![](https://pratidhvani.com/wp-content/uploads/2024/06/545-1024x614.jpg)
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯ ಅಣ್ಣ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಹೈಕೋರ್ಟ್ ಹಿರಿಯ ವಕೀಲ ಬಾಲನ್ ಮೂಲಕ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಪ್ರಕರಣದಲ್ಲಿ ಇದುವರೆಗೆ ಯಾವುದೇ ಪ್ರಗತಿ ಆಗಿಲ್ಲ. ಪಂಚನಾಮೆ ಮಾಡಿಲ್ಲ, ಸಾಕ್ಷ್ಯ ಸಂಗ್ರಹ ಮಾಡಿಲ್ಲ ಎಂದು ದೂರಲಾಗಿದೆ.
ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸಲು ಪೊಲೀಸ್ ಆಯುಕ್ತರು ಹಾಗು ಸಿಐಡಿ ಇನ್ಸ್ಪೆಕ್ಟರ್ಗೆ ಸೂಚಿಸಬೇಕು ಅಂತಾ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಮಾರ್ಚ್ 14 ರಂದು ದೂರು ನೀಡಲಾಗಿದೆ. ಬಿ.ಎಸ್ ಯಡಿಯೂರಪ್ಪ ಜೊತೆ ಮಾತನಾಡಿದ ವಿಡಿಯೋ ರೆಕಾರ್ಡಿಂಗ್ ಇದೆ. ಎಸಿಎಂಎಂ 25ರ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164 ಅಡಿ ಹೇಳಿಕೆ ದಾಖಲಿಸಿದ್ದಾರೆ ಆದರೂ ಕ್ರಮತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.
![](https://pratidhvani.com/wp-content/uploads/2024/06/fbgbb-1024x576.jpeg)
ಸಂತ್ರಸ್ತೆ ತಾಯಿ ಮಹಿಳಾ ಆಯೋಗದ ಅಧ್ಯಕ್ಷರಿಗೆ, ಎಡಿಜಿಪಿಗೆ ಪತ್ರ ಬರೆದಿದ್ದರು. ಪ್ರಕರಣದಲ್ಲಿ ಈವರೆಗೂ ಯಾವುದೇ ಪ್ರಗತಿಯಾಗಿಲ್ಲ. ಸಿಐಡಿ ಇದುವರೆಗೂ ಯಾವುದೇ ಪಂಚನಾಮೆ ಮಾಡಿಲ್ಲ, ಸಾಕ್ಷ್ಯ ಸಂಗ್ರಹಿಸಿಲ್ಲ. ದಾಖಲೆ ಸೀಜ್ ಮಾಡಿಲ್ಲ. ಪೊಕ್ಸೋ ಕಾಯ್ದೆಯಡಿ ನೋಟಿಸ್ ನೀಡಿಲ್ಲ. ಬಿ.ಎಸ್ ಯಡಿಯೂರಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿ ಸತ್ಯಾಂಶ ಬಯಲಿಗೆ ತರಬೇಕು ಎಂದು ಆಗ್ರಹ ಮಾಡಿದ್ದಾರೆ.
ಸಿಸಿಟಿವಿ, ಮೆಮೊರಿ ಕಾರ್ಡ್, ಹಾರ್ಡ್ ಡಿಸ್ಕ್ಗಳನ್ನ ಸೀಜ್ ಮಾಡಬೇಕು. ಒಂದು ತಿಂಗಳ ಒಳಗಾಗಿ ಕೋರ್ಟ್ಗೆ ವರದಿ ಸಲ್ಲಿಸಲು ಸೂಚಿಸಬೇಕು ಅಂತಾ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಹೈಕೋರ್ಟ್ ವಕೀಲ ಬಾಲನ್ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನೀಡುವ ತೀರ್ಮಾನದ ಮೇಲೆ ಯಡಿಯೂರಪ್ಪ ಭವಿಷ್ಯ ನಿರ್ಧಾರ ಆಗಲಿದೆ ಎನ್ನಲಾಗ್ತಿದೆ.