• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇಂದು ಅದಾನಿ ವಿಚಾರ ಮಾತನಾಡುವುದಿಲ್ಲ: ಸಂಸತ್ತಿನಲ್ಲಿ ರಾಹುಲ್‌ ಗಾಂಧಿ ಮಾತು

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಬುಧವಾರ (ಆಗಸ್ಟ್‌ 9) ಎರಡನೇ ದಿನ ತಲುಪಿದ್ದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮೊದಲ ಬಾರಿಗೆ ಮಣಿಪುರ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಿದ್ದಾರೆ.

ADVERTISEMENT

ರಾಹುಲ್‌ ಅವರು ಮಣಿಪುರ ವಿಚಾರದಲ್ಲಿನ ನಿರ್ಲಕ್ಷ್ಯಕ್ಕಾಗಿ ಕೇಂದ್ರ ಹಾಗೂ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. “ಮಣಿಪುರದಲ್ಲಿ ಭಾರತ ಹತ್ಯೆಯಾಗಿದೆ. ಈಗ ಸತ್ಯವೆಂದರೆ ಮಣಿಪುರ ಎರಡು ಭಾಗಗಳಾಗಿ ವಿಭಜನೆಯಾಗಿದೆ. ಇಂದು ನಾನು ಅದಾನಿ ವಿಚಾರ ಪ್ರಸ್ತಾಪಿಸುವುದಿಲ್ಲ” ಎಂದು ಲೋಕಸಭೆಯಲ್ಲಿ ಹೇಳಿದ್ದಾರೆ.

“ಪ್ರಧಾನಿ ಮೋದಿ ಅವರಿಗೆ ಮಣಿಪುರ ಭಾರತದ ಭಾಗವಾಗಿಲ್ಲ. ಆದರೆ ನಾನು ನಡೆಸಿದ ಭಾರತ್‌ ಜೋಡೋ ಯಾತ್ರೆಯಿಂದ ದೇಶ ಅರ್ಥವಾಗಿದೆ. ಶಬ್ದಗಳು ಹೃದಯದಿಂದ ಬರಬೇಕು, ಹೃದಯವನ್ನು ಮುಟ್ಟುವಂತಿರಬೇಕು” ಏಂದು ರಾಹುಲ್ ಗಾಂಧಿ ರೂಮಿ ಅವರ ಹೇಳಿಕೆಯನ್ನು ಉಲ್ಲೇಖಿಸಿದರು.

ತಮ್ಮ ಭಾಷಣದ ವೇಳೆ ರಾಹುಲ್‌ ಭಾರತ್‌ ಜೋಡೋ ಯಾತ್ರೆಯ ಅನುಭವವನ್ನು ಹಂಚಿಕೊಂಡರು. “ಪ್ರಯಾಣ ಇನ್ನೂ ಮುಗಿದಿಲ್ಲ. ಎರಡನೇ ಯಾತ್ರೆಯು ಈ ವರ್ಷದ ದ್ವಿತೀಯಾರ್ಧದಿಂದ ಆರಂಭಿಸಲಾಗುವುದು” ಎಂದು ತಿಳಿಸಿದರು.“ನನಗೆ ಲೋಕಸಭಾ ಸದಸ್ಯನ ಸ್ಥಾನವನ್ನು ಮರುಸ್ಥಾಪಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇಂದು ಅದಾನಿ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ರಾಹುಲ್‌ ಗಾಂಧಿ ಸ್ಪಷ್ಟಪಡಿಸಿದರು.

ಬೆಳಿಗ್ಗೆ 11 ಗಂಟೆಗೆ ಆರಂಭವಾದ ಲೋಕಸಭೆ ಕಲಾಪ ಆಡಳಿತ ಹಾಗೂ ಪ್ರತಿಪಕ್ಷಗಳ ಗದ್ದಲದಿಂದ ಮಧ್ಯಾಹ್ನ 12ಕ್ಕೆ ಮುಂದೂಡಲ್ಪಟ್ಟಿತು. ಬಳಿಕ 12 ಗಂಟೆಗೆ ಆರಂಭವಾದ ಕಲಾಪದಲ್ಲಿ ರಾಹುಲ್‌ ಗಾಂಧಿ ಅವರು ಕಲಾಪಕ್ಕೆ ಆಗಮಿಸಿ ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಧನ್ಯವಾದ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತು ಮುಂಗಾರು ಅಧಿವೇಶನ | ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ; ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅಮಾನತು

ಸಂಸದ ಸುಶೀಲ್‌ ಅವರ ಈ ನಡೆಯನ್ನು ಸಭಾಪತಿ ಜಗದೀಪ್‌ ಧನ್‌ಕರ್‌ ಅವರು ವಿರೋಧಿಸಿದರು. ಹಣದುಬ್ಬರ ಮತ್ತು ಟೊಮ್ಯಾಟೊ ತರಕಾರಿ ಬೆಲೆ ಹೆಚ್ಚಳ ಖಂಡಿಸಿ ಪ್ರತಿಪಕ್ಷ ನಾಯಕರು ಪ್ರತಿಭಟನೆ ನಡೆಸಿದರು. ತೀವ್ರ ಗದ್ದಲ ಹಿನ್ನೆಲೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಬೆಳಿಗ್ಗೆ ಆರಂಭವಾದ ಲೋಕಸಭೆ ಕಲಾಪದಲ್ಲಿ ಪ್ರಧಾನಿ ಓದಿ ಸೇರಿ ಇತರ ನಾಯಕರು 1942ರ ಕ್ವಿಟ್‌ ಇಂಡಿಯಾ ಚಳವಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ಜಪಾನ್‌ನ ಹಿರೋಷಿಮಾ ಮತ್ತು ನಾಗಸಾಕಿಯ ಅಣುಬಾಂಬ್‌ ದಾಳಿಯ 78ನೇ ವರ್ಷಾಚರಣೆ ಸ್ಮರಣಾರ್ಥ ಸಂತ್ರಸ್ತರಿಗೆ ಸಭಾ ನಾಯಕರು ಗೌರವ ನಮನ ಸಲ್ಲಿಸಿದರು.

ಲೋಕಸಭೆಯಲ್ಲಿ ಬುಧವಾರ ಚರ್ಚೆಗೆ ಪಟ್ಟಿ ಮಾಡಲಾಗಿದ್ದ ವಿಚಾರಗಳ ಬಗ್ಗೆ ಕಾಂಗ್ರೆಸ್‌ ಸಂಸದರಾದ ಮಣಿಕಾಮ್‌ ಟ್ಯಾಗೋರ್‌ ಮತ್ತು ಮನೀಶ್‌ ತಿವಾರಿ ಮುಂಡೂಡಿಕೆ ನಿಲುವಳಿ ಮಂಡಿಸಿದರು. ರಾಜ್ಯಸಭೆಯಲ್ಲಿ ಬುಧವಾರ ಒಟ್ಟು ಆರು ಮಸೂದೆಗಳನ್ನು ಮಂಡಿಸಲಾಗುತ್ತಿದೆ.

Tags: Lok SabhaManipur IssueParliament Mansoon SessionPM Narendra ModiRahul Gandhiಪ್ರಧಾನಿ ನರೇಂದ್ರ ಮೋದಿಮಣಿಪುರ ಗಲಭೆರಾಹುಲ್ ಗಾಂಧಿಲೋಕಸಭೆ
Previous Post

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 1

Next Post

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

January 12, 2026
Next Post
ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

ಸಾಮಾಜಿಕ ವೈಪರೀತ್ಯಗಳಿಗೆ ʼಕ್ವಿಟ್‌ ಇಂಡಿಯಾʼ ಎನ್ನೋಣ- ಭಾಗ 2

Please login to join discussion

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ
Top Story

ಕುಬ್ಜವಾಗುತ್ತಿರುವ ಸಮಾಜದಲ್ಲಿ ಯುವ ಸಮುದಾಯ

by ನಾ ದಿವಾಕರ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada