ಮಲೆನಾಡು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ (narendra modi) ಆಗಮನ ಹಿನ್ನಲೆಯಲ್ಲಿ ಸಮಾವೇಶದ ಸ್ಥಳ ಪರಿಶೀಲನೆ ಮಾಡಿದ್ದಾರೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (bs yediyurapp).
ಕಾರ್ಯಕ್ರಮದ ತಯಾರಿ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಅಲ್ಲಮ ಪ್ರಭು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದೆ ಎಂದಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಸಂಸದ ರಾಘವೇಂದ್ರ (ragahavendra) ಹಾಗೂ ಬಿಜೆಪಿ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ.
ಈಶ್ವರಪ್ಪ (eshwarappa) ಬಂಡಾಯದ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಈಶ್ವರಪ್ಪ ಸಿಟ್ಟಲ್ಲಿ ಹಾಗೇ ಮಾತಾನಾಡಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರ್ತಾರೆ. ಅವರು ಕೂಡ ಪಕ್ಷ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದಾರೆ. ಎಲ್ಲಾ ಸರಿ ಹೋಗುತ್ತದೆ ಅನ್ನೋ ವಿಶ್ವಾಸ ಇದೆ. ಅವರ ಮಗನಿಗೆ ಟಿಕೆಟ್ ತಪ್ಪಲು ನಾನು ಕಾರಣವಲ್ಲ. ಅದಕ್ಕೆ ಚುನಾವಣೆ ಸಮಿತಿ ನಿರ್ಧಾರ ಮಾಡಿರುವುದು ಕಾರಣ ಎಂದಿದ್ದಾರೆ. ಇನ್ನು ಶನಿವಾರ ಕಲಬುರಗಿಯಲ್ಲಿ ನಡೆದ ಮೋದಿ ಕಾರ್ಯಕ್ರಮ ತುಂಬಾ ಯಶಸ್ವಿಯಾಗಿದೆ, ರಾಜ್ಯದ 28 ಕ್ಷೇತ್ರಗಳನ್ನೂ ಗೆಲ್ಲಲು ಪ್ರಯತ್ನ ಮಾಡ್ತಿದ್ದೇವೆ. ಕೂತಲ್ಲೂ ನಿಂತಲ್ಲೂ ಒಳ್ಳೆಯ ಅಭಿಪ್ರಾಯ ಬರ್ತಿದೆ ಎಂದಿದ್ದಾರೆ.
ಈಶ್ವರಪ್ಪ ನಮ್ಮ ಪಕ್ಷವನ್ನು ಕಟ್ಟಿದವರು, ಬೆಳೆಸಿದವರು. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರ ಜೊತೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ. ಎಲ್ಲವೂ ಸರಿಯಾಗಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರ್ತಾರೆ, ಕಾರ್ಯಕ್ರಮದಲ್ಲಿ ಬಂದು ಮಾತನಾಡುವ ವಿಶ್ವಾಸ ಇದೆ. ಅವರನ್ನ ಮತ್ತೆ ಮನವೊಲಿಸಿ ಕರೆ ತರುವ ಪ್ರಯತ್ನವನ್ನು ನಮ್ಮ ಪಕ್ಷದ ಹಿರಿಯರು ಮಾಡುತ್ತಿದ್ದಾರೆ ಎನ್ನುವ ಮೂಲಕ ಎಲ್ಲವೂ ಸುಖಾಂತ್ಯ ಆಗಲಿದೆ ಎನ್ನುವ ಸುಳಿವು ನೀಡಿದ್ದಾರೆ.
#karnataka #shivamogga #bsyediyurappa #eshwarappa #bjp