• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆನಂದ ಸಿಂಗ್ ಗೆ ಅರಣ್ಯ ಖಾತೆ! ಪರಿಸರವಾದಿಗಳ ಕಳವಳ! ರಾಜ್ಯ ಸರ್ಕಾರಕ್ಕೂ ಮುಜುಗರ!

by
February 16, 2020
in ಕರ್ನಾಟಕ
0
ಆನಂದ ಸಿಂಗ್ ಗೆ ಅರಣ್ಯ ಖಾತೆ! ಪರಿಸರವಾದಿಗಳ ಕಳವಳ! ರಾಜ್ಯ ಸರ್ಕಾರಕ್ಕೂ ಮುಜುಗರ!
Share on WhatsAppShare on FacebookShare on Telegram

ಆನಂದ ಸಿಂಗ್ ಗೆ ಖಾತೆ ಯಾವುದು ಎಂಬ ಕೂತುಹಲ ಎಲ್ಲರಲ್ಲಿತ್ತು. ಆದರೆ ಅವರಿಗೆ ಅರಣ್ಯ ಖಾತೆ ನೀಡಿದ ಮೇಲೆ ರಾಜ್ಯಾದ್ಯಂತ ಪರಿಸರ ಪ್ರಿಯರು, ರಾಜಕೀಯ ನಾಯಕರು, ವನ್ಯಜೀವಿ ಸಂಶೋಧಕರೆಲ್ಲ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

ಮೊದಲೇ ಗಣಿ ಧಣಿ ಯಾದ ಆನಂದ ಸಿಂಗ್ ಅವರಿಗೆ ಈ ಖಾತೆ ಕೊಟ್ಟರೆ ಹಲವರದು ಅರಣ್ಯರೋದನ ಪರಿಸ್ಥಿತಿಯಾಗುತ್ತದೆ ಎಂಬುದು ಸುಳ್ಳಲ್ಲ. ಗಣಿ ಧಣಿಗಳಿಗೆ ಅರಣ್ಯ ಖಾತೆ ಸಚಿವರ ಒಪ್ಪಿಗೆಯೇ ಮುಖ್ಯ, ಯಾವುದೇ ಜಾಗದಲ್ಲಿ ಗಣಿ ಕೆಲಸ ಆರಂಭಿಸ ಬೇಕೆಂದರೆ, ಮೊದಲು ಖನಿಜವನ್ನು ತೆಗೆಯಲು ಅವರು ಅರಣ್ಯ ಇಲಾಖೆಗೆ ಕ್ಲಿಯರನ್ಸ್ ಸರ್ಟಿಫಿಕೇಟ್ ಗೆ ಅಪ್ಲೈ ಮಾಡಬೇಕು. ಇದು ಸಿಗುವುದು ಸುಲಭವಲ್ಲ. ಆದರೆ ಇಂತಹ ಖಾತೆಯನ್ನು ಆನಂದ ಸಿಂಗ್ ಅವರಿಗೆ ಕೊಟ್ಟರೆ ತಾವಲ್ಲದೇ ತಮಗೆ ಗೊತ್ತಿರುವ ಗಣಿ ಉದ್ಯಮಿಗಳಿಗೂ ಅವಕಾಶ ಮಾಡಿಕೊಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.

ನಿನ್ನೆ ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಕ್ಕೆ ನೀಡಿದ ಪ್ರತಿಕ್ರಿಯೆ ಹೀಗಿದೆ “ಆನಂದ ಸಿಂಗ್ ಗೆ ಕೊಟ್ಟಿರುವುದು ಅರಣ್ಯ ಖಾತೆ. ಇದರರ್ಥ ಕುರಿ ಕಾಯಲು ತೋಳವನ್ನು ಬಿಟ್ಟಂತೆ. ಇದನ್ನು ನಾವೆಲ್ಲ ಒಪ್ಪೊಕೆ ಸಾಧ್ಯನಾ, ಅವರ ಮೇಲೆ 15 ಕೇಸುಗಳಿವೆ, ಅದೂ ಅರಣ್ಯ ಕಾಯ್ದೆಯಡಿ ಗಂಭೀರ ಆರೋಪ ಎದುರಿಸುತ್ತಿರುವವರನ್ನು ಅದೇ ಖಾತೆ ಸಚಿವರನ್ನಾಗಿ ಹೇಗೆ ನೇಮಕ ಮಾಡಲಾಗುತ್ತದೆ.

ರಾಜ್ಯ ಸರ್ಕಾರಕ್ಕೆ ಮುಜುಗರ

ಈ ಮಾತಂತೂ ಸತ್ಯ. ಅರಣ್ಯ ಖಾತೆಯನ್ನು ಆನಂದ ಸಿಂಗ್ ಅವರಿಗೆ ನೀಡಿದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಚರ್ಚೆಗಳಾದವು. ಪಿ. ಮಹ್ಮಮದ ಅವರ ಕೊಡಲಿ ತಲೆಯ ಚಿತ್ರ ಬಹುತೇಕರ ಡಿಪಿಗಳಲ್ಲಿ ಕಾಣಿಸತೊಡಗಿತು. ಕೆಲವು ಜನ ನಗುವ, ಸಿಟ್ಟಿಗೇಳುವ, ಬಿದ್ದು ಬಿದ್ದು ನಗುವ ಎಮೋಜಿಗಳನ್ನು ಹಾಕಿದರು. ಇದೆಲ್ಲ ಗಮನಿಸುತ್ತಿದ್ದ ಬಿಜೆಪಿ ಐಟಿ ಸೆಲ್ ಸರ್ಕಾರಕ್ಕೆ ಈ ಮಾತು ತಲುಪಿಸಿರಬಹುದು.

ಶನಿವಾರ ಮುಂಜಾನೆ ಹೈಕಮಾಂಡ್ ಕೂಡ ರಾಜ್ಯ ಸರ್ಕಾರದ ಕ್ರಮದ ಮೇಲೆ ಗರಂ ಆಗಿದ್ದು ಆನಂದ ಸಿಂಗ್ ರಿಗೆ ಅರಣ್ಯ ಖಾತೆ ಕೊಟ್ಟಿದ್ದು ಸರಿಯಾದ ಕ್ರಮವಲ್ಲ ಕೂಡಲೇ ಸರಿಪಡಿಸಿಕೊಳ್ಳಿ ಎಂಬ ಆದೇಶವನನ್ನು ಕಳುಹಿಸಿದ್ದಾರಂತೆ.

ಭೂಮಿ ಅತಿಕ್ರಮಣ ಆನಂದ್‌ ಸಿಂಗ್‌ಗೆ ಸಾಮಾನ್ಯ ವಿಚಾರ!

ಈ ಬಗ್ಗೆ ಆನಂದ ಸಿಂಗ್ ಅವರು ಮಾಧ್ಯಮಗಳಿಗೆ ಹೇಳಿದ್ದು ಎಲ್ಲರ ಹುಬ್ಬೇರಿಸುವಂತಾಗಿದೆ. ಅವರು ಹೇಳಿದ್ದು ಹೀಗೆ, “ವಾಹನ ಇದ್ದ ಮೇಲೆ ಸಂಚಾರ ನಿಯಮ ಉಲ್ಲಂಘನೆ ಸಾಮಾನ್ಯ. ಅದರಂತೆ ನಮ್ಮ ಗಣಿ ಕಂಪೆನಿಯೂ ಸಹ ಉಲ್ಲಂಘನೆ ಮಾಡಿದೆ. ಗಣಿ ಕೆಲಸದಲ್ಲಿ ಅರಣ್ಯ ನಿಯಮ ಉಲ್ಲಂಘನೆ ಸಹಜ” ಎಂದು ಪರೋಕ್ಷವಾಗಿ ತಮ್ಮ ಮೇಲಿನ ಆರೋಪವನ್ನು ಒಪ್ಪಿಕೊಂಡಿದ್ದಾರೆ.

ಅದಕ್ಕೆ ಒಂದಿಷ್ಟು ಸಮಜಾಯಿಷಿ ನೀಡಿದ್ದಾರೆ, “ಪೂರ್ವಜರಿಂದಲೂ ನಮ್ಮ ಕುಟುಂಬ ಗಣಿಗಾರಿಕೆ ಮಾಡುತ್ತಲೇ ಬಂದಿದೆ. ಆದ್ದರಿಂದ ಸಣ್ಣ ಪುಟ್ಟ ಪ್ರಕರಣಗಳು ಇರುತ್ತವೆ. ಈ ಪ್ರಕರಣಗಳಿಂದ ಯಾವುದೇ ತೊಂದರೆಯಾಗುವುದಿಲ್ಲ. ನನಗೆ ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ”.

ಏನೇನಿವೆ ಇವರ ಮೇಲಿನ ಆರೋಪಗಳು?

ಆನಂದ ಸಿಂಗ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಾಮಪತ್ರದಲ್ಲಿನ ಮಾಹಿತಿಯಂತೆ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಕಲಂಗಳ ಅಡಿ 15 ಪ್ರಕರಣಗಳೂ ಬಾಕಿ ಇವೆ. ಕರ್ನಾಟಕ ಅರಣ್ಯ ಕಾಯ್ದೆಯ ಅಡಿ 11 ಮೊಕದ್ದಮೆಗಳು ಆನಂದ್ ಅವರ ಮೇಲಿವೆ.

ಬಳ್ಳಾರಿಯ ಜಯಪ್ರಕಾಶ ಮೇಟಿ ಅವರ ಪ್ರಕಾರ, “ನಾವು ಮೊದಲಿನಿಂದಲೂ ಇವರ ಆಕ್ರಮ ಗಣಿಗಾರಿಕೆ ಬಗ್ಗೆ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಕಾಡು ಉಳಿಸಿ ಎಂಬ ನಮ್ಮ ಮಾತೂ ಯಾರೂ ಕೇಳಲಿಲ್ಲ. ಹಸಿರು ಗುಡ್ಡಗಳನ್ನು ಬೆತ್ತಲೆಗೊಳಿಸಿ ಇಂದು ಬರಗಾಲ ತಾಂಡವವಾಡುವಂತೆ ಮಾಡಿದ್ದಾರೆ. ಧೂಳಿನಿಂದ ಕಂಗೆಟ್ಟ ಜನ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಇಂತವರಿಗೆ ಅರಣ್ಯ ಖಾತೆ ಕೊಟ್ಟರೆ ಏನಾಗಬಹುದು ಎಂಬುದು ಅನೂಹ್ಯವೇ ಸರಿ”.

ಗದುಗಿನ ಮುತ್ತಣ್ಣ ಕರ್ಕಿಕಟ್ಟಿ, ಸಾಮಾಜಿಕ ಹೋರಾಟಗಾರರು ಹೇಳಿದ್ದು, “ಗುಡ್ಡವನ್ನು ಕರಗಿಸಿ, ಹಸಿರ ನುಂಗಿ, ಖನಿಜ ಮಾರುವ ಇಂತಹ ವ್ಯಾಪಾರಸ್ಥರಿಗೆ ಅರಣ್ಯ ಇಲಾಖೆ ಕೊಟ್ಟರೆ, ಬಿಟ್ಟಾರೆಯೇ, ರಾಜ್ಯದ ಉಳಿದ ಅರಣ್ಯಕ್ಕೂ ಕಣ್ಣು ಹಾಕುತ್ತಾರೆ. ಗುಡ್ಡಗಳನ್ನು ಕಡಿದು ಹಾಕುತ್ತಾರೆ. ತಮ್ಮ ವ್ಯಾಪಾರ ವಿಸ್ತರಿಸಿಕೊಳ್ಳುತ್ತಾರೆ. ಒಟ್ಟಾರೆ ಈ ಖಾತೆ ಮಾತ್ರ ಆನಂದ ಸಿಂಗ್ ರಿಗೆ ನೀಡಬಾರದು. ಇದು ಹೀಗೆ ಮುಂದು ವರೆದರೆ ನಾವೆಲ್ಲ ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ”.

ಕಪ್ಪತಗುಡ್ಡ ಆಂದೋಲನ ಹೋರಾಟಗಾರರಾದ ಹಾಗೂ ಗದುಗಿನ ಸಾಮಾಜಿಕ ಕಾರ್ಯಕರ್ತರಾದ ಮುತ್ತಣ್ಣ ಭರಡಿ ಪ್ರತಿಕ್ರಿಯಿಸಿದ್ದು ಹೀಗೆ, “ಆನಂದ ಸಿಂಗ್ ಅವರಿಗೆ ಈ ಖಾತೆ ಕೊಟ್ಟಿದ್ದು ಸರಿಯಲ್ಲ. ಅವರ ಮೇಲೆ ಹಲವಾಋಉ ಆಪಾದನೆಗಳಿವೆ. ಅದರಿಂದ ಿನ್ನೂ ಮುಕ್ತರಾಗಿಲ್ಲ. ಅದೇ ಖಾತೆ ಕೊಟ್ಟರೆ ದುರುಪಯೋಗವಾಗುತ್ತೆ. ತಾವುದೇ ರಾಜಕಾರಣಿಗಳಾಗಲಿ ಅಧಿಕಾರ ದುರುಪಯೋಗ ಸಾಮಾನ್ಯವಾಗಿದೆ. ಹಾಗಾಗಿ ಇದು ಅವರಿಗೆ ಕೊಟ್ಟಿದ್ದು ತಪ್ಪು”.

ಇದಕ್ಕೆ ಮುಖ್ಯಮಂತ್ರಿಗಳು ಏನನ್ನುತ್ತಾರೆ? ಯಾವ ರೀತಿ ತಮ್ಮ ನಡೆಯನ್ನು ಸಮರ್ಥಿಸಿಕೊಳ್ಳುತ್ತಾರೆ? ಎಂಬುದು ಕುತೂಹಲಕಾರಿ ವಿಷಯ.

Tags: ಆನಂದ ಸಿಂಗ್ಪರಿಸರವಾದಿಮುಜುಗರರಾಜ್ಯ ಸರ್ಕಾರ
Previous Post

ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ದ ನಡೆದ ಮಹತ್ತರವಾದ ಪ್ರತಿಭಟನೆಗಳು ಯಾವುವು?

Next Post

ಕಂಬಳದ ಬ್ರಾಂಡ್ ಅಂಬಾಸಡರ್‌ ಈ ಸೀನು

Related Posts

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
0

ಬೆಂಗಳೂರು: ಗ್ರ್ಯಾಮಿ ಪ್ರಶಸ್ತಿ ವಿಜೇತ(Grammy Winner ) ಸಂಗೀತಗಾರ ರಿಕಿ ಕೇಜ್ (Ricky Kej) ಅವರ ಬೆಂಗಳೂರು(Bengaluru) ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ನೀರಿನ ಸಂಪ್‌ಗೆ ಮುಚ್ಚಲಾದ...

Read moreDetails
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
Next Post
ಕಂಬಳದ ಬ್ರಾಂಡ್ ಅಂಬಾಸಡರ್‌ ಈ ಸೀನು

ಕಂಬಳದ ಬ್ರಾಂಡ್ ಅಂಬಾಸಡರ್‌ ಈ ಸೀನು

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada