಖುಷಿಯಾಗಿದೆ ಎನ್ನುತ್ತಾರೆ ವಾಣಿ ಹರಿಕೃಷ್ಣ.

Women's Day: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆದಂದು ವಿಶೇಷ ತರಬೇತಿ..!  #womensday #parade #Bangalore

ನಾಯಕಿ ಅಂಕಿತ ಅಮರ್ ಹಾಗೂ ನಟಿ ಶೃತಿ ಹರಿಹರನ್(Sruthi Hariharan) ಕೂಡ “ಜಸ್ಟ್ ಮ್ಯಾರೀಡ್” (“Just Married”)ಚಿತ್ರದಲ್ಲಿ ನಟಿಸಿದ್ದು ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನಿರ್ದೇಶಕಿ ಬಾಬಿ ಅವರಿಗೆ ಹಾಗೂ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದೆಯರಿಗೆ ಶುಭಾಶಯ ತಿಳಿಸಿದ್ದಾರೆ‌.

ನನ್ನ ನಿರ್ದೇಶನದ ‘ಜಸ್ಟ್ ಮ್ಯಾರಿಡ್’ (“Just Married”)ಚಿತ್ರದಲ್ಲಿ ಲೆಜೆಂಡರಿ ಕಲಾವಿದೆ ಶೃತಿ ಕೃಷ್ಣ ರವರು ಅಭಿನಯಿಸಿದ್ದು ನನಗೆ ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಹಾಗೂ ಮಾಳವಿಕ ಅವಿನಾಶ್ ರವರು ಈ ಚಿತ್ರದಲ್ಲಿ ಒಂದು ಮಹತ್ವದ ಪಾತ್ರದಲ್ಲಿ ಅಭಿನಯಿಸಿ, ಈ ಚಿತ್ರದ ಒಂದು ತೂಕವನ್ನೇ ಹೆಚ್ಚಿಸಿದ್ದಾರೆ. ಶೃತಿ ಹರಿಹರನ್(Sruthi Hariharan) ಕೂಡ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಮನಸ್ಸನ್ನು ಸೂರೆಗೊಳ್ಳಲಿದ್ದಾರೆ. ಗಾಯಕಿ ವಾಣಿ ಹರಿಕೃಷ್ಣರವರು ನಟಿಸಿರುವ ಪಾತ್ರ ಎಲ್ಲರ ಮುಖದಲ್ಲೂ ನಗು ತರಿಸುವಂತಹ ಪಾತ್ರವಾಗಿದೆ. ನಾಯಕನಟಿ ಅಂಕಿತ ಅಮರ್ ಅವರದು ಸಮಕಾಲಿನ ಹುಡುಗಿಯರನ್ನು ಪ್ರತಿಬಿಂಬಿಸುವ ಪಾತ್ರವಾಗಿದೆ ಎಂದು ನಿರ್ದೇಶಕಿ ಸಿ ಆರ್ ಬಾಬಿಯವರು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದ್ದಾರೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ (Shine Shetty)ಹಾಗೂ ಅಂಕಿತ(Ankita) ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

Tags: C.R. BobbyJust MarriedMalavika Avinashshine shettyShruti KrishnaSruthi HariharanVani Harikrishna
Previous Post

ಭಾರತ ಸುಂಕ ಕಡಿತಗೊಳಿಸಲು ನಿರ್ಧಾರ- ಟ್ರಂಪ್‌

Next Post

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆದಂದು ವಿಶೇಷ ತರಬೇತಿ..!

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆದಂದು ವಿಶೇಷ ತರಬೇತಿ..!

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada