ಬಿಜೆಪಿಯವರು ಪೊಳ್ಳು ಹಿಂದೂಗಳು, ನಾವೇ ನಿಜವಾದ ಹಿಂದೂಗಳು ಎಂದು ಮೈಸೂರಿನಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಸರಣಿ ವಾಗ್ದಾಳಿಯನ್ನ ನಡೆಸಿದ್ದಾರೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ್ರೆ ಹಿಂದೂಗಳ ಹತ್ಯೆ ಎಂಬ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ ಬಿಜೆಪಿ ಅಧಿಕಾರದಲ್ಲಿರುವಾಗಲೇ ಹಿಂದೂಗಳ ಹತ್ಯೆ ಆಗುತ್ತಿದೆ. ಕಾಂಗ್ರೆಸ್ನ 70ವರ್ಷದ ಅವಧಿಯಲ್ಲಿ ಹಿಂದೂಗಳ ಹತ್ಯೆಯಾಗಿಲ್ಲ ತಂದೆ ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯದಲ್ಲಿ ಹಿಂದೂ ಹತ್ಯೆಗಳಾಗಿಲ್ಲ ಬಿಜೆಪಿ ಅಧಿಕಾರವಿರುವಾಗಲೇ ಹಿಂದೂಗಳ ಹತ್ಯೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜಾತಿ ಧರ್ಮಗಳ ಮಧ್ಯೆ ಕೋಮುಗಲಭೆ ಹಬ್ಬಿಸಿ ಅಧಿಕಾರಕ್ಕೆ ಬರುವುದೇ ಬಿಜೆಪಿ ಮುಖ್ಯ ಉದ್ದೇಶ ಎಲ್ಲಾ ಧರ್ಮಗಳನ್ನು ಒಗ್ಗೂಡಿಸಿ ಶಾಂತಿ ನಿಮ್ಮದಿ ಕಾಪಾಡುವುದು ಕಾಂಗ್ರೆಸ್ ಪಕ್ಷದ ಉದ್ದೇಶ ಆದರೆ ಹಿಂದೂಗಳೆಲ್ಲ ಬಿಜೆಪಿ ಪರವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಹಿಂದೂಗಳ ರಕ್ಷಣೆ ಅಸಾಧ್ಯ ಮುಂದಿನ ದಿನ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲವವೂ ಸರಿಹೋಗುತ್ತದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ.