• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Any Mind by Any Mind
October 5, 2023
in Top Story
0
ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
Share on WhatsAppShare on FacebookShare on Telegram

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯ ಖಾಸಗಿ ದರ್ಬಾರ್ ಹಾಲ್ನಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಲಿದ್ದು, ಇದಕ್ಕಾಗಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯವು ಇದೇ ಅಕ್ಟೋಬರ್ 9ರಂದು ಸಂಪ್ರದಾಯದಂತೆ ನಡೆಯಲಿದೆ. ರಾಜ ದರ್ಬಾರ್ಗೆ ಮೈಸೂರು ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದ್ದು, ಅಕ್ಟೋಬರ್ 9ರಂದು ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಅರಮನೆಯ ಖಾಸಗಿ ದರ್ಬಾರ್ ಹಾಲ್ನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ನಡೆಯಲಿದ್ದು, ಅಂದು ಮುಂಜಾನೆಯಿಂದಲೇ ನವಗ್ರಹ, ಗಣಪತಿ ಹೋಮ-ಹವನ ನೆರವೇರಲಿದೆ.

ADVERTISEMENT

ಅಕ್ಟೋಬರ್ 15ರಿಂದ ಅರಮನೆಯಲ್ಲಿ ನವರಾತ್ರಿ ಸಂಭ್ರಮ ಆರಂಭವಾಗಲಿದ್ದು, ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿ ಬ್ರಾಹ್ಮಿ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುವುದು. ಅರಮನೆಯಲ್ಲಿ ಅಕ್ಟೋಬರ್ 20ರಂದು ಸರಸ್ವತಿ ಪೂಜೆ, 21ರಂದು ಕಾಳರಾತ್ರಿ ಪೂಜೆ, 23ರಂದು ಆಯುಧ ಪೂಜೆ, 24ರಂದು ವಿಜಯದಶಮಿ ಪೂಜೆ ನಡೆಯಲಿದೆ. ಇನ್ನ ನವೆಂಬರ್ 8ರಂದು ರತ್ನ ಖಚಿತ ಸಿಂಹಾಸನವನ್ನ ವಿಂಗಡಣೆ ಮಾಡಿ ಭದ್ರತಾ ಕೊಠಡಿಗೆ ರವಾನೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಸಂಪ್ರದಾಯದಂತೆ ಮೈಸೂರು ತಾಲೂಕಿನ ಗೆಜ್ಜಗಳ್ಳಿ ಗ್ರಾಮದ ವೀರಶೈವರು ಮಡಿ ಬಟ್ಟೆತೊಟ್ಟು ದೇವರಿಗೆ ಕೈಮುಗಿದು, ಸಿಂಹಾಸನದ 6 ಭಾಗಗಳನ್ನು ತಂದು ಅಂಬಾವಿಲಾಸ ರತ್ನಗಂಬಳಿಯ ಮೇಲೆ 15 ಅಡಿ ಅಗಲ ಮತ್ತು ಉದ್ದವಿರುವ ಜಾಗದಲ್ಲಿ ಕೂರ್ಮಾವತಾರ ಆಸನವನ್ನು ಜೋಡಿಸಿ, ಕಾಲುಗಳನ್ನು ಅಳವಡಿಸುವರು. ನಂತರ ಪುರೋಹಿತರು ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಬಿಳಿ ಬಟ್ಟೆಯಿಂದ ಮುಚ್ಚುತ್ತಾರೆ. ಈ ವೇಳೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರ ಖುದ್ದು ಮಾರ್ಗದರ್ಶನದಲ್ಲಿ ಸಿಂಹಾಸನದ ಜೋಡಣೆ ಕಾರ್ಯವು ಜರುಗಲಿದೆ. ಹಿಂದಿನ ಕಾಲದಲ್ಲಿ ಪ್ರತಿನಿತ್ಯವೂ ಮಹಾರಾಜರು ಸಿಂಹಾಸನವೇರಿ ದರ್ಬಾರ್ ನಡೆಸುತ್ತಿದ್ದರಾದರೂ ನವರಾತ್ರಿ ವೇಳೆ ನಡೆಯುತ್ತಿದ್ದ ದರ್ಬಾರ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಸ್ವಾತಂತ್ರ್ಯದ ನಂತರ ನವರಾತ್ರಿ ಸಮಯದಲ್ಲಿ ಖಾಸಗಿಯಾಗಿ ಹಿಂದಿನ ಧಾರ್ಮಿಕ ಕೈಂಕರ್ಯದೊಂದಿಗೆ ದರ್ಬಾರ್ ನಡೆಸಲಾಗುತ್ತಿದ್ದು, ಇದು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿದೆ.

Tags: dasaradasarafestivalMysuru
Previous Post

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ

Next Post

ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada