ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಚಂಡ ಬಹುಮತದಿಂದ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಸಂಪುಟದಲ್ಲಿ ಅಸಮಾಧಾನದ ಭುಗಿಲೆದ್ದಿದೆ. ತಮ್ಮನ್ನು ‘ದಲಿತ’ ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿ ಸಚಿವ ದಿನೇಶ್ ಖಾತಿಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನಿಸಿದ್ದಾರೆ.
ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಯಾವುದೇ ಬಿಜೆಪಿ ಸರ್ಕಾರದಲ್ಲಿ ಈತರದ ಅಸಮಾಧಾನ ಕಂಡಲ್ಲಿ ಅಂತವು ಬಹಿರಂಗವಾಗಿ ಹೊರಬರುವುದಿಲ್ಲ ಆದರೆ ಈ ರೀತಿಯ ಭಿನ್ನಮತದ ನಡೆ ಅಪರೂಪದ್ದಾಗಿದೆ.
ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ದಿನೇಶ್ ಖತಿಕ್ ಅವರು ತಮ್ಮ ಪತ್ರದಲ್ಲಿ 100 ದಿನಗಳ ಕಾಲ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ ಎಂದು ಹೇಳಿದ್ದಾರೆ. ಇಲಾಖಾ ವರ್ಗಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ತಮ್ಮ ನೋವನ್ನು ಪತ್ರದಲ್ಲಿ ಬರೆದು ರಾಜೀನಾಮೆ ನೀಡಿದ್ದಾರೆ.
“ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಪ್ರಾಮುಖ್ಯತೆ ನೀಡಿಲ್ಲ, ನನಗೆ ಸಚಿವನಾಗಿ ಅಧಿಕಾರವಿಲ್ಲ, ನಾನು ರಾಜ್ಯ ಸಚಿವನಾಗಿದ್ದರು ದಲಿತ ಸಮುದಾಯಕ್ಕೆ ಉಪಯೋಗ ಆಗುತ್ತಿಲ್ಲ. ನನ್ನನ್ನು ಯಾವುದೇ ಸಭೆಗೆ ಕರೆದಿಲ್ಲ ಮತ್ತು ನನ್ನ ಸಚಿವಾಲಯದ ಬಗ್ಗೆ ಏನನ್ನೂ ಹೇಳಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಖಟಿಕ್ ಪತ್ರದಲ್ಲಿ ಬರೆದಿದ್ದಾರೆ. ರಾಜೀನಾಮೆಯನ್ನು ಹಿಂಪಡೆಯುವಂತೆ ಪಕ್ಷವು ಮನವೋಲಿಸುವ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು ndtv ವರದಿ ಮಾಡಿದೆ.

ಉತ್ತರ ಪ್ರದೇಶ ಸಚಿವ ಜಿತಿನ್ ಪ್ರಸಾದ ಆಕ್ರೋಶ :
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಅಮಾನತು ಮಾಡಿರುವ ಬಗ್ಗೆ ಜಿತಿನ್ ಪ್ರಸಾದ ಆಕ್ರೋಶಗೊಂಡಿದ್ದಾರೆ. ಪ್ರಸಾದ ಕಳೆದ ವರ್ಷ ಯುಪಿ ಚುನಾವಣೆಗೆ ಇನ್ನೊಂದು ತಿಂಗಳು ಇರುವಾಗಿ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಚಾಂತರ ಆಗಿದ್ದರು.
ಪ್ರಸಾದ ಅವರಿಗೆ ಪ್ರಮುಖ ಸಚಿವಾಲಯವಾದ ಲೋಕೋಪಯೋಗಿ ಇಲಾಖೆ (PWD) ನೀಡಲಾಗಿದೆ. ಆದರೆ ಇಲಾಖೆಯು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ಕಚೇರಿಯು ಈ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ ಮತ್ತು ಹಲವಾರು ಅಧಿಕಾರಿಗಳು ವರ್ಗಾವಣೆಯ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಮಂಗಳವಾರ, ಯುಪಿ ಸರ್ಕಾರವು ಇಲಾಖಾವಾರು ವರ್ಗಾವಣೆಯಲ್ಲಿ ಅಕ್ರಮ ಎಸಗಿದ ಐವರು ಹಿರಿಯ PWD ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಸಚಿವ ಪ್ರಸಾದ ಅವರ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅನಿಲ್ ಕುಮಾರ್ ಪಾಂಡೆ, ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ, ವರ್ಗಾವಣೆ ಮತ್ತು ಪೋಸ್ಟಿಂಗ್ಗಾಗಿ ಲಂಚ ಪಡೆದ ಆರೋಪವಿದೆ. ಪಾಂಡೆ ಅವರನ್ನು ಅಮಾನತ್ತು ಮಾಡಿ, ಅವರ ವಿರುದ್ಧ ವಿಜಿಲೆನ್ಸ್ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.
ಇದರ ಬಳಿಕ ದೆಹಲಿಗೆ ತೆರಳಿರುವ ಜಿತಿನ್ ಪ್ರಸಾದ, ದೂರು ಸಲ್ಲಿಸಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಸಮಯ ಕೇಳಿದ್ದಾರೆ.













