• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ: ಕೆ ಎಸ್ ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in ಕರ್ನಾಟಕ, ರಾಜಕೀಯ
0
ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ: ಕೆ ಎಸ್ ಈಶ್ವರಪ್ಪ
Share on WhatsAppShare on FacebookShare on Telegram

ಮೈಸೂರು : ಬಿ.ಎಸ್ ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎನ್ನೋದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್‌’ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ADVERTISEMENT

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌’ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನಡುವೆ ಕಿತ್ತಾಟ ಇದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಬಯಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ ಏನು ಹೇಳೋದು? ಎಂದು ಪ್ರಶ್ನಿಸಿದರು.

ರಾಜ್ಯದ ಒಂದು ಪಕ್ಷದ  ಅಧ್ಯಕ್ಷನಾಗಿ ಗಂಡಸ್ತನ ಅಂದ್ರೇ ಏನು ಅಂತ ಇಬ್ರಾಹಿಂಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ದೇಶ ರಕ್ಷಿಸುವ ಪ್ರಭಾವಿ ನಾಯಕರು ಬಿಜೆಪಿಯಲ್ಲಿದ್ದಾರೆ

ಜನಮೆಚ್ಚಿದ, ದೇಶವನ್ನು ರಕ್ಷಣೆ ಮಾಡುವ ಪ್ರಭಾವಿ ನಾಯಕರು ಬಿಜೆಪಿಯಲ್ಲಿದ್ದಾರೆ. ಕಾಂಗ್ರೆಸ್ ನಲ್ಲಿ, ಜೆಡಿಎಸ್ ನಲ್ಲಿ ಇಲ್ಲ. ಮೋದಿ, ಅಮಿತ್ ಶಾ ದೇಶದ ಜನರ ಮನಸು ಗೆದ್ದಿರುವ ನಾಯಕರು. ಅವರುಗಳನ್ನು ನಾವು ಕರೆಸುತ್ತೇವೆ. ನೀವು ಸಹ ಯಾರನ್ನು ಬೇಕಾದರೂ ಕರೆಸಿಕೊಳ್ಳಿ. ಬಿಜೆಪಿಯಲ್ಲಿ ರಾಜ್ಯದಲ್ಲೂ, ರಾಷ್ಟ್ರದಲ್ಲೂ ನಾಯಕರಿದ್ದಾರೆ. ಕಾಂಗ್ರೆಸ್ ನಲ್ಲಿ ಎರಡು‌ ಕಡೆಯೂ ನಾಯಕರಿಲ್ಲ. ಇದರಿಂದ ಇಷ್ಟು ಚುನಾವಣೆ ಸೋತಿದ್ದಾರೆ ಎಂದು ಹರಿಹಾಯ್ದರು.

ಸಚಿವ ಸ್ಥಾನ ನೀಡುವುದು ಹಾಗೂ ಟಿಕೆಟ್ ನೀಡುವುದು ಬಿಡುವುದು ಪಕ್ಷದ ತೀರ್ಮಾನ. ಎಲ್ಲರೂ ಮಂತ್ರಿಗಳು ಆಗಬೇಕೆಂದು ಬರೆದುಕೊಟ್ಟಿಲ್ಲ. 224 ಕ್ಷೇತ್ರಗಳ ಎಲ್ಲರೂ ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್

ಟಿಕೆಟ್ ‌ನೀಡುವ ವಿಚಾರದಲ್ಲಿ ಕೇಂದ್ರ ರಾಜ್ಯದ ನಾಯಕರು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. 150 ಸೀಟು ಗೆಲ್ಲೋದು ನಮ್ಮ ಮುಖ್ಯ ಉದ್ದೇಶ. ಯಾರು ಸ್ಪರ್ಧೆ ಮಾಡ್ತಾರೆ ಎನ್ನೋದು ಮುಖ್ಯವಲ್ಲ‌. ಪಕ್ಷವನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಎಲ್ಲಾ ತೀರ್ಮಾನ ಪಕ್ಷಕ್ಕೆ ಬಿಟ್ಟಿದ್ದು. ನಮ್ಮದು ಸಂಘಟನೆ ಆಧಾರಿತ ಪಕ್ಷವಾಗಿದೆ‌. ಚೇಲಾ, ಚಮಚಗಿರಿ, ಜಾತಿ, ದುಡ್ಡು ನಮ್ಮಲ್ಲಿ ನಡೆಯಲ್ಲ. ಕಾಂಗ್ರೆಸ್ ಜೆಡಿಎಸ್ ನಲ್ಲಿರುವ ಪರಿಸ್ಥಿತಿ ನಮ್ಮಲ್ಲಿಲ್ಲ. ಗೆಲ್ಲುವ ಸಾಮರ್ಥ್ಯ ಇರುವವರನ್ನು ಗುರ್ತಿಸಿ ಪಕ್ಷ ಟಿಕೆಟ್ ನೀಡಲಿದೆ ಎಂದು ಹೇಳಿದರು.

ನಾಳೆಯಿಂದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ

ನಾಳೆಯಿಂದ ನಾಲ್ಕು ತಂಡಗಳಲ್ಲಿ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಆರಂಭವಾಗಲಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಹೊರಡುವ ವಿಜಯಸಂಕಲ್ಪ ರಥಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚಾಲನೆ ನೀಡಲಿದ್ದಾರೆ. ನಾನು, ಕೋಟಾ ಶ್ರೀನಿವಾಸಪೂಜಾರಿ, ಅರಗ ಜ್ಞಾನೇಂದ್ರ, ವಿ ಸೋಮಣ್ಣ ಸೇರಿದಂತೆ ಇತರ ಪ್ರಮುಖ ನಾಯಕರು ಇರುತ್ತಾರೆ ಎಂದು ಮಾಹಿತಿ ನೀಡಿದರು.

Tags: Basavaraj BommaiK S EshwarappaMysoreಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸ್ವತಂತ್ರ ಭಾರತ ಇಂಥಾ ವಚನ ಭ್ರಷ್ಟ ಪ್ರಧಾನಿಯನ್ನು ಹಿಂದೆಂದೂ ಕಂಡಿರಲಿಲ್ಲ: ಸಿದ್ದರಾಮಯ್ಯ

Next Post

ಬಿದರಗೂಡು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಬಿದರಗೂಡು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ

ಬಿದರಗೂಡು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada