ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನ ಬಿಜೆಪಿಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
![](https://pratidhvani.com/wp-content/uploads/2024/04/images-9-1.jpg)
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅಮಾನುಷ ಹತ್ಯೆ ಆಗಿದೆ. ತನ್ನದೇ ಪಕ್ಷದ ಕುಟುಂಬಕ್ಕೆ ನ್ಯಾಯ ಕೊಡಿಸುವ ಸಿದ್ದರಾಮಯ್ಯ ಮುಂದೆ ಬಂದಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಸಿದ್ದರಾಮಯ್ಯ ಸರ್ಕಾರ ಮತಾಂದರ ಶಕ್ತಿ ಬೆಳೆಸುತ್ತಿದೆ. ಸಿದ್ಧರಾಮಯ್ಯರ ಸರ್ಕಾರ ದಿವಾಳಿ ಆಗಿದೆ.
![](https://pratidhvani.com/wp-content/uploads/2024/04/neha-fayaz-1-1024x581.webp)
ಭಾರತದ ಭವಿಷ್ಯಕ್ಕೆ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹಾಯಿಸಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಮೇಲೆ ದರೋಡೆ ಮಾಡಿ ಹಲ್ಲೆ ಮಾಡಿದ್ದಾರೆ. ಬೆಳಗಾವಿಯ ವಂಟಮುರಿಯಲ್ಲಿ ಮಹಿಳೆ ಮೇಲೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಕ್ರಮ ಆಗಿಲ್ಲ. ಕೋಲಾರ, ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್ ಹಾಕಿದ್ದರು.
ಮಂಡ್ಯದಲ್ಲಿ ಪೊಲೀಸ್ ಬಳಸಿ ಹನುಮ ಧ್ವಜ ಇಳಿಸಿದ್ದಾರೆ. ಜನ ಗ್ಯಾರಂಟಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಜನರಿಗೆ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ.
ತೆರಿಗೆ ಹೆಚ್ಚಳವಾಗಿದೆ. ಸಿದ್ಧರಾಮಯ್ಯರ ಸರ್ಕಾರ ಮತಾಂದ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದೆ. ಒಂದೇ ವರ್ಷದಲ್ಲಿ ಮತಾಂದ ಯುದ್ಧ ಭೂಮಿ ಮಾಡಿಕೊಂಡಿದೆ. ರೈತರ ಆತ್ಮಹತ್ಯೆಯೂ ಹೆಚ್ಚಾಗಿದೆ. ಕಿಸಾನ್ ಸಮ್ಮಾನ್ ಯೋಜನೆಗೆ ನೀಡುತ್ತಿದ್ದ ಹಣ ನಿಲ್ಲಿಸಿದ್ದಾರೆ. ಇದೊಂದು ಕಲ್ಲು ಬಂಡೆ ಸರ್ಕಾರ. ಸರ್ಕಾರ ದಿವಾಳಿಯಾಗಿದೆ. ಖಜಾನೆಯಲ್ಲಿ ಹಣವೇ ಇಲ್ಲದಂತಾಗಿದೆ. ನೀರಾವರಿ ವ್ಯವಸ್ಥೆ ನೆಲ ಕಚ್ಚಿದೆ. ಒಂದೇ ಒಂದು ಕಿ.ಮೀ ರಸ್ತೆಯಾಗಿಲ್ಲ.
![](https://pratidhvani.com/wp-content/uploads/2024/04/b126e6f0-b385-494a-be8b-f7277f9fa999.jpeg)
ಲೋಕಸಭಾ ಚುನಾವಣೆ ನಡೆಯುತ್ತಿದೆ. 28 ಕ್ಷೇತ್ರಗಳನ್ನ ಗೆದ್ದು ಬರುತ್ತೇವೆ ಎಂಬ ವಿಶ್ವಾಸ ಇದೆ.
ಕಾಂಗ್ರೆಸ್ ಅವರು ಮೂರು ಸೀಟು ಗೆಲ್ಲುತ್ತೇವೆ ಅಂತ ವಿಶ್ವಾಸದಲ್ಲಿ ಹೇಳಲಿ ನೋಡೋಣ? ದೇವ ದುರ್ಲಭ ಉತ್ತಮ ವಾತಾವರಣ ಇದೆ. ಅಮಿತ್ ಶಾ ಕೂಡ ರಾಜ್ಯದಲ್ಲಿ ಪ್ರವಾಸ ಮಾಡುತ್ತಾರೆ ಎಂದು ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.