• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎಂದ ಹೆಚ್‌ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Any Mind by Any Mind
October 13, 2021
in ಕರ್ನಾಟಕ, ರಾಜಕೀಯ
0
ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎಂದ ಹೆಚ್‌ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು
Share on WhatsAppShare on FacebookShare on Telegram

‘ಪುಟಗೋಸಿ’ ವಿಪಕ್ಷನಾಯಕ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮೈತ್ರಿ ಸರ್ಕಾರವನ್ನು ಉರುಳಿಸಿದರು ಎಂದು ಹೆಚ್​ಡಿ ಕುಮಾರಸ್ವಾಮಿ (HD Kumaraswamy) ನೀಡಿರುವ ಹೇಳಿಕೆಗೆ ಡಾ. ಯತೀಂದ್ರ ಸಿದ್ದರಾಮಯ್ಯ (Dr Yathindra Siddaramaiah) ತಿರುಗೇಟು ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ 17 ಜನ ಶಾಸಕರು ನಮ್ಮನ್ನು ಬಿಟ್ಟು ಹೋಗುವುದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

ಹೆಚ್.ಡಿ ಕುಮಾರಸ್ವಾಮಿಯವರು ಮಾಡುತ್ತಿರುವ ಆರೋಪಗಳಿಗೆ ಯಾವುದೇ ಹುರುಳಿಲ್ಲ, ನಿಜವಾಗ್ಲೂ ನಮ್ಮ ಕಾಂಗ್ರೆಸ್ ಪಕ್ಷ ಹದಿನೇಳು ಜನ ಶಾಸಕರನ್ನ ಕಳೆದುಕೊಳ್ಳಲು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕಾರಣ. ನಾವು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದರೆ, ನಮ್ಮ 17 ಜನ ಶಾಸಕರು ನಮ್ಮ ಜೊತೆನೆ ಉಳಿಯುತ್ತಿದ್ದರು ಎಂದು ವರುಣಾ ಕ್ಷೇತ್ರದ ಶಾಸಕರಾಗಿರುವ ಯತೀಂದ್ರ ಹೇಳಿದ್ದಾರೆ.

ಕುಮಾರಸ್ವಾಮಿ ಯವರು ಮುಖ್ಯಮಂತ್ರಿಯಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೊತೆಗೆ ಕರೆದುಕೊಂಡು ಹೋಗುವ ಕೆಲಸವನ್ನು ಮಾಡಬೇಕಿತ್ತು. ಕಾಂಗ್ರೆಸ್ ಪಕ್ಷ 80 ಸ್ಥಾನ ಗಳಿಸಿದ್ದರು ಕೂಡ ಜೆಡಿಎಸ್ ನವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ವಿ. ಹಾಗಿದ್ದ ಮೇಲೆ ಕುಮಾರಸ್ವಾಮಿಯವರು ನಮ್ಮ ಶಾಸಕರುಗಳನ್ನು ಸರಿಯಾಗಿ ನೋಡಿಕೊಳ್ಳಬೇಕಿತ್ತು.ಕುಮಾರಸ್ವಾಮಿ ಸರ್ಕಾರದಲ್ಲಿ ನಮ್ಮ ಶಾಸಕರುಗಳ ಯಾವ ಕೆಲಸಗಳು ಸರಿಯಾಗಿ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಅವರು, “ನನ್ನ ವರುಣ ಕ್ಷೇತ್ರದಲ್ಲೆ ನನ್ನ ಎಷ್ಟೋ ಕೆಲಸಗಳು ಆಗುತ್ತಿರಲಿಲ್ಲ. ಹಾಗಾಗಿ ನಮ್ಮ ಶಾಸಕರು ಬೇಸತ್ತು , ಮುಖ್ಯಮಂತ್ರಿಗಳು ಕೈಗೆ ಸಿಗುತ್ತಿಲ್ಲ , ನಮ್ಮ ಕಷ್ಟಗಳನ್ನು ಕೇಳುತ್ತಿಲ್ಲ, ನಮ್ಮ ಪಕ್ಷದ ಸಹಕಾರದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರೂ ನಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಆಲಿಸುತ್ತಿಲ್ಲ, ಸ್ಪಂದಿಸುತ್ತಿಲ್ಲ ಎಂದು ಬೇಸತ್ತು, ನಮ್ಮ ಎಷ್ಟೋ ಶಾಸಕರು ಕೈಬಿಟ್ಟು ಹೋದರೇ ಹೊರತು ಇದರಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇಲ್ಲ” ಎಂದಿದ್ದಾರೆ.

ಕುಮಾರಸ್ವಾಮಿಯವರೇ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕನ ಸ್ಥಾನ ತಗೊಂಡು ಏನು ಮಾಡಬೇಕು.ಅದೇನೂ ಮುಖ್ಯಮಂತ್ರಿ ಸ್ಥಾನನಾ? ವಿಪಕ್ಷ ನಾಯಕನ ಸ್ಥಾನದಲ್ಲಿ ಏನ್ ಬೆನಿಫಿಟ್ಸ್ ಸಿಗುತ್ತೆ. ಸಮ್ಮಿಶ್ರ ಸರ್ಕಾರ ಇದ್ದಿದರೇ ಅಟ್’ಲಿಸ್ಟ್ ಅಧಿಕಾರದಲ್ಲಿ ಇರ್ತಿದ್ವಿ, ಮಾತುಗಳು ನಡೆಯುತಿತ್ತು, ನಮ್ಮ ಪಕ್ಷದ ಶಾಸಕರಿಗೆ ಕೆಲಸ ಮಾಡಿಸಿಕೊಡಬಹುದಿತ್ತು. ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು ಆ ಮೂಲಕ ಕಾಂಗ್ರೆಸ್ ಶಾಸಕರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಿಸಿಕೊಡಬಹುದಿತ್ತು. ವಿರೋಧಪಕ್ಷದ ನಾಯಕನ ಸ್ಥಾನ ತೆಗೆದುಕೊಂಡು ಏನು ಮಾಡಬೇಕು. ಕುಮಾರಸ್ವಾಮಿ ಮಾಡುತ್ತಿರುವುದು ಒಂದು ರೀತಿಯ ನಗೆಪಾಟಿಲಿನ ಆರೋಪ ಅಂತ ಅನ್ಸುತ್ತೆ ಎಂದು ಕುಹಕವಾಡಿದ್ದಾರೆ.

.@hd_kumaraswamy ಯವರು ಮಾಡುತ್ತಿರುವ ಆರೋಪಗಳಿಗೆ ಯಾವುದೇ ಹುರುಳಿಲ್ಲ, ನಿಜವಾಗ್ಲೂ ನಮ್ಮ ಕಾಂಗ್ರೆಸ್ ಪಕ್ಷ ಹದಿನೇಳು ಜನ ಶಾಸಕರನ್ನ ಕಳೆದುಕೊಳ್ಳಲು ಕಾರಣ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು.
1/9

— Dr Yathindra Siddaramaiah (@Dr_Yathindra_S) October 12, 2021

ಈಗ ಚುನಾವಣೆ ಬರ್ತಿವೆ, ಉಪ ಚುನಾವಣೆ ಬರ್ತಿದೆ, ಅದರೊಳಗೆ ಜೆಡಿಎಸ್ ಗೆ ಕಾಂಗ್ರೆಸ್ ಪಕ್ಷವೇ ಪ್ರಭಲ ವಿರೋಧಿ. ಜೊತೆಗೆ ಜೆಡಿಎಸ್ ಗೆ ಬಿಜೆಪಿ ಪಕ್ಷದ ಮೇಲೆ ಒಳಗೊಳಗೆ ಒಲವಿದೆ, ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ವಿರೋಧ ಮಾಡಬೇಕು.ಹಾಗಾಗಿ ಬಾಯಿಗೆ ಬಂದಂತಹ ಆರೋಪಗಳನ್ನು ಮಾಡ್ತಾರೆ. ಕುಮಾರಸ್ವಾಮಿಯವರು ಅವರ ಪಕ್ಷದ ಅಭ್ಯರ್ಥಿಗಳನ್ನು ಹಾಕಲು ಖಂಡಿತವಾಗಿಯೂ ಯಾವ ದೊಣ್ಣೆ ನಾಯಕನ ಅಪ್ಪಣೆಯನೂ ತೆಗೆದುಕೊಳ್ಳಬೇಕಿಲ್ಲ. ಹಾಗೆಯೇ ನಾವು ಕೂಡ ಜೆಡಿಎಸ್ ಪಕ್ಷದ ತಪ್ಪುಗಳನ್ನ, ಅವರು ಮಾಡುತ್ತಿರುವ ರಾಜಕೀಯನ, ಜೆಡಿಎಸ್ ಪಕ್ಷದವರಿಗೆ ಬೇರೆ ಪಕ್ಷದವರೊಂದಿಗಿರುವ ಒಳಒಪ್ಪಂದಗಳನ್ನ ಜನರಿಗೆ ತಿಳಿಸುವುದಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆನೂ ತೆಗೆದುಕೊಳ್ಳಬೇಕಿಲ್ಲ. ನಮಗೆ ಅನಿಸಿದ್ದನ್ನು ನಾವು ಹೇಳೇ ಹೇಳುತ್ತೇವೆ ಎಂದು ಅವರು ಹೇಳಿದ್ದಾರೆ.

 

Tags: Congress PartyDr Yathindra SiddaramaiahHD Kumaraswamyಎಚ್ ಡಿ ಕುಮಾರಸ್ವಾಮಿಯತೀಂದ್ರ ಸಿದ್ದರಾಮಯ್ಯಸಿದ್ದರಾಮಯ್ಯ
Previous Post

ಫೇಸ್ಬುಕ್ ನಲ್ಲಿ ಭಾರತೀಯ ಬಲಪಂಥಿಯರ ದ್ವೇಷಪೂರಿತ ಬರಹ/ಭಾಷಣಗಳ ಹಿಂದೆ RSS?

Next Post

ಅವರ ತಂದೆ ಇದ್ದ ಹುದ್ದೆ ಪುಟಗೋಸಿ ಹುದ್ದೆಯಾ; ಹೆಚ್‌ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಅವರ ತಂದೆ ಇದ್ದ ಹುದ್ದೆ ಪುಟಗೋಸಿ ಹುದ್ದೆಯಾ; ಹೆಚ್‌ಡಿಕೆ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada