ಗದಗ ಜಿಲ್ಲೆಯಲ್ಲಿ ಹೆಸರು ಬೆಳೆದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ. ಬೆಳೆ ಹಳದಿ ರೋಗಕ್ಕೆ ತುತ್ತಾಗಿದ್ದು, ಕಪ್ಪುಗಟ್ಟಿದ ಬೆಳೆದ ಬೆಳೆಯಲ್ಲಿ ಅಷ್ಟಿಷ್ಟು ಕಾಳು ಬಂದಿದೆ. ಅಳಿದು ಉಳಿದ ಬೆಳೆಯಲ್ಲೇ ಕಾಳು ಮಾಡಿ ರೈತ ರಾಶಿ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಖರೀದಿ ಕೇಂದ್ರ ತೆರೆಯುವಂತೆ ರೈತರು ಒತ್ತಾಯಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹೆಸರು ಬೆಳೆದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇನ್ನೇನು ಕಟಾವಿಗೆ ಬಂದಿದ್ದ ಹೆಸರು ಬೆಳೆ ನಿರಂತರ ಮಳೆಯಿಂದಾಗಿ ಹಾನಿಗೀಡಾಗಿದೆ. ಅಲ್ಪಸ್ವಲ್ಪ ಬೆಳೆ ಕಟಾವಾಗಿ ಮಾರುಕಟ್ಟೆಗೆ ಬಂದಿದೆ. ಆದ್ರೆ, ಮಾರುಕಟ್ಟೆಯಲ್ಲೂ ಸಹ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಹೆಸರು ಖರೀದಿ ಮಾಡಲಾಗುತ್ತಿದೆ. ಹೀಗಾಗಿ ಖರೀದಿ ಕೇಂದ್ರ ಆರಂಭಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ.
ತಾಲೂಕಿನಲ್ಲಿ ಬೆಳೆದ ಬಹುತೇಕ ಹೆಸರು ಬೆಳೆಗೆ ಹಳದಿ ರೋಗ ಬಂದಿದ್ದು ತಾಲೂಕಿನಾದ್ಯಂತ ಸದ್ಯ ಇದೇ ಪರಸ್ಥಿತಿ ಕಂಡು ಬರುತ್ತಿದೆ. ಕೃಷಿ ಕಾಯಕವನ್ನೇ ನಂಬಿ ಜೀವನ ನಡೆಸುವ ರೈತವರ್ಗಕ್ಕೆ ಅತಿಯಾದ ಮಳೆಯು ಸಂತೋಷವನ್ನೇ ಕಸಿದುಕೊಂಡಿದೆ. ಕಳೆದ 10 ದಿನಗಳ ಹಿಂದೆ ಸುರಿದ ನಿರಂತರ ಮಳೆಗೆ ತಾಲೂಕಿನ ಸಾವಿರಾರು ಎಕರೆಯಲ್ಲಿ ಬೆಳೆದ ಹೆಸರು ಬೆಳೆ ನಾಶವಾಗಿ ಅಲ್ಪಸ್ವಲ್ಪ ಬೆಳೆ ಕೈಗೆ ಬಂದಿದೆ. ಮಳೆ ಮಧ್ಯೆ ರೈತರು ರಾಶಿ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸರಿಯಾದ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತರಿಗೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ರೈತರು ದಲ್ಲಾಳಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಎದುರಾಗಲಿದೆ.
ತಾಲೂಕಿನಲ್ಲಿ ಸುಮಾರು 4100ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಿದ್ದು ಅದರಲ್ಲಿ 2700ರೂ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ನಷ್ಟವಾಗಿದೆ. ಹೆಸರು ಬೆಳೆಗೆ ಹಳದಿ ರೋಗ ಅಂಟಿಕೊಂಡ ಪರಿಣಾಮ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಹೆಸರಿಗೆ ಸುಮಾರ 4500ಸಾವಿರ ರೂ ವರೆಗೂ ಮಾರಾಟವಾಗುತ್ತಿದೆ. ಸರಕಾರ 7755ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದೆ. ಇದರಿಂದ ಆದಷ್ಟು ಬೇಗ ಖರೀದಿ ಕೆಂದ್ರ ತೆರೆಯಬೇಕಿದೆ. ಇದರಿಂದ ರೈತರಿಗೆ ಅನುಕೂಲ ವಾಗಲಿದೆ.
ಒಂದೆಡೆ ಮಳೆ, ಇನ್ನೊಂದೆಡೆ ಬೆಲೆ ಕುಸಿತ, ಮತ್ತೊಂದೆಡೆ ಖರೀದಿ ಕೇಂದ್ರ ಇಲ್ಲವಾದ್ದರಿಂದ ಹೆಸರು ಬೆಳೆದ ರೈತರ ಸ್ಥಿತಿ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಅಧಿಕಾರಿಗಳು ಮುತವರ್ಜಿ ವಹಿಸಿ ಖರೀದಿ ಕೇಂದ್ರ ಆರಂಭಿಸಿದ್ರೆ ರೈತರಿಗೆ ಒಳಿತಾಗಲಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಭೆ ಮಾಡಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೇ ಸಲ್ಲಿಸಲಾಗಿದ್ದು ಸರಕಾರದಿಂದ ಆದೇಶ ಬಂದರೆ ಶೀಘ್ರ ಹೆಸರು ಬೆಳೆ ಖರೀದಿ ಕೇಂದ್ರವನ್ನು ಹಲವು ಕಡೆ ತಾಲೂಕಿನಲ್ಲಿ ತೆರೆಯಲಾಗುವುದು ಎಂದು ಜಿಲ್ಲಾ ಸಹಕಾರಿ ಮಾರಾಟ ಮಹಾ ಮಂಡಳಿಯ ವ್ಯವಸ್ಥಾಪಕ ಡಿ.ಬಿ. ಡೊಕ್ಕಣ್ಣವರ ತಿಳಿಸಿದ್ದಾರೆ.
ಹೆಸರು ಬೆಳೆದ ಎರಡುವರಿ ಎಕರೆಯಲ್ಲಿ ಎಲ್ಲಾ ಹೆಸರು ಬೆಳೆ ಹಳದಿ ರೋಗ ಆಗಿದ್ದು ಅಲ್ಪ ಸ್ವಲ್ಪ ಬೆಳೆ ಕಟಾವು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದು ಕ್ವೀಂಟಾಲ್ ಗೆ 4500ರೂ ಆಗಿದ್ದು ಖರೀದಿ ಕೇಂದ್ರ ಇದ್ದಿದ್ದರೆ ಬೆಂಬಲ ಬೆಲೆ ಸಿಗುತ್ತಿತ್ತು ಎನ್ನುವುದು ರೈತರ ಅಭಿಪ್ರಾಯವಾಗಿದೆ.