• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ..

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳೂ ಆದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ ಶ್ಲಾಘಿಸಿದ್ದಾರೆ.

ADVERTISEMENT
Koppal Farmer Cultivates World’s Costliest Mango : ಮಾವು ಮೇಳಕ್ಕೆ‌ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್..!

ಕೆಪಿಸಿಎಲ್ ವತಿಯಿಂದ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2026ರ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರಾಜ್ಯಕ್ಕೆ ಬೇಕಾದ ವಿದ್ಯುತ್ ಉತ್ಪಾದನೆ ಮಾಡುವ ಕೆಪಿಸಿಎಲ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಇದ್ದಾರೆ. ಪುರುಷರಿಗಿಂತ ಕಮ್ಮಿ ಇಲ್ಲ ಎಂಬ ರೀತಿಯಲ್ಲಿ ಕೆಲಸ ಮಾಡಿ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಗೆ ಶ್ರಮಿಸಿದ್ದಾರೆ,” ಎಂದು ಹೇಳಿದರು.

“ಸುಮಾರು 40 ವರ್ಷಗಳ ಹಿಂದೆ ನಾನು ಐಐಟಿಯಲ್ಲಿ ಓದುತ್ತಿದ್ದಾಗ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಕೇವಲ 8 ಮಂದಿ ಹೆಣ್ಣು ಮಕ್ಕಳಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಸಾಕಷ್ಟು ಹೆಣ್ಣು ಮಕ್ಕಳು ಇಂಜಿನಿಯರಿಂಗ್ ಓದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕೆಪಿಸಿಎಲ್ ನಲ್ಲೂ ಸಾಕಷ್ಟು ಮಹಿಳಾ ಇಂಜಿನಿಯರ್ ಗಳು ನಾಯಕತ್ವ ವಹಿಸಿ ಕೆಲಸ ಮಾಡುತ್ತಿದ್ದಾರೆ,” ಎಂದರು.

ಇದನ್ನೂ ಓದಿ : ಮೋದಿ ಆಕಾಶದಿಂದ ಇಳಿದು ಮಾತನಾಡಲಿ, ಭೂಮಿಯ ಮೇಲಿದ್ದು ಹೇಳಿಕೆ ನೀಡಲಿ :‌ ಪ್ರಧಾನಿ ಆರೋಪಕ್ಕೆ ರಾಜಣ್ಣ ಟಾಂಗ್

“ಕೆಪಿಸಿಎಲ್ ಎಂದರೆ ಕೇವಲ ಒಂದು ವಿದ್ಯುತ್ ಉತ್ಪಾದನಾ ಸಂಸ್ಥೆಯಲ್ಲ, ಅದೊಂದು ಕುಟುಂಬದ ರೀತಿ. ಪರಸ್ಪರ ಸಹಕಾರದೊಂದಿಗೆ ಸಮಾನವಾಗಿ ಕೆಲಸ ಮಾಡುತ್ತಿದ್ದಾರೆ,” ಎಂದು ಹೇಳಿದ ಅವರು, ನಿಗಮದ ಎಲ್ಲಾ ಮಹಿಳಾ ಸಿಬ್ಬಂದಿಗೆ ಮಹಿಳಾ ದಿನಾಚರಣೆಯ ಶುಭ ಕೋರಿದರು.

ರಾಜಾಜಿಗರದ ಎಸ್ ಜೆಆರ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಾ ಸಿದ್ದರಾಜು ಮಾತನಾಡಿ, “ಸಮಾಜದಲ್ಲಿ ಸ್ತ್ರೀ ಮತ್ತು ಪುರುಷರು ಸುಶಿಕ್ಷಿತರಾಗಿ ಸಮಾನತೆ ಎಂಬುದು ಅಚ್ಚುಕಟ್ಟಾಗಿ ಜಾರಿಯಾಗಿ ಆರ್ಥಿಕವಾಗಿಯೂ ಸಮಾನತೆ ಬಂದಾಗ ಯಾವುದೇ ರಾಷ್ಟ್ರ ಮುಂದುವರಿದ ರಾಷ್ಟ್ರವಾಗಿ ಹೊರಹೊಮ್ಮುತ್ತದೆ. ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಪುರುಷರಷ್ಟೇ ಸಮಾನ ಅವಕಾಶ ಸಿಗದೇ ಇದ್ದಿದ್ದರೆ ದೇಶ ಇಂದಿಗೂ ಹಿಂದುಳಿದ ರಾಷ್ಟ್ರವಾಗಿಯೇ ಉಳಿಯುತ್ತಿತ್ತು. ಹೆಣ್ಣು ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಶೇ. 100ರಷ್ಟು ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತಾರೆ. ಹೀಗಾಗಿ ಭಾರತ ಮುಂದುವರಿಯುತ್ತಿರುವ ರಾಷ್ಟ್ರವಾಗಿದೆ,” ಎಂದರು.

CM Rekha Gupta : ಕಠಿಣ ನಿಯಮ ಜಾರಿಗೆ ತಂದ ದೆಹಲಿ ಸಿಎಂ ರೇಖಾ ಗುಪ್ತಾ.. #pratidhvani

“ಪ್ರಧಾನ ಭಾಷಣ ಮಾಡಿದ ಸಾರಿಗೆ ಇಲಾಖೆ ಅಪರ ಸಾರಿಗೆ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿ ಅವರು ಮಹಿಳಾ ದಿನದ ವಿಶೇಷತೆ ಮತ್ತು ಮಹಿಳಾ ಸಾಧಕಿಯರ ಬಗ್ಗೆ ಮಾತನಾಡಿದರಲ್ಲದೆ, ಸಮಾಜದಲ್ಲಿ ಎಲ್ಲರನ್ನೂ ಗೌರವಿಸುವ, ಅದರಲ್ಲೂ ಮಹಿಳೆಯರನ್ನು ಗೌರವಿಸುವ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಿಕೊಡಬೇಕು,” ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಂಗಕರ್ಮಿ, ನಟಿ, ಸಂಚಾರಿ ಥಿಯೇಟರ್ ಸಂಸ್ಥಾಪಕಿ ಮಂಗಳಾ ಎನ್. ಅವರನ್ನು ಗೌರವಿಸಲಾಯಿತು. ಮಹಿಳಾ ದಿನಾಚರಣೆ ಅಂಗವಾಗಿ ನಿಗಮದ ಮಹಿಳಾ ಸಿಬ್ಬಂದಿಗೆ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕೆಪಿಸಿಎಲ್ ಹಣಕಾಸು ನಿರ್ದೇಶಕರಾದ ಆರ್. ನಾಗರಾಜ, ತಾಂತ್ರಿಕ ನಿರ್ದೇಶಕರಾದ ಎಂ.ಆರ್.ಗಂಗಾಧರ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ರೇಖಾ ಟಿ., ಕೆಪಿಸಿಎಲ್ ಮುಖ್ಯ ಜಾಗೃತ ಅಧಿಕಾರಿ ಸಿರಿಗೌರಿ ಡಿ.ಜಿ. ಮತ್ತಿತರರು ಪಾಲ್ಗೊಂಡಿದ್ದರು.

Tags: Artistcongress karnatakagaurav guptainternational womens dayKPCL FinancialKPTCLKPTCL Human ResourceKPTCL VigilencePower DepartmentPratidhvaniTheater Artistwomens
Previous Post

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

Next Post

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada