• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 29, 2022
in ಕರ್ನಾಟಕ, ಸಿನಿಮಾ
0
ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್
Share on WhatsAppShare on FacebookShare on Telegram

ವಿಶ್ವವಿಖ್ಯಾತ ಹಬ್ಬ ಎಂದೇ ಪ್ರಸಿದ್ಧಿ ಪಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಕೇಂದ್ರಬಿಂದುವಾದ ಯುವ ದಸರಾ ಸಮಾರಂಭವನ್ನು ಅಪ್ಪು ನಮನದ ಮೂಲಕ ಡಾ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ದೀಪವನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ದಾರೆ.

ADVERTISEMENT

ಉದ್ಘಾಟನೆ ಬಳಿಕ ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ, ಅಂದು ಅಪ್ಪುವನ್ನು ಪ್ರೀತಿಸುತ್ತಿದ್ದಿರಿ. ಇಂದು ಪೂಜಿಸುತ್ತಿದ್ದಿರಾ. ಹೀಗಾಗಿ ಇಂದು ಅಪ್ಪುವನ್ನು ಎಲ್ಲರಲ್ಲೂ ನೋಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಎಲ್.ನಾಗೇಂದ್ರ ಮಾತನಾಡಿ, ಕನ್ನಡ, ಕನ್ನಡಿಗರು, ಸೂರ್ಯ ಹಾಗೂ ಚಂದ್ರ ಇರುವವರೆಗೂ ಅಪ್ಪು ಅಜರಾಮರರಾಗಿರುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅದರಂತೆ ದಸರಾ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಭಿಮಾನಿಗಳನ್ನು ದೇವರು ಅಂದವರು ಅಪ್ಪು. ಆದರೆ ಇಂದು ಅವರೆ ಅಭಿಮಾನಿಗಳಿಗೆ ದೇವರಾಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳುವುದರ ಜೊತೆಗೆ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜಕುಮಾರ, ದಯವಿಟ್ಟು ಗಮನಿಸಿ ಚಿತ್ರದ ಮರೆತು ಹೋದೆನು…. ಹಾಡನ್ನು ಹಾಗೂ ಟಗರು ಚಿತ್ರದ ಡೈಲಾಗ್ ಹೊಡೆಯುವ ಮೂಲಕ ನಟ ವಶಿಷ್ಠ ಸಿಂಹ ಅಭಿಮಾನಿಗಳನ್ನು ರಂಜಿಸಿದರು.

ಗಾಯಕಿ ಅನುರಾಧ ಭಟ್ ಅವರು ಡಾ.ಪುನೀತ್ ರಾಜ್ ಕುಮಾರ್ ಹಾಗೂ ರಮ್ಯ ನಟನೆಯ ಆಕಾಶ್ ಚಿತ್ರದ ಆಹಾ ಎಂತ ಆಕ್ಷಣ ನೆನೆದರೆ ತಲ್ಲಣ ಎಂಬ ಹಾಡನ್ನು ಹಾಡಿದರು. ನಂತರ ಗುರುಕಿರಣ್ ಅವರು ಮೈಲಾರಿ ಚಿತ್ರದ ಮೈಲಾಪುರದ ಮೈಲಾರಿ ಹಾಗೂ ಅಪ್ಪು ಚಿತ್ರದ ತಾಲಿಬಾನ್ ಅಲ್ಲಾ ಅಲ್ಲಾ…. ಬಿನ್ ಲಾಡೆನ್ ಅಲ್ವೆ ಅಲ್ಲ ಹಾಗೂ ಅಭಿ ಚಿತ್ರದ ಮಾಮಾ ಮಜಾ ಮಾಡು ಹಾಡನ್ನು ಮತ್ತು ಮೌರ್ಯ ಚಿತ್ರದ ಅಮ್ಮಾ ಅಮ್ಮಾ ಐ ಲವ್ ಯೂ ಚಿತ್ರದ ಹಾಡನ್ನು ಹಾಡಿ ಅಭಿಮಾನಿಗಳನ್ನು ಕುಣಿಸಿ ರಂಜಿಸಿದ್ದಾರೆ.

ನಂತರ ಗುರುಕಿರಣ್ ಅವರು ಮಾತನಾಡಿ, ಅಪ್ಪು ಅವರೊಂದಿಗೆ ಕಳೆದ ಸುಮಧರ ನೆನಪುಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡರು. ನನ್ನ ಹಾಗೂ ಪುನೀತ್ ಸ್ನೇಹಕ್ಕೆ ರಾಘವೇಂದ್ರ ರಾಜ್ ಕುಮಾರ್ ಅವರೇ ಕಾರಣ ಎಂದು ಹೇಳಿದರು. ಇದರಿಂದ ವೇದಿಕೆ ಹಾಗೂ ಮೈದಾನದ ತುಂಬಾ ಅಪ್ಪು ಅಪ್ಪು ಹೆಸರು ಮಾರ್ಧನಿಸಿತು.

ರಾಘವೇಂದ್ರ ರಾಜ್ ಕುಮಾರ್ ಅವರು ಪುನೀತ್ ರಾಜ್ ಕುಮಾರ್ ಅವರಿಗಾಗಿ ಡಾ.ರಾಜ್ ಕುಮಾರ್ ನಟಿಸಿರುವ ಕಸ್ತೂರಿ ನಿವಾಸ ಚಿತ್ರದ ಆಡಿಸಿ ನೋಡು ಬಿಳಿಸಿ ನೋಡು ಉರುಳಿ ಹೋಗದು ಹಾಗೂ ರಾಜಕುಮಾರ ಚಿತ್ರದ ಹಾಡನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು.

ಭಾವನ ಹಾಗೂ ಇಬ್ರಾಹಿಂ ತಂಡದವರು ನಟ ಸಾರ್ವಭೌಮ ಚಿತ್ರದ ಹಾಡಿಗೆ ಹಾಗೂ ಪವರ್ ಚಿತ್ರದ ಧಮ್ ಪವರೆ ಹಾಡಿಗೆ ನೃತ್ಯ ಮಾಡಿ ನೆರೆದಿದ್ದ ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮನರಂಜಿಸುವುದರ ಜೊತೆಗೆ ಎದೆ ತುಂಬಿ ಹಾಡುವೇನು ತಂಡದವರು ಪುನೀತ್ ರಾಜ್ ಕುಮಾರ್ ನಟನೆಯ ಪವರ್ ಚಿತ್ರದ ಧಮ್ ಪವರೇ ಹಾಡನ್ನು ಹಾಗೂ ರಾಜಕುಮಾರ ಚಿತ್ರದ ಹಾಡನ್ನು ಹಾಡುವ ಮೂಲಕ ನೆರೆದಿದ್ದ ಸಭಿಕರನ್ನು ಮೈ ಮರೆಸುವಂತೆ ಹಾಡಿದರು.

ಯುವ ಸಂಭ್ರಮದಲ್ಲೂ ಅಪ್ಪು ಹವಾ:- ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಮೈಸೂರು ನೃತ್ಯ ಕಲಾವಿದರ ಕಲಾತಂಡವು ಡಾ.ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಾದ ಯುವರತ್ನ, ಜಾಕಿ, ಪವರ್, ಅಣ್ಣಾಬಾಂಡ್ ಸೇರಿದಂತೆ ಅನೇಕ ಚಿತ್ರಗಳಿಗೆ ನೃತ್ಯ ಮಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರಿಗೆ ರಂಜಿಸುವುದರ ಮೂಲಕ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದರು.

ಡಾ.ಪುನೀತ್ ರಾಜ್ ಕುಮಾರ್ ಹೆಸರು ಹಾಗೂ ಹಾಡುಗಳು ಬರುತ್ತಿದ್ದಂತೆ ನೆರೆದಿದ್ದ ಸಾವಿರಾರು ಪ್ರೇಕ್ಷಕರು ಕುಣಿದು ಕುಪ್ಪಳಿಸಿ ಯುವ ಸಂಭ್ರಮದಲ್ಲಿ ಸಡಗರದಿಂದ ಪಾಲ್ಗೊಂಡರು. ಹಾಡು ಮುಗಿದ ಬಳಿಕವು ಮೈದಾನದಲ್ಲಿ ಅಪ್ಪು ಅಪ್ಪು ಎನ್ನುವ ಮೂಲಕ ಅಭಿಮಾನಿಗಳೂ ಸಹ ಅಪ್ಪು ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ನಿರೂಪಕಿ ಹಾಗೂ ನಟಿ ಅನುಶ್ರೀ, ವಿನಯ್ ರಾಜ್ ಕುಮಾರ್, ಧೀರನ್ ರಾಮ್ ಕುಮಾರ್, ಗಂಧದ ಗುಡಿ ಚಿತ್ರದ ನಿರ್ದೇಶಕರಾದ ಅಮೋಘ ವರ್ಷ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ್ ನಾರಾಯಣ್, ಶಾಸಕರಾದ ಎಲ್.ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮಹಾಪೌರರಾದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪೋಲಿಸ್ ವರೀಷ್ಠಾಧಿಕಾರಿ ಹಾಗೂ ಯುವ ದಸರಾದ ಉಪ ವಿಶೇಷಾಧಿಕಾರಿಯೂ ಆದ ಆರ್.ಚೇತನ್, ಅಧ್ಯಕ್ಷ ಕಿರಣ್ ಗೌಡ, ಜಿಲ್ಲಾ ಪಂಚಾಯತಿಯ ಸಿಇಒ ಬಿ.ಆರ್.ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರಾದ ಆದ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ಸೇರಿದಂತೆ ಇತರರು ಹಾಜರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಳೇ ಕಲ್ಲಿಗೆ ಹೊಸ ಬಿಲ್ಲು ಹಾಕಲು ಹೊಸ ಸ್ಕೀಮ್ ಜಾರಿ ಮಾಡಿತೇ ಬಿಬಿಎಂಪಿ ?

Next Post

ಕಾಂಗ್ರೆಸ್‌ ಅಧ್ಯಕ್ಷ ರೇಸ್‌ನಿಂದ ಗೆಹ್ಲೋಟ್‌ ಹೊರಕ್ಕೆ; ದಿಗ್ವಿಜಯ್‌ ಸಿಂಗ್‌ vs ಶಶಿ ತರೂರ್‌ ಹಣಾಹಣಿ?

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

January 27, 2026
Next Post
ಕಾಂಗ್ರೆಸ್‌ ಅಧ್ಯಕ್ಷ ರೇಸ್‌ನಿಂದ ಗೆಹ್ಲೋಟ್‌ ಹೊರಕ್ಕೆ; ದಿಗ್ವಿಜಯ್‌ ಸಿಂಗ್‌ vs ಶಶಿ ತರೂರ್‌ ಹಣಾಹಣಿ?

ಕಾಂಗ್ರೆಸ್‌ ಅಧ್ಯಕ್ಷ ರೇಸ್‌ನಿಂದ ಗೆಹ್ಲೋಟ್‌ ಹೊರಕ್ಕೆ; ದಿಗ್ವಿಜಯ್‌ ಸಿಂಗ್‌ vs ಶಶಿ ತರೂರ್‌ ಹಣಾಹಣಿ?

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada