• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ: ಎಲ್ಲೆಡೆ ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 13, 2021
in ಕರ್ನಾಟಕ
0
ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ: ಎಲ್ಲೆಡೆ ವಿಡಿಯೋ ವೈರಲ್
Share on WhatsAppShare on FacebookShare on Telegram

ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆಯೊಂದು ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ.

ADVERTISEMENT

‘ಯಾದಗಿರಿ ಜಿಲ್ಲೆಯ ಶಹಾಪುರ ನಗರಹೊರವಲಯದಲ್ಲಿ ನಡೆದಿದೆ ಎನ್ನ ಲಾದ ವಿಡಿಯೊದಲ್ಲಿ ಮಹಿಳೆಯನ್ನು ನಗ್ನ ಗೊಳಿಸಿ ಹಲ್ಲೆ ನಡೆಸಿರುವ ಕುರಿತು ನಾಲ್ವ ರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ ತಿಳಿಸಿದ್ದಾರೆ.

‘ಕೃತ್ಯ ಕ್ಕೆ ಸಂಬಂಧಿಸಿದಂತೆ ಶಹಾಪುರ ನಗರ ಠಾಣೆಯಲ್ಲಿ ಪ್ರ ಕರಣ ದಾಖಲಿಸಿಕೊಳ್ಳಲಾಗುವುದು. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮಹಿಳೆಯಾರೂ ಎಂದು ಪತ್ತೆಯಾಗಿಲ್ಲ . ಪತ್ತೆಯಾದರೆ ಇವರ ಕಡೆಯಿಂದದೂರು ಪಡೆಯಲಾಗುವುದು. ಇಲ್ಲದಿದ್ದ ರೆ ಸ್ವಯಂಪ್ರೇ ರಿತ ದೂರು ದಾಖಲಿಸಿಕೊಳ್ಳಲಾಗುವುದು’ ಎಂದಿದ್ದರು.

ಅಧಿಕಾರಿಗಳಮೂರು ತಂಡ ರಚನೆ

‘ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಮೂರು ತಂಡಗಳನ್ನು ರಚಿಸಲಾಗಿದೆ. ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಶೀಘ್ರವೇ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ಸಾಂದಾರ್ಭಿಕ ಚಿತ್ರ

ವೀಡಿಯೋದಲ್ಲಿ ಏನಿದೆ?

ಯಾದಗಿರಿ-ಶಹಾಪುರ ಮಾರ್ಗ ಮಧ್ಯೆ ಜಮೀನೊಂದರಲ್ಲಿ ಕಗ್ಗತ್ತಲಲ್ಲಿ ನಡೆದಿದೆ ಎನ್ನಲಾಗಿರುವ ಈ ಘಟನೆಯನ್ನು ಹಲ್ಲೆಕೋರರ ಗುಂಪೇ ಮೊಬೈಲ್ನಲ್ಲಿ ಚಿತ್ರೀಕರಿಸಿದಂತಿದೆ. ತೀವ್ರ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತ ಆಕೆಗೆ ಥಳಿಸಲು ಶುರು ಮಾಡುವ ನಾಲ್ಕೈದು ಜನರ ಗುಂಪು, ಆ ಮಹಿಳೆಯ ಮೈಮೇಲೆ ತುಂಡು ಬಟ್ಟೆಯನ್ನೂ ಬಿಡದೆ ಬೆತ್ತಲಾಗಿಸಿ ಥಳಿಸಿದ, ಲೈಂಗಿಕ ಹಿಂಸೆ ನೀಡಿದ ದೃಶ್ಯಗಳು ವಿಡಿಯೋದಲ್ಲಿವೆ. ಹಲ್ಲೆಕೋರರಲ್ಲೊಬ್ಬ ಮೊಬೈಲ್ನಲ್ಲಿ ಫೋಟೋ ತೋರಿಸಿ, ‘ಈಕೆ ನೀನೇ ಅಲ್ಲವೇ?’ ಎಂದು ಅವಾಚ್ಯವಾಗಿ ನಿಂದಿಸುತ್ತ ಥಳಿಸುತ್ತಾನೆ. ಆಗ ಆಕೆ ‘ನಾನಲ್ಲ, ನಂಗೇನೂ ಗೊತ್ತಿಲ್ಲ’ ಎಂದು ಪರಿಪರಿಯಾಗಿ ಹೇಳುತ್ತಾರೆ. ಆದರೂ ಬಿಡದ ಉಳಿದವರು ಮನಸೋ ಇಚ್ಛೆ ಥಳಿಸುತ್ತಾರೆ. ತನ್ನನ್ನು ಸಂಪೂರ್ಣ ಬೆತ್ತಲಾಗಿಸಿ, ಸುತ್ತುವರಿದು ಕೇಕೆ ಹಾಕುತ್ತಿದ್ದ ಗುಂಪಿಗೆ ಕೈಮುಗಿದು ಕಣ್ಣೀರು ಹಾಕಿದ ಆ ಮಹಿಳೆ, ತನ್ನನ್ನು ಬಿಡಿ ಎಂದು ಗೋಗರೆಯುತ್ತಾಳೆ.

ಆಗ ಗುಂಪಲ್ಲಿದ್ದ ಒಬ್ಬ ಹೊಡೆಯುವ ನೆಪದಲ್ಲಿ ಆಕೆಯ ಅಂಗಾಂಗಗಳನ್ನು ಮುಟ್ಟಿ ವಿಕೃತವಾಗಿ ವರ್ತಿಸುತ್ತಾನೆ. ಹಲ್ಲೆಯ ನೋವು ತಾಳಲಾಗದ ಆಕೆ ಅಲ್ಲಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಾಳಾದರೂ, ಸುತ್ತುವರೆದ ಗುಂಪು ಆಕೆಯನ್ನು ಅಟ್ಟಾಡಿಸಿ ಹೊಡೆಯುತ್ತದೆ. ವಾಹನವೊಂದರ ಹೆಡ್ ಲೈಟ್ ಬೆಳಕು ಹಾಗೂ ಮೊಬೈಲ್ ಟಾಚ್ರ್ ಅನ್ನು ಆಕೆಯ ಮುಖಕ್ಕೆ ಹಿಡಿದು, ಹಿಂಸಿಸುವ ದೃಶ್ಯಗಳು ಕಂಡುಬರುತ್ತವೆ. ನೋವು ತಾಳಲಾಗದೆ ಆಕೆ ಚೀರಾಡುತ್ತಿರುತ್ತಾಳೆ.

Watch Live Video :  10 ದಿನಗಳ ವಿಧಾನ ಮಂಡಲ ಅಧಿವೇಶನ : ಅಧಿವೇಶನದ ಮೊದಲನೇ ದಿನದ ಕಲಾಪ ಲೈವ್‌ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಹಾಯಕ್ಕೆ ಮಹಿಳೆ ಕೂಗಿದಾಗ ‘ಇಲ್ಲಿ ಯಾರೂ ಇಲ್ಲ, ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತೇವೆ’ ಎಂದು ಬೆದರಿಸಿದ ಮಾತುಗಳು ವೀಡಿಯೋದಲ್ಲಿವೆ. ‘ಪೊಲೀಸ್ ಠಾಣೆಯಲ್ಲೇ ಈ ಮಹಿಳೆ ನನ್ನಿಂದ 13-14 ಸಾವಿರ ಹಣ ಪಡೆದಿದ್ದಾಳೆ’ ಎಂದು ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ಥಳಿಸುತ್ತಾನೆ. ಯಾದಗಿರಿ ಸಮೀಪದ ಚಟ್ನಳ್ಳಿ ಹಾಗೂ ಶಹಾಪುರದ ಹಳಿಸಗರ ಪ್ರದೇಶದ ಹೆಸರುಗಳು ಅವರ ಬಾಯಲ್ಲಿ ಕೇಳಿಬರುತ್ತವೆ. ‘ಬೆಳಿಗ್ಗೆ ಹಣ ವಾಪಸ್ ನೀಡಬೇಕು’ ಎಂದು ತಾಕೀತು ಮಾಡುತ್ತಾರೆ.

Tags: BJPನಗ್ನಬಿಜೆಪಿಮಹಿಳೆಯಾದಗಿರಿವಿಡಿಯೋ ವೈರಲ್ಶಹಾಪುರ
Previous Post

ರಾಷ್ಟ್ರ ರಾಜಕಾರಣದಲ್ಲಿ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು?

Next Post

ಸಂವಿಧಾನ ರಚನೆಗೂ ಮೊದಲೇ ಸ್ವಾಮಿ ವಿವೇಕಾನಂದರು ಜಾತ್ಯತೀತತೆ ಪ್ರತಿಪಾದಿಸಿದ್ದರು: CJI ಎನ್.ವಿ ರಮಣ

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಂವಿಧಾನ ರಚನೆಗೂ ಮೊದಲೇ ಸ್ವಾಮಿ ವಿವೇಕಾನಂದರು ಜಾತ್ಯತೀತತೆ ಪ್ರತಿಪಾದಿಸಿದ್ದರು: CJI ಎನ್.ವಿ ರಮಣ

ಸಂವಿಧಾನ ರಚನೆಗೂ ಮೊದಲೇ ಸ್ವಾಮಿ ವಿವೇಕಾನಂದರು ಜಾತ್ಯತೀತತೆ ಪ್ರತಿಪಾದಿಸಿದ್ದರು: CJI ಎನ್.ವಿ ರಮಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada