• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ

ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕ ಡಾ. ಎನ್.ನರಸಿಂಹಮೂರ್ತಿ ಜೀವನಯಾಣ ಅದರ್ಶಪ್ರಾಯವಾದ್ದದ್ದು..

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಕರ್ನಾಟಕ, ಕ್ರೀಡೆ, ದೇಶ
0
ಶೂನ್ಯದಿಂದ ಸಾಧನೆಯ ಶಿಖರಕ್ಕೇರಿದ ಛಲಗಾರ.. ಟೆಲಿಕಾಂ ಸ್ಕೈ  ಸ್ಟ್ರೈಕರ್ಸ್ ತಂಡದ ಮಾಲೀಕ ಡಾ.ಎನ್. ನರಸಿಂಹಮೂರ್ತಿ ಸ್ಪೂರ್ತಿಯ ಚಿಲುಮೆ
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು : ಸಿಎಂ ಕಪ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದಲ್ಲಿ ಗುರುತಿಸಿಕೊಂಡಿರುವ ಇನ್ನೊಂದು ತಂಡ ಟೆಲಿಕಾಂ ಸ್ಕೈ ಸ್ಟ್ರೈಕರ್ಸ್. ಈ ಟೀಂನ ಮಾಲೀಕರಾಗಿರುವ ಡಾ. ಎನ್.ನರಸಿಂಹಮೂರ್ತಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಟೆಲಿಕಾಂ ಎಂಪ್ಲಾಯೀಸ್ ಮತ್ತು ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಅಧ್ಯಕ್ಷರಾಗಿದ್ದಾರೆ. ಚಿತ್ರೋದ್ಯಮದಲ್ಲಿಯೂ ಛಾಪು ಮೂಡಿಸಿರುವ ಇವರು ಚಲನಚಿತ್ರ ನಿರ್ಮಾಪಕರು, ನಿರ್ದೇಶಕರು, ನಟರಾಗಿಯೂ ಬಣ್ಣದ ಲೋಕದಲ್ಲಿಯೂ ಹೆಸರು ಮಾಡಿದ್ದಾರೆ.

BJP Leader Prasanna kumar Marta On Ashok Rai̤̤ : ಅಶೋಕ್ ರೈ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ

ಡಾ. ಎನ್.ನರಸಿಂಹಮೂರ್ತಿ ಸರಳ ಜೀವನ, ಅಚಲ ಪರಿಶ್ರಮ ಮತ್ತು ಸಮಾಜಮುಖಿ ಚಿಂತನೆಯ ಪ್ರತಿರೂಪ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಬಡತನ ಹಾಗೂ ಅನೇಕ ಸಂಕಷ್ಟಗಳನ್ನು ಎದುರಿಸಿ, ಸಂಜೆ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪೂರೈಸಿದವರು. ನಂತರ ಬಿಎಸ್‍ಎನ್‍ಎಲ್‍ನಲ್ಲಿನಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿ ತಮ್ಮ ಜೀವನ ರೂಪಿಸಿಕೊಂಡ ಅಪರೂಪದ ಸಾಧಕ.

ಕಾಲೇಜು ದಿನಗಳಿಂದಲೂ ಸಂಘಟನೆಯತ್ತ ಹೆಚ್ಚಿನ ಒಲವು ಹೊಂದಿದ್ದ ಡಾ.ನರಸಿಂಹಮೂರ್ತಿ ಅವರು ಬಿಎಸ್‍ಎನ್‍ಎಲ್ ಬೆಂಗಳೂರು ಜಿಲ್ಲಾ ಒಕ್ಕೂಟದ ಕಾರ್ಯದರ್ಶಿಯಾಗಿ ಸಮಾಜಮುಖಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕ ಸರ್ಕಲ್ ಯೂನಿಯನ್ ಲೀಡರ್ ಆಗಿ ಕಾರ್ಮಿಕರ ಹಿತರಕ್ಷಣೆಗೆ ಶ್ರಮಿಸಿದವರು.

ಇದನ್ನೂ ಓದಿ : CM CUP : ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

ಬಡ ಮತ್ತು ಮಧ್ಯಮ ವರ್ಗದ ಜನರು ಸ್ವಂತ ಸೂರು ಹೊಂದಬೇಕು ಎಂಬ ಉದ್ದೇಶದೊಂದಿಗೆ 2017ರಲ್ಲಿ ಟೆಲಿಕಾಂ ಎಂಪ್ಲಾಯೀಸ್ & ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಸಂಸ್ಥೆಯನ್ನು ಸ್ಥಾಪಿಸಿದರು. ಸದುದ್ದೇಶದೊಂದಿಗೆ ಆರಂಭಿಸಿದ ಟ್ರಸ್ಟ್ ಮೂಲಕ ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ 10ಕ್ಕೂ ಹೆಚ್ಚಿನ ಯಶಸ್ವಿ ಗೃಹ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಟೆಲಿಕಾಂ ಎಂಪ್ಲಾಯೀಸ್ ಮತ್ತು ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಸದ್ಯ ಆರು ಕಚೇರಿಗಳನ್ನು ಹೊಂದಿದ್ದು, 150ಕ್ಕೂ ಹೆಚ್ಚಿನ ಜನರಿಗೆ ಖಾಯಂ ಮತ್ತು 100ಕ್ಕೂ ಹೆಚ್ಚು ಜನರಿಗೆ ಫ್ರೀಲಾನ್ಸ್ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಕೇವಲ ಮನೆ ಅಥವಾ ನಿವೇಶನ ಹಂಚಿಕೆಗೆ ಮಾತ್ರ ತಮ್ಮ ಸಮಾಜಮುಖಿ ಕಾರ್ಯಗಳನ್ನು ಸೀಮಿತವಾಗಿಸದ ಡಾ. ನರಸಿಂಹಮೂರ್ತಿ ಅವರು, ಟ್ರಸ್ಟ್‌ನ ಬಂದ ಲಾಭಾಂಶದಲ್ಲಿ ಶಾಲೆಗಳು, ಅನಾಥಾಶ್ರಮ ಅಭಿವೃದ್ಧಿಗೆ ಕೊಡುಗೆಯಾಗಿ ನೀಡಿದ್ದಾರೆ. ಜತೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಪರಿಕರಗಳನ್ನು ವಿತರಣೆ ಮಾಡಿ, ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೂ ಕೂಡ ನೀಡುತ್ತಿದ್ದಾರೆ.


.
ಇವರ ಸಮಾಜಮುಖಿ ಸೇವೆಗಾಗಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳು ಲಭಿಸಿವೆ. ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್, ಗ್ಲೋಬಲ್ ಸ್ಟಾರ್ ಅವಾರ್ಡ್, ರಿಯಲ್ ಎಸ್ಟೇಟ್ ಎಕ್ಸಲೆನ್ಸ್ ಅವಾರ್ಡ್, ಇಂಟರ್‍ನ್ಯಾಷನಲ್ ಐಕಾನಿಕ್ ಅವಾರ್ಡ್, ಯುವರತ್ನ ಅಪ್ಪು ಅವಾರ್ಡ್ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ. ನರಸಿಂಹಮೂರ್ತಿ ಅವರ ಸಾಧನೆಯ ಮುಕುಟಕ್ಕೆ ಗರಿಗಳಾಗಿವೆ.

ಜತೆಗೆ ಕೊಯಮತ್ತೂರಿನ ಏಷಿಯಾ ಇಂಟರ್‍ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೂಲತಃ ರಂಗಭೂಮಿ ಕಲಾವಿದರಾದ ಡಾ. ನರಸಿಂಹಮೂರ್ತಿ ಅವರಿಗೆ ಚಲನಚಿತ್ರದ ನಂಟು ಕೂಡ ಇದೆ. ಚಲನಚಿತ್ರ ನಿರ್ಮಾಣಕರಾಗಿ, ನಿರ್ದೇಶಕರಾಗಿ, ಸಂಭಾಷಣೆ, ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಜತೆಗೆ ಹಿರಿತೆರೆಯಲ್ಲಿ ಅಭಿನಯಿಸುವ ಮೂಲಕ ತಾವೊಬ್ಬ ಉತ್ತಮ ನಟ ಎಂದೆನಿಸಿಕೊಂಡಿದ್ದಾರೆ. ಇದೀಗ ಡಾ.ಎನ್. ನರಸಿಂಹ ಮೂರ್ತಿಯವರು ಟೆಲಿಕಾಂ ಸ್ಕೈ ಸ್ಟ್ರೈಕರ್ಸ್ ತಂಡದ ಮಾಲೀಕರಾಗಿ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಜೊತೆಯಾಗಿರುವುದು ಅವರ ಕ್ರೀಡಾ ಪ್ರೇಮ ಹಾಗೂ ಕ್ರೀಡೆಗಳ ಮೇಲಿನ ಒಲವನ್ನು ತೋರಿಸುತ್ತದೆ.

Tags: 9 Dreams By CM CUPAchievement AwardsAdarsha welfare trustBadminton newsBSNL EmployeeCInema Herocm cup 2026 karnatakacm cup badminton tournamentCM Cup FinaldirectorDr N Narasimha Murthyeducationkannada newsKarnataka CM CUPkarnataka newsPratidhvaniProducerSky Strikers TeamSOCIAL WORKERSsports newsUnion Leader
Previous Post

CM CUP : ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿ ಕಥೆ..!

Next Post

ಈ ಊರಿನಲ್ಲಿ ಜಾತ್ರೆ ಮಾಡಬೇಕೆಂದರೆ 5 ದಿನ ಜನಗಳು ಊರಿಂದ ಹೊರಹೋಗಬೇಕು!

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಈ ಊರಿನಲ್ಲಿ ಜಾತ್ರೆ ಮಾಡಬೇಕೆಂದರೆ 5 ದಿನ ಜನಗಳು ಊರಿಂದ ಹೊರಹೋಗಬೇಕು!

ಈ ಊರಿನಲ್ಲಿ ಜಾತ್ರೆ ಮಾಡಬೇಕೆಂದರೆ 5 ದಿನ ಜನಗಳು ಊರಿಂದ ಹೊರಹೋಗಬೇಕು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada